Breaking News

Daily Archives: ಡಿಸೆಂಬರ್ 16, 2024

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು. ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಮೋಹನ್​ ಬಾಬು ಅವರು ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್​ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ …

Read More »

ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿ

ಮಂಗಳೂರಿನಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸ ಹೋಗುತ್ತಿದ್ದ ಖಾಸಗಿ ಬಸ್ ಅರಳಗೊಡು ಬಳಿ ಪಲ್ಟಿಯಾಗಿದೆ. 60 ಪ್ರಯಾಣಿಕರಲ್ಲಿ 21 ಜನ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಗಾಯಾಳುಗಳಿಗೆ ಚಿಕಿತ್ಸೆ ಒದಗಿಸಲು ಸಹಾಯ ಮಾಡಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ.

ಡಿಸೆಂಬರ್​ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ (73) ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ …

Read More »