Breaking News

Daily Archives: ನವೆಂಬರ್ 11, 2024

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ

ರಾಮನಗರ: ರಾಜ್ಯ ಸರಕಾರ ದಿವಾಳಿಯಾಗಿದ್ದು ಉಪ ಚುನಾವಣೆ ಮುಗಿದ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿಯನ್ನು ಸ್ಥಗಿತಗೊಳಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. ಚನ್ನಪಟ್ಟಣದಲ್ಲಿ 5ನೇ ದಿನ ತಮ್ಮ ಮೊಮ್ಮಗ ನಿಖೀಲ್‌ ಪರವಾಗಿ ಚುನಾವಣ ಪ್ರಚಾರ ನಡೆಸಿ, 5 ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದು ಕೊಳ್ಳಲಿದ್ದು ಇದೀಗ ಉಪಚುನಾವಣೆ ಎಂಬ ಕಾರಣಕ್ಕೆ ಚನ್ನಪಟ್ಟಣ ಕ್ಷೇತ್ರದ ಮಹಿಳೆ ಯರ ಬ್ಯಾಂಕ್‌ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿ ದ್ದಾರೆ. ರಾಜ್ಯ ಸರಕಾರ ದಿವಾಳಿ ಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ …

Read More »

ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

ಬಳ್ಳಾರಿ: ಗಣಿಬಾಧಿತ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಕಣ ಕಾವೇರಿದೆ. ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಸಚಿವರು, ಶಾಸಕರು, ಮುಖಂಡರು ಕ್ಷೇತ್ರದಲ್ಲೇ ಬಿಡಾರ ಹೂಡಿ ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್‌ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಕ್ಷೇತ್ರವನ್ನು ಕಸಿದುಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.   ಕಾಂಗ್ರೆಸ್‌ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಿದೆ ಎಂಬುದೇ ಬಿಜೆಪಿಗೆ ಅಸ್ತ್ರವಾದರೆ, ಕಾಂಗ್ರೆಸ್‌ಗೆ ಬಿಜೆಪಿ ಅಭ್ಯರ್ಥಿ ಸ್ಥಳೀಯರಲ್ಲ, ಹೊರಗಿನವರು ಎಂಬುದು ಪ್ರತ್ಯಸ್ತ್ರವಾಗಿದೆ. ಸಂಡೂರು ಎಸ್‌ಟಿ …

Read More »

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ ರದ್ದುಪಡಿಸುವಂತೆ ಹೊರಡಿಸಿದ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.   ಸೊರಬದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಈ ಬಗ್ಗೆ ಒತ್ತಾಯಿಸಿದ್ದಾರೆ. ದಿನದ …

Read More »

ಇನ್ನಷ್ಟು ಹೈಟೆಕ್ ಆಗಲಿವೆ ‘DL, RC’ : ಶೀಘ್ರವೇ ರಾಜ್ಯದಲ್ಲಿ ಹೊಸ `ಸ್ಮಾರ್ಟ್ ಕಾರ್ಡ್’ ಯೋಜನೆ ಅನುಷ್ಠಾನ!

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. …

Read More »