Breaking News

Yearly Archives: 2024

ಜ.14ರಂದು ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ

ಬೆಳಗಾವಿ: “ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲು ಹಾಗೂ ಸರ್ಕಾರದ ದೌರ್ಜನ್ಯ ನೀತಿಯ ವಿರುದ್ಧ ಜನರನ್ನು ಜಾಗೃತಿಗೊಳಿಸಲು, ರಾಜ್ಯದ ಪ್ರತೀ ಗ್ರಾಮಗಳಿಗೂ ಭೇಟಿ ನೀಡುವ ಉದ್ದೇಶದಿಂದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಜ.14ರಂದು ಕೂಡಲಸಂಗಮದಿಂದ ಆರಂಭಿಸಲಾಗುತ್ತದೆ” ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸಂವಾದ, ಸಂಧಾನ, ಸಂಘರ್ಷ …

Read More »

ಸಿ ಟಿ ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ‌: ಹೆಚ್ಚು ವ್ಯಾಖ್ಯಾನ ಸರಿಯಲ್ಲ- ಡಾ. ಜಿ ಪರಮೇಶ್ವರ್

ಹುಬ್ಬಳ್ಳಿ: ಸಿ ಟಿ ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ‌. ಈ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಸ್ಪೀಕರ್ ಅವರು ತಮ್ಮ ಕೆಲಸ ತಾವು …

Read More »

ಮಾಜಿ ಸಂಸದರ ಸಹೋದರಿಯೆಂದು ನಂಬಿಸಿ ಚಿನ್ನದಂಗಡಿ ಮಾಲೀಕರಿಗೆ ವಂಚನೆ ಆರೋಪ: ನಟ ಸೇರಿ ಮೂವರ ವಿರುದ್ಧ ಪ್ರಕರಣ

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ನಂಬಿಸಿ ಚಿನ್ನದ ವ್ಯಾಪಾರಿಯೊಬ್ಬರಿಗೆ 9.82 ಕೋಟಿ ರೂ. ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್.ಐತಾಳ್ ಅವರು ನೀಡಿರುವ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ‌ ಬಿ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪವೇನು?: ತಾನು ಮಾಜಿ ಸಂಸದರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆ …

Read More »

ಮೊಪೆಡ್​ನಲ್ಲಿ ಹೊರಟ್ಟಿದ್ದ ದಂಪತಿಗಳ ಮೇಲೆ ಕ್ಯಾಂಟರ್ ಹರಿದು, ವಯೋವೃದ್ಧ ದಂಪತಿ ಸ್ಥಳದಲ್ಲೇ ಸಾವ

ದೊಡ್ಡಬಳ್ಳಾಪುರ: ದೇವಸ್ಥಾನಕ್ಕೆಂದು ಟಿವಿಎಸ್ ಮೊಪೆಡ್​ನಲ್ಲಿ ಹೊರಟ್ಟಿದ್ದ ದಂಪತಿಗಳ ಮೇಲೆ ಕ್ಯಾಂಟರ್ ಹರಿದು, ವಯೋವೃದ್ಧ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕನ್ನಮಂಗಲಗೇಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ರಾಮದೇನಹಳ್ಳಿಯ ಅಂದಾನಪ್ಪ (60), ನಾಗರತ್ನ(58) ಮೃತ ದುರ್ದೈವಿಗಳು. ದಂಪತಿ ಪ್ರಯಾಣಿಸುತ್ತಿದ್ದ ಮೊಪೆಡ್​ಗೆ ಡಿಕ್ಕಿ ಹೊಡೆದ ಕ್ಯಾಂಟರ್, ಅಪಘಾತದ ಬಳಿಕ ಚಾಲಕ ಕ್ಯಾಂಟರ್ ಅನ್ನು ಸ್ಥಳದಲ್ಲೇ ನಿಲ್ಲಿಸಿ ಪರಾರಿಯಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ನೆಲಮಂಗಲ ಸಾರ್ವಜನಿಕರ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ …

Read More »

ಆನೆ ತುಳಿದು ಮಾವುತ ಸಾವು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಲಖನೂರ ಕರಿಸಿದ್ದೇಶ್ವಸರ ದೇವಸ್ಥಾನದ ಧೃವ ಎಂಬ ಆನೆ ದಾಳಿಯಿಂದ ಮಾವುತ ಮೃತಪಟ್ಟಿದ್ದಾನೆ. ಅಲಖನೂರ ಗ್ರಾಮದ ಧರೆಪ್ಪ ಭೇವನೂರ (28) ಮೃತರು. ಇಂದು ಬೆಳಗ್ಗೆ 7 ಗಂಟೆಗೆ ಮೇವು ಹಾಕಲು ಬಂದ ಮಾವುತನನ್ನು ಆನೆ ತುಳಿದಿದೆ ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿ ಧೃವ ಆನೆಗೆ ಮದ ಬಂದ ಹಾಗೆ ಆಗಿತ್ತು. ಇಂದು ಬೆಳಗ್ಗೆಯೂ ಕೂಡ ಮದವೇರಿದ ಸಂದರ್ಭದಲ್ಲಿ ಮೇವು ಹಾಕಲು ಬಂದ ಮಾವುತನ ಮೇಲೆ …

Read More »

ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೇ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಅನುಮೋದನೆ ಪಡೆಯದೇ ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದೆ. ವಿಶೇಷ ಕಾರಣಗಳಿಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ. ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕ ಎನಿಸಿದ್ದಲ್ಲಿ ಅಂಥ ಪ್ರಕರಣಗಳನ್ನು ಚಾಚೂತಪ್ಪದೇ ಮುಖ್ಯಮಂತ್ರಿಯವರಿಗೆ ಸಲ್ಲಿಸಿ, ಅನುಮೋದನೆ ಪಡೆದು ವರ್ಗಾವಣೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ಆದೇಶದಲ್ಲಿ …

Read More »

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಅರೆಸ್ಟ್ ಆಗಿದ್ದ 17 ಮಂದಿಗೆ ಜಾಮೀನು ಸಿಕ್ಕಂತಾಗಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿ ಉಳಿದಿದ್ದ ಐವರಿಗೆ ಹೈಕೋರ್ಟ್  ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ 17 ಮಂದಿಗೆ ಜಾಮೀನು ಸಿಕ್ಕಂತಾಗಿದೆ. ಆರೋಪಿಗಳಾದ ಪವನ್, ರಾಘವೇಂದ್ರ, ನಂದೀಶ್, ಧನರಾಜ್ ಹಾಗೂ ವಿನಯ್‌ ಎಂಬವರಿಗೆ ಜಾಮೀನು ನೀಡಿ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. 1 ಲಕ್ಷ ರೂ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸಬೇಕು. ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಪ್ರತ್ಯಕ್ಷ ಹಾಗೂ …

Read More »

ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಕೇಂದ್ರದ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವರಾದ ಶ್ರೀ Piyush Goyal

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಕೇಂದ್ರದ ಕೈಗಾರಿಕೆ ಮತ್ತು ವಾಣಿಜ್ಯ ಖಾತೆ ಸಚಿವರಾದ ಶ್ರೀ Piyush Goyal ಅವರೊಂದಿಗೆ ಪಾಲ್ಗೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಹತ್ವಪೂರ್ಣ ಸಂವಾದ ನಡೆಸಲಾಯಿತು. ಶ್ರೀ ಗೋಯಲ್ ಅವರು ಬೆಳೆಗಾರರ ಸಂಕಷ್ಟ ನಿವಾರಣೆ ನಿಟ್ಟಿನಲ್ಲಿ ಸ್ಪಷ್ಟ ಭರವಸೆ ನೀಡಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಾಜಿ ಸಚಿವರಾದ ಶ್ರೀ ಹೆಚ್.ಕೆ.ಕುಮಾರಸ್ವಾಮಿ, ಶ್ರೀಮತಿ ಮೋಟಮ್ಮ, ಕರ್ನಾಟಕ ಗ್ರೋವರ್ಸ್ …

Read More »

ಹುಬ್ಬಳ್ಳಿ-ಧಾರವಾಡದ 6 ಲೈನ್ ಬೈಪಾಸ್ ರಸ್ತೆ ಕಾಮಗಾರಿ ಜೂನ್ ವೇಳೆಗೆ ಮುಕ್ತಾಯ

ಇಂದು ನಡೆದ ಹುಬ್ಬಳ್ಳಿ-ಧಾರವಾಡದ 6 ಲೈನ್ ಬೈಪಾಸ್ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆಯ ಪ್ರಮುಖ ಅಂಶಗಳು. – ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ಭರದಿಂದ ಸಾಗಿದ್ದು ಜೂನ್ ವೇಳೆಗೆ ಮುಕ್ತಾಯವಾಗಲಿದೆ. – ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆಗಳನ್ನು ಕೂಡ ನಿರ್ಮಿಸಲಾಗುತ್ತಿದೆ. …

Read More »

ಪ್ರಾಯೋಗಿಕ ಜ್ಞಾನ ಹೆಚ್ಚಿಸುವ ಶೈಕ್ಷಣಿಕ ಪ್ರವಾಸ ಆಗಲಿ SDMC ಸದಸ್ಯ ನಿಂಗನಗೌಡ ಪಾಟೀಲ

ಸಾವಳಗಿ:ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಕನ್ನಡ ಶಾಲೆ ನಂದಗಾಂವ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿ ಡಿಸೆಂಬರ್ ತಿಂಗಳು ಬಂತೆಂದರೆ ಸಾಕು, ಬಹುತೇಕ ಶಾಲೆಗಳ ಮಕ್ಕಳು ತಮ್ಮ ಕನಸಿಗೆ ಬಣ್ಣಬಣ್ಣದ ರೆಕ್ಕೆ ಕಟ್ಟಿಕೊಂಡು ಕಲ್ಪನಾಲೋಕದಲ್ಲಿ ತೇಲುತ್ತಾರೆ. ಕಲಿಕಾರ್ಥಿಗಳಲ್ಲಿ ಸಡಗರ ಮತ್ತು ಉತ್ಸಾಹದ ಮೂಲಕ ಸ್ಫೂರ್ತಿ ಮತ್ತು ಪ್ರೇರಣೆ ತುಂಬುವ ಮಹತ್ತರ ಕಾರ್ಯಕ್ರಮವೇ ಶೈಕ್ಷಣಿಕ ಪ್ರವಾಸ. ಕಲಿಕೆಯ ಒಂದು ಭಾಗವಾದ …

Read More »