ನಾಳೆಯಿಂದ ಅ.10 ರವರೆಗೆ ಹೈಕೋರ್ಟ್ ಗೆ ದಸರಾ ರಜೆ : ರಜಾಕಾಲದ ಪೀಠದಿಂದ ಕಾರ್ಯ ನಿರ್ವಹಣೆ ಬೆಂಗಳೂರು : ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ 7 ದಿನಗಳ ಕಾಲ ದಸರಾ ರಜೆ ಇರಲಿದ್ದು, ಹೈಕೋರ್ಟ್ ರಜಾಕಾಲದ ಪೀಠ ಕಾರ್ಯ ನಿರ್ವಹಿಸಲಿದೆ. ಅಕ್ಟೋಬರ್ 11ರಂದು ಆಯುಧಪೂಜೆ, ಅ. 12ರಂದು ವಿಜಯದಶಮಿ, ಎರಡನೇ ಶನಿವಾರ, ಅ. 13 ಭಾನುವಾರ ರಜೆ ಇರುವುದರಿಂದ ಅಕ್ಟೋಬರ್ 14 ರಿಂದ ಕೋರ್ಟ್ ಕಲಾಪಗಳು ಪುನರಾರಂಭ …
Read More »Monthly Archives: ಅಕ್ಟೋಬರ್ 2024
ಜನಿಸಿದ್ದು ಹೆಣ್ಣು ಮಗು, ಕೊಟ್ಟಿದ್ದು ಗಂಡು ಮಗುವಿನ ಶವ.!
ಕೊಪ್ಪಳ: ಹೆಣ್ಣು ಮಗು ಜನಿಸಿದೆ ಎಂದು ಘೋಷಿಸಿದ್ದ ವೈದ್ಯರು ವಾರದ ನಂತರ ಅನಾರೋಗ್ಯದಿಂದ ಶಿಶು ಮೃತಪಟ್ಟಿದೆ ಎಂದು ಗಂಡು ಮಗುವಿನ ಶವ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿಯ ಗೌರಿ ಕನಕಗೊಲ್ಲರ ಅವರಿಗೆ ಸೆ. 26ರಂದು ಕೊಪ್ಪಳದ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ. ಹೆರಿಗೆ ಮಾಡಿಸಿದ ವೈದ್ಯರು ಮತ್ತು ಸಿಬ್ಬಂದಿ ಹೆಣ್ಣು ಮಗು ಜನಿಸಿದೆ ಎಂದು ತಿಳಿಸಿದ್ದಾರೆ. ಅವಧಿ ಪೂರ್ವವಾಗಿ ಶಿಶು ಜನಿಸಿದ ಕಾರಣ …
Read More »ಜಮೀನು ವಿಚಾರಕ್ಕೆ ವ್ಯಕ್ತಿಯೊಬ್ಬರ ಬಳಿ ಲಂಚ ಪಡೆದ ಕೆಆರ್ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ ಅಮಾನತು
ಚಿತ್ರದುರ್ಗ, ಅಕ್ಟೋಬರ್, 2: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾಸೇಗೌಡ ಅವರನ್ನು ಸೋಮವಾರ (ಅಕ್ಟೋಬರ್ 1) ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ. ಲಂಚ ತಗೊಂಡಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ಆಗಿದ್ದು, ಈ ಹಿನ್ನೆಲೆ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ …
Read More »ಸಾಲು ಸಾಲು ರಜೆ; ನವರಾತ್ರಿಗೆ ಬಸ್ ಟಿಕೆಟ್ ದರ ಬಲು ದುಬಾರಿ !
ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ. ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ-ಗಣಪತಿ ಹಬ್ಬದ ಸಮಯದಲ್ಲೂ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ …
Read More »ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು. ತಪ್ಪಿದ ಅನಾಹುತ
ಗದಗ: ಹೆಸ್ಕಾಂ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಪ್ರವಹಿಸಿ 11 ಕುರಿ ಮತ್ತು 1 ನಾಯಿ ಸಾವಿಗೀಡಾದ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಹೋಬಳಿಯಲ್ಲಿ ಸೋಮವಾರ (ಸೆ.30) ಸಂಜೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ನವಲಪ್ಪ ಹೆಗಡೆ ಸಂಚಾರಿ ಕುರಿಗಾಯಿ ನರೇಗಲ್ ಭಾಗದ ಜಮೀನೊಂದರಲ್ಲಿ ಕುರಿ ಮೇಯಿಸುವ ಸಂದರ್ಭದಲ್ಲಿ, ಹೊಲದಲ್ಲಿ ವಿದ್ಯುತ್ ಕಂಬ ನೆಲಕ್ಕೆ ಬಿದ್ದಿದೆ. ಆದರೆ, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಸಂಚಾರ ನಿಷ್ಕ್ರಿಯವಾಗದ ಕಾರಣ ವಿದ್ಯುತ್ ತಂತಿಯ …
Read More »ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು
ಧಾರವಾಡ: ಧಾರವಾಡ ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ. ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ. ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ …
Read More »ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಲು ಒತ್ತಾಯ…!!
ಮರ್ಡರ್ ಕೇಸ್ ದಾಖಲಿಸಿಕೊಂಡು ತನಿಖೆ ಮಾಡಲು ಒತ್ತಾಯ…!! ಇವತ್ತು ಮಾನ್ಯ ಪೊಲೀಸ್ ಆಯುಕ್ತರು ಬೆಳಗಾವಿ ಇವರನ್ನು ಭೇಟಿ ಮಾಡಿದ ನೀಲಜಿ, ಶಿಂದೋಳ್ಳಿ ಗ್ರಾಮದ ಹಿರಿಯರು, ಇಲ್ಲಿಯ ರಹವಾಸಿಯಾದ ಶ್ರೀಮತಿ ಭಾರತಿ ಕಾನಪ್ಪ ಪೂಜಾರಿ ಎಂಬ ಮಹಿಳೆ 4 ದಿನಗಳ ಹಿಂದೆ ಗ್ರಾಮದ ಶ್ರೀ ಮಸಣವ್ವ ದೇವಸ್ಥಾನದಲ್ಲಿ ಕಳ್ಳರು ಕಳತನದಲ್ಲಿ ತೊಡಗಿದ್ದಾಗ ಮಹಿಳೆ ನೋಡಿದ್ದಾಳೆ ಎಂಬ ಕಾರಣಕ್ಕೆ ಕಳ್ಳರು ಮಹಿಳೆಯನ್ನು ಬಾವಿಗೆ ನೂಕಿ ಕೊಲೆ ಮಾಡಿರುವ ಶಂಕೆ ಇದ್ದು.ಈ ಪ್ರಕರಣವನ್ನು ಕೊಲೆ …
Read More »ಕಿಶೋರ್ ಕುಮಾರ್ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಬೊಟ್ಯಾಡಿ (Kishor Kumar Botyadi) ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ. …
Read More »ಬಿಗ್ಬಾಸ್ ಮನೆಯಲ್ಲಿ ಆ ʼಡೌಟ್ʼನಿಂದಲೇ ಶುರುವಾಯಿತು ಜಗಳ
ಬೆಂಗಳೂರು: ಬಿಗ್ ಬಾಸ್(Bigg Boss Kannada-11) ಆರಂಭಗೊಂಡು ಒಂದು ದಿನ ಕಳೆದಿದೆ. ಆದರೆ ಈ ಒಂದು ದಿನದಲ್ಲಿ ಸ್ಪರ್ಧಿಗಳು ಅನೇಕ ಸಲಿ ಕಿತ್ತಾಡಿಕೊಂಡಿದ್ದಾರೆ. ಈ ಬಾರಿ ಸ್ವರ್ಗ ಹಾಗೂ ನರಕ ಎಂಬ ಎರಡು ಮನೆಗಳಿವೆ. ನರಕದಲ್ಲಿನ 7 ಮಂದಿ, ಸ್ವರ್ಗದಲ್ಲಿನ 10 ಮಂದಿ ತಂಡದಂತೆ ಇದ್ದಾರೆ. ಆದರೆ ಈ ತಂಡಗಳ ಒಳಗೆಯೇ ಹೊಂದಾಣಿಕೆಯಿಲ್ಲದೆ ಮಾತಿಗೆ ಮಾತು ಬೆಳೆಯುತ್ತಿದೆ. ಮೊದಲ ದಿನ ಯಮುನಾ, ಜಗದೀಶ್ ಹಾಗೂ ಚೈತ್ರಾ ಕುಂದಾಪುರ ಅವರ ಧ್ವನಿಯೇ ಹೆಚ್ಚಾಗಿ …
Read More »ನನ್ನ ಪತ್ನಿ ಮನನೊಂದು ‘ಮುಡಾ’ ಗೆ ಸೈಟ್ ವಾಪಸ್ ಕೊಟ್ಟಿದ್ದಾರೆ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್..!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಸೈಟ್ ವಾಪಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ನನ್ನ ಪತ್ನಿ ಪಾರ್ವತಿ ಮನನೊಂದು ‘ಮುಡಾ’ ಸೈಟ್ ವಾಪಸ್ ಕೊಟ್ಟಿದ್ದಾರೆ. ಈ ಬಗ್ಗೆ ಪತ್ನಿ ನನ್ನ ಜೊತೆ ಚರ್ಚಿಸಿರಲಿಲ್ಲ, ಸ್ವತಂತ್ರ ನಿರ್ಧಾರ ಕೈಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮನನೊಂದು ನನ್ನ ಪತ್ನಿ ಸೈಟ್ ಹಿಂತಿರುಗಿಸಿದ್ದಾರೆ. ನಾನು ಯಾವುದೇ …
Read More »