Breaking News

Daily Archives: ಡಿಸೆಂಬರ್ 29, 2024

ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಸಚಿವ ಈಶ್ವರ್ ಖಂಡ್ರೆ ಭೇಟಿ: ₹10 ಲಕ್ಷ ಪರಿಹಾರ ಘೋಷಣೆ

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುವುದಾಗಿ ಮತ್ತು ಮೃತನ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು. ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಚಿನ್ ಪಾಂಚಾಳ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ಸಚಿವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. …

Read More »

ಮಣ್ಣೂರಿನ ಸರ್ಕಾರಿ ಶಾಲೆಗೆ ರೋಟರಿ ಕ್ಲಬ್ ಆಫ್ ದರ್ಪಣನಿಂದ “ವಾಟರ್ ಪ್ಯೂರಿಫೈರ” ದಾನ.

ಬೆಳಗಾವಿ: ರೋಟರಿ ಕ್ಲಬ್ ಆಫ್ ದರ್ಪಣನ ವತಿಯಿಂದ ಬೆಳಗಾವಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಟರ್ ಪ್ಯೂರಿಫೈರನ್ನು ದಾನವಾಗಿ ನೀಡಲಾಯಿತು. ರೋಟೆರಿಯನ್ ಆಶಾ ಪೋತದಾರ ಅವರ ನೇತೃತ್ವದಲ್ಲಿ ಈ ಕಾರ್ಯವನ್ನು ಮಾಡಲಾಯಿತು. ಜಿಲ್ಲಾ ಗವರ್ನರ್ ರೋಟೆರಿಯನ್ ಶರದ್ ಪೈ ಮತ್ತು ರಾಜ್ಯಪಾಲ ಅಡ್ವೋಕೇಟ್ ಮಹೇಶ್ ಬೆಲ್ಲದ ಅವರ ಪ್ರಮುಖ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ವಾಟರ್ ಪ್ಯೂರಿಫೈರ ಶುದ್ಧ ನೀರನ್ನು ಪೂರೈಸಿ ಮಕ್ಕಳ ಆರೋಗ್ಯವನ್ನು ಸುರಕ್ಷಿತವಾಗಿಡಲಿದೆ. ಈ …

Read More »

ಬೆಳಗಾವಿಗರಿಗೆ ಸಿಹಿ ಸುದ್ಧಿ… ಹೊಸ ಶಾಖೆ ಆರಂಭಿಸಿದ “ ಡ್ರೈಫ್ರೂಟ್ಸ್ ಹೌಸ್”…ಆಕರ್ಷಕ ಆಫರ್..!

ಬೆಳಗಾವಿ: ಬೆಳಗಾವಿಯ ಅಯೋಧ್ಯಾನಗರದ ಯು.ಕೆ. 27 ಹೋಟೆಲನ ಪಕ್ಕದಲ್ಲಿ ದೇಶದಲ್ಲೇ ಪ್ರಸಿದ್ಧ ಮತ್ತು ಗ್ರಾಹಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾದ ಡ್ರೈಫ್ರೂಟ್ ಹೌಸ್ ತನ್ನ ಸೇವೆಯನ್ನು ಆರಂಭಿಸಿದೆ. ದೇಶ್ಯಾದ್ಯಂತ ಈಗಾಗಲೇ 193 ಬ್ರ್ಯಾಂಚ್ ಹೊಂದಿರುವ ದೇಶ ವಿದೇಶದ ಗುಣಮಟ್ಟದ ಡ್ರೈಫ್ರೂಟ್ಸಗಳನ್ನು ಬೆಳಗಾವಿಗರಿಗೆ ನೀಡಲು ಡ್ರೈಫ್ರೂಟ್ ಹೌಸ್. ತನ್ನ 194ನೇ ಶಾಖೆಯನ್ನು ಕುಂದಾನಗರಿಯಲ್ಲಿ ಆರಂಭಿಸಿದೆ. ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಅವರ ಪುತ್ರ ಅಮನ್ ಸೇಠ್, ಮುಖ್ಯ ಅತಿಥಿ ಭರತ್ …

Read More »

ಸರ್ಕಾರಕ್ಕೆ ಬೀಸಿ ಮುಟ್ಟಿಸಲು ಮುಂದಾದ ಆಶಾ ಕಾರ್ಯಕರ್ತೆಯರು…

ಬೆಳಗಾವಿ: ಅಧಿವೇಶನದಲ್ಲಿ ಸಮಯ ನೀಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಆಶಾ ಕಾರ್ಯಕರ್ತೆಯರು ಸಜ್ಜಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಸದ ಸರ್ಕಾರದ ವಿರುದ್ಧ ಜನವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ ನಡೆಸಿ ಅನಿರ್ದಿಷ್ಟಾವಧಿಯ ಮುಷ್ಕರ ಕೈಗೊಳ್ಳುವ ನಿರ್ಣಯ ಕೈಗೊಂಡಿದ್ದಾರೆ. ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸದ್ಯ ನೀಡುತ್ತಿರುವ 5 ಸಾವಿರ ರೂಪಾಯಿ ವೇತನವನ್ನು 15 ಸಾವಿರ ರೂಪಾಯಿಗೆ ಹೆಚ್ಚಳ ಮಾಡಬೇಕು. ಆರೋಗ್ಯ ಸಮಸ್ಯೆಯಿದ್ದಾಗ ರಜೆ ನೀಡಬೇಕು. ಸೇವಾ ಭದ್ರತೆಯನ್ನ ನೀಡಬೇಕು ಸೇರಿದಂತೆ …

Read More »

ಬೆಳಗಾವಿ ರವಿವಾರ ಪೇಠನಲ್ಲಿಲ್ಲ ಪೊಲೀಸರು…? ಟ್ರಾಫಿಕ್ ಕಿರಿಕಿರಿಗೆ ಬೇಸತ್ತ ಜನ

ಬೆಳಗಾವಿ: ವಾರದ ಸಂತೆಯ ದಿನವೇ ಪೊಲೀಸರಿಲ್ಲದೇ ಸಂಚಾರದಟ್ಟಣೆ ಹಿನ್ನೆಲೆ ಕಿರಿಕಿರಿ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಳಗಾವಿಗರಿಂದ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಈ ದೃಶ್ಯಗಳನ್ನು ನೋಡಿ ನೀವು ಇದು ಪಾರ್ಕಿಂಗ್ ಲೇಔಟ್ ಇರಬೇಕು ಅಂದುಕೊಂಡಿರಾ? ಅಲ್ಲ . ಇದು ಬೆಳಗಾವಿಯ ಪ್ರಮುಖ ಮಾರುಕಟ್ಟೆಯಲ್ಲಿ ಒಂದಾದ ರವಿವಾರಪೇಠನ ದೃಶ್ಯಗಳಿವು. ಇಲ್ಲಿ ಅನೇಕ ಸಗಟು ವ್ಯಾಪಾಸ್ಥರ ಅಂಗಡಿಗಳಿವೆ. ಅಲ್ಲದೇ ಇನ್ನುಳಿದ ವಸ್ತುಗಳನ್ನು ಖರೀದಿಸಲು ಜನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಪ್ರತಿದಿನವು ಭಾರಿ ವಾಹನಗಳು ಇಲ್ಲಿ …

Read More »

ಬೆಂಗಳೂರಲ್ಲಿ ರೂಮ್‌ಮೇಟ್​ನ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯ ಬಂಧನ

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ರೂಮ್‌ಮೇಟ್‌ನನ್ನು ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಟಿ. ನರಸೀಪುರ ಮೂಲದ ನಾಗರಾಜ್​ (36) ಬಂಧಿತ ಆರೋಪಿ. ಡಿಸೆಂಬರ್ 26 ರಂದು ತನ್ನ ರೂಮ್‌ಮೇಟ್‌ ಶ್ರೀನಿವಾಸ್ (45) ಎಂಬಾತನಿಗೆ ವಾಟರ್ ಹೀಟರ್ ಕಾಯಿಲ್‌ನಿಂದ ಹೊಡೆದು ಹತ್ಯೆಗೈದು ನಾಗರಾಜ್ ಪರಾರಿಯಾಗಿದ್ದ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ಟಿ. ನರಸೀಪುರ ಮೂಲದವರಾದ ಇಬ್ಬರೂ ಸಹ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಚೆನ್ನಮ್ಮನ ಕೆರೆ ಅಚ್ಚುಕಟ್ಟು …

Read More »

ಗ್ಯಾಸ್​ ಸಿಲಿಂಡರ್​ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 9 ಜನ ಅಯ್ಯಪ್ಪ ಮಾಲಾಧಾರಿಗಳಲ್ಲಿ ಐವರು ಸಾವನ್ನಪ್ಪಿದ್ದು, ಉಳಿದ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಮೃತ ಮಾಲಾಧಾರಿ. ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಇವರು ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದರು. ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಏಳು ದಿನಗಳಿಂದ ಕೆಎಂಸಿಆಎರ್​ಐನ …

Read More »

ಗುತ್ತಿಗೆದಾರ ಸಚಿನ್ ಸಾವಿನ ಕುರಿತು ನ್ಯಾಯಾಂಗ ತನಿಖೆ ಆಗಬೇಕು. ಇದಕ್ಕೂ ಮೊದಲು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಎಂಎಲ್​ಸಿ ಎನ್. ರವಿಕುಮಾರ್ ಆಗ್ರಹಿಸಿದರು.

ಬೆಂಗಳೂರು: “ಗುತ್ತಿಗೆದಾರ ಸಚಿನ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಆಗಬೇಕು. ಸಚಿವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಡಬೇಕು” ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,” ಹೆಣ್ಣುಮಕ್ಕಳ ದುರ್ಬಳಕೆಯ ಸಂಚು ಸೇರಿದಂತೆ ಅನೇಕ ವಿಷಯಗಳು ಸಚಿನ್ ಡೆತ್​ನೋಟಿನಲ್ಲಿವೆ” ಎಂದು ತಿಳಿಸಿದರು. “ತನಿಖೆ ನಡೆಯಲೆಂದು ಮುಂಚಿತವಾಗಿ ತಿಳಿಸಿದರೆ ಬಚಾವ್ ಆಗಬಹುದೆಂದು ಪ್ರಿಯಾಂಕ್ ಅವರು ಪತ್ರಿಕಾಗೋಷ್ಠಿ ಮಾಡಿದ್ದಾರೆ. ಈಶ್ವರಪ್ಪನವರ ರಾಜೀನಾಮೆ …

Read More »

ಇಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ

ಬೆಂಗಳೂರು: 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ (ಕೆಎಎಸ್) ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇಂದು ನಡೆಯಲಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ವು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಕೂಡ ಕೆಪಿಎಸ್​ಸಿ ಸೂಚಿಸಿದೆ. ಅಭ್ಯರ್ಥಿಗಳಿಗೆ ಮಾರ್ಗಸೂಚಿ: ಕೆಪಿಎಸ್‌ಸಿಯಿಂದ ಡೌನ್‌ಲೋಡ್ ಮಾಡಿದ ಮರು ಪರೀಕ್ಷೆಯ ಪ್ರವೇಶ ಪತ್ರದ ಜೊತೆಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳಾದ ಮೊಬೈಲ್, ಕ್ಯಾಲ್ಕುಲೇಟರ್, …

Read More »

ಡಿಸೆಂಬರ್​​​​​​​​​​​​ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರ?

ಬೆಂಗಳೂರು: ಡಿಸೆಂಬರ್​​​​​​​​​​​​ 31 ರಿಂದ ನಡೆಯಲಿರುವ ರಾಜ್ಯ ಸಾರಿಗೆ ಇಲಾಖೆಯ ನೌಕರರ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆ ಕಾರ್ಮಿಕ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭೆಯನ್ನು ಸೋಮವಾರ ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಸದಸ್ಯರನ್ನೊಳಗೊಂಡ ಜಂಟಿ ಕ್ರಿಯಾ ಸಮಿತಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಸಂಘದ ಮುಖಂಡ ಹೆಚ್.ವಿ. ಅನಂತ ಸುಬ್ಬರಾವ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯೊಂದಿಗೆ ನಡೆಸಲಿರುವ ಸಭೆಯನ್ನು ಡಿಸೆಂಬರ್ 30ಕ್ಕೆೆ ಮುಂದೂಡಲಾಗಿದೆ. “ಸರ್ಕಾರ …

Read More »