ಗದಗ, ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. ಬೋರ್ವೆಲ್ನಲ್ಲಿ ಅವರಿಗೆ ನೀರು ಕೂಡ ದೊರೆತಿದೆ. ಇದೀಗ ಈ ಬಗ್ಗೆ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಹರ್ಷ ವ್ಯಕ್ತಪಡಿಸಿದ್ದಾರೆ. ಅತ್ತೆ ಹಾಗೂ ಸೊಸೆ ಸೇರಿ ಗೃಹಲಕ್ಷ್ಮಿ ಯೋಜನೆಯಿಂದ ದೊರೆತ 44 ಸಾವಿರ ರೂ. …
Read More »Yearly Archives: 2024
ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡ್ತಾರೆ: ಬೆಲ್ಲದ
ಹುಬ್ಬಳ್ಳಿ, ಡಿಸೆಂಬರ್ 14: ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಮುಸ್ಲಿಮರೆಂದರೆ ಪ್ರೀತಿ. ಅವರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು ಕೊಡುತ್ತಾರೆ ಎಂದು ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರಿಗೆ ಇವರು ಮುತ್ತು ಕೊಡುತ್ತಾರೆ, ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರಿಗೆ ಮುತ್ತು ಕೊಡುತ್ತಾರೆ, ಕುಕ್ಕರ್ ಬಾಂಬ್ ಇಟ್ಟವರಿಗೂ ಮುತ್ತು ಕೊಡುತ್ತಾರೆ. ಆದರೆ ಶಾಂತ ರೀತಿಯಿಂದ ಹೋರಾಟ ಮಾಡಿದ ನಮ್ಮ …
Read More »ಹೋರಾಟವನ್ನು ಅಸಂವೈಧಾನಿಕ ಅಂತ ಹೇಳಿ ಸಮುದಾಯದ ಬಗ್ಗೆ ಸಿಎಂ ನಿಷ್ಕಾಳಜಿ ಪ್ರದರ್ಶಿಸಿದ್ದಾರೆ: ಸ್ವಾಮೀಜಿ
ಬೆಳಗಾವಿ: ಪ್ರತಿಭಟನೆನಿರತ ಪಂಚಮಸಾಲಿಗಳ ಮೇಲೆ ಲಾಠಿ ಪ್ರಹಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಾತಾಡುವಾಗ ಪಂಚಮಸಾಲಿಗಳ ಮೀಸಲಾತಿ ಹೋರಾಟವನ್ನು ಸಂವಿಧಾನಬಾಹಿರ ಅಂತ ಹೇಳಿದ್ದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಮುದಾಯದವರಲ್ಲಿ ತೀವ್ರ ಅಸಮಾಧಾನವನ್ನುಂಟು ಮಾಡಿದೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಸ್ವಾಮೀಜಿ, ನಮ್ಮ ಹೋರಾಟವನ್ನು ಅಸಂವೈಧಾನಿಕ ಎಂದು ಹೇಳುವ ಮೂಲಕ ಸಮುದಾಯದ ಬಗ್ಗೆ ತನಗೆ ಯಾವುದೇ ಕಾಳಜಿ ಇಲ್ಲವೆನ್ನುವುದನ್ನು ಸಿದ್ದರಾಮಯ್ಯ ನಿರೂಪಿಸಿದ್ದಾರೆ, ಅವರು ಹೇಳಿರುವುದು ಬಸವಣ್ಣನ ಎಲ್ಲ ಅನುಯಾಯಿಗಳಿಗೆ ಮಾಡಿದ …
Read More »ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆ ವಿಲೀನ
ಬೆಂಗಳೂರು, ಡಿಸೆಂಬರ್ 14: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ (Food safety and quality Department) ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು (Drug Control Department) ವಿಲೀನಗೊಳಿಸಿ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ. ಎರಡು ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಣೆಗೆ ಸೂಚನೆ …
Read More »ರೋಗಿಗಳನ್ನೂ ಲೆಕ್ಕಿಸದೆ ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್ಗಳ ಡ್ಯಾನ್ಸ್
ತೆಲಂಗಾಣದ ಜಗ್ತಿಯಾಲ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯ ನಿರತ ನರ್ಸ್ಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸಂಭ್ರಮಾಚರಣೆ ಹೆಸರಿನಲ್ಲಿ ಗಲಾಟೆ ಸೃಷ್ಟಿಸಿದರು. ಜೋರಾಗಿ ಹಾಡು ಹಾಕಿಕೊಂಡ ಅವರು ಆಸ್ಪತ್ರೆಯಲ್ಲಿ ರೋಗಿಗಳಿದ್ದಾರೆ ಎನ್ನುವುದನ್ನೂ ಮರೆತು ಕುಣಿದು ಕುಪ್ಪಳಿಸಿದರು. ಇದಕ್ಕೆ ರೋಗಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ರೀಲ್ಸ್ ಅನ್ನು ಅಪ್ಲೋಡ್ ಮಾಡಿದ ನಂತರ ಭಾರೀ ವಿರೋಧ ವ್ಯಕ್ತವಾಗಿದೆ. ರೋಗಿಗಳ ಆರೋಗ್ಯವನ್ನೂ ಲೆಕ್ಕಿಸದೆ ಮೋಜು-ಮಸ್ತಿ ಮಾಡುತ್ತಿರುವ ನರ್ಸ್ಗಳ ಬಗ್ಗೆ …
Read More »ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ
ಬಳ್ಳಾರಿ, ಡಿಸೆಂಬರ್ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಶುಕ್ರವಾರ (ಡಿ.13) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ …
Read More »ಗೋವಾ ಪೊಲೀಸ್ನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು
ಡಿಸೆಂಬರ್ 14: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ (Goa) ಪೊಲೀಸ್ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು (Old Hubballi Police) ಬಂಧಿಸಿದ್ದಾರೆ. ಬಂಧಿತ ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ
ಬೆಳಗಾವಿ, ಡಿ.13 : ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. …
Read More »ಅಲ್ಲು ಅರ್ಜುನ್ ಪರ ವಾದ ಮಂಡಿಸಿದ ನಿರಂಜನ್ ರೆಡ್ಡಿ ಪಡೆಯೋ ಸಂಭಾವನೆ ಇಷ್ಟೊಂದಾ?
ಅಲ್ಲು ಅರ್ಜುನ್ ಅವರು ಒಂದೇ ದಿನದಲ್ಲಿ ಎಲ್ಲವನ್ನೂ ನೋಡಿ ಬಂದರು. ‘ಪುಷ್ಪ 2’ ಯಶಸ್ಸಿನಲ್ಲಿದ್ದ ಅವರು ನಾನಾ ಕಡೆಗಳಿಗೆ ತೆರಳಿ ಸಕ್ಸಸ್ ಮೀಟ್ನಲ್ಲಿ ಭಾಗಿ ಆಗುತ್ತಿದ್ದಾರೆ. ಹೀಗಿರುವಾಗಲೇ ಡಿಸೆಂಬರ್ 4ರಂದು ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಅವರು ಡಿಸೆಂಬರ್ 13ರಂದು ಬಂಧನಕ್ಕೆ ಒಳಗಾಗಿ, ಇಂದು (ಡಿಸೆಂಬರ್ 15) ಬಿಡುಗಡೆ ಹೊಂದಿದ್ದಾರೆ. ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್ಗೆ ಮಧ್ಯಂತರ ಜಾಮೀನು ನೀಡಿದೆ. ರಾತ್ರಿ ಇಡೀ ಜೈಲಿನಲ್ಲೇ ಇದ್ದ …
Read More »