ಹುಬ್ಬಳ್ಳಿಯಲ್ಲಿ ಹಿಂದೂ ಯವತಿಯ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ; ಆರೋಪಿ ವಶಕ್ಕೆ ಹುಬ್ಬಳ್ಳಿ: ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈಗಾಗಲೇ ನೇಹಾ ಸಾವಿಗೆ ನ್ಯಾಯ ಬೇಕು, ನಾಡಿನ ಮಕ್ಕಳಿಗೆ ರಕ್ಷಣೆ ಬೇಕು ಅಂತ ಹೋರಾಟ ಮಾಡಲಾಗುತ್ತಿದೆ. ಈ ಘಟನೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ. ನಗರದ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
Read More »Yearly Archives: 2024
ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ
ಹುಬ್ಬಳ್ಳಿ: ‘ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ ನಡೆಯಲಿದೆ’ ಎಂದು ಟೂರ್ನಿಯ ಆಯೋಜಕ ರಾಜು ಮಾರುತಿ ಪೆಜೋಳೆ ಹೇಳಿದರು. ‘ಇರಾನ್ನ ಮಿರ್ಜಾ, ಭಾರತ ಕೇಸರಿ ಜಸ್ಸಾ ಪಟ್ಟಿ, ಮಹಾರಾಷ್ಟ್ರ ಕೇಸರಿ ಸಿಖಂದರ್ ಶೇಖರ್ ಸೇರಿ 82 ಜೋಡಿಗಳು ಟೂರ್ನಿಯಲ್ಲಿ ಸೆಣಸಲಿವೆ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ‘ವಿಜೇತರಿಗೆ ಪ್ರಥಮ ಬಹುಮಾನ ₹12 ಲಕ್ಷ, ದ್ವಿತೀಯ ₹8 …
Read More »ಹುಕ್ಕೇರಿ ಹಿರೇಮಠಕ್ಕೆ ರಾಹುಲ್ ಜಾರಕಿಹೊಳಿ ಭೇಟಿ
ಹುಕ್ಕೇರಿ: ಪಟ್ಟಣದ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠಕ್ಕೆ ಸಚಿವ ಸತೀಶ ಜಾರಕಿಹೊಳಿ ಪುತ್ರ, ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಗುರುಶಾಂತೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧಿಪತಿ ಚಂದ್ರಶೇಖರ ಸ್ವಾಮೀಜಿ ಆಶೀರ್ವಾದ ಪಡೆದರು. ಸಹೋದರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮತ ಚಲಾಯಿಸುವಂತೆ ಸಂತೆಯಲ್ಲಿ ಮತದಾರರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಧುರೀಣ ರಿಷಭ ಪಾಟೀಲ್, ಶಾನೂಲ್ ತಹಸೀಲ್ದಾರ್, ಮಹೇಶ ಗುಮಚಿ, ವಿರೂಪಾಕ್ಷಿ ಮರೆನ್ನವರ, ಬಸವರಾಜ …
Read More »ನೇಹಾ ಹತ್ಯೆ: ಸಿಐಡಿ ತನಿಖೆ ಆರಂಭ
ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ (23) ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಸಿಐಡಿಯ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ. ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್ ಬಾಬಾಸಾಹೇಬ ಖೊಂಡಾನಾಯಕ್ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ‘ವಿದ್ಯಾರ್ಥಿನಿ …
Read More »ಉಗರಖೋಡ ಪಂಚಾಯ್ತಿಯಲ್ಲಿ ಅಧ್ಯಕ್ಷ- ಸದಸ್ಯನ ಹೊಡೆದಾಟ!
ಚನ್ನಮ್ಮನ ಕಿತ್ತೂರು: ಗ್ರಾಮ ಪಂಚಾಯ್ತಿ ವಾರ್ಡಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸದಸ್ಯನೊಬ್ಬ ಕೊರೆಸಿದ ಕೊಳವೆ ಬಾವಿ ಬಿಲ್ ಮಂಜೂರು ಮಾಡುವಂತೆ ನಡೆದ ಮಾತಿನ ನಡುವೆ ನಡೆದ ಚಕಮಕಿಯು ಪಂಚಾಯ್ತಿ ಅಧ್ಯಕ್ಷ ಮತ್ತು ಸದಸ್ಯನ ನಡುವೆ ಹೊಡೆದಾಟದೊಂದಿಗೆ ಮುಕ್ತಾಯ ಕಂಡಿದೆ. ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವಾರ್ಡಿನಲ್ಲಿ ಸದಸ್ಯ ನಿಂಗರಾಜ ಅಂಬಡಗಟ್ಟಿ ಎಂಬುವರು ಕೊಳವೆ ಬಾವಿ ಕೊರೆಸಿದ್ದರು. ಅದರ ಬಿಲ್ ಮಂಜೂರು ಮಾಡುವಂತೆ ಒತ್ತಾಯಿಸುತ್ತಿದ್ದರು. ಪಿಡಿಪ ಎಲ್ಲರ ಸದಸ್ಯರ ಸಭೆ …
Read More »ಹೃದಯಾಘಾತ: ನರೇಗಾ ಕಾರ್ಮಿಕ ಸಾವು
ಬೈಲಹೊಂಗಲ: ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಕಾರ್ಮಿಕ ಸೋಮವಾರ ತೀವ್ರ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಲ್ಲೇಶ ಲಕ್ಷ್ಮಣ ಸಂಬರಗಿ (55) ಮೃತರು. ನರೇಗಾ ಯೋಜನೆಯಡಿ ಹಳ್ಳ ಹೂಳೆತ್ತುವ ಕಾಮಗಾರಿ ನಡೆದಿತ್ತು. ಎಂದಿನಂತೆ ಸೋಮವಾರ ಕೂಡ ಮಣ್ಣು ಅಗೆಯುವ ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಜತೆಯಲ್ಲಿದ್ದ ಕಾರ್ಮಿಕರು ಅವರ ಎದೆ ತಿಕ್ಕಿ, ಗಾಳಿಬೀಸಿ, ನೀರು ಕುಡಿಸಿ ಉಪಚರಿಸಲು ಯತ್ನಿಸಿದರು. ಅಷ್ಟರೊಳಗೆ ಅವರು ಉಸಿರು ನಿಲ್ಲಿಸಿದ್ದರು. ವೈದ್ಯರು ಸ್ಥಳಕ್ಕೆ ಬಂದು …
Read More »ಬೆಳಗಾವಿ | ನೇಹಾ ಕೊಲೆ ಖಂಡಿಸಿ ಪ್ರತಿಭಟನೆ, ಲವ್ ಜಿಹಾದ್ ನಿಷೇಧ ಕಾನೂನಿಗೆ ಆಗ್ರಹ
ಬೆಳಗಾವಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಲ್ಲಿನ ಜಾಗ್ರತ ಮಹಿಳಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು. ನೇತೃತ್ವ ವಹಿಸಿದ್ದ ಮಹಿಳಾ ಹೋರಾಟಗಾರರು, ಮಠಾಧೀಶರು ಆರೋಪಿ ಫಯಾಜ್ಗೆ ಗಲ್ಲು ಶಿಕ್ಷೆ ವಿಧಿಸಬೇಕು, ಲವ್ ಜಿಹಾದ್ ಪ್ರತಿಬಂಧಕ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು. ಇಲ್ಲಿನ ಮಾರುತಿ ಗಲ್ಲಿಯ ಮಾರುತಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಯಿತು. ರಾಮದೇವ ಗಲ್ಲಿ, ಶನಿವಾರ ಕೂಟ್ನಿಂದ ಕಾಕತಿವೇಸ್ನಲ್ಲಿ ಸಾಗಿದ ಪ್ರತಿಭಟನಾಕಾರರು, ರಾಣಿ ಚನ್ನಮ್ಮ ವೃತ್ತದಲ್ಲಿ …
Read More »ಬರಿದಾದ ಕೃಷ್ಣೆ ಒಡಲು: ನೀರಿನಿಂದ ಹೊರಬಿದ್ದ ಮೀನುಗಾರರ ಬದುಕು
ಬರಿದಾದ ಕೃಷ್ಣೆ ಒಡಲು: ನೀರಿನಿಂದ ಹೊರಬಿದ್ದ ಮೀನುಗಾರರ ಬದುಕು ಚಿಕ್ಕೋಡಿ: ಭೀಕರ ಬರದಿಂದ ಕೃಷ್ಣಾ ಹಾಗೂ ಅದರ ಉಪನದಿಗಳಲ್ಲಿ ನೀರಿನ ಪ್ರಮಾಣ ಕುಸಿದಿದೆ. ನದಿ ದಡದಲ್ಲಿ ಎಲ್ಲಿ ನೋಡಿದರೂ ಸತ್ತ ಮೀನುಗಳ ರಾಶಿ ಕಾಣುತ್ತದೆ. ಬರದಿಂದ ಜಲಚರಗಳ ಮಾರಣಹೋಮವೇ ಆಗಿದೆ. ಮೀನುಗಾರಿಕೆ ನೆಚ್ಚಿಕೊಂಡ ನದಿ ತೀರದ ಗ್ರಾಮಸ್ಥರ ಬದುಕಿಗೂ ಬರೆ ಬಿದ್ದಿದೆ. ಇನ್ನೊಂದೆಡೆ ಮೀನಿನ ಆಹಾರ ಪ್ರಿಯರಿಗೆ ಕೊರತೆ ಉಂಟಾಗಿದೆ. ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಹರಿಯುವ ಕೃಷ್ಣಾ ಮಳೆಗಾಲದಲ್ಲಿ ಸಮುದ್ರದಂತೆ …
Read More »ಬಿಸಿಯೂಟ ಸೇವನೆಗೆ ಮಕ್ಕಳ ‘ಬರ’
ಬೆಳಗಾವಿ: ಸಪ್ತ ನದಿಗಳು ಹರಿಯುವ ಬೆಳಗಾವಿ ಜಿಲ್ಲೆ ಈ ಬಾರಿ ಬರದಿಂದ ತತ್ತರಿಸಿದೆ. 15 ತಾಲ್ಲೂಕುಗಳನ್ನು ‘ಬರಪೀಡಿತ’ವೆಂದು ಘೋಷಿಸಿದ್ದು, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಬಿಸಿಯೂಟ ನೀಡಲಾಗುತ್ತಿದೆ. ಆದರೆ, ಸೇವನೆಗೆ ನಿರೀಕ್ಷೆಯಂತೆ ಮಕ್ಕಳೇ ಬರುತ್ತಿಲ್ಲ. ಬರಪೀಡಿತ ತಾಲ್ಲೂಕುಗಳಲ್ಲಿ ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ಕಾಡದಿರಲೆಂದು ಪ್ರಧಾನಮಂತ್ರಿ ಪೋಷಣ್ ಶಕ್ತಿ-ನಿರ್ಮಾಣ ಯೋಜನೆಯಡಿ ಬೇಸಿಗೆ ರಜೆಯಲ್ಲೂ(ಏ.11ರಿಂದ ಮೇ 28ರವರೆಗೆ 41 ದಿನ) ಬಿಸಿಯೂಟ ಕೊಡಲಾಗುತ್ತಿದೆ. 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ 3,17,997 ಮಕ್ಕಳು …
Read More »ನೇಹಾ ಹಾಗೂ ಫಯಾಜ್ ಪ್ರೀತಿ ಮಾಡಿದ್ದು ಸತ್ಯ.! ಸಚಿವ ಆರ್.ಬಿ. ತಿಮ್ಮಾಪುರ
ಬಾಗಲಕೋಟೆ: ನೇಹಾ ಹಿರೇಮಠ ಹತ್ಯೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಸದ್ಯ ಈ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಾಗಲಕೋಟೆಯಲ್ಲಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿದ್ದು, ಇದೇ ರೀತಿ ನಮ್ಮ ಸಹೋದರಿಗೆ ಆದ್ರೆ ನಾವು ಸುಮ್ಮನಿರ್ತೀವಾ? ಅವನು ಯಾವನೇ ಆಗಿರಲಿ ಶಿಕ್ಷೆಯಾಗಬೇಕು ಎಂದರು. ಮಾತು ಮುಂದುವರಿಸಿದ ಸಚಿವರು, ನಮ್ಮ ನಾಡಿನಲ್ಲಿ ಕಾನೂನಿದೆ. ಇವರು ಅಧಿಕಾರದಲ್ಲಿ ಇದ್ದಾಗ ಇಂತ ಎಷ್ಟೋ ಪ್ರಕರಣ ಆಗಿವೆ. ಗುಜರಾತ್ನಲ್ಲಿ ಒಂದೇ …
Read More »