Breaking News

Yearly Archives: 2024

ಡಾಕ್ಟರ್​​ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ

ಕಲಬುರಗಿ, (ಡಿಸೆಂಬರ್ 06): ಎಂಬಿಬಿಎಸ್​ ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ. ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್​ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ರಾಯದುರ್ಗದ …

Read More »

ಬಿಮ್ಸ್​ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ

ಬಳ್ಳಾರಿ, ಡಿಸೆಂಬರ್​ 06: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಒಂಬತ್ತೂ ಬಾಣಂತಿಯರಿಗೆ IV ದ್ರಾವಣ ನೀಡಲಾಗಿತ್ತು. IV ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು ಎಂಬ ಸ್ಫೋಟಕ ಅಂಶ ಬಯಲಾಗಿದೆ. ಒಂಬತ್ತೂ ಗರ್ಭಿಣಿಯರಿಗೆ ನವೆಂಬರ್​ 09 ರಂದೇ ಸಿಸೇರಿಯನ್​ ಮೂಲಕ ಹೆರಿಗೆ ಮಾಡಲಾಗಿತ್ತು. ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ಹೆರಿಗೆ ಮಾಡಲಾಗಿತ್ತು. …

Read More »

ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ

ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು. ಡಿಸೆಂಬರ್‌ 6 ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 68ನೇ ಪುಣ್ಯ ತಿಥಿ. ಈ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಈ …

Read More »

ನನಗೆ ಸಚಿವ ಸ್ಥಾನ ಕೊಡಲೇಬೇಕು:ಎಸ್​ಎನ್ ಸುಬ್ಬಾರೆಡ್ಡಿ

ಡಿಸೆಂಬರ್ 6: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್​ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ. ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೆ ಸಚಿವ ಸ್ಥಾನ ಬೇಕು. ಅಪರೇಷನ್ ಕಮಲದಲ್ಲಿ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಟೆಯಿಂದ ಇದ್ದೆ. ಮುಂದೆ ಸಚಿವ ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ. ನಾನು …

Read More »

ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.!

ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.! ಪ್ರಸಕ್ತ ಕಬ್ಬು ನುರಿಸುವ ಹಂಗಾಮು ಪ್ರಾರಂಭಗೊAಡು, 1 ತಿಂಗಳು ಕಳೆದರೂ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಿಲ್ ಪಾವತಿಸಿಲ್ಲ. ಇನ್ನೂ ಕೆಲ ಕಾರ್ಖಾನೆಗಳು ದರವನ್ನೇ ಘೋಷಿಸಿಲ್ಲ. ಸರ್ಕಾರ, ರೈತರು ಹೋರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳುವ ಅಂಜಿಕೆ ಹಾಕುತ್ತದೆ. ಆದರೇ ಕಬ್ಬು ಪೂರೈಸಿದ 15 ದಿನಗಳ ಒಳಗೆ ಬಿಲ್ ಪಾವತಿಸಬೇಕಾದ ಕಾರ್ಖಾನೆಗಳು, ಕಾನೂನು …

Read More »

ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿ

ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಸ್ವಾಭಿಮಾನಿ ಒಕ್ಕೂಟ ಹಾಗೂ ಕಾರ್ಯಕರ್ತರ ಬೆಂಬಲದಿಂದ ನಾವು 2028ರಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಬಲ ತುಂಬಬೇಕು. ಪಕ್ಷದಲ್ಲಿ ಕ್ರಿಯಾಶಿಲವಾಗಿರುವವರಿಗೆ ಸ್ಥಾನ ಮಾನಗಳನ್ನು ಕೊಡಬೇಕು. #ಜನಕಲ್ಯಾಣ_ಸಮಾವೇಶ

Read More »

ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ

ಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಶಿರಾಡಿ ಘಾಟ್ ನಲ್ಲಿ ಪದೇ ಪದೇ ಭೂಕುಸಿತಕ್ಕೆ ಕಡಿವಾಣ ಹಾಕುವ ಮೂಲಕ ಸುಗಮ‌ ಸಂಚಾರಕ್ಕಾಗಿ ಶಾಶ್ವತ ಪರಿಹಾರವನ್ನು ಮಾಡಲಾಗುತ್ತಿದೆ. #SatishJarkiholi #Hasan

Read More »

ಅಮ್ಮನಿಗಾಗಿ ನಟ ವಿನೋದ್ ಕಟ್ಟಿಸಿರುವ ಸುಂದರ ಸ್ಮಾರಕ

ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ಒಂದನ್ನು ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಡೆದಿದೆ. ವರನಟಿ ಡಾ|ಎಂ. ಲೀಲಾವತಿ ದೇಗುಲ ಎಂದು ಇದಕ್ಕೆ ಅವರು ಹೆಸರು ಇಟ್ಟಿದ್ದಾರೆ. ಎಲ್ಲರೂ ಲೀಲಾವತಿ ಅವರನ್ನು ನೆನಪಿಸಿಕೊಳ್ಳುತ್ತಾರೆ.

Read More »

ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

ಡಿಸೆಂಬರ್​ 05: ಕೊವಿಡ್​ನಲ್ಲಿ ಮನೆ ಯಜಮಾನ ಸಾವನ್ನಪ್ಪುತ್ತಾರೆ. ಇಬ್ಬರು ಮಕ್ಕಳನ್ನ ಕಟ್ಟಿಕೊಂಡು ತಾಯಿ ಜೀವನ ನಡೆಸುತ್ತಿರುತ್ತಾರೆ. ಗಂಡು ದಿಕ್ಕಿಲ್ಲದ ಮನೆಗೆ ಅವನೊಬ್ಬ ಸಹಾಯ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುತ್ತಾರೆ. ಹೀಗೆ ಬಂದವನು ಇಡೀ ಮನೆಯನ್ನೇ ಸರ್ವನಾಶ ಮಾಡಿ, ತಾಯಿ ಮಗನನ್ನ ಕೊಂದು (kill) ರಣಕೇಕೆ ಹಾಕಿದ್ದಾರೆ. ಅಷ್ಟಕ್ಕೂ ಆ ಮನೆಯಲ್ಲಿ ನಿನ್ನೆ ರಾತ್ರಿ ಆಗಿದ್ದೇನೂ? ಆಪ್ತನಂತಿದ್ದವನೂ ಕೊಲೆ ಮಾಡಲು ಕಾರಣವೇನು ಎಂಬ ನಿಮ್ಮ ಪ್ರಶ್ನೆಗೆ ಮುಂದೆ ಉತ್ತರವಿದೆ ಓದಿ. ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ …

Read More »

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ. ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.ಆರೋಪಿತನು ಕೊನೆ ಉಸಿರು ಇರುವವರೆಗೂ ಕಠಿಣ ಕಾರಾಗೃಹ ತೀಕ್ಷೆ …

Read More »