Breaking News

Yearly Archives: 2024

ರಾಸಲೀಲೆ ವಿಡಿಯೋ ಬಹಿರಂಗ ಬೆನ್ನಲ್ಲೇ ದೇಶ ಬಿಟ್ಟು ಹೋದ ಪ್ರಜ್ವಲ್ ರೇವಣ್ಣ.?

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ. ಇನ್ನೂ ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ಎಸ್‌ಐಟಿ ರಚನೆ ಆಗಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳಾ ಆಯೋಗದ ಪತ್ರ ಹಿನ್ನೆಲೆಯಲ್ಲಿ ತನಿಖೆಗೆ ಸೂಚನೆ ನೀಡಲಾಗಿದೆ.ಪ್ರಜ್ವಲ್ ದೇಶ ಬಿಟ್ಟು ಹೋದ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.   ಸಂತ್ರಸ್ತರನ್ನು ಮಹಿಳಾ ಆಯೋಗ ಸಂಪರ್ಕಿಸುವ …

Read More »

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (special investigation team) ರಚನೆಯಾಗಲಿದೆ. ರಾಜ್ಯ ಸರ್ಕಾರದಿಂದ (state government) ಇದೀಗ ಆದೇಶ ಹೊರಬಿದ್ದಿದೆ.ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ತುಣುಕುಗಳು ಈಗಾಗಲೇ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ …

Read More »

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ ವರನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.ಶಿವಪ್ರಸಾದ್ ಎಂಬುವವರ ಮದುವೆ ಏಪ್ರಿಲ್ 18ರಂದು ನೆರವೇರಿದೆ. ಮಾರ್ಚ್ 1ರಂದು ಮದುವೆಯ ಆಮಂತ್ರಣ ಪತ್ರ ಮುದ್ರಿಸಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಂಡ ಚುನಾವಣಾ ನೀತಿ ಸಂಹಿತೆ ಜಾರಿ ನಿಗಾ ತಂಡದ …

Read More »

ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಗಡಿ ಜಿಲ್ಲೆ ಬೆಳಗಾವಿಗೆ ಎ.27ರಂದು ರಾತ್ರಿ ಆಗಮಿಸಿ ವಾಸ್ತವ್ಯ ಮಾಡುತ್ತಿರುವುದರಿಂದ ಬೆಳಗಾವಿ ನಗರದೆಲ್ಲೆಡೆ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಮೋದಿ ಗೋವಾದಲ್ಲಿ ಚುನಾವಣ ಪ್ರಚಾರ ಮುಗಿಸಿ ನೇರವಾಗಿ ವಿಮಾನ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ ಬೆಳಗಾವಿಯ ಹೊಟೇಲ್‌ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈಗಾಗಲೇ ಭದ್ರತಾ ಪಡೆ ಬೆಳಗಾವಿಗೆ ಬಂದಿಳಿದಿದ್ದು, ಮೋದಿ ವಾಸ್ತವ್ಯ ಮಾಡುತ್ತಿರುವ ಸ್ಥಳದ ಸುತ್ತಲೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಸುಮಾರು 50ರಿಂದ 60 ಮಂದಿ ಎಸ್‌ಪಿಜಿಯವರು ಜೊಲ್ಲೆ …

Read More »

ಬಿಜೆಪಿ ಸರ್ಕಾರ ಶ್ರೀಮಂತರ ’16 ಲಕ್ಷ ಕೋಟಿ’ ಸಾಲ ಮನ್ನಾ ಮಾಡಿದೆ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ:ಅಸ್ಸಾಂನ ಬಾರ್ಪೇಟಾದಲ್ಲಿ ಶನಿವಾರ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸರ್ಕಾರವು ಶ್ರೀಮಂತರ 16 ಲಕ್ಷ ಕೋಟಿ ರೂ.ಗಳನ್ನು ಮನ್ನಾ ಮಾಡಿದೆ.ಆದರೆ ಬಡವರಿಗೆ ಅಥವಾ ರೈತರಿಗೆ ಏನನ್ನೂ ನೀಡಿಲ್ಲ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. “ಅವರು ಸರ್ಕಾರಿ ಸ್ವಾಮ್ಯದ ಉದ್ಯಮಗಳಾದ ರೈಲ್ವೆ, ರಸ್ತೆಗಳು, …

Read More »

ಚಾಮರಾಜನಗರದ ಈ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಮರು ಮತದಾನ

ಬೆಂಗಳೂರು: ಚಾಮರಾಜನಗರ ಲೋಕಸಭಾ (Chamarajanagara Loksabha Constituency) ಕ್ಷೇತ್ರದ ಹನೂರು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಏಪ್ರಿಲ್ 29 ಸೋಮವಾರ ಮರು ಮತದಾನ ನಡೆಯಲಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಇಂಡಿಗನತ್ತ (Indiganatta Village) ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು. ಇಷ್ಟು ಅಲ್ಲದೇ ಮತಗಟ್ಟೆಗೆ ನುಗ್ಗಿ ಇವಿಎಂ ಧ್ವಂಸಗೊಳಿಸಿದ್ದರು. ಈ ಹಿನ್ನೆಲೆ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟನೆ ಹೊರಡಿಸಿದೆ. ಚಾಮರಾಜನಗರ: ಮಹದೇಶ್ವರ …

Read More »

ಮುಂಬೈ-ಪುಣೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್

ಮುಂಬೈ : ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಐಷಾರಾಮಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ 36 ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಮುಂಬೈನಿಂದ ಪುಣೆಗೆ ತೆರಳುತ್ತಿದ್ದಾಗ ಮಾವಲ್ ತಾಲ್ಲೂಕಿನ ಅಧೆ ಗ್ರಾಮದ ಬಳಿ ಬೆಳಿಗ್ಗೆ 7: 30 ರ ಸುಮಾರಿಗೆ ಈ ಘಟನೆ ನಡೆದಿದೆ. ಬಸ್ಸಿನ ಟೈರ್ ಸ್ಫೋಟಗೊಂಡ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಬಸ್ ಚಾಲಕನ ತ್ವರಿತ ಚಿಂತನೆಯು ಎಲ್ಲಾ ಪ್ರಯಾಣಿಕರನ್ನು ತ್ವರಿತವಾಗಿ ಸ್ಥಳಾಂತರಿಸಲು ಅನುವು …

Read More »

ಮೂರನೇ ಹಂತದ ಚುನಾವಣೆಗೆ ಸಿದ್ಧತೆ: ಮೇ 7ರಂದು ಮತದಾನ

ಮೂರನೇ ಹಂತದ ಚುನಾವಣೆಗೆ ಸಿದ್ಧತೆ: ಮೇ 7ರಂದು ಮತದಾನ ಭಾರತದಲ್ಲಿ ಈಗಾಗಲೇ ಎರಡು ಹಂತದ ಮತದಾನ ಮುಕ್ತಾಯಗೊಂಡಿದೆ. ಈಗ ಮೂರನೇ ಹಂತದ ಚುನಾವಣೆಗೆ ಸಿದ್ಧತೆಗಳು ನಡೆದಿವೆ. ಕರ್ನಾಟಕದಲ್ಲೂ ಈಗಾಗಲೇ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಉಳಿದ 14 ಲೋಕಸಭಾ ಕ್ಷೇತ್ರದ ಚುನಾವಣೆಗಳು ಮೇ 7 ರಂದು ನಡೆಯಲಿದೆ. ದೇಶದ 12 ರಾಜ್ಯಗಳ 94 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ನಡೆಯಲಿದೆ. ಆಸ್ಸಾಂ, ಬಿಹಾರ, ಚತ್ತೀಸಗಢ್, ದಾದರ ಹಾಗೂ ನಗರ, …

Read More »

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರ ಭಾರತೀಯ “ಚೊಂಬು’ ಪಕ್ಷ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದೆ ಎಂದು ಎಐಸಿಸಿ ಮುಖಂಡ ರಾಹುಲ್‌ ಗಾಂಧಿ  ವ್ಯಂಗ್ಯವಾಡಿದರು. ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಳ್ಳಾರಿ, ಕೊಪ್ಪಳ ಕ್ಷೇತ್ರಗಳ ಅಭ್ಯರ್ಥಿಗಳ ಪರ ಮತಯಾಚಿಸಿ, ಪದೇಪದೆ ಚೊಂಬು, ಖಾಲಿ ಚೊಂಬು ಪಾರ್ಟಿ ಎಂದು ಲೇವಡಿ ಮಾಡಿದರು. ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ ಪಾವತಿಯಾಗಿರುವ 100 ರೂ. ತೆರಿಗೆ ಹಣದಲ್ಲಿ …

Read More »

ಕೊಪ್ಪಳ ಲೋಕಸಭಾ ಕ್ಷೇತ್ರ | ಚುನಾವಣಾ ಕಣದಲ್ಲಿ ವೈದ್ಯ, ಎಂಜಿನಿಯರ್‌…

ಕೊಪ್ಪಳ: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳ ವೈಯಕ್ತಿಕ ವಿವರಗಳ ಕೂಡ ಜನರಲ್ಲಿ ಕುತೂಹಲ ಮೂಡಿಸಿವೆ. ನಮ್ಮನ್ನು ಆಳಲು ಬಯಸಿ ನಾಮಪತ್ರ ಸಲ್ಲಿಸಿರುವ ಸಂಸದ ಸ್ಥಾನದ ಆಕಾಂಕ್ಷಿಗಳ ಶೈಕ್ಷಣಿಕ ವಿದ್ಯಾರ್ಹತೆ ಏನು ಎನ್ನುವ ಚರ್ಚೆಯೂ ಶುರುವಾಗಿದೆ. ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಬಸವರಾಜ ಕ್ಯಾವಟರ್‌ ಎಂ.ಎಸ್‌. ಆರ್ಥೊಪೆಡಿಕ್‌ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದರೆ, ಕೆಲ ಅಭ್ಯರ್ಥಿಗಳು ಏನೂ ಓದಿಯೇ ಇಲ್ಲ. ಇನ್ನೂ ಕೆಲವರು, ಎರಡನೇ ತರಗತಿ, ಇನ್ನೂ ಕೆಲವರು ಪಿಯುಸಿ ಹಾಗೂ ಪದವಿ …

Read More »