Breaking News

Yearly Archives: 2024

ಸಿ.ಟಿ.ರವಿ ಪ್ರಕರಣ ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಇಲ್ಲ, ಹಸ್ತಕ್ಷೇಪಿಸಿದರೆ ಪೊಲೀಸರ ಮೇಲೆ ಕ್ರಮ:ಹೊರಟ್ಟಿ

ಬೆಂಗಳೂರು: ”ಎಂಎಲ್​ಸಿ ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ‌. ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಎಥಿಕ್ಸ್ ಕಮಿಟಿ ರಚನೆ ಬಗ್ಗೆ ಚರ್ಚೆಯಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ”ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ. ನಾನು ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಇದರ ಅವಶ್ಯಕತೆ ಬರುವುದಿಲ್ಲ. ಕೆಳಗಿನ ಮನೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ಹಕ್ಕುಚ್ಯುತಿ …

Read More »

ಸರ್ಕಾರಿ ಶಾಲೆಗಳಲ್ಲಿ ಸುಮಾರು 60 ಸಾವಿರ ಶಿಕ್ಷಕರ ಕೊರತೆ

ಬೆಂಗಳೂರು, ಡಿಸೆಂಬರ್ 23: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ವರದಿಯಾಗಿದೆ. ಈ ಪೈಕಿ ಪ್ರಾಥಮಿಕ ಶಾಲೆಗಳಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ಅಲ್ಲದೆ, 6,158 ಶಾಲೆಗಳು ಕೇವಲ ಒಬ್ಬ ಶಿಕ್ಷಕರಿಂದ ನಿರ್ವಹಿಸಲ್ಪಡುತ್ತಿವೆ ಎಂಬುದು ತಿಳಿದುಬಂದಿದೆ. ರಾಜ್ಯದಲ್ಲಿ ವ್ಯಾಪಕ ಶಿಕ್ಷಕರ ಕೊರತೆ ಇದೆ. ಜತೆಗೆ, ಸೌಲಭ್ಯಗಳ ಕೊರತೆಗಳಿಂದಾಗಿ ಇರುವ ಶಿಕ್ಷಕರನ್ನೂ ಆಕರ್ಷಿಸಲು ಸರ್ಕಾರ ವಿಫಲವಾಗಿದೆ. ಇದು ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಎಲ್ಲಾ ಹಂತಗಳಲ್ಲಿ …

Read More »

ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ

ಧಾರವಾಡ, ಡಿಸೆಂಬರ್​ 23: ಧಾರವಾಡ (Dharwad) ಜಿಲ್ಲೆಯ ಅಳ್ನಾವರ (Alnavara) ತಾಲೂಕಿನ ಕಡಬಗಟ್ಟಿ ಬಳಿಯ ಧಾರವಾಡ-ಅಳ್ನಾವರ-ಗೋವಾ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಐಶರ್ ವಾಹನದಲ್ಲಿದ್ದ ಶಿರಸಂಗಿಯ ಹನುಮಂತಪ್ಪ ಮಲ್ಲಾಡ (45), ಮಹಾಂತೇಶ್ ಚವ್ಹಾಣ್ (40), ಮಹದೇವ ಹಾಲೊಳ್ಳಿ (40) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಐವರಿಗೆ ಗಂಭೀರ ಗಾಯಾವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ರೈತರಾದ ಹನುಮಂತಪ್ಪ ಮಲ್ಲಾಡ, ಮಹಾಂತೇಶ್ ಚವ್ಹಾಣ್ …

Read More »

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರು, ಡಿಸೆಂಬರ್ 23: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್​ …

Read More »

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ:ಹೊರಟ್ಟಿ

ಬೆಂಗಳೂರು, ಡಿಸೆಂಬರ್ 23: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಸಂಬಂಧ ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಅದು ಮುಗಿದುಹೋದ ಅಧ್ಯಾಯ ಎಂದಿದ್ದಾರೆ. ಸದನದಲ್ಲಿ ನಡೆದಿದೆ ಎನ್ನಲಾದ ಘಟನೆ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಿದ್ದೇವೆ. ಸದನದವನ್ನು ಅನಿರ್ದಿಷ್ಟವಾಧಿಗೆ‌ ಮುಂದೂಡಿಕೆ ಬಳಿಕ ಸಿಟಿ ರವಿ ಬಂಧನ ಆಗಿತ್ತು. ಸದ್ಯ, ಎರಡೂ ಕಡೆಯಿಂದ ನಮಗೆ ಯಾವುದೇ ದೂರು …

Read More »

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ತಯಾರಿ..?

ಬೆಳಗಾವಿ: 39ನೇ ಕಾಂಗ್ರೆಸ್​​ ಅಧಿವೇಶನಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ವೀರಸೌಧ ಶತಮಾನೋತ್ಸವ ಆಚರಣೆಗೆ ಸಿದ್ಧಗೊಳ್ಳುತ್ತಿದೆ. ಸೌಧವು ಅಂದ-ಚೆಂದವಾಗುತ್ತಿದ್ದು, ಇಲ್ಲಿ ನೂತನವಾಗಿ ಅಳವಡಿಸಿರುವ ಗಾಂಧೀಜಿ ಡಿಜಿಟಲ್ ಫೋಟೋ ಗ್ಯಾಲರಿ ಎಲ್ಲರ ಗಮನ ಸೆಳೆಯಲಿದೆ. ಐತಿಹಾಸಿಕ ಸಮಾರಂಭಕ್ಕೆ ಹೇಗೆಲ್ಲ ನಡೆದಿದೆ ತಯಾರಿ ಎಂಬ ಕುತೂಹಲವೇ….. ಹಾಗಾದ್ರೆ ಈಟಿವಿ ಭಾರತ ವಿಶೇಷ ವರದಿ ಇಲ್ಲಿದೆ ನೋಡಿ. 1924ರ ಡಿ.26, 27ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಆ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಾ …

Read More »

ಸತೀಶ್ ಸೈಲ್ ಅರ್ಜಿ ಇತ್ಯರ್ಥವಾಗುವ ತನಕ ಕಾರವಾರ ಉಪಚುನಾವಣೆಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಸತೀಶ್ ಸೈಲ್‌ಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿರುವ ಹೈಕೋರ್ಟ್, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಯ ಅಂತಿಮ ಆದೇಶ ಹೊರ ಬೀಳುವವರೆಗೂ ಕಾರವಾರ ಕ್ಷೇತ್ರಕ್ಕೆ ಉಪಚುನಾವಣೆ ನಡೆಸದಂತೆ ನಿರ್ದೇಶನ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …

Read More »

ಸಿಲಿಕಾನ್​ ಸಿಟಿಯಲ್ಲಿ ಪಾನಮತ್ತ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೊಲೀಸರು 769 ಪ್ರಕರಣ ದಾಖಲು ಮಾಡಿದ್ದಾರೆ.

ಬೆಂಗಳೂರು: ಪಾನಮತ್ತರಾಗಿ ವಾಹನ ಚಾಲನೆ ಮಾಡುವವರು ಹಾಗೂ ಅತಿವೇಗದ ಚಾಲನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 60,903 ವಾಹನ ಚಾಲಕರನ್ನು ತಪಾಸಣೆ ನಡೆಸಿ ಒಟ್ಟೂ 769 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆರೋಪಿತ ಚಾಲಕರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ನಗರದಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ …

Read More »

ವಿದ್ಯಾರ್ಥಿನಿಯರ ಸಾವಿನ ಬಳಿಕ ಎಚ್ಚೆತ್ತ ಉತ್ತರ ಕನ್ನಡ ಜಿಲ್ಲಾಡಳಿತ

ಉತ್ತರ ಕನ್ನಡ, ಡಿಸೆಂಬರ್ 22: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಮಾತಿದೆ. ಕಡಲ ತೀರದ ಅಸುರಕ್ಷತೆ ಬಗ್ಗೆ ಮಾಧ್ಯಮದವರು ಎಷ್ಟೇ ಸುದ್ದಿ ಮಾಡಿದರೂ ಜಿಲ್ಲಾಡಳಿತ ಎಚ್ಚೆತ್ಕೊಂಡಿರಲಿಲ್ಲ. ಇತ್ತೀಚೆಗೆ ಕೊಲಾರ ಜಿಲ್ಲೆಯ ಅಮಾಯಕ ನಾಲ್ವರು ವಿದ್ಯಾರ್ಥಿನಿಯರು ಸಾವನಪ್ಪಿದಾಗ, ಜಿಲ್ಲಾ ಮಂತ್ರಿ ಸೇರಿದಂತೆ ಎಲ್ಲರನ್ನೂ ಕೋಲಾರ ಶಾಸಕ ಬಹಿರಂಗವಾಗಿ ತರಾಟೆಗೆ ತೆಗೆದುಕೊಂಡ ಬಳಿಕ ಎಚ್ಚೆತ್ತುಕೊಂಡಿರುವ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ವಿದ್ಯಾರ್ಥಿನಿಯರ ಸಾವಿನ ಬಳಿಕ ಎಚ್ಚೆತ್ತ ಜಿಲ್ಲಾಡಳಿತ …

Read More »

ರಗಡ್ ಲುಕ್​ನಲ್ಲಿ ಮಾಸ್ ಆಗಿ ಕಾಣಿಸಿಕೊಂಡ ಕಿಚ್ಚ

ಮ್ಯಾಕ್ಸ್’ ಸಿನಿಮಾ ಮೇಲೆ ಕಿಚ್ಚ ಸುದೀಪ್ ಅವರ ಅಭಿಮಾನಿಗಳು ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಆ್ಯಕ್ಷನ್​ ಇಷ್ಟಪಡುವ ಪ್ರೇಕ್ಷಕರಿಗೆ ಈ ಸಿನಿಮಾದ ಮೇಲೆ ಭಾರಿ ಭರವಸೆ ಇದೆ. ಈ ಚಿತ್ರದ ಟ್ರೇಲರ್​ ಇಂದು (ಡಿಸೆಂಬರ್​ 22) ಬಿಡುಗಡೆ ಆಗಿದೆ. ಮ್ಯಾಕ್ಸಿಮಮ್ ಮಾಸ್​ ಆಗಿ ಸುದೀಪ್ ಅವರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಡಿ.25ರಂದು ಈ ಸಿನಿಮಾ ತೆರೆಕಾಣಲಿದೆ. ಕಿಚ್ಚ ಸುದೀಪ್ ಅವರ ಮ್ಯಾಕ್ಸಿಮಮ್ ಮಾಸ್​ ಅವತಾರವನ್ನು ನೋಡಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿದ್ದಾರೆ. ಡಿಸೆಂಬರ್​ …

Read More »