Breaking News

Yearly Archives: 2024

ಪೊಲೀಸರಿಗೆ ತಲೆನೋವಾದ ಮುನಿರತ್ನ ಮೊಬೈಲ್

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರೋ ಮುನಿರತ್ನ ಪೊಲೀಸ್ರ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡಿಲ್ವಂತೆ. ಸಂತ್ರಸ್ತೆ ಆರೋಪಕ್ಕೆ ಮುನಿರತ್ನ ಮೊಬೈಲ್ ಪ್ರಮುಖ ಸಾಕ್ಷಿಯಾಗಲಿದೆ. ಆದ್ರೆ ಮುನಿರತ್ನ ತನ್ನ ಮೊಬೈಲ್ ಪೊಲೀಸ್ರಿಗೆ ತೋರಿಸಿಲ್ವಂತೆ. ಮೊಬೈಲ್ ಬಗ್ಗೆ ಕೇಳಿದ್ರೆ ಅಟ್ರಾಸಿಟಿ ಪ್ರಕರಣದಲ್ಲಿ ಪೊಲೀಸ್ರು ಕೋಲಾರ ಬಳಿ ನನ್ನ ಅರೆಸ್ಟ್ ಮಾಡುವಾಗ ಮೊಬೈಲ್ ಮಿಸ್ ಆಗಿದೆ. ಆ ಸಮಯದಲ್ಲಿ ಜನ ಸೇರಿದ್ರು ಆಗ ನನ್ನ ಮೊಬೈಲ್ ನ ಯಾರೋ ಎತ್ತಿಕೊಂಡಿದ್ದಾರೆ ಅಂತ ಹೇಳ್ತಿದ್ದಾರಂತೆ. …

Read More »

ಸ್ಮಾರ್ಟ್ ಸಿಟಿಯೋಜನೆಯಡಿ ನಿರ್ಮಿಸಿದ್ದ ಡಬಲ್ ರಸ್ತೆಯ ಒಂದು ಭಾಗ ಭೂಮಾಲೀಕರಿಗೆ ವಾಪಸ್!

ಬೆಳಗಾವಿ: ಎಸ್‌ಪಿಎಂ ರಸ್ತೆಯಿಂದ ಹಳೇ ಪಿ.ಬಿ ರಸ್ತೆಯವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿದ್ದ ರಸ್ತೆಯಲ್ಲಿ ಒಂದು ಭಾಗವನ್ನು ಹೈಕೋರ್ಟ್‌ ಧಾರವಾಡ ಪೀಠದ ಆದೇಶದಂತೆ ಭೂಮಾಲೀಕ ಬಾಳಾಸಾಹೇಬ ಪಾಟೀಲ ಅವರಿಗೆ ಶನಿವಾರ ಬೆಳಿಗ್ಗೆ ಹಸ್ತಾಂತರಿಸಲಾಯಿತು. ಈ ರಸ್ತೆ ನಿರ್ಮಿಸಲು ಮಹಾನಗರ ಪಾಲಿಕೆಯು ನಿರಾಕ್ಷೇಪಣಾ ಪ್ರಮಾಣಪತ್ರ ಕೊಟ್ಟಿತ್ತು. ಆದರೆ, ಭೂಸ್ವಾಧೀನ ಪ್ರಕ್ರಿಯೆಯನ್ನೇ ಪೂರ್ಣಗೊಳಿಸದೆ, ₹5.88 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿತ್ತು. 2022ರಲ್ಲಿ ಪೂರ್ಣಗೊಂಡ ಈ ಕಾಮಗಾರಿಗೆ ಸರ್ವೆ ಸಂಖ್ಯೆ 4111ರಲ್ಲಿ 21.65 ಗುಂಟೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …

Read More »

ಗಾಡಿ ಈ ತರ ಪಾರ್ಕಿಂಗ್‌ ಆಗಿರೋದನ್ನ ನೀವು ನೋಡಿರಲ್ಲ ಬಿಡಿ..!

ಸಾಮಾನ್ಯವಾಗಿ ರಸ್ತೆಗಳಲ್ಲಿರುವ ಗುಂಡಿಯಿಂದಾಗಿ ವಾಹನಗಳು ಪಲ್ಟಿ ಹಾಕೋದನ್ನ ನೋಡಿರ್ತೀವಿ. ಇದರಿಂದ ಅಪಘಾತಗಳು ಆಗೋದನ್ನೂ ಕೇಳಿರ್ತೀವಿ. ಆದರೆ, ಇದ್ದಕ್ಕಿದ್ದಂತೆ ಗುಂಡಿ ಬಿದ್ದು, ಅದರಲ್ಲಿ ಗಾಡಿ ಪಾರ್ಕ್‌ ಆಗೋದನ್ನು ಕೇಳಿರೋಕೆ ಸಾಧ್ಯವಿಲ್ಲ. ಮಹರಾಷ್ಟ್ರದ ಪುಣೆಯಲ್ಲಿ ಇಂತದ್ದೊಂದು ವಿಚಿತ್ರ ಘಟನೆ ನಡೆದು ಹೋಗಿದೆ.   ಪುಣೆ ನಗರದ ಬುದ್ವಾರ್ ಪೇಠ್ ಪ್ರದೇಶದಲ್ಲಿರುವ ಅಂಚೆ ಕಚೇರಿಯ ಆವರಣದಲ್ಲಿ ಟ್ರಕ್ ತಲೆಕೆಳಗಾಗಿ ಗುಂಡಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಇನ್ನು ಇದ್ದಕ್ಕಿದ್ದಂತೆ ಅಂಚೆ ಕಚೇರಿಯ ಆವರಣದಲ್ಲಿ ಬೃಹತ್‌ ಗುಂಡಿ …

Read More »

ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ ಪ್ರಕರಣ: ಕೊಲೆ ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಕಲಬುರಗಿ: ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ್ ಜಾಮದಾರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಕೊಲೆ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಕಲಬುರಗಿಯ ಅಫಜಲಪುರದಲ್ಲಿ ನಡೆದಿದೆ. ಕೊಲೆ ಆರೋಪಿ ಲಕ್ಷ್ಮಣ್ ಕಾಲಿಗೆ ಅಫಜಲಪುರ ಠಾಣೆ ಪಿಎಸ್‌ಐ ಸೋಮಲಿಂಗ ಒಡೆಯರ್ ಗುಂಡೇಟು ಹೊಡೆದಿದ್ದು, ಆತನ ಬಳಿ ಇದ್ದ ಗನ್ ವಶಕ್ಕೆ ಪಡೆಯಲಾಗಿದೆ.   ಆರೋಪಿ ಲಕ್ಷ್ಮಣ್ ನನ್ನು ಕರೆದುಕೊಂಡು ಪೊಲೀಸರು ಮಡ್ಯಾಳ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆತ ತಪ್ಪಿಸಿಕೊಳ್ಳಲು …

Read More »

ಹಾಸನದಲ್ಲಿ ಹೃದಯಘಾತದಿಂದ ಬಾಲಕ ಸಾವು

ಹಾಸನ: ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ಹೃದಯಘಾತದಿಂದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಸಚಿನ್‌ (10) ಅಂತ ತಿಳಿದು ಬಂದಿದೆ. ನಿನ್ನೆ ಅನಾರೋಗ್ಯದಿಂದ (ಎದೆ ನೋವಿನಿಂದ) ಶಾಲೆಗೆ ಸಚಿನ್‌ ಶಾಲೆಗೆ ಹೋಗದೇ ಇರುವುದುನ್ನು ತಂದೆ-ತಾಯಿ ಗಮನಿಸಿದ್ದಾರೆ. ಈ ನಡುವೆ ಮನೆಯಲ್ಲಿ ಉಳಿದುಕೊಂಡಿದ್ದ, ಈ ನಡುವೆ ಸಚಿನ್‌ ಮನೆಯಲ್ಲಿ ಟಿವಿ ನೋಡುತ್ತಲ್ಲೇ ಇದ್ದ ಎನ್ನಲಾಗಿದ್ದು, ಇದನ್ನು ಗಮನಿಸಿದ ಹೆತ್ತವರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ನಡುವೆ ಆಸ್ಪತ್ರೆಯಲ್ಲಿ …

Read More »

ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಜಗದೀಶ ಶೆಟ್ಟರ್‌

ಬೆಳಗಾವಿ: ‘ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಬಿಜೆಪಿ, ಜೆಡಿಎಸ್‌ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು. ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣಗಳ ವಿರುದ್ಧ ನಾವು ಹೋರಾಟ ಮಾಡಿದೆವು. ಅದಕ್ಕಾಗಿ ಬಿಜೆಪಿ, ಜೆಡಿಎಸ್‌ ನಾಯಕರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ. ಕಾಂಗ್ರೆಸ್‌ ವಿರುದ್ಧ ನಾವು ಹೇಳಿಕೆ ಕೊಟ್ಟರೆ, ಎಫ್‌ಐಆರ್ ದಾಖಲಿಸಿ ಹೆದರಿಸುವ ತಂತ್ರ ಅನುಸರಿಸಲಾಗುತ್ತಿದೆ. ಹಳೆಯ ಪ್ರಕರಣಗಳನ್ನೆಲ್ಲ …

Read More »

ಬಿಜೆಪಿಯಿಂದ ದೇಶದಾದ್ಯಂತ ದ್ವೇಷ ರಾಜಕಾರಣ: ವಿನಯ ಕುಲಕರ್ಣಿ

ಬೆಳಗಾವಿ: ‘ಬಿಜೆಪಿಯವರಂತೆ ನಾವ್ಯಾರೂ ದ್ವೇಷ ರಾಜಕಾರಣ ಮಾಡಿಲ್ಲ. ಅವರು ಎಷ್ಟು ಜನರಿಗೆ, ಎಷ್ಟು ಹಿಂಸೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತಿದೆ. ಇದಕ್ಕೆ ನಾನೇ ದೊಡ್ಡ ಸಾಕ್ಷಿ’ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು. ‘ಕಾಂಗ್ರೆಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂಬ ಸಂಸದ ಜಗದೀಶ ಶೆಟ್ಟರ್‌ ಹೇಳಿಕೆ‌ಗೆ, ಪ್ರತಿಕ್ರಿಯಿಸಿದ ಅವರು, ‘ಇಡೀ ದೇಶದಲ್ಲಿ ವಿರೋಧ ಪಕ್ಷದವರ ವಿರುದ್ಧ ಬಿಜೆಪಿಯವರು ದ್ವೇಷದ ರಾಜಕಾರಣ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕನಾದರೂ ನಾಲ್ಕು ವರ್ಷಗಳಿಂದ ನನ್ನೂರು …

Read More »

ಶಿವಸಾಗರ ಕಾರ್ಖಾನೆಯಿಂದ ಅನ್ಯಾಯ: ರೈತರ ಪ್ರತಿಭಟನೆ

ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …

Read More »

ಸಂಘದ ಸದಸ್ಯರಿಗೆ ಶೇ 25ರಷ್ಟು ಲಾಭಾಂಶ ಹಂಚಿಕೆ: ಎಸ್.ರಮಾನಂದ ಸ್ವಾಮೀಜಿ

ಹುಕ್ಕೇರಿ: ’24 ವರ್ಷದಲ್ಲಿ 17 ಶಾಖೆ ಹೊಂದಿ ₹3.25 ಕೋಟಿ ನಿವ್ವಳ ಲಾಭ ಹೊಂದಿ ಪ್ರಗತಿ ತೋರಿಸುತ್ತಿರುವ ಮಹಾವೀರ ಮಲ್ಟಿಪರಪಜ್ ಸೊಸೈಟಿಯು ಇತರೆ ಹಣಕಾಸು ಸಂಸ್ಥೆಗಳಿಗೆ ಮಾದರಿ’ ಎಂದು ಯರನಾಳ ಸಿದ್ಧಾರೂಢ ಮಠದ ಎಸ್.ರಮಾನಂದ ಸ್ವಾಮೀಜಿ ಹೇಳಿದರು. ಸ್ಥಳೀಯ ಮಹಾವೀರ ಮಲ್ಟಿಪರಪಜ್ ಸೌಹಾರ್ದ ಸಹಕಾರ ಸಂಘದ 24ನೇ ವಾರ್ಷಿಕ ಸರ್ವಸಾಧಾರಣ ಸಭೆ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಹಾವೀರ ನಿಲಜಗಿ ಮಾತನಾಡಿ, ‘ಸದಸ್ಯರ, ನಿರ್ದೇಶಕರ, ಉದ್ಯೋಗಿಗಳ ಸಹಕಾರ ಮತ್ತು ನಿಸ್ವಾರ್ಥ ಸೇವೆಯಿಂದ …

Read More »