Breaking News

Monthly Archives: ಅಕ್ಟೋಬರ್ 2024

ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ

ಧಾರವಾಡ: ಭಾರತದಲ್ಲಿ ವಕ್ಫ್ ‌ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ …

Read More »

ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್

ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.   ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ …

Read More »

ಪೋಸ್ಟ್ ಆಫೀಸ್ ಸೂಪರ್ ಸ್ಕೀಮ್ : ತಿಂಗಳಿಗೆ 1500 ರೂಪಾಯಿ ಠೇವಣಿ ಮಾಡಿದ್ರೆ, 31 ಲಕ್ಷ ಲಭ್ಯ

ನವದೆಹಲಿ : ಉಳಿತಾಯ ಯೋಜನೆಗಳು ಆರ್ಥಿಕ ಸ್ಥಿರತೆಯನ್ನ ಕಾಪಾಡಿಕೊಳ್ಳಲು ಮತ್ತು ಹಣಕಾಸಿನ ಕೊರತೆಯಿಂದ ಅವರನ್ನ ಸುರಕ್ಷಿತವಾಗಿರಿಸಲು ಜನರಿಗೆ ಸಹಾಯ ಮಾಡುತ್ತದೆ. ಅಂತಹ ಒಂದು ಆರ್ಥಿಕ ಭದ್ರತೆಯನ್ನ ಒದಗಿಸುವ ಯೋಜನೆ ಎಂದರೆ ಸರ್ಕಾರಿ ಅಂಚೆ ಕಛೇರಿ ಉಳಿತಾಯ ಯೋಜನೆ. ಈ ಯೋಜನೆಯಲ್ಲಿ 1,500 ರೂಪಾಯಿ ಹೂಡಿಕೆ ಮಾಡಿದರೆ 31 ಲಕ್ಷ ರೂಪಾಯಿ ಆದಾಯ ಪಡೆಯಬಹುದು. ನಿರ್ದಿಷ್ಟ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ನೀವು ದೀರ್ಘಾವಧಿಯ ಹೂಡಿಕೆಯಲ್ಲಿ ಉತ್ತಮ ಆದಾಯವನ್ನ ಪಡೆಯಬಹುದು. ಯೋಜನೆ …

Read More »

ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ಬೈಲಹೊಂಗಲ: ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಪಟ್ಟಣದಲ್ಲಿ ಆಯೋಜಿಸಿದ್ದ ಬೈಲಹೊಂಗಲ ಉತ್ಸವದ ಜಾನಪದ ಕಲಾಮೇಳ, ರೂಪಕಗಳ ಮೆರವಣಿಗೆ ಗಮನ ಸೆಳೆಯಿತು.   ಕಿತ್ತೂರು ಚನ್ನಮ್ಮನ ವೃತ್ತದಿಂದ ಆರಂಭವಾದ ಕಲಾಮೇಳ ಮೆರವಣಿಗೆ ಎಪಿಎಂಸಿ ಗಣೇಶ ದೇವಸ್ಥಾನ, ಇಂಚಲ ಕ್ರಾಸ್‌, ಬಸ್‌ ನಿಲ್ದಾಣ, ರಾಯಣ್ಣ ವೃತ್ತ ಮಾರ್ಗ ವಾಗಿ ಚನ್ನಮ್ಮನ ಸಮಾಧಿ  ಸ್ಥಳಕ್ಕೆ …

Read More »

ಹಿಂದುಳಿದ ವರ್ಗಗಳ ಮಠಾಧೀಶರು, ನಾಯಕರ ಸಭೆ ನ.3ರಂದು

ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ಹಿಂದುಳಿದ ವರ್ಗಗಳ ಮಠಾಧೀಶರ ಮಹಾಸಭಾ ವತಿಯಿಂದ ನ.3ರಂದು ಬೆಳಿಗ್ಗೆ 10 ಗಂಟೆಗೆ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಉಪ್ಪಾರ ಭಗೀರಥ ಗುರುಪೀಠದ ಭಗೀರಥಾನಂದಪುರಿ ಸ್ವಾಮೀಜಿ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕುಲ ರಸ್ತೆಯ ಆರ್.ಎಂ.ಲೋಹಿಯಾನಗರದ ಅಪ್ಪು ಪ್ಲಾಜಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಕೋಲಿ ಬೆಸ್ತ, ಉಪ್ಪಾರ, ಶಿಕ್ಕಲಗಾರ, ಲಂಬಾಣಿ, ಕುರುಬ, ಕಮ್ಮಾರ, ಕಿಂಚಿ ಕೊರವರ ಸೇರಿದಂತೆ ವಿವಿಧ ಹಿಂದುಳಿದ ವರ್ಗಗಳ …

Read More »

ಚನ್ನಮ್ಮನ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೈಲಹೊಂಗಲ (ದೊಡ್ಡಬಾವೆಪ್ಪ ವೇದಿಕೆ): ‘ಪ್ರತಿ ವರ್ಷ ಬೈಲಹೊಂಗಲದಲ್ಲಿ ಉತ್ಸವ ನಡೆಯಬೇಕು. ಚನ್ನಮ್ಮನ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕ ಮಾಡಲು ಸರ್ಕಾರಗಳು ಶ್ರಮಿಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.   ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದಲ್ಲಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಸೋಮವಾರ ನಡೆದ ಬೈಲಹೊಂಗಲ ಉತ್ಸವ-2024ರ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, …

Read More »

ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿಎಲ್ಬಡಿ ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಂಗಳವಾರದಂದು ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ದಿ. ಗೋಕಾಕ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.) ನಿಂದ ಪ್ರಸ್ತುತ ಸಾಲಿನ ಲಾಭಾಂಶದಲ್ಲಿ …

Read More »

ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ: ಕೇಸ್ ದಾಖಲಿಸಲು ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ

ಬೆಂಗಳೂರು: ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.   ಇಂದು ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು,ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ …

Read More »

ನಿಖಿಲ್ ಪರ ಎಚ್.ಡಿ.ಕುಮಾರಸ್ವಾಮಿ ಬಿರುಸಿನ ಪ್ರಚಾರ

ಬೆಂಗಳೂರು,ಅ.29- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮೂರನೇ ದಿನವಾದ ಇಂದು ತಮ್ಮ ಚುನಾವಣಾ ಪ್ರಚಾರವನ್ನು ಇಂದು ಮುಂದುವರೆಸಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಸಹ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ತಮ್ಮ ಪುತ್ರನ ಪರವಾಗಿ ಪ್ರಚಾರ ಕೈಗೊಂಡು ಮತಯಾಚನೆ ಮಾಡಿದರು.   ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನಿಂದ ಇಂದು ಬೆಳಿಗ್ಗೆ ಚುನಾವಣಾ ಪ್ರಚಾರ ಆರಂಭಿಸಿ ಮತಯಾಚನೆ ಕೈಗೊಂಡರು. ಬೆಳಿಗ್ಗೆ ಕೋಟೆಮಾರನಹಳ್ಳಿ, ಬೈರಾಪಟ್ಟಣ, ದೇವರಹಳ್ಳಿ, ವಳಗೆರೆದೊಡ್ಡಿ ಹಾಗೂ ಹೊಸೂರುದೊಡ್ಡಿ ಗ್ರಾಮಗಳಲ್ಲಿ ಮತಯಾಚನೆ …

Read More »

ನಾವು ಗೆಲುವಿನ ಅಂತರ ನೋಡುತ್ತಿಲ್ಲ, ಗೆಲುವು ಮಾತ್ರ ನೋಡುತ್ತಿದ್ದೇವೆ : ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ

ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಇಂದು ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಅವರು ಮಾತನಾಡಿ, ನಾವು ಗೆಲುವಿನ ಅಂತರ ನೋಡುತ್ತಿಲ್ಲ. ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ತಿಳಿಸಿದರು. ಈ ಬಾರಿ ಶಿಗ್ಗಾವಿಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ …

Read More »