ಕಲಬುರಗಿ: ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ (Kalaburagi) ನಗರದ ಹೊರವಲಯದ ಮಾಲಗತ್ತಿ ಕ್ರಾಸ್ ಬಳಿ ನಡೆದಿದೆ.ಖಲೀಲ್ ಅಹಮದ್ (38) ಹತ್ಯೆಗೀಡಾದ ರೌಡಿಶೀಟರ್. ವೈಕ್ತಿಯ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೋಸ್ಟ್ ವಾಂಟೆಡ್ ಆಗಿದ್ದ ಖಲೀಲ್, ಹಲವು ವರ್ಷಗಳಿಂದ ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ.
Read More »Yearly Archives: 2024
ಒಂದು ಟನ್ ಕಬ್ಬಿಗೆ ರೈತರಿಗೆ 5 ಸಾವಿರ ರೂಪಾಯಿ ಸಿಗಬೇಕು. ಇಲ್ಲವಾದರೆ ಸಕ್ಕರೆ ಸಚಿವ ಶಿವಾನಂದ ಪಾಟೀಲರ ನಿವಾಸದ ಎದುರು ಹೋರಾಟ
ಡಿಸೆಂಬರ್ 11: ತೂಕದಲ್ಲಾಗುತ್ತಿದ್ದ ಮೋಸ ಹಿನ್ನಲೆ ಕಬ್ಬು (sugarcane) ಬೆಳೆಗಾರರು, ಕಾರ್ಖಾನೆಗಳ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಮುಂದಾಗಿದೆ. ಆ ಮೂಲಕ ಕಬ್ಬು ತೂಕದಲ್ಲಾಗುವ ಮೋಸ ತಡೆಗಟ್ಟಲು ಸರ್ಕಾರದಿಂದ ಕ್ರಮಕೈಗೊಳ್ಳಲಾಗುತ್ತಿದೆ. ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಬಳಿ ವೇ ಬ್ರಿಡ್ಜ್ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ. ತೂಕದ ಯಂತ್ರವನ್ನ ಎಎಪಿಎಂಸಿ ಮೂಲಕ ವೇ ಬ್ರಿಡ್ಜ್ ಸ್ಥಾಪಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಎಫ್ಆರ್ಪಿ ಅಡಿಯಲ್ಲಿ ದರ ನಿಗದಿ …
Read More »ಆಧಾರ್ ಕಾರ್ಡ್ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆಯ ಟಿಕೆಟ್
ಡಿಸೆಂಬರ್ 12: ಈ ಹಿಂದೆ ಆಧಾರ್ ಕಾರ್ಡ್ನಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಬಿಟ್ಟು ಬೇರೆ ಭಾಷೆ ಪ್ರಿಂಟ್ ಆಗಿದ್ದರೆ, ಅಂತಹ ಮಹಿಳೆಯರಿಗೆ ಬಿಎಂಟಿಸಿ ಕಂಡಕ್ಟರ್ಗಳು ಶಕ್ತಿ ಯೋಜನೆಯ ಟಿಕೆಟ್ ನೀಡುತ್ತಿರಲಿಲ್ಲ. ಇದರಿಂದ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಸಾಕಷ್ಟು ಜಗಳಗಳಾಗುತ್ತಿದ್ದವು. ಇದನ್ನು ತಪ್ಪಿಸಲು ಬಿಎಂಟಿಸಿ ಮುಂದಾಗಿದ್ದು, ಇನ್ಮುಂದೆ ಆಧಾರ್ ಕಾರ್ಡ್ನಲ್ಲಿ ಕರ್ನಾಟಕದ ವಿಳಾಸ ಇದ್ದರೆ ಸಾಕು, ಶಕ್ತಿ ಯೋಜನೆ ಟಿಕೆಟ್ ನೀಡಬಹುದು ಸೂಚನೆ ನೀಡಿದೆ. ಹೊರ ರಾಜ್ಯದಿಂದ ಬಂದು ಕರ್ನಾಟಕದಲ್ಲಿ …
Read More »ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿ ಮತ್ತು ಶಿಸುವಿನ ಸಾವಿನ ಸಂಖ್ಯೆ ಕಳೆದ 3 ವರ್ಷಗಳನ್ನು ಗಮನಿಸಿದಾಗ 2022ರಲ್ಲೇ ಅತ್ಯಧಿಕ ಎನ್ನುವುದು ಬೆಳಕಿಗೆ ಬಂದಿದೆ.
, ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಾಣಂತಿ ಮತ್ತು ಶಿಸುವಿನ ಸಾವಿನ ಸಂಖ್ಯೆ ಕಳೆದ 3 ವರ್ಷಗಳನ್ನು ಗಮನಿಸಿದಾಗ 2022ರಲ್ಲೇ ಅತ್ಯಧಿಕ ಎನ್ನುವುದು ಬೆಳಕಿಗೆ ಬಂದಿದೆ. 2022ರಲ್ಲಿ ಬಿಮ್ಸ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 6,878 ಹೆರಿಗೆಗಳಾಗಿದ್ದು, ಬಿಮ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 12ರಂತೆ ಒಟ್ಟೂ 24 ಬಾಣಂತಿಯರು ಸಾವಿಗೀಡಾಗಿದ್ದಾರೆ. 2023ರಲ್ಲಿ 7,951 ಹೆರಿಗೆಯಾಗಿದ್ದು, ಬಿಮ್ಸ್ ನಲ್ಲಿ 7 ಹಾಗೂ ಪಿಎಚ್ …
Read More »ರಾಜ್ಯದಾದ್ಯಂತ ರಸ್ತೆ ತಡೆಗೆ ಕರೆ ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ
ಡಿಸೆಂಬರ್ 12: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಸೋಮವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆಸಿದ್ದಕ್ಕೆ ಮತ್ತಷ್ಟು ಕೆರಳಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ ಎಂದಿದ್ದಾರೆ. ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್ ಆಗಿದ್ದು ಹೇಗೆ? ಹಾಗೆ ಆಗಿದ್ದೇ …
Read More »ನಮ್ಮದು ಶಾಂತಿಯುತ ಹೋರಾಟವಿತ್ತು. ಆದ್ರೆ ನಮ್ಮ ಹೋರಾಟದ ಮೇಲೆ ರಾಜಕೀಯ ದುರುದ್ದೇಶದಿಂದ ಲಾಠಿ ಪ್ರಹಾರ
ಪಂಚಮಸಾಲಿ ಹೋರಾಟದ ವೇಳೆ ಲಾಠಿ ಚಾರ್ಜ್ಗೆ ಆರ್ಡರ್ ಮಾಡಿದ್ದು, ಬೆಳಾಗವಿ ಎಸ್ಪಿ ಅವರೇ- ಲಾಠಿ ಏಟು ತಿಂದ ಗಾಯಾಳು ನಾಗಪ್ಪ. ನಮ್ಮ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ನಾವು ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ವಿ, ಈ ವೇಳೆ ಬೆಳಗಾವಿ ಎಸ್ಪಯವರೇ ಲಾಠಿ ಚಾರ್ಜ್ಗೆ ಆರ್ಡರ್ ಮಾಡಿ ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆಯಲ್ಲಿ ಸ್ವಾಮೀಜಿಯವರ ರಕ್ಷಣೆ ಮಾಡಲು ಹೋಗಿ ನನಗೆ ತಲೆಗೆ ಏಟು ಬಿದ್ದು, ಮೂರು …
Read More »2ಎ ಮೀಸಲಾತಿ ಸಿದ್ಧರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ
2ಎ ಮೀಸಲಾತಿಗಾಗಿ ನಡೆಯುತ್ತಿದ್ದ ಹೋರಾಟವನ್ನ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹತ್ತಿಕ್ಕುವ ಕುತಂತ್ರ ಮಾಡಿದ್ದರಿಂದಲೇ ಇಷ್ಟೊಂದು ರಾದ್ಧಾಂತ ನಡೆದಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು ಶ್ರೀಗಳ ನೇತೃತ್ವದಲ್ಲಿ ನಡೆದ ಹೋರಾಟ ಶಾಂತಿಯುತವಾಗಿ ನಡೆದಿತ್ತು. ಆದರೆ, ವ್ಯವಸ್ಥಿತವಾಗಿ ಹೋರಾಟವನ್ನ ಮಣಿಸುವ ಯತ್ನ ನಡೆಯಿತ್ತಲ್ಲದೇ, ಹಲವರ ಮೇಲೆ ಗಂಭೀರವಾಗಿ ಹಲ್ಲೆ ಮಾಡಲಾಗಿದೆ ಎಂದರು. ರಾಜ್ಯ ಸರಕಾರದ ಈ ಕ್ರಮದಿಂದ ಹೋರಾಟ ನಿಲ್ಲೋದಿಲ್ಲ. ಇದಕ್ಕೆ ತಕ್ಕ …
Read More »30 ಗುಂಟೆಯಲ್ಲಿ ಬದನೆಕಾಯಿ ಬೆಳೆದು 15 ಲಕ್ಷ ರೂಪಾಯಿ ಲಾಭಗಳಿಸಿದ ಹಜಾರೆ ಸಹೋದರರ
ಚಿಕ್ಕೋಡಿ: ಭೂಮಿ ತಾಯಿಯನ್ನು ನಂಬಿದ ರೈತನಿಗೆ ಎಂದಿಗೂ ಮೋಸವಾಗಿಲ್ಲ ಎಂಬುದು ಹಿರಿಯರ ಮಾತಿನಂತೆ ಇಲ್ಲೋಬ್ಬ ಯುವ ರೈತ 30 ಗುಂಟೆಯಲ್ಲಿ ಕೇವಲ ಆರು ತಿಂಗಳಲ್ಲಿಯೇ ಬದನೆಕಾಯಿ ಬೆಳೆದು 15 ಲಕ್ಷ ರೂ ಬಂಪರ ಬೆಳೆ ತೆಗೆದು ಇತರ ರೈತನಿಗೆ ಮಾದರಿಯಾಗಿದ್ದಾನೆ. ಚಿಕ್ಕೋಡಿ ತಾಲೂಕಿನ ಕಾಡಾಪೂರ ಗ್ರಾಮದ ಯುವ ರೈತರಾದ ಅನಿಲ ಹಜಾರೆ ಮತ್ತು ಸುನೀಲ ಹಜಾರೆ ಅವರು ತಮ್ಮ ಅರ್ಧ ಎಕರೆಯಲ್ಲಿ 1093 ತಳಿಯ ಬದನೆಕಾಯಿ ಬೆಳೆ ನಾಟಿ …
Read More »ಪಂಚಮಸಾಲಿ ಮೀಸಲಾತಿ ಹೋರಾಟ: ಐವರ ವಿರುದ್ಧ F.I.R.
ಬೆಳಗಾವಿ, ಡಿಸೆಂಬರ್ 11: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಮಸಾಲಿ (Lingayat Panchamasali) ಸಮುದಾಯದವರು ಬೆಳಗಾವಿಯಲ್ಲಿ (Belagavi) ಬುಧವಾರ ನಡೆಸಿದ ಹೋರಾಟ ನಗರವನ್ನು ರಣರಂಗವಾಗಿಸಿತ್ತು. ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, …
Read More »ಆತ್ಮೀಯ ಸ್ನೇಹಿತ, ಮಾಜಿ ಶಾಸಕ ಜಯಣ್ಣರ ಅಂತಿಮ ದರ್ಶನ ಪಡೆದ:C.M.
ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತಕ್ಕೊಳಗಾಗಿ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೇಗಾಲಕ್ಕೆ ಆಗಮಿಸಿದರು. ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಜಯಣ್ಣ ಮುಖ್ಯಮಂತ್ರಿಯವರಿಗೆ ಪರಮಾಪ್ತರಾಗಿದ್ದರು. ಮೊದಲಿಗೆ ಅವರಿಬ್ಬರೂ ಜೆಡಿಎಸ್ ನಲ್ಲಿದ್ದರು ಮತ್ತು ಜಯಣ್ಣ 2013 ರಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿ ಕೊಳ್ಳೇಗಾಲದ ಶಾಸಕರಾಗಿದ್ದರು. ಅವರ ಪಾರ್ಥೀವ ಶರೀರದ ಮುಂದೆ ಸಿದ್ದರಾಮಯ್ಯ ಭಾವುಕರಾಗಿದ್ದನ್ನು ದೃಶ್ಯಗಳಲ್ಲಿ …
Read More »