ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವ ಪದವೀಧರರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯ ಯಾವುದೇ ಭಾಗದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ ರೂ. 24,050 ರಿಂದ ರೂ.64,480ರವರೆಗೆ …
Read More »Monthly Archives: ನವೆಂಬರ್ 2024
ಮಹಾರಾಷ್ಟ್ರದ ಸಿಎಂ ಯಾರೆಂದು ಫೈನಲ್ ಆಗುತ್ತಾ?ಬಿಜೆಪಿಯ ದೇವೇಂದ್ರ ಫಡ್ನವಿಸ್ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್?
ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಸರ್ಕಾರ ರಚನೆ ಕಗ್ಗಂಟು ಬಗೆಹರಿದಂತೆ ಆಗಿದ್ದು ದೇವೇಂದ್ರ ಫಡ್ನವೀಸ್ಗೆ ಸಿಎಂ ಪಟ್ಟ ಕಟ್ಟಲು ನಿರ್ಧಾರ ಆಗಿದೆ ಎನ್ನಲಾಗಿದೆ. ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿರುವ ಏಕನಾಥ್ ಶಿಂಧೆ ಹಾಗೂ ಎನ್ಸಿಪಿ ಅಜಿತ್ ಪವಾರ್ ಬಣ ಪ್ರಬಲ ಖಾತೆಗಳಿಗೆ ಡಿಮ್ಯಾಂಡ್ ಇಟ್ಟಿದ್ದು, ಇವತ್ತು ದೆಹಲಿಯಲ್ಲಿ ನಡೆಯಲಿರುವ ಮಹಾಯುತಿ ಸಭೆಯಲ್ಲಿ ಎಲ್ಲವೂ ಫೈನಲ್ ಆಗಲಿದೆ. ಬಿಜೆಪಿಯ ದೇವೇಂದ್ರ ಫಡ್ನವಿಸ್ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್? ಮಹಾರಾಷ್ಟ್ರ ಸಿಎಂ ಯಾರು ಎಂಬ …
Read More »ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ?
ನವೆಂಬರ್ 28: ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ರಣೋತ್ಸಾಹದಲ್ಲಿದೆ. ಇದರ ನಡುವೆ ಕಾಂಗ್ರೆಸ್ನಲ್ಲಿ ಸಂಪುಟ ಪುನಾರಚನೆ ಸುದ್ದಿ ಸದ್ದು ಮಾಡುತ್ತಿದೆ. ನಾಯಕರ ನಿಗೂಢ ನಡೆ ಇಂತಹದೊಂದು ಚರ್ಚೆಗೆ ಕಾರಣ ಆಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಹೀಗಾಗಿ ಸಂಪುಟ ಸರ್ಜರಿಯ ಕುತೂಹಲ ಮತ್ತಷ್ಟು ಗರಿಗೆದರಿದೆ. ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ? ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ ಎನ್ನುವ ಮೂಲಕ …
Read More »ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು …
Read More »ವಿಧಾನ ಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ.:ಹೊರಟ್ಟಿ
ಬೆಂಗಳೂರು: ನಾನು ಪರಿಷತ್ ಗೆ ಬಂದಾಗ 9.30ಕ್ಕೆ ಕಲಾಪ ಶುರುವಾಗುತ್ತಿತ್ತು, ರಾತ್ರಿ 8ಕ್ಕೆ ಮುಗಿಯುತ್ತಿತ್ತು. ಈಗ ವಿಧಾನ ಪರಿಷತ್ ಗೌರವ ಕಡಿಮೆ ಆಗುತ್ತಿದೆ. ಕಲಾಪಗಳು ಸರಿಯಾಗಿ ನಡೆಯುತ್ತಿಲ್ಲ. ನಮ್ಮ ದೇಶದಲ್ಲಿ ಎಲ್ಲಿಯವರೆಗೆ ದುಡ್ಡು ಕೊಟ್ಟು ವೋಟ್ ಹಾಕಿಸಿಕೊಳ್ಳೋರು, ವೋಟ್ ಹಾಕೋರು ಇರುತ್ತಾರೋ ಅಲ್ಲಿಯವರೆಗೂ ಪ್ರಜಾಪ್ರಭುತ್ವ ಸರಿ ಆಗಲ್ಲ. ಇದೆಲ್ಲವನ್ನೂ ಕಾಲವೇ ಸುಧಾರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯರ ಆಯ್ಕೆ ವ್ಯವಸ್ಥೆ ಬಗ್ಗೆ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದ್ದಾರೆ.ಕಲಾಪದಲ್ಲಿ ಭಾಗಿಯಾದ ಎಲ್ಲಾ …
Read More »ಕಾಗವಾಡದಲ್ಲಿ ಕಿತ್ತೂರು ಕರ್ನಾಟಕ ಸೇನೆ ಶಾಖೆ ಉದ್ಘಾಟನೆ: ಮಹಾದೇವ ತಳವಾರ..!
ಕಾಗವಾಡದಲ್ಲಿ ಕಿತ್ತೂರು ಕರ್ನಾಟಕ ಸೇನೆ ಶಾಖೆ ಉದ್ಘಾಟನೆ; ನಾಡು, ನುಡಿ, ಗಡಿ ಭಾಗದ ರಕ್ಷಣೆಗೆ ಕಿತ್ತೂರು ಕರ್ನಾಟಕ ಸೇನೆಯಿಂದ ನಿರಂತರ ಹೋರಾಟ: ಮಹಾದೇವ ತಳವಾರ..! ಕನ್ನಡ ನಾಡು, ನುಡಿ ಜೊತೆಗೆ ಗಡಿನಾಡಿನ ರಕ್ಷಣೆಗೆ ಕಿತ್ತೂರು ಕರ್ನಾಟಕ ಸೇನೆ ನಿರಂತವಾಗಿ ಹೋರಾಟ ಮಾಡಲಿದ್ದು, ಯಾವುದೇ ಕಾರಣಕ್ಕೆ ಕನ್ನಡ ಅಭಿಮಾನದೊಂದಿಗೆ ರಾಜಿ ಮಾಡಿಕೊಳ್ಳುವುದಿಲ್ಲ. ನಾಡು, ನುಡಿ, ಗಡಿ ರಕ್ಷಣೆಗೆ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಕಿತ್ತೂರು ಕರ್ನಾಟಕ ಸೇನೆ ಹೋರಾಡಲಿದೆ ಎಂದು ಕಿತ್ತೂರು …
Read More »*ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ
*ಗುರುವಾರದಿಂದ ಹಿಡಕಲ್ ಜಲಾಶಯದಿಂದ ಜಿ.ಆರ್.ಬಿ.ಸಿ/ ಜಿ.ಎಲ್.ಬಿ.ಸಿ/ ಸಿ.ಬಿ.ಸಿ ಕಾಲುವೆಗಳಿಗೆ 15 ದಿನಗಳವರೆಗೆ ನೀರು ಬಿಡುಗಡೆ* *ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 28 ರಿಂದ 15 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 7.5 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅರಭಾವಿ ಶಾಸಕ …
Read More »ಬಂಧನವಾದರೂ ಚಿಂತೆಯಿಲ್ಲ. ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ;M.E.S.
ಬಂಧನವಾದರೂ ಚಿಂತೆಯಿಲ್ಲ. ಆದರೇ ಈ ಬಾರಿಯೂ ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದ ಪ್ರತಿಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ವತಿಯಿಂದ ಮಹಾಮೇಳಾವಾ ಆಯೋಜಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡುವ ನಿರ್ಣಯ ಕೈಗೊಳ್ಳಲಾಗಿದೆ. ಮಾಜಿ ಶಾಸಕ ಮನೋಹರ್ ಕಿಣೇಕರ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಡಿಸೇಂಬರ್ 9 ರಂದು ವಾಕ್ಸಿನ್ ಡಿಪೋ ಮೈದಾನದಲ್ಲಿ ಕರ್ನಾಟಕ ಸರಕಾರದ ಚಳಿಗಾಲದ ಅಧಿವೇಶನದ ಪ್ರತಿಯಾಗಿ ಮಹಾರಾಷ್ಟ್ರ ಏಕೀಕರಣ …
Read More »ಸ್ವಚ್ಛ, &ಸ್ವಸ್ಥ ನಿರ್ಮಾಣಕ್ಕಾಗಿ ನಶೆ ಮುಕ್ತ ಕ್ಯಾಂಪಸ್ ನಮ್ಮೆಲ್ಲರ ಹೊಣೆ
ಸ್ವಚ್ಛ, ಸಮಾಜ ನಿರ್ಮಾಣಕ್ಕಾಗಿ ನಶೆ ಮುಕ್ತ ಕ್ಯಾಂಪಸ್ ನಮ್ಮೆಲ್ಲರ ಹೊಣೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತನ ವತಿಯಿಂದ ನವೆಂಬರ್ 28 ರಿಂದ ಡಿಸೆಂಬರ್ 06ರ ವರೆಗೆ ನಡೆಯುವ ನಶೆ ಮುಕ್ತ ಕ್ಯಾಂಪಸ್ ಜಾಗೃತಿ ಮೂಡಿಸಲಾಗುತ್ತಿದೆ. ಸ್ವಸ್ಥ, ಸ್ವಚ್ಛ, ಸಮಾಜ ನಿರ್ಮಾಣಕ್ಕಾಗಿ ನಶೆ ಮುಕ್ತ ಕ್ಯಾಂಪಸ್ ನಮ್ಮೆಲ್ಲರ ಹೊಣೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತನ ವತಿಯಿಂದ ನವೆಂಬರ್ 28 ರಿಂದ ಡಿಸೆಂಬರ್ 06ರ ವರೆಗೆ ನಡೆಯುವ ನಶೆ ಮುಕ್ತ …
Read More »ಅನುಭಾವ ಎಂಬುದು ಆತ್ಮದ ವಿದ್ಯೆ : ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು
ಶರಣರ ಅನುಭಾವದ ಪ್ರವಚನದ ನುಡಿಗಳು ಮನಸ್ಸಿನಲ್ಲಿನ ದುಃಖ, ದೋಷ, ಆಸೆ, ಆಮಿಷ ಸೇರಿದಂತೆ ಅರಿಷಡ್ ವರ್ಗಗಳನ್ನು ದೂರಗೊಳಿಸಿ ಮನಸ್ಸನ್ನು ಪರಿಶುದ್ಧಗೊಳಿಸುತ್ತವೆ. ಲೌಕಿಕ ಸುಖ ಅಲ್ಪಸುಖವಾದರೆ ಅನುಭಾವದಿಂದ ದೊರೆತ ಸುಖ ಶಾಶ್ವತವಾದದ್ದು. ಇದು ವ್ಯಕ್ತಿಗೆ ತಾನು ಯಾರೆಂಭುದನ್ನು ತಿಳಿಸುತ್ತದೆ. ಏಕೆಂದರೆ ಅನುಭಾವ ಎಂಬುದು ಆತ್ಮದ ವಿದ್ಯೆಯಾಗಿದೆ ಎಂದು ಎಡೆಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಅವರು ಇಂದು ಶಿವಬಸವ ನಗರದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ …
Read More »