ಹಾವೇರಿ : ವರ್ಷದಿಂದ ವರ್ಷಕ್ಕೆ ರೈತರ ಆತ್ಮಹತ್ಯೆಗಳ ಪ್ರಕರಣಗಳು ಅಧಿಕವಾಗುತ್ತಿವೆ. ಸರಿಯಾದ ಬೆಲೆ, ಸರಿಯಾದ ಇಳುವರಿ, ಸಮರ್ಪಕ ಗೊಬ್ಬರ, ಬಿತ್ತನೆ ಬೀಜ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅತಿಯಾದ ಮಳೆ, ಬರ ಸೇರಿದಂತೆ ಪ್ರಕೃತಿಯ ಹಲವು ವಿಕೋಪಗಳಿಂದ ಸಹ ರೈತರು ಸಾಲದ ಸುಳಿಗೆ ಸಿಲುಕಿ ನಲುಗುತ್ತಿದ್ದಾರೆ. ಆದರೆ ರೈತರು ಪರ್ಯಾಯ ಕೃಷಿಯಾದ ಮಿಶ್ರ ಬೇಸಾಯದ ಮೂಲಕ ಈ ರೀತಿಯ ಸಂಕಷ್ಟಗಳಿಂದ ಪಾರಾಗಬಹುದು ಎನ್ನುತ್ತಿದೆ ಹಾವೇರಿಯ ಗ್ರೀನ್ಚಿಕ್ ರೈತರ ಉತ್ಪಾದಕರ ಕಂಪನಿ. ಈ …
Read More »Yearly Archives: 2024
ಕಾರವಾರದಲ್ಲೊಂದು ರಂಗೋಲಿ ಜಾತ್ರೆ
ಕಾರವಾರ(ಉತ್ತರ ಕನ್ನಡ): ಜಾತ್ರೆ ಅಂದಾಕ್ಷಣ ನಮಗೆ ನೆನಪಾಗೋದು ಅಲ್ಲಿನ ತಿಂಡಿ ತಿನಿಸುಗಳು, ಹೂವು, ಹಣ್ಣು ಕಾಯಿ, ಮಕ್ಕಳ ಆಟದ ಸಾಮಾನುಗಳು. ಆದರೆ, ಕಾರವಾರ ನಗರದಲ್ಲಿ ನಡೆದ ಜಾತ್ರೆಯೊಂದು ನಾವು ಅಂದುಕೊಳ್ಳುವುದಕ್ಕಿಂತ ವಿಭಿನ್ನವಾಗಿತ್ತು. ಜಾತ್ರೆಗೆ ಆಗಮಿಸಿದ ಸಾವಿರಾರು ಜನರು ದೇವರ ದರ್ಶನ ಪಡೆದುಕೊಳ್ಳುವುದಕ್ಕಿಂತ ಹೆಚ್ಚಾಗಿ ಜಾತ್ರೆ ನಡೆಯುವ ಸ್ಥಳದಲ್ಲಿನ ಮನೆಗಳ ಮುಂದೆ ಹಾಕಿರುವ ರಂಗೋಲಿ ನೋಡುವುದರಲ್ಲಿಯೇ ಮೈಮರೆತಿದ್ದರು. ಈ ಸ್ಪೆಷಲ್ ರಂಗೋಲಿ ಜಾತ್ರೆ ಕುರಿತಾದ ವರದಿ ಇಲ್ಲಿದೆ. ರಂಗೋಲಿ ಜಾತ್ರೆ ಖ್ಯಾತಿಯ ಕಾರವಾರ …
Read More »ವೀರಶೈವ ಧರ್ಮದ ಮೂಲ ಸಿದ್ಧಾಂತ ಅರಿತರೆ ಧರ್ಮದಲ್ಲಿ ಸವಾಲುಗಳನ್ನು ಎದುರಿಸಬಹುದು: ರಂಭಾಪುರಿ ಶ್ರೀ
ತುಮಕೂರು: ಜಗದ್ಗುರು ಶ್ರೀ ರೇಣುಕಾಚಾರ್ಯರು ನಡೆಸಿಕೊಂಡು ಬಂದ ವೀರಶೈವ ಪರಂಪರೆಯಲ್ಲಿ ವೀರಶೈವ ಧರ್ಮದ ಮೂಲ ಸಿದ್ಧಾಂತವನ್ನು ಬಹಳಷ್ಟು ಜನ ತಿಳಿದುಕೊಂಡಿಲ್ಲ. ತಿಳಿದುಕೊಳ್ಳುವ ಪ್ರಾಮಾಣಿಕ ಪ್ರಯತ್ನವೂ ಮಾಡುತ್ತಿಲ್ಲ. ಹೀಗಾಗಿ ಧರ್ಮದಲ್ಲಿ ಅನೇಕ ಸಮಸ್ಯೆ ಮತ್ತು ಸವಾಲುಗಳನ್ನು ಕಾಣುವಂತಾಗಿದೆ ಎಂದು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು. ತುಮಕೂರು ನಗರದಲ್ಲಿ ನಾಲ್ಕು ದಿನಗಳ ಕಾಲ ನಡೆದ ಧನುರ್ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ …
Read More »ಜ.15ರಂದು ಸಿಎಂ ಜೊತೆ ಸಭೆ ನಡೆಸಿ ಬೇಡಿಕೆ ಈಡೇರಿಸುವ ಭರವಸೆ: ಮುಷ್ಕರ ಕೈಬಿಟ್ಟ ಸಾರಿಗೆ ನೌಕರರ ಒಕ್ಕೂಟ
ಬೆಂಗಳೂರು: ಜನವರಿ 15ರಂದು ಸಿಎಂ ಸಿದ್ದರಾಮಯ್ಯ ರಸ್ತೆ ಸಾರಿಗೆ ನೌಕರರ ಜೊತೆ ಸಭೆ ನಡೆಸುವ ಭರವಸೆ ನೀಡಿದ್ದು, ಡಿ.31ರಿಂದ ಮಾಡಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯಲು ಕೆಎಸ್ಆರ್ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದ ಬೆನ್ನಲ್ಲೇ ಕ್ರಿಯಾ ಸಮಿತಿ ಮುಷ್ಕರದಿಂದ ಹಿಂದೆ ಸರಿಯಲು ತೀರ್ಮಾನಿಸಿದೆ. ಸಭೆಯಲ್ಲಿ ಮಕರ ಸಂಕ್ರಾಂತಿಯಂದು ಸಭೆ ನಡೆಸಿ …
Read More »ರಾಜ್ಯದಲ್ಲಿ ಅರಾಜಕಥೆ ಸೃಷ್ಟಿಯಾಗಿದೆ. ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಆರೋಪಿಸಿದರು.
ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ವಿಚಾರವಾಗಿ ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೊನ್ನೆ ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಪಿಎ ಕಿರುಕುಳದಿಂದ ಎಸ್ಡಿಎ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ ಸಾಯುವ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಹೆಸರು ಬರೆದಿಟ್ಟಿದ್ದ. ಆದರೂ ಅವರ ಪಿಎ ಬಂಧನ ಆಗದೆ ಬೇಲ್ ಪಡೆದು ಆಚೆ ಓಡಾಡುತ್ತಿದ್ದಾರೆ. ಈಗ ಕಲಬುರಗಿಯಲ್ಲಿ …
Read More »ಬೆಳಗಾವಿ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಯುವಕ ಸಾವು
ಬೆಳಗಾವಿ: ಪಾರ್ಟಿ ಮಾಡಲು ಹೋಗಿದ್ದಾಗ ಈಜುಕೊಳದಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್ನಲ್ಲಿ ಭಾನುವಾರ ನಡೆದಿದೆ. ಬೆಳಗಾವಿಯ ಖಾಸಬಾಗ ನಿವಾಸಿ ಮಹಾಂತೇಶ ಗುಂಜೀಕರ (26) ಮೃತ ಯುವಕ. ಎಲ್ಜಿ ಕಂಪನಿಯಲ್ಲಿ ಮಹಾಂತೇಶ ಉದ್ಯೋಗಿಯಾಗಿದ್ದ. ಕಂಪನಿಯ ಬೆಳಗಾವಿ ಶಾಖೆಯ 22 ಜನ ಸಿಬ್ಬಂದಿ ನಿನ್ನೆ ಸಂಜೆ ಕಣಕುಂಬಿ ಬಳಿಯ ಖಾಸಗಿ ರೆಸಾರ್ಟ್ಗೆ ತೆರಳಿದ್ದರು. ಇಂದು ಇವರೆಲ್ಲಾ ಮನೆಗೆ ಮರಳಬೇಕಿತ್ತು. ಭಾನುವಾರ ಬೆಳಗ್ಗೆ ರೆಸಾರ್ಟ್ನ ಈಜುಕೊಳದಲ್ಲಿ …
Read More »ಹುಬ್ಬಳ್ಳಿ ಸಿಲಿಂಡರ್ ಸ್ಫೋಟ: ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ
ಹುಬ್ಬಳ್ಳಿ, ಡಿಸೆಂಬರ್ 29: ನಗರದ ಅಯ್ಯಪ್ಪ (Ayyappa) ಮಾಲಾಧಾರಿಗಳ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಒಂಬತ್ತು ಜನರ ಪೈಕಿ ಒಬ್ಬೊಬ್ಬರೆ ಪ್ರಾಣ ಬಿಡುತ್ತಿದ್ದಾರೆ. ಹೀಗಾಗಿ ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 ವರ್ಷದ ಹಿಂದೆ ನಿರ್ಮಿಸಿದ್ದ ಅಯ್ಯಪ್ಪ ಸನ್ನಿಧಿ ನೆಲಸಮಕ್ಕೆ ನಿರ್ಧಾರ ಮಾಡಲಾಗಿದೆ. ನಗರದ ಅಚ್ಚವ್ವನ ಕಾಲೋನಿಯಲ್ಲಿ 22 ವರ್ಷದ ಹಿಂದೆ ಅಯ್ಯಪ್ಪ ಸನ್ನಿಧಿ ನಿರ್ಮಿಸಲಾಗಿತ್ತು. ಗಜಾನನ ಜಿತೂರಿ ಸ್ವಾಮೀಜಿ ಅವರು ಈ ಸನ್ನಿಧಿ ನಿರ್ಮಿಸಿದ್ದರು. ಇದೀಗ ಘಟನೆಯಿಂದ …
Read More »ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು
ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಜನವರಿ 02 2025 ರಿಂದ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಪುಣೆಯಿಂದ ಮಧ್ಯಾಹ್ನ 02.15 ಕ್ಕೆ ಹೊರಟು ರಾತ್ರಿ 07.38 ಕ್ಕೆ ಘಟಪ್ರಭಾ ನಿಲ್ದಾಣಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ಘಟಪ್ರಭಾ ರೈಲು ನಿಲ್ದಾಣದಲ್ಲಿ ರಾತ್ರಿ 07.00 ಗಂಟೆಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ರೈಲು ಬಳಕೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ಜನವರಿ 3 …
Read More »ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ: ಆರ್.ಅಶೋಕ
ಬೆಂಗಳೂರು: “ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?. ಪ್ರಿಯಾಂಕ್ ಖರ್ಗೆ ಕಲಬುರಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ …
Read More »ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪಾಲಕರ ವರ್ಕ ಶಾಪ್
ಮಕ್ಕಳ ಪಾಲಕರ ಬಾಂಧವ್ಯ ಗಟ್ಟಿಯಾಗಿರಲಿ ಚೇತನ ಸಂಪ್ರದಾಯ್ ಖ್ಯಾತ ಸಂಪನ್ಮೂಲ ವ್ಯಕ್ತಿ ಚೇತನ ಸಂಪ್ರದಾಯ್ ಮಾತನಾಡಿದರು ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಪಾಲಕರ ವರ್ಕ ಶಾಪ್ ಸಭೆಯಲ್ಲಿ ಖ್ಯಾತ ಸಂಪನ್ಮೂಲ ವ್ಯಕ್ತಿ ಚೇತನ ಸಂಪ್ರದಾಯ್ ಅಭಿಪ್ರಾಯ ಪಟ್ಟರು “ಮಕ್ಕಳು ಮತ್ತು ಪಾಲಕರ ಬಾಂಧವ್ಯ ಯಾವಾಗಲೂ ಗಟ್ಟಿಯಾಗಿರಲಿ ಎಂದು ಚೇತನ ಸಂಪ್ರದಾಯ ಹೇಳಿದರು ತಂದೆ ತಾಯಿಗಳು ಮತ್ತು ಪಾಲಕರು ಮಕ್ಕಳಿಂದ ದೂರ ಸರಿಯದೇ ಚಿಕ್ಕವರಿದ್ದಾಗಿನ ಬಾಂಧವ್ಯವನ್ನೇ ಮಕ್ಕಳು ಟೀನೇಜ್ ಗೆ ಬಂದಾಗಲೂ ಮುಂದು …
Read More »