Breaking News

Monthly Archives: ನವೆಂಬರ್ 2024

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ ಧಾರವಾಡ: ಮಗನ ಸಾವಿನ ಕುರಿತು ತಾಯಿ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದು, ಹೂತಿದ್ದ ಶವವನ್ನು ಪರೀಕ್ಷೆಗಾಗಿ ಹೊರತೆ‌ಗೆಯುವ ಪ್ರಕ್ರಿಯೆ ಜಿಲ್ಲೆಯ ನವಲಗುಂದ ತಾಲ್ಲೂಕಿನ ಯಮನೂರಿನ ಸ್ಮಶಾನಗಟ್ಟಿಯಲ್ಲಿ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಪ್ರಕ್ರಿಯೆ ಶುರುವಾಗಿದೆ. ತಹಶೀಲ್ದಾರ್‌ ಸುಧೀರ್ ಸಾಹುಕಾರ್‌, ಪಿಎಸ್‌ಐ ಜನಾರ್ದನ ಭಟ್ರಳ್ಳಿ ಸ್ಥಳದಲ್ಲಿ ಇದ್ಧಾರೆ. ‘ಮಗ ಯಲ್ಲಪ್ಪ (3) ಸಾವು ಸಹಜವಲ್ಲ, ಪಕ್ಕದ ಮನೆಯವರು …

Read More »

ವರ್ಷದಿಂದ ವರ್ಷಕ್ಕೆ ವೃದ್ಧಿಸಿದ ‘ಶಕ್ತಿ’

ಹುಬ್ಬಳ್ಳಿ: ರಾಜ್ಯದಲ್ಲಿ ‘ಶಕ್ತಿ’ ಯೋಜನೆ ಅನುಷ್ಠಾನವಾದ ಬಳಿಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲುಕೆಆರ್‌ಟಿಸಿ) ಬಸ್‌ಗಳಲ್ಲಿ ಎಲ್ಲ ಸೀಟುಗಳು ಭರ್ತಿಯಾಗುತ್ತಿವೆ. ಕಳೆದ ವರ್ಷ ಸಂಚರಿಸಿದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ ಈ ವರ್ಷ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ವೃದ್ಧಿಸಿದೆ.   ಅತಿ ಹೆಚ್ಚು ವಿಸ್ತಾರ ಮತ್ತು ಜನಸಂಖ್ಯೆಯುಳ್ಳ ಬೆಳಗಾವಿ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸಂಚರಿಸಿದ ಪ್ರಯಾಣಿಕರ ಸಂಖ್ಯೆ ಗಣನೀಯ ಏರಿಕೆಯಾಗಿದೆ. 2023ನೇ ಸಾಲಿನ ಸೆಪ್ಟೆಂಬರ್‌ನಲ್ಲಿ ಸಂಚರಿಸಿದ್ದ ಒಟ್ಟು ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ …

Read More »

ಬೆಳೆದು ನಿಂತ ಭತ್ತಕ್ಕೆ ಕಣೆ ನೊಣ, ಕಾಡಿಗಿ ರೋಗ

ಸಿಂಧನೂರು: ಮುಂಗಾರು ಹಂಗಾಮಿನಲ್ಲಿ ಸಾಕಷ್ಟು ಮಳೆಯಾಗಿದ್ದು ಕಾಲುವೆಯ ನೀರು ಸಹ ಯಥೇಚ್ಛವಾಗಿ ಹರಿದು ಬಂದಿರುವುದರಿಂದ ತಾಲ್ಲೂಕಿನಲ್ಲಿ ಭತ್ತದ ಬೆಳೆ ಸಮೃದ್ಧವಾಗಿ ಬೆಳೆದು ನಿಂತು ಕಾಳು ಕಟ್ಟಿದೆ. ಈ ಸಮಯದಲ್ಲಿ ಕಣೆ ನೊಣ ಮತ್ತು ಕಾಡಿಗಿ ರೋಗ ಹರಡಿ ಬೆಳೆಹಾನಿ ಉಂಟು ಮಾಡುತ್ತಿರುವುದು ರೈತರಿಗೆ ಸಂಕಟ ತಂದೊಡ್ಡಿದೆ.   ತಾಲ್ಲೂಕಿನಲ್ಲಿ 1.30 ಲಕ್ಷ ಹೆಕ್ಟೇರ್ ಜಮೀನು ಕೃಷಿಗೆ ಯೋಗ್ಯವಾಗಿದ್ದು, ಅದರಲ್ಲಿ 75 ಸಾವಿರ ಹೆಕ್ಟೇರ್ ಜಮೀನಿನಲ್ಲಿ ಭತ್ತ ಬೆಳೆಯಲಾಗಿದೆ. ಕಾಳು ಕಟ್ಟುವ ಸಮಯದಲ್ಲಿ …

Read More »

ಬೆಂಗಳೂರಿನಲ್ಲಿ ನಡೆದ 40ನೇ ಕರ್ನಾಟಕ ಸೆಲೆಕ್ಷನ್ ಟ್ರಯಲ್ ನಲ್ಲಿ ಫ್ರೀ ಸ್ಟೈಲ್ ಮತ್ತು ಸೋಲೋ ಆರ್ಟಿಸ್ಟಿಕ್ ಸ್ಕೇಟಿಂಗ್ ನಲ್ಲಿ ಬೆಳಗಾವಿ ಆರ್ಮಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಖುಷಿ ಏಕನಾಥ ಅಗಸಿಮನಿ ಅವರು ತಲಾ ಒಂದೊಂದು ಚಿನ್ನ ಹಾಗೂ ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಬೆಳಗಾವಿಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ 40ನೇ ಕರ್ನಾಟಕ ಸೆಲೆಕ್ಷನ್ ಟ್ರಯಲ್ ನಲ್ಲಿ ಫ್ರೀ ಸ್ಟೈಲ್ ಮತ್ತು ಸೋಲೋ ಆರ್ಟಿಸ್ಟಿಕ್ ಸ್ಕೇಟಿಂಗ್ ನಲ್ಲಿ ಬೆಳಗಾವಿ ಆರ್ಮಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಖುಷಿ ಏಕನಾಥ ಅಗಸಿಮನಿ ಅವರು ತಲಾ ಒಂದೊಂದು ಚಿನ್ನ ಹಾಗೂ ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ. ಬೆಳಗಾವಿ ಸ್ಕೇಟಿಂಗ್ ತರುಬೇತುದಾರ ಸೂರ್ಯಕಾಂತ ಹಿಂಡಲಗೇಕರ್, ವಿಠ್ಠಲ ಗಗನೆ ಅವರ ಮಾರ್ಗದರ್ಶನದಲ್ಲಿ ಖುಷಿ ಅವರು ಸಾಧನೆ ಮಾಡಿದ್ದಾರೆ. ಖುಷಿಯ ಅವರ ಈ ಸಾಧನೆಗೆ …

Read More »

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು: ಮುಡಾ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಕೇಂದ್ರ ಸರಕಾರದ ವಿರುದ್ಧ ತಿರುಗಿ ಬಿದ್ದಿರುವ ಸಿದ್ದರಾಮಯ್ಯ, “ಒಂದು ವೇಳೆ ನನ್ನನ್ನು ಮುಟ್ಟಿದರೆ ರಾಜ್ಯದ ಜನ ನಿಮ್ಮನ್ನು ಸುಮ್ಮನೆ ಬಿಡುವು ದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.   ತಿ.ನರಸೀಪುರ ವಿಧಾನಸಭಾ ಕ್ಷೇತ್ರದ ಲ್ಲಿನ 470 ಕೋಟಿ ರೂ. ಮೌಲ್ಯದ ಕಾಮಗಾರಿಗಳ ಉದ್ಘಾಟನೆ, ಕಟ್ಟಡಗಳ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಭಾರೀ …

Read More »

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸಹಜಾನಂದ ಅವಧೂತರು

ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ ಎಂದು ಜಮಖಂಡಿಯ ಸಹಜಾನಂದ ಅವಧೂತರು ಹೇಳಿದರು. ತಾಲ್ಲೂಕಿನ ಅಂಕಲಿ ಗ್ರಾಮದ ರುದ್ರಾವಧೂತ ಮಠದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಂಸ್ಕಾರದ ಕೊರತೆಯಿಂದ ಯುವಕರು ದಾರಿ ತಪ್ಪಿ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇವುಗಳಿಂದ ಮುಕ್ತರಾಗಬೇಕು. ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಬೇಕು. ಧಾರ್ಮಿಕ ಚಿಂತನೆಗಳು ಯುವಕರನ್ನು ಸನ್ಮಾರ್ಗದತ್ತ ಕರೆದುಕೊಂಡು ಹೋಗಲು ಸಾಧ್ಯ’ ಎಂದು …

Read More »

ಪವಿತ್ರ ಕ್ಷೇತ್ರಗಳಲ್ಲಿ ರಾಜಕೀಯ ಬೆರೆಸದಿರಿ: ಮಲ್ಲಿಕಾರ್ಜುನ ಸ್ವಾಮೀಜಿ

ಬೈಲಹೊಂಗಲ: ‘ಸಮಾಜ ತಿದ್ದುವಲ್ಲಿ ಮಠಗಳು ಅವಿರತವಾಗಿ ಪ್ರಯತ್ನಿಸುತ್ತಿದ್ದು, ಇಂಥಹ ಪವಿತ್ರ ಕ್ಷೇತ್ರಗಳಲ್ಲಿ ರಾಜಕೀಯ ಬೆರಸದೇ, ಭಕ್ತರಾಗಿ ಬಂದು ಇವುಗಳ ಉದ್ಧಾರಕ್ಕಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.   ತಾಲ್ಲೂಕಿನ ಬೈಲವಾಡ ಗ್ರಾಮದ ವರ್ತಿ ಸಿದ್ಧಬಸವೇಶ್ವರ ದೇವಸ್ಥಾನ ಆವರಣದಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪ ಉದ್ಘಾಟನೆ ಹಾಗೂ ಗುರುಭವನ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯು ಐತಿಹಾಸಿಕ, ಧಾರ್ಮಿಕ ಕ್ಷೇತ್ರ ಸೇರಿದಂತೆ ಹಲವಾರು ರಂಗದಲ್ಲಿ ಮುಂಚೂಣಿಯಲ್ಲಿದೆ. ಸಾಧಕರು ತಮ್ಮ …

Read More »

ಚಿಕ್ಕೋಡಿ: ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನ ಆಚರಣೆ

ಚಿಕ್ಕೋಡಿ: ‘ಲಿಂಗಾಯತ ಸಮಾಜ ಉಚಿತವಾಗಿ ಅನ್ನದಾಸೋಹ ಮಾಡುವ ಮೂಲಕ ಹೆಸರಾಗಿದ್ದು, ಕೆಎಲ್‌ಇ ಸಂಸ್ಥೆ 300ಕ್ಕೂ ಹೆಚ್ಚು ಅಂಗ ಸಂಸ್ಥೆಗಳ ಮೂಲಕ ನಾಡಿಗೆ ಜ್ಞಾನ ದಾಸೋಹ ಮಾಡುತ್ತಿದೆ’ ಎಂದು ಸಾಹಿತಿ ರಾಮಕೃಷ್ಣ ಮರಾಠೆ ಹೇಳಿದರು. ಪಟ್ಟಣದ ಬಿ.ಕೆ ಕಾಲೇಜಿನಲ್ಲಿ ಹಮ್ಮಿಕೊಂಡ 109ನೇ ಕೆಎಲ್‌ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ‘ಶಿಕ್ಷಣ, ವೈದ್ಯಕೀಯ, ಸಮಾಜ ಸೇವೆಯಲ್ಲಿ ಕೆಎಲ್‌ಇ ಸಂಸ್ಥೆ ತನ್ನದೇ ಆದ ಕೊಡುಗೆಯನ್ನು ದೇಶ ವಿದೇಶಗಳಲ್ಲಿ ನೀಡುತ್ತಿದೆ’ ಎಂದರು. …

Read More »

ಅರಭಾವಿ ತೋಟಗಾರಿಕೆ ಕಾಲೇಜಿಗೆ ರನ್ನರ್‌ ಅಪ್‌ ಪ್ರಶಸ್ತಿ

ಮೂಡಲಗಿ: ಬೀದರ್‌ನಲ್ಲಿ ಇತ್ತೀಚೆಗೆ ಜರುಗಿದ 15ನೇ ತೋಟಗಾರಿಕೆ ಮಹಾವಿದ್ಯಾಲಯದ ಯುವಜನೋತ್ಸವ-2024ರಲ್ಲಿ ತಾಲ್ಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯವು ರನ್ನರ್‌ ಅಪ್ ಪ್ರಶಸ್ತಿ ಪಡೆದುಕೊಂಡಿದೆ. ಮಹಾವಿದ್ಯಾಯದ ವಿದ್ಯಾರ್ಥಿಗಳು ಏಕಪಾತ್ರಾಭಿನಯ, ಮೈಮ್‌, ಸ್ಕಿಟ್‌, ಕಾರ್ಟೂನ್‌ ಬಿಡಿಸುವುದು, ರಸಪ್ರಶ್ನೆಯಲ್ಲಿ ಪ್ರಥಮ ಸ್ಥಾನ, ಲಘು ಗಾಯನ, ಸ್ಥಳದಲ್ಲಿ ಚಿತ್ರ ಬಿಡಿಸುವುದು, ತೇಪೆ ಚಿತ್ರಗಾರಿಕೆ ದ್ವಿತೀಯ ಸ್ಥಾನ ಹಾಗೂ ಜಾನಪದ ಹಾಡು, ಏಕಾಂಕ ನಾಟಕ, ಪೋಸ್ಟರ್ ತಯಾರಿಕೆ, ಎಕ್ಸ್ಟೊಂಬರ್ ತೃತೀಯ ಸ್ಥಾನ ಹಾಗೂ ಭಾಷಣ ಸ್ಪರ್ಧೆಯಲ್ಲಿ …

Read More »

ನಿಸ್ವಾರ್ಥ ಸೇವೆಯಿಂದ ಕೆಎಲ್‌ಇ ಸಂಸ್ಥೆಯ ಬೆಳವಣಿಗೆ: ಡಾ. ಎಸ್.ಸಿ. ಧಾರವಾಡ

ಬೆಳಗಾವಿ: ‘ನಿಸ್ವಾರ್ಥ ಸೇವಾ ಮನೋಭಾವದಿಂದ ಯಾವುದೇ ಸಂಸ್ಥೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಇದಕ್ಕೆ ಕೆಎಲ್‌ಇ ಸಂಸ್ಥೆಯೇ ಸಾಕ್ಷಿ’ ಎಂದು ನಿರ್ದೇಶಕ ಡಾ. ಎಸ್.ಸಿ. ಧಾರವಾಡ ಹೇಳಿದರು. ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಕೆಎಲ್‌ಇ ಹೊಮಿಯೋಪಥಿಕ್‌ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಎ.ಉಡಚನಕರ ‘ಶಿಕ್ಷಣ ದಾಸೋಹದ ಉದ್ದೇಶದಿಂದ ಆರಂಭಗೊಂಡ ಕೆಎಲ್‌ಇ ಸಂಸ್ಥೆ ಇಂದು ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ …

Read More »