Breaking News

Yearly Archives: 2024

ಹುಕ್ಕೇರಿ: ಉದ್ಘಾಟನೆಗೆ ಸಜ್ಜಾದ ‘ಸುವರ್ಣ ಕರ್ನಾಟಕ ಭವನ’

ಹುಕ್ಕೇರಿ: ಇಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸರ್ಕಾರಿ ಕಾರ್ಯಕ್ರಮ ಆಯೋಜಿಸಲು ಸುಸಜ್ಜಿತ ಸಭಾಂಗಣ ಹುಡುಕುವುದೇ ಸಂಘಟಕರು ಹಾಗೂ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿತ್ತು. ಇನ್ಮುಂದೆ ಆ ಕೊರತೆ ನೀಗಲಿದೆ. ಅನಿವಾರ್ಯವಾಗಿ ಅವರು ಖಾಸಗಿ ಸಭಾಂಗಣಗಳತ್ತ ಮುಖಮಾಡುವುದು ತಪ್ಪಲಿದೆ.   ಪಟ್ಟಣದ ಹೊರವಲಯದ ಕ್ಯಾರಗುಡ್ಡದ ಕಾಲೇಜು ಕ್ಯಾಂಪಸ್ ಬಳಿ ತಲೆ ಎತ್ತಿರುವ ‘ಪ್ರಾದೇಶಿಕ ಸುವರ್ಣ ಕರ್ನಾಟಕ ಭವನ’ ಉದ್ಘಾಟನೆಗೆ ಸಜ್ಜಾಗಿದ್ದು, ಶೀಘ್ರವೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಹುಕ್ಕೇರಿಗೆ ಮಂಜೂರಾಗಿದ್ದ ಈ ಭವನದ ನಿರ್ಮಾಣಕ್ಕೆ …

Read More »

ದೇಶದ ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಶೇ 6ರಷ್ಟು ಏರಿಕೆ

ನವದೆಹಲಿ: 2024-25ರ ಹಣಕಾಸು ವರ್ಷದ ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ದೇಶದ ಕಲ್ಲಿದ್ದಲು ಉತ್ಪಾದನೆ ಪ್ರಮಾಣ ಶೇ 6ರಷ್ಟು ಏರಿಕೆಯಾಗಿದ್ದು, 38.40 ಕೋಟಿ ಟನ್‌ಗೆ ತಲುಪಿದೆ. 2023-24ರ ಹಣಕಾಸು ವರ್ಷದ ಇದೇ ಅವಧಿಯಲ್ಲಿ 36 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಆಗಿತ್ತು ಎಂದು ಕಲ್ಲಿದ್ದಲು ಸಚಿವಾಲಯ ತಿಳಿಸಿದೆ.   ಸಿಐಎಲ್‌ ಉತ್ಪಾದನೆ ಇಳಿಕೆ: ಸರ್ಕಾರಿ ಸ್ವಾಮ್ಯದ ಭಾರತೀಯ ಕಲ್ಲಿದ್ದಲು ನಿಗಮ (ಸಿಐಎಲ್‌) ಆಗಸ್ಟ್‌ ತಿಂಗಳಲ್ಲಿ 4.61 ಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆ ಮಾಡಿದೆ. …

Read More »

ಅಕ್ರಮ ಸಾಬೀತು ಆಹಾರ ಶಿರಸ್ತುದಾರ ಸಸ್ಪೆಂಡ್​

ಬೆಂಗಳೂರು: ಅಕ್ರಮವಾಗಿ 46 ಬಿಪಿಎಲ್​ ಕಾರ್ಡ್​ ಮಂಜೂರು, ನ್ಯಾಯಬೆಲೆ ಅಂಗಡಿ ಮಾಲೀಕರಿಂದ ಸಾವಿರ ರೂ. ನಿಂದ 5 ಸಾವಿರ ರೂ.ವರೆಗೆ ವಸೂಲಿ, ಪ್ರತಿ ಕಾರ್ಡ್​ಗೆ ಅಕ್ರಮವಾಗಿ 5 ರೂ.ಸಂಗ್ರಹಣೆ ಮಾಡುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಹಾರ ಶಿರಸ್ತುದಾರ ಅಧಿಕಾರಿ ತಿಮ್ಮಯ್ಯ ಅವರನ್ನು ಅಮಾನತುಗೊಳಿಸಿ ಆಹಾರ ಇಲಾಖೆ ಆದೇಶಿಸಿದೆ.   ಇಲಾಖೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ತಿಮ್ಮಯ್ಯ, ಲಂಚ ಪಡೆದು ವಿಶೇಷ ‘ವೈದ್ಯಕಿಯ ಕೇಸ್​’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಬಿಪಿಎಲ್​ ಚೀಟಿ ಕೊಟ್ಟಿರುವುದು ವರದಿಯಲ್ಲಿ …

Read More »

ಶೀಘ್ರವೇ ‘ಗೃಹಲಕ್ಷ್ಮಿ ಯೋಜನೆ’ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚಿತ್ರದುರ್ಗ : ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಶೀಘ್ರವೇ ಮನೆ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ 11 ತಿಂಗಳ ಮೊತ್ತ ಸಂದಾಯವಾಗಿದ್ದು, ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವೂ ಸಂದಾಯವಾಗಲಿದೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಏಕಕಾಲದಲ್ಲಿ ಒಟ್ಟಿಗೆ ಹಣ ಸಂದಾಯವಾಗುತ್ತಿಲ್ಲ. ಒಂದು ವರ್ಷದಲ್ಲಿ 25 …

Read More »

ಸಿದ್ದರಾಮಯ್ಯಗೆ ಹೈಕೋರ್ಟ್​ನಿಂದ ಮತ್ತೆ 7 ದಿನ ರಿಲೀಫ್​! ಸೆಪ್ಟೆಂಬರ್​ 9ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿನ (Muda Scam) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ (Governor) ಆದೇಶವನ್ನು ವಜಾಗೊಳಿಸುವಂತೆ ಮನವಿ ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ (High Court) ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ಸೋಮವಾರ ನ್ಯಾಯಮೂರ್ತಿ ನಾಗಪ್ರಸನ್ನ ಏಕಸದಸ್ಯ ಪೀಠದಲ್ಲಿ ನಡೆದಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರ ವಾದ ಆಲಿಸಿದ ನ್ಯಾಯಾದೀಶರು ವಿಚಾರಣೆಯನ್ನ ಮುಂದಿನ ಸೋಮವಾರ ಅಂದರೆ …

Read More »

ಟಾಟಾ ಕರ್ವ್‌ ಪೆಟ್ರೋಲ್‌, ಡೀಸೆಲ್‌ SUV ಮಾರುಕಟ್ಟೆಗೆ-ಆರಂಭಿಕ ಬೆಲೆ 9.99 ಲಕ್ಷ

ಮುಂಬೈ: ಭಾರತದ ಜನಪ್ರಿಯ ವಾಹನ ತಯಾರಿಕಾ ಕಂಪನಿಯಾದ ಟಾಟಾ ಮೋಟಾರ್ಸ್‌ (Tata Motors) ಸೋಮವಾರ (ಸೆ.02) ಹೊಸ ಇಂಧನ ಚಾಲಿತ ಟಾಟಾ ಕರ್ವ್‌ (Tata Curvv) ಎಸ್‌ ಯುವಿಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಪೆಟ್ರೋಲ್‌ ಚಾಲಿತ ಟಾಟಾ ಕರ್ವ್‌ ವಾಹನದ ಆರಂಭಿಕ ಬೆಲೆ 9.99 ಲಕ್ಷ ರೂಪಾಯಿ ಮತ್ತು ಡೀಸೆಲ್‌ ಚಾಲಿತ ಟಾಟಾ ಕರ್ವ್‌ ಎಸ್‌ ಯುವಿಗೆ 11.49 ಲಕ್ಷ ರೂಪಾಯಿ. ಇದು ಆರಂಭಿಕ ಬೆಲೆಯಾಗಿದ್ದು, 2024ರ ನವೆಂಬರ್‌ ನಿಂದ ಬೆಲೆ ಏರಿಕೆಯಾಗಲಿದೆ …

Read More »

ಬಿಜೆಪಿ ಆಡಳಿತದ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಎಂ.ಬಿ.ಪಾಟೀಲ್‌

ಬೆಂಗಳೂರು,ಸೆ.2- ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್‌ ಸಂದರ್ಭದಲ್ಲಿ ಸಾವಿನ ನಡುವೆಯೂ ಹಣ ಲೂಟಿ ಹೊಡೆದಿದ್ದಾರೆ. ಪಿಎಸ್‌‍ಐ, ಬಿಟ್‌ ಕಾಯಿನ್‌ ಹಗರಣ ಸೇರಿದಂತೆ ಎಲ್ಲವನ್ನೂ ತನಿಖೆಗೊಳಪಡಿಸಲಾಗಿದೆ. ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್‌ ಸಂದರ್ಭದಲ್ಲಿನ ಹಗರಣಗಳಿಗೆ ಆಗಿನ ಸಚಿವರೇ …

Read More »

ಬಿಜೆಪಿ ಸದಸ್ಯನ ಅ‍ಪಹರಣ: ಕಿತ್ತೂರು ಪ.ಪಂ ಚುನಾವಣೆಗೆ ಹೈಕೋರ್ಟ್‌ ತಡೆ

 ಕಿತ್ತೂರು (ಬೆಳಗಾವಿ ಜಿಲ್ಲೆ): ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ಅಸುಂಡಿ ಅವರನ್ನು ಅ‍ಪಹರಣ ಮಾಡಿದ ಹಿನ್ನೆಲೆಯಲ್ಲಿ, ಸೆ.3ರಂದು ನಡೆಯಬೇಕಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ. ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ 9 ಸದಸ್ಯರಿದ್ದಾರೆ. ಐವರು ಕಾಂಗ್ರೆಸ್‌ ಹಾಗೂ ನಾಲ್ವರು ಪಕ್ಷೇತರರು ಸೇರಿ ಕಾಂಗ್ರೆಸ್‌ ಬಲವೂ 9ಕ್ಕೆ ಏರಿದೆ. ಬಿಜೆಪಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್‌ಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರ ಮತಗಳೂ …

Read More »

ಹಾವೇರಿಯ ವಸತಿ ಶಾಲೆಯಲ್ಲಿ ‘SSLC’ ವಿದ್ಯಾರ್ಥಿನಿ ನೇಣಿಗೆ ಶರಣು : ಕಾರಣ ನಿಗೂಢ!

ಹಾವೇರಿ : ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆಯು ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿನಿ. ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ …

Read More »

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ `ಶಾಲಾ ಬಸ್’ ಚಲಾಯಿಸಿದ ಚಾಲಕ : `FIR’ ದಾಖಲು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ `ಶಾಲಾ ಬಸ್’ ಚಲಾಯಿಸಿದ ಚಾಲಕನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯ ತಂದೊಡ್ಡಿದ್ದ ಶಾಲೆಯೊಂದರ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಚಾಲಕ ಬೆಂಗಳೂರು-ಮೈಸೂರು ಇ ರೈಲಿನ ರಾಂಗ್ ಸೈಡ್ ನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಯಾಣಿಕರೊಬ್ಬರು ವೀಡಿಯೊವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದರು ಮತ್ತು ಅಂತಿಮವಾಗಿ ಚಾಲಕನ …

Read More »