Breaking News

Yearly Archives: 2024

ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಷ್ಟೇ ಅಲ್ಲದೆ ರಾಜಕೀಯವಾಗಿಯೂ ಅನ್ಯಾಯ;ಯತ್ನಾಳ್‌

ಬೆಳಗಾವಿ: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಷ್ಟೇ ಅಲ್ಲದೆ ರಾಜಕೀಯವಾಗಿಯೂ ಅನ್ಯಾಯವಾಗಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಇಂದು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ದಕ್ಷಿಣ ಕರ್ನಾಟಕದ ವಿಚಾರವಾಗಿ ಅಸಹನೆ ವ್ಯಕ್ತಪಡಿಸುತ್ತಿಲ್ಲ. ಆದರೆ ಸಮಾನ ಅಭಿವೃದ್ಧಿ ಆಗಬೇಕು. ಗ್ಯಾರಂಟಿ ನೀಡುವ ಬದಲಾಗಿ ನೀರಾವರಿ ಕಲ್ಪಿಸಿ ಎಲ್ಲಾ ಕೈಗಳಿಗೆ ಉದ್ಯೋಗ ಕೊಡಿ. ಸಚಿವ ಸಂಪುಟ ಸಭೆಯಲ್ಲಿರುವ …

Read More »

ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ

ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಗಾವಿಯ ಸುವರ್ಣ ಸೌಧದ ಎದುರುಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಂಪ್ಲಿ ಶಾಸಕರು ಪ್ರತಿಭಟನಾಕಾರರ ಮನವಿಯನ್ನ ಸ್ವೀಕರಿಸಿದರು . ಪ್ರತಿಭಟನೆ ನೇತೃತ್ವ ವಹಿಸಿದ್ದ ಸ್ವಾಮೀಜಿಗಳು ಮಾತನಾಡಿ ಹಡಪದ ಸಮಾಜದ …

Read More »

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಗದ ಪರಿಣಾಮ ಕಾರಾಗೃಹದಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ನಾಗರಾಜ್, ಪ್ರದೂಷ್, ಲಕ್ಷ್ಮಣ್ ಬಿಡುಗಡೆಯಾಗಿದ್ದು, ಇನ್ನಿಬ್ಬರಾದ ಜಗದೀಶ್ ಹಾಗೂ ಅನುಕುಮಾರ್​ಗೆ ಯಾರೂ ಶ್ಯೂರಿಟಿ ನೀಡಲು ಮುಂದಾಗದೆ ಸೆರೆಮನೆಯಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಪೊಲೀಸರೆದುರು ಶರಣಾಗಿದ್ದ ಆರೋಪಿಗಳಾದ ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್‌ಗೆ ಶ್ಯೂರಿಟಿ ನೀಡಿದ್ದರಿಂದ ಸುಮಾರು 10 …

Read More »

ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ: ರಾಜ್ಯ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಸುವರ್ಣಸೌಧದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ …

Read More »

ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ;C.M.

ಬೆಳಗಾವಿ: ”ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ ಮಾಡುತ್ತೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿರಲಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ‍ ಪರವಾಗಿರುತ್ತಾರೆ. ಇದು ಖಚಿತ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ …

Read More »

ಶಿಕ್ಷಕರೊಬ್ಬರು ತಮ್ಮಸಂಬಳದಲ್ಲಿ 51ಬಡ ಮಕ್ಕಳ ವಿಮಾನಯಾನದ ಭತ್ಯೆ ಭರಿಸಿ ಉಚಿತವಾಗಿ ವಿಮಾನದಲ್ಲಿ ಕರೆದೊಯ್ದು ಶಿಕ್ಷಣ ಪ್ರವಾಸ ಅವಿಸ್ಮರಣೀಯ ಗೊಳಿಸಿದ್ದಾರೆ.

ಶಿಕ್ಷಕರೊಬ್ಬರು ತಮ್ಮಸಂಬಳದಲ್ಲಿ 51ಬಡ ಮಕ್ಕಳ ವಿಮಾನಯಾನದ ಭತ್ಯೆ ಭರಿಸಿ ಉಚಿತವಾಗಿ ವಿಮಾನದಲ್ಲಿ ಕರೆದೊಯ್ದು ಶಿಕ್ಷಣ ಪ್ರವಾಸ ಅವಿಸ್ಮರಣೀಯ ಗೊಳಿಸಿದ್ದಾರೆ. ವಿಮಾನದಲ್ಲಿ ಹಾರಾಡುವ ಕನಸು ಕಂಡಿದ್ದ ಶಾಲಾ ಮಕ್ಕಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಮಹಾರಾಷ್ಟ ಪ್ರವಾಸಕ್ಕೆ ವಿಮಾನದಲ್ಲಿ ಕರೆದೊಯ್ಯುವ ಮೂಲಕ ಗ್ರಾಮೀಣ ಬಡ ಮಕ್ಕಳ ಕನಸನ್ನು ಶಿಕ್ಷಕರೊಬ್ಬರು ನನಸಾಗಿಸಿದ್ದಾರೆ. ಈ ಮೂಲಕ ಮಕ್ಕಳ ಪ್ರವಾಸವನ್ನು ಸ್ಮರಣಿಯವಾಗಿಸಿದ್ದಾರೆ. ಹಳ್ಳಿಯೊಂದರ ಬಡ ಶಾಲಾ ಮಕ್ಕಳನ್ನು ಮುಖ್ಯ ಶಿಕ್ಷಕರೊಬ್ಬರು ತಮ್ಮ ಸ್ವಂತ ಖರ್ಚಿನಲ್ಲಿ ಪ್ರವಾಸ ಕರೆದೊಯ್ದಿದ್ದಾರೆ. …

Read More »

ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ

ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್​, ವೈಲೆಂಟ್​ ಆಟ ಆಡುತ್ತಲೇ ಇದೆ. ಹೈಕಮಾಂಡ್​ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. .ಬಿಜೆಪಿ ರೆಬೆಲ್ ಟೀಮ್ ಮತ್ತೆ ಬೆಳಗಾವಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಕ್ಫ್ ವಿರುದ್ಧ 2ನೇ ಹಂತದ ಹೋರಾಟದ ಬಗ್ಗೆ ಮಹತ್ವ ಚರ್ಚೆ ನಡೆಸಿದೆ. ಈ ಬಗ್ಗೆ …

Read More »

ವಿಜಯೇಂದ್ರ ಔತಣಕೂಟಕ್ಕೆ ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಕೂಡ ಹೋಗಲ್ಲ:ಯತ್ನಾಳ್

ಇತ್ತೀಚೆಗಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ಶಿಸ್ತು ಸಮಿತಿ ನೋಟಿಸ್​ಗೆ ಉತ್ತರಿಸಿ ಬಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.:  ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಯೋಜಿಸಿದ್ದ ಔತಣ ಕೂಟದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಬಿಎಸ್ …

Read More »

ಡಿಸೆಂಬರ್ 31 ರವರೆಗೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು

ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆಯೋ ಸುಮಾರು ಅಷ್ಟೇ ವಾಹನಗಳನ್ನು ಕೂಡ ಜನ ಖರೀದಿ ಮಾಡಿದ್ದಾರೆ. ಒಂದೊಂದು ಮನೆಯಲ್ಲೂ ಕೂಡ ಮೂರ್ನಾಲ್ಕಕ್ಕಿಂತ ಹೆಚ್ಚು ವಾಹನಗಳಿವೆ. ಇತ್ತೀಚೆಗಂತೂ ಎಲ್ಲವೂ ಡಿಜಿಟಲ್ ಯುಗ ಆಗಿ ಹೋಗಿದೆ. ಇದಕ್ಕೆ ಪೂರಕವಾಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019 ರ ಮಾರ್ಚ್ – 31 ರ ಹಿಂದಿನ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಹೈಟೆಕ್ ಟಚ್ ಕೊಡಲು ಸಿದ್ಧವಾಗಿತ್ತು. ಆದರೆ ಯಾಕೋ ಹೆಚ್​ಎಸ್​ಆರ್​ಪಿ ನಂಬರ್ …

Read More »

ಕುಂದಾನಗರಿಯಲ್ಲಿ ಸಂತೋಷ್​ ಲಾಡ್ ರನ್ನಿಂಗ್

ಬೆಳಗಾವಿ: ನಿನ್ನೆ ಅಧಿವೇಶನದ ಕಲಾಪದಲ್ಲಿ ಬಹುತೇಕ ಸಚಿವರು ಇಡೀ ದಿನ‌ ಪಾಲ್ಗೊಂಡಿದ್ದರು. ಅಧಿವೇಶನ ಮುಗಿಯುತ್ತಿದ್ದಂತೆ ತಮ್ಮ ಕೊಠಡಿಗೆ ತೆರಳಿ ಕೆಲವರು ವಿಶ್ರಾಂತಿ ಪಡೆಯುತ್ತಿದ್ದರೆ, ಮತ್ತೊಂದಿಷ್ಟು ಮಂದಿ ಕಾರ್ಯಕರ್ತರ ಜೊತೆ ಹರಟೆ ಹೊಡೆಯುತ್ತಿದ್ದರು. ಆದರೆ, ಕಾರ್ಮಿಕ‌ ಸಚಿವ ಸಂತೋಷ್​ ಲಾಡ್ ಮಾತ್ರ ಕುಂದಾನಗರಿ ಗಲ್ಲಿಯಲ್ಲಿ ಯಾವುದೇ ಭದ್ರತೆ ಇಲ್ಲದೇ ರನ್ನಿಂಗ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು, ಜಾಕೇಟ್-ಟ್ರ್ಯಾಕ್ ಪ್ಯಾಂಟ್-ಶೂ ಹಾಕಿಕೊಂಡು ತಮ್ಮ ಪಾಡಿಗೆ ತಾವೊಬ್ಬರೆ ರನ್ನಿಂಗ್ ಮಾಡುತ್ತಿದ್ದ ಸಚಿವ ಸಂತೋಷ್​ …

Read More »