ಡಿಸೆಂಬರ್ 13: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್ಎನ್ ಕಿರಣಶಂಕರ್ …
Read More »Yearly Archives: 2024
ಇಂದು ದರ್ಶನ್ ಜಾಮೀನು ತೀರ್ಪು ಪ್ರಕಟ
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಕೇಸ್ನ ಕಾರಣದಿಂದ ಅವರು ಒಪ್ಪಿಕೊಂಡ ಸಿನಿಮಾಗಳು ಸಂಕಷ್ಟದಲ್ಲಿ ಇವೆ. ಇಂದು (ಡಿಸೆಂಬರ್ 13) ಅವರಿಗೆ ಪ್ರಮುಖ ದಿನ ಆಗಲಿದೆ. ದರ್ಶನ್ಗೆ ಜಾಮೀನು …
Read More »ಪಂಚಮಸಾಲಿ 2A ಮೀಸಲಾತಿ ಕಿಚ್ಚು ಬೆಳಗಾವಿ ಅಧಿವೇಶನವನ್ನೂ ಬಿಟ್ಟಿಲ್ಲ.
ಬೆಳಗಾವಿ, ಡಿಸೆಂಬರ್ 13: ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ವಿಚಾರವಾಗಿ ಚರ್ಚೆ ನಡೆಸುವಂತೆ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಗುರುವಾರ ಪಟ್ಟು ಹಿಡಿದರು. ವಿಧಾನಪರಿಷತ್ನಲ್ಲೂ ಇದೇ ರೀತಿ ನಡೆಯಿತು. ಇದೇ ವೇಳೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಲಾಠಿಚಾರ್ಜ್ ಮಾಡಿದ್ದನ್ನು ಸರ್ಮಥಿಸಿಕೊಂಡರು. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಂದವರನ್ನು ಬಿಟ್ಟು ಬಿಡಬೇಕಿತ್ತಾ ಎಂದು ಪ್ರಶ್ನಿಸಿದರು. ಗೃಹ ಸಚಿವರ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೋರಾಟ ಮಾಡುವುದು ತಪ್ಪಲ್ಲ. ಹಿಂದೆ …
Read More »ಮುಗಿಯದ ಇ-ಖಾತಾ ಸಂಕಷ್ಟ, ಸರ್ವರ್ ಸಮಸ್ಯೆ,
ಡಿಸೆಂಬರ್ 13: ರಾಜಧಾನಿ ಬೆಂಗಳೂರಲ್ಲಿ (Bengaluru) ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ (E-Khata) ಕಡ್ಡಾಯಗೊಳಿಸಲಾಗಿದೆ. ಇತ್ತ, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ, ಬೆಂಗಳರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ಜನರಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ. ದಾಖಲೆಗಳು ಸರಿಯಿದ್ದರೆ ಸರ್ವರ್ ಇರಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬ ಸಂದಿಗ್ದ ಪರಿಸ್ಥಿತಿಗೆ ಸಿಲುಕಿರುವ ಜನರು ಇ-ಖಾತಾ ಪಡೆಯೋಕೆ ಪರದಾಡುತ್ತಿದ್ದಾರೆ.ಸದ್ಯ …
Read More »ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ
ಡಿಸೆಂಬರ್ 13: ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು (Karnataka Government) ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.ಬಿಎಂಟಿಸಿಯ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯ ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು. ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ …
Read More »ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ
ಬಿಜೆಪಿ ಮುಖಂಡನೊಬ್ಬನ ಕರ್ಮಕಾಂಡ ಬಯಲು. ಈತ ಖಾನಾಪುರದ ಬಿಜೆಪಿ ಮುಖಂಡ ಹಾಗೂ ಶಾಸಕರ ಆಪ್ತ ಆಕಾಶ ಅಥಣಿಕರ್. ಸಾರ್ವಜನಿಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಖೊಟ್ಟಿ ನೌಕರಿ ಆದೇಶ ಪತ್ರಗಳನ್ನು ತಯಾರಿಸಿ ಕೊಟ್ಟು ಜನರನ್ನು ಯಾಮಾರಿಸುವುದೇ ಈ ಮಹಾನುಭಾವನ ಕಾಯಕ. ಖಾನಾಪುರ ತಾಲ್ಲೂಕಿನ ಶ್ರೀಮತಿ ಶೀತಲ ಪಾಟೀಲ ಎಂಬ ಮಹಿಳೆಗೆ ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿಸುವುದಾಗಿ ನಂಬಿಸಿ ಆಕೆಯಿಂದ 30000/- ಹಣ ಪಡೆದುಕೊಂಡು ಖೊಟ್ಟಿ ಆದೇಶ ಪ್ರತಿಯನ್ನು …
Read More »ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ
ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿಲ್ಲ. 2023-24ನೇ ಸಾಲಿನಲ್ಲಿ ಅಭಿವೃದ್ಧಿ ಕೆಲಸಗಳಿಗೆಂದೇ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ವ್ಯಯಿಸಲಾಗಿದೆ. ಸರ್ಕಾರವು 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ 52,009 ಕೋಟಿ ರೂ.ಗಳನ್ನು ಒದಗಿಸಿದೆ. ರಾಜ್ಯ ಸರ್ಕಾರವು 2023-24 ರಲ್ಲಿ 90,280 ಕೋಟಿ ರೂ.ಗಳನ್ನು ಸಾಲ ಪಡೆದಿದ್ದು, ರಾಜ್ಯದ ವಿತ್ತೀಯ ಕೊರತೆ 2.6% ಇದ್ದು, ರಾಜ್ಯ ಸರ್ಕಾರವು ಪಡೆದ ಒಟ್ಟು ಸಾಲ ಕರ್ನಾಟಕ ಆರ್ಥಿಕ ಹೊಣೆಗಾರಿಕೆ …
Read More »ಯತ್ನಾಳ್, ತೇಜಸ್ವಿ ಸೂರ್ಯ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್: ಪ್ರಕರಣವೇನು?
ಬೆಂಗಳೂರು, ಡಿಸೆಂಬರ್ 12: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ಬಿಗ್ ರೀಲಿಫ್ ಸಿಕ್ಕಿದೆ. ಎಫ್ಐಆರ್ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕಳೆದ ವಾರ ಮಾಡಲಾಗಿತ್ತು. ಬಳಿಕ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತ್ತು. ಇದೀಗ ತೀರ್ಪು ನೀಡಲಾಗಿದೆ.ಮೃತ ರೈತನ ತಂದೆಯ ಹೇಳಿಕೆ ಆಧರಿಸಿ …
Read More »ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್
ಬೆಂಗಳೂರು, (ಡಿಸೆಂಬರ್ 12): ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹಿಂದೂ ಧರ್ಮ ನಿಂದನೆ ಮೂಲಕ ಅಶಾಂತಿ ಮೂಡಿಸಲು ಯತ್ನ, ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಿದ್ದಾರೆಂದು ವಕೀಲ ಕೆ.ದಿಲೀಪ್ ಕುಮಾರ್ ಅವರು ದಾಖಲಿಸಿದ್ದ ಖಾಸಗಿ ದೂರನ್ನು ಇಂದು (ಡಿಸೆಂಬರ್ 12) ಹೈಕೋರ್ಟ್ ರದ್ದುಪಡಿಸಿದೆ ಇದರಿಂದ ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣ ಹಿನ್ನೆಲೆ 2022ರ ನವೆಂಬರ್ನಲ್ಲಿ …
Read More »ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ, ಬಿಜೆಪಿ, ಆರ್ಎಸ್ಎಸ್ನವರು: ಕಾಶಪ್ಪನವರ್ ಹೊಸ ಬಾಂಬ್
ಬೆಳಗಾವಿ, ಡಿಸೆಂಬರ್ 12: 2ಎ ಮೀಸಲಾತಿಗಾಗಿ (Panchamasali reservation) ಹೋರಾಟ ಮಾಡುತ್ತಿದ್ದ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸದ್ಯ ಸದನದ ಒಳಗೂ ಮತ್ತು ಹೊರಗೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಪಕ್ಷ ಬಿಜೆಪಿ ನಾಯಕರು ಇದನ್ನೇ ಅಸ್ತ್ರವಾಗಿಸಿಕೊಂಡಿದ್ದು, ಆಡಳಿತಾರೂಢ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮಧ್ಯೆ ಅದೇ ಸಮುದಾಯದ ಶಾಸಕ ವಿಜಯಾನಂದ ಕಾಶಪ್ಪನವರ್, ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ. ಅವರು ಬಿಜೆಪಿ ಕಾರ್ಯಕರ್ತರು, ಆರ್ಎಸ್ಎಸ್ನವರು ಎಂದು ಹೊಸ ಬಾಂಬ್ ಹಾಕಿದ್ದಾರೆ. ಕಲ್ಲು ತೂರಲು …
Read More »