Breaking News

Yearly Archives: 2024

ಎರಡು ತಿಂಗಳ ಹಿಂದೆಯೇ ದೇವರ ಕೋಣ ನಾಪತ್ತೆ ಹುಡುಕಿಕೊಡುವಂತೆ ರಟ್ಟಿಹಳ್ಳಿ ಪೊಲೀಸರಿಗೆ ಮನವಿ

ಹಾವೇರಿ: ದೇವರ ಕೋಣ ನಾಪತ್ತೆಯಾಗಿದ್ದು, ಹುಡುಕಿ ಕೊಡುವಂತೆ ಗ್ರಾಮಸ್ಥರು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ. ಮಕರಿ ಗ್ರಾಮದ ಆರಾಧ್ಯದೈವ ದುರ್ಗಾದೇವಿ. ನಾಲ್ಕು ವರ್ಷಗಳ ಹಿಂದೆ ದುರ್ಗಾದೇವಿಯ ಹೆಸರಿನಲ್ಲಿ ಕೋಣವನ್ನು ಬಿಡಲಾಗಿತ್ತು. ಗ್ರಾಮದಲ್ಲಿಯೇ ಕೋಣ ಓಡಾಡಿಕೊಂಡು ಮೇವು ತಿಂದುಕೊಂಡು ಇತ್ತು. ಈಗ ಎರಡು ತಿಂಗಳ ಹಿಂದೆ ದೇವರ ಕೋಣ ನಾಪತ್ತೆಯಾಗಿದೆ. ಗ್ರಾಮದ ಜನರು ಹಾಗೂ ಸಮಿತಿ ಸದಸ್ಯರು ಹುಡುಕಾಟ ನಡೆಸಿದರೂ ಕೋಣ ಮಾತ್ರ …

Read More »

ಸುವರ್ಣಸೌಧದೊಳಗೆ ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ಸ್ವಾಮಿ ವಿವೇಕಾನಂದ ಸೇರಿದಂತೆ ಗಣ್ಯರ ತೈಲ ಕಲಾಕೃತಿಗಳನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ್, ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮರು ವಿನ್ಯಾಸಗೊಂಡ ಹಾಗೂ ದೇಶದ ಪ್ರಥಮ ರಾಷ್ಟ್ರಪತಿ ಡಾ. ಬಾಬು ರಾಜೇಂದ್ರಪ್ರಸಾದ್, ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು, ದೇಶದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಮತ್ತು ದೇಶದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರ ತೈಲ ಕಲಾಕೃತಿಗಳನ್ನು ಸುವರ್ಣಸೌಧದ ಸದನದ ಒಳಗೆ ಸಿಎಂ …

Read More »

ಅಲೆಮಾರಿ ದಂಪತಿಯ ಒಂದು ವರ್ಷದ ಗಂಡು ಮಗು ನಾಪತ್ತೆ

ದಾವಣಗೆರೆ: ಅಲೆಮಾರಿ ದಂಪತಿಯ 1 ವರ್ಷ ಗಂಡು ಮಗು ನಾಪತ್ತೆಯಾದ ಘಟನೆ ನ.16ರಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೋಷಕರಾದ ಯುವರಾಜ್ ಪವಾರ್ ಮತ್ತು​ ಸಾರಿಕಾ ಪವಾರ್​ ಹರಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ ಒಂದು ತಿಂಗಳಾದರೂ ಮಗುವಿನ ಸುಳಿವು ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಹೆತ್ತವರು ಅಳಲು ತೋಡಿಕೊಂಡಿದ್ದಾರೆ. ಮಗುವಿನ ತಂದೆ ಯುವರಾಜ್ ಪವಾರ್ ಅವರು ಜೊತೆ ಮಾತನಾಡಿ, “ಹರಪನಹಳ್ಳಿಯಲ್ಲಿ ಟೆಂಟ್ ಹಾಕಿಕೊಂಡು ರಾತ್ರಿ ವೇಳೆ ಮಲಗಿದ್ದಾಗ …

Read More »

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

ಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಇಡೀ ಜೀವನ ಸಾರುವ ಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ. ಕಲಾಪ ವೀಕ್ಷಣೆಗೆ ಸುವರ್ಣ ಸೌಧಕ್ಕೆ ಬರುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು ಮಹಾತ್ಮ ಗಾಂಧೀಜಿ ಅವರ ಚಿತ್ರಗಳನ್ನೂ ಕಂಡು ಇತಿಹಾಸವನ್ನು ಮೆಲುಕು ಹಾಕುತ್ತಿದ್ದಾರೆ. ಬೆಳಗಾವಿಯಲ್ಲಿ 1924ರ ಡಿ.26, 27ರಂದು ನಡೆದ ಕಾಂಗ್ರೆಸ್ ಅಧಿವೇಶನ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ. …

Read More »

ಕಿತ್ತೂರು ಕರ್ನಾಟಕಕ್ಕೂ 371ಜೆ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದಕೋನರೆಡ್ಡಿ

ಬೆಳಗಾವಿ: ಕಲ್ಯಾಣ ಕರ್ನಾಟಕ ಮಾದರಿಯಲ್ಲೇ ಕಿತ್ತೂರು ಕರ್ನಾಟಕ ಅಭಿವೃದ್ಧಿಗೂ 371 ಜೆ ವಿಶೇಷ ಸ್ಥಾನಮಾನವನ್ನು ನೀಡುವಂತೆ ಒತ್ತಾಯಿಸುವ ನಿರ್ಣಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಶಾಸಕ ಎನ್. ಹೆಚ್. ಕೋನರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ ಅವರು, ಕಿತ್ತೂರು ಕರ್ನಾಟಕ ತುಂಬಾ ಹಿಂದುಳಿದಿದೆ. ಕಲ್ಯಾಣ ಕರ್ನಾಟಕದವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಫೋಟೋ ಇಟ್ಟುಕೊಳ್ಳಬೇಕು ಎಂದರು. ಬೆಣ್ಣೆ ಹಳ್ಳದ ಪ್ರವಾಹದಿಂದ ನಾಲ್ಕು …

Read More »

ಯಾವುದೇ ರೈತರು ಇಂತಹ ಕಾರ್ಖಾನೆಯವರು ತೂಕದಲ್ಲಿ ಮೋಸ ಮಾಡಿದ್ದಾರೆ ಎಂದು ದೂರು ಕೊಟ್ಟರೆ ಅಂಥವರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿ;ಶಿವಾನಂದ ಪಾಟೀಲ

ಬೆಳಗಾವಿ : ಯಾವುದೇ ರೈತರು ಇಂತಹ ಕಾರ್ಖಾನೆಯವರು ತೂಕದಲ್ಲಿ ಮೋಸ ಮಾಡಿದ್ದಾರೆ ಎಂದು ದೂರು ಕೊಟ್ಟರೆ ಅಂಥವರಿಗೆ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ನೀಡಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು. ಅವರು ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರಿಂದ ಮನವಿ ಪತ್ರ ತೆಗೆದುಕೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಕೆಲವು ಸಕ್ಕರೆ ಕಾರ್ಖಾನೆಯಲ್ಲಿ ರೈತರಿಗೆ ಮೋಸ ಮಾಡುತ್ತಾರೆ ಎಂದು ದೂರುಗಳು ಕೇಳಿ ಬರುತ್ತಿವೆ. ಆದರೆ …

Read More »

ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ

ಡಿಸೆಂಬರ್​ 16: ದೇಶದಾದ್ಯಂತ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್​ ಕಾನ್‌ಸ್ಟೇಬಲ್ ತಿಪ್ಪಣ್ಣ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇದೀಗ ಹೆಂಡತಿಯ ಕಿರುಕುಳ ಆರೋಪದಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಸಾವಾಗಿದೆ. ಹೌದು. ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ …

Read More »

ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆಕುಮಾರಸ್ವಾಮಿ ಅವರಿಗೆ ಮುಖಭಂಗ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೊಂದು ಮುಖಭಂಗ ಉಂಟಾಗಿದೆ. ಡಿಕೆ ಶಿವಕುಮಾರ್ ಬಣದ ಕೆಂಚಪ್ಪ ಗೌಡ ಅವರು 21 ಮತಗಳೊಂದಿಗೆ ಗೆದ್ದಿದ್ದಾರೆ. ಕುಮಾರಸ್ವಾಮಿ ಬಣದ ಡಾ. ಆಂಜಿನಪ್ಪ ಅವರು 14 ಮತಗಳನ್ನು ಪಡೆದುಕೊಂಡಿದ್ದಾರೆ.ವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಹೆಚ್​ಡಿ ಕುಮಾರಸ್ವಾಮಿಗೆ (HD Kumaraswamy) ಇದೀಗ ಒಕ್ಕಲಿಗರ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ್ತೆ ಮುಖಭಂಗವಾಗಿದೆ. …

Read More »

ಡ್ರೋನ್​ ಪ್ರತಾಪ್​ಗೆ 10 ದಿನ ನ್ಯಾಯಾಂಗ ಬಂಧನ

ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ (Sodium) ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು. ತುಮಕೂರು ‌ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದಾರೆ ಎಂಬ ಆರೋಪದ ಮೇಲೆ ಡ್ರೋನ್​ …

Read More »

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಯುವಕ;

ಹಾವುಗಳೆಂದರೆ ಯಾರಿಗೆ ತಾನೇ ಭಯವಿರಲ್ಲ ಹೇಳಿ. ಅದರಲ್ಲೂ ಹೆಬ್ಬಾವು, ಕಾಳಿಂಗ ಸರ್ಪದಂತಹ ದೈತ್ಯ ಹಾವುಗಳನ್ನು ಕಂಡರೆ ಸಾಕು ಜನ ಮಾರು ದೂರ ಓಡಿ ಹೋಗ್ತಾರೆ. ಇವರುಗಳ ನಡುವೆ ಒಂದಿಷ್ಟು ಧೈರ್ಯವಂತ ಉರಗ ಪ್ರೇಮಿಗಳೂ ಇದ್ದಾರೆ. ಎಲ್ಲೇ ಎಷ್ಟು ದೊಡ್ಡ ಹಾವುಗಳಿದ್ದರೂ, ವಿಷಪೂರಿತ ಹಾವುಗಳಿದ್ದರೂ ಕೂಡಾ ಅದನ್ನು ಸಲೀಸಾಗಿ ಹಿಡಿದು ಅದರೊಂದಿಗೆ ಸರಸವಾಡುತ್ತಾರೆ. ಹೀಗೆ ಹಾವಿನ ಜೊತೆ ಸರಸವಾಡಲು ಹೋಗಿ ಪಜೀತಿಗೆ ಸಿಲುಕಿದವರ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಲ್ಲೊಂದು …

Read More »