ಪ್ರಮುಖ ದಾಖಲೆಗಲ್ಲಿ ಪಡಿತರ ಚೀಟಿಯೂ ಕೂಡ ಒಂದಾಗಿದೆ. ಇನ್ನು ಒಂದು ವೇಳೆ ಪಡಿತರ ಚೀಟಿದಾರರು ಸೆಪ್ಟೆಂಬರ್ ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರೇಷನ್ ನೀಡುವುದನ್ನು ನಿಲ್ಲಿಸಲಾಗಿತ್ತದೆ ಎಂದು ಸರ್ಕಾರ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ. ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿಲ್ಲ. ಇಂತಹವರು ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ಇಂತಹ ಪಡಿತರ …
Read More »Yearly Archives: 2024
ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್
ಮೈಸೂರು ಸೆಪ್ಟೆಂಬರ್ 27: ಮುಡಾ ಹಗರಣ ಸಿಎಂ ಸಿದ್ದರಾಮಯ್ಯ ಅವರ ಖುರ್ಚಿಗೆ ಕುತ್ತು ತಂದಿದೆ. ಮುಡಾ ಹಗರಣದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹಲವು ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹಾಗಾದರೆ ಸಿದ್ದರಾಮಯ್ಯ ವಿರುದ್ಧ ದಾಖಲಾದ ಸೆಕ್ಷನ್ಗಳು ಯಾವವು? ಸಿದ್ದರಾಮಯ್ಯ ಅವರ ಜೊತೆಗೆ ಯಾರೆಲ್ಲಾ ಹೆಸರಿನ ಮೇಲೆ ದೂರು ದಾಖಲಾಗಿದೆ? ಸಿದ್ದರಾಮಯ್ಯ ಹಾಗೂ ಅವರ ಕುಟುಂಬಸ್ಥರನ್ನ ಮುಡಾ ಹಗರಣ ಪ್ರಕರಣ ಸಂಕಷ್ಟದಲ್ಲಿ ಸಿಲುಕಿಸಿದೆ. ಇಂದು ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ …
Read More »ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ
ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್ಗೆ ಐದು ಎಕರೆ ಸಿಎ ಸೈಟ್ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ 394 ಪುಟಗಳ ದಾಖಲೆ ಸಮೇತ ಖರ್ಗೆ ಹಾಗೂ ಅವರ ಕುಟುಂಬದ ಮೇಲೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬೆಂಗಳೂರು, ಸೆಪ್ಟೆಂಬರ್ 27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮೇಲೆ ಸಂಕಷ್ಟ ಎದುರಾಗುತ್ತಿವೆ. ಸದ್ಯ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೆಲ್ಲಾ …
Read More »ತಿರುಪತಿ ಲಡ್ಡು ವಿವಾದ: ತನಿಖೆಗೆ 9 ಸದಸ್ಯರ SIT ರಚಿಸಿದ ಆಂದ್ರ ಪ್ರದೇಶ ಸರ್ಕಾರ
ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ದೇವಾಲಯ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲು ಆಂಧ್ರಪ್ರದೇಶ ಸರ್ಕಾರ ಔಪಚಾರಿಕವಾಗಿ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಗುಂಟೂರು ವಲಯ ಐಜಿಪಿ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದ ತನಿಖಾ ಸಮಿತಿಯಲ್ಲಿ ವಿಶಾಖಪಟ್ಟಣಂ ವಲಯ ಡಿಐಜಿ ಗೋಪಿನಾಥ್ ಜತ್ತಿ, ಕಡಪ ಎಸ್ಪಿ …
Read More »ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿ.
ಈಶ್ವರಪ್ಪ ಮನೆಯಲ್ಲಿ ಎನೂ ಚರ್ಚೆ ಅಗಿದೆ ಅಂತಾ ಗೊತ್ತಾದ್ರೇ ವಿಜಯೇಂದ್ರ ರಾಜುಗೌಡನ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿ. ಈಶ್ವರಪ್ಪ ಮನೆಯಲ್ಲಿ ಸಭೆ ವಿಚಾರ. ಸಭೆಯ ವಿಶೇಷತೆ ಎನೂ ಇಲ್ಲ. ಮುಂಬೈದಿಂದ ಬೆಂಗಳೂರಿಗೆ ಬಂದಿದ್ದೆ ಯತ್ನಾಳ್ ಕರೆ ಮಾಡಿದ್ರೂ. ಈಶ್ವರಪ್ಪ ಮನೆಗೆ ಹೋಗ್ತಿದ್ದೇನೆ ಬಾ ಅಂತಾ ಹೇಳಿದ್ರೂ. ಅಲ್ಲಿಗೆ ಹೋದೆ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ. ಅವರು ಇದಿದ್ರೇ ನಾನು ಮನೆಗೆ ಹೋಗ್ತಿರಲಿಲ್ಲ ನಾನು ಹೊರ …
Read More »ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ
Heavy Rain: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದೆ. ಕೆಲವು ಭಾಗಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ. ಹಾಗೆಯೇ ಅಕ್ಟೋಬರ್ 2ರ ವರೆಗೆ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು (ಸೆಪ್ಟೆಂಬರ್ 27) ಹಿಮಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ …
Read More »ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಬೆಂಗಳೂರಿಗೆ ತೆರಳಿದ್ದು, ಮೈಸೂರಿಗೆ ಬಂದ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಆದೇಶವಾದ ಬಳಿಕ ಆದೇಶ ಪ್ರತಿ ಬರಬಹುದೆಂಬ ನಿರೀಕ್ಷೆಯಲ್ಲಿ ಸಂಜೆಯವರೆಗೂ ಕಚೇರಿಯಲ್ಲೇ ಇದ್ದ …
Read More »ಇಂದು ತೆರೆಗೆ ಬರುತ್ತಿದೆ ಕ್ರೈಂ ಕಹಾನಿ ʼನೈಟ್ ರೋಡ್ʼ
ನೈಟ್ ರೋಡ್’ ಎಂಬ ಚಿತ್ರ ಇಂದು ತೆರೆಕಾಣುತ್ತಿದೆ. ಅಪಘಾತದಿಂದ ಮೃತಪಟ್ಟ ಯುವಕನ ಅಸಹಜ ಸಾವಿನ ತನಿಖೆಗೆ ಮುಂದಾಗುವ ನಾಯಕ ಆಧ್ಯಾತ್ಮದತ್ತ ವಾಲುತ್ತಾನೆ. ಹೀಗೆ ತಿರುವು ಪಡೆಯುವ ಚಿತ್ರದ ಪ್ರತಿ ದೃಶ್ಯದಲ್ಲೂ ಪ್ರೇಕ್ಷಕರ ಹೃದಯ ಬಡಿತವನ್ನು ಹೆಚ್ಚಿಸುವ ಜೊತೆಗೆ ಯೋಚನೆಗೆ ಹಚ್ಚುತ್ತದೆ. ಕ್ಲೈಮ್ಯಾಕ್ಸ್ ವೇಳೆಗಂತೂ ನೋಡುಗರನ್ನು ತನ್ನಲ್ಲಿ ಆವಾಹನೆ ಮಾಡಿಕೊಂಡಿರುತ್ತದೆ ಎನ್ನುತ್ತದೆ ಚಿತ್ರತಂಡ. ಗೋಪಾಲ್ ಹಳೇಪಾಳ್ಯ ಈ ಚಿತ್ರದ ನಿರ್ದೇಶಕರು. ಈ ಹಿಂದೆ ಗೋಪಾಲ್ ಹಳೇಪಾಳ್ಯ “ತಾಂಡವ’ ಚಿತ್ರವನ್ನು ನಿರ್ದೇಶಿಸಿದ್ದರು. ಚಿತ್ರವನ್ನು …
Read More »ರೀ ರಿಲೀಸ್ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ
ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ ಹಾಗೂ ಶಿಲ್ಪಾ ಶ್ರೀನಿವಾಸ್ ಅವರು ನಿರ್ಮಿಸಿದ್ದ ಉಪೇಂದ್ರ ಚಿತ್ರ 1999ರಲ್ಲಿ ಬಿಡುಗಡೆಯಾಗಿ ಭರ್ಜರಿ ಹಿಟ್ ಆಗಿತ್ತು. ಈಗ 25 ವರ್ಷಗಳ ನಂತರ ಚಿತ್ರ ಕಳೆದ ವಾರ ರೀ ರಿಲೀಸ್ ಆಗಿದೆ. ಮತ್ತೂಮ್ಮೆ ಅಭಿಮಾನಿಗಳು ಈ ಚಿತ್ರಕ್ಕೆ ಜೈ ಎಂದಿದಾರೆ. ಚಿತ್ರಕ್ಕೆ ಹೊಸ ಚಿತ್ರದ ರಿಲೀಸ್ ದಿನ ಸಿಗುವಂತಹ ಅದ್ಧೂರಿ ಓಪನಿಂಗ್ ಸಿಕ್ಕಿದೆ. ಉಪ್ಪಿ ಅಭಿಮಾನಿಗಳು ಚಿತ್ರವನ್ನು ನೋಡಿ ಫಿದಾ ಆಗಿದ್ದಾರೆ. ಚಿತ್ರ ಮರು …
Read More »ಸಾಲ ಭಾದೆ, ಮುಂಗಾರು ಬೆಳೆ ಹಾನಿಯಿಂದ ಮನನೊಂದು ರೈತ ಆತ್ಮಹತ್ಯೆ
ಚಿಂಚೋಳಿ: ತಾಲೂಕಿನ ಪೋತಂಗಲ ಗ್ರಾಮದಲ್ಲಿ ರೈತನೋರ್ವರು ಸಾಲದ ಭಾದೆ ತಾಳದೆ ಮತ್ತು ಹೊಲದಲ್ಲಿ ಬೆಳೆದ ಮುಂಗಾರು ಬೆಳೆ ಹಾನಿಯಿಂದ ಮನನೊಂದು ಮನೆಯಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.26ರ ಗುರುವಾರ ಸಂಜೆ ನಡೆದಿದೆ. ಪೊತಂಗಲ ಗ್ರಾಮದ ಪಾಂಡಪ್ಪ ತಿಪ್ಪಣ್ಣ(45) ಮೃತಪಟ್ಟ ರೈತ. ಪ್ರಸ್ತುತ ಸಾಲಿನಲ್ಲಿ ಮುಂಗಾರು ಬೆಳೆಗಳಾದ ತೊಗರಿ, ಹೆಸರು, ಉದ್ದುಗಳನ್ನು ಪಾಂಡಪ್ಪ ತಿಪ್ಪಣ್ಣ ತನ್ನ ಹೊಲದಲ್ಲಿ ಬೆಳೆದಿದ್ದ. ಆದರೆ ಅತಿಯಾಗಿ ಸುರಿದ ಮಳೆಯಿಂದಾಗಿ ಬೆಳೆಗಳು ಹಾನಿಯಾಗಿದ್ದವು. ಅಲ್ಲದೇ …
Read More »