Breaking News

Yearly Archives: 2024

ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ: ಬಸನಗೌಡ ಪಾಟೀಲ್

ಬಾಗಲಕೋಟೆ: ಬಿಜೆಪಿಯಲ್ಲಿ ಎರಡು ಬಣಗಳ ಹೋರಾಟ ನಡೆಯುತ್ತಿದೆ ಎಂಬ ಅಂಶವನ್ನು ಶಾಸಕ ಬಸನಗೌಡ ಪಾಟೀಲ್ ಅಲ್ಲಗಳೆದರು. ಜಿಲ್ಲೆಯ ಬನಹಟ್ಟಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು ತಮ್ಮ ತಂಡ ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ, ಕೇವಲ ವಕ್ಫ್ ವಿರುದ್ಧ ಮಾತ್ರ ಹೋರಾಟ ಮಾಡುತ್ತಿದೆ, ನಿನ್ನೆಯವರೆಗೆ ಕಲ್ಯಾಣ ಕರ್ನಾಟಕದಲ್ಲಿ ಹೋರಾಟ, ಇವತ್ತಿನಿಂದ ಕಿತ್ತೂರು ಕರ್ನಾಟಕದಲ್ಲಿ ಹೋರಾಟ ಮಾಡುತ್ತಿದ್ದೇವೆ, ವಕ್ಫ್ ಕಾಯ್ದೆಗೆ 44 ತಿದ್ದುಪಡಿಗಳನ್ನು ತಂದು ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮ ಸಮಿತಿ ಕೆಲ ಸಲಹೆಗಳನ್ನು …

Read More »

ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ: ಸತೀಶ ಜಾರಕಿಹೊಳಿ

ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು ಬಿಡಲು ಸೂಚನೆ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ನಡೆಸಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಆಗದಂತೆ ಎಚ್ಚರ ವಹಿಸಿ ಹಿಡಕಲ್ ಪ್ರವಾಸಿ ಮಂದಿರದಲ್ಲಿ ನೀರಾವರಿ ಇಲಾಖೆ ಸಭೆ ಸಚಿವ ಸತೀಶ ಜಾರಕಿಹೊಳಿ ನೇತೃತ್ವ ಚಿಂಚಲಿ ಶ್ರೀ ಮಾಯಾಕ್ಕ ದೇವಿ ಜಾತ್ರೆಗೆ 2 ಟಿ ಎಂ ಸಿ ನೀರು …

Read More »

ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ …

Read More »

ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ,

ನವೆಂಬರ್​ : 17 ವರ್ಷದ ಬಾಲಕಿ (Girl) ಮೇಲೆ ಬಲವಂತವಾಗಿ ದೈಹಿಕ ಶಿಕ್ಷಕನಿಂದ ಅತ್ಯಾಚಾರ ಎಸಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್​ಪೇಟೆನಲ್ಲಿ ನಡೆದಿದೆ. 22 ವರ್ಷದ ದೈಹಿಕ ಶಿಕ್ಷಕ ದಾದಾಪೀರ್​ನಿಂದ ಅತ್ಯಾಚಾರ ಮಾಡಲಾಗಿದೆ. ಸಂತ್ರಸ್ತೆ ದೂರು ಆಧರಿಸಿ ದೈಹಿಕ ಶಿಕ್ಷಕನ ಬಂಧಿಸಲಾಗಿದೆ. ದಾಬಸ್​ಪೇಟೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ದೈಹಿಕ ಶಿಕ್ಷಕ ದಾದಾಪೀರ್​ ಬಾಲಕಿಯನ್ನು ನಂಬಿಸಿ ದೇವರಾಯನ ದುರ್ಗ ಬೆಟ್ಟಕ್ಕೆ ಕರೆದೊಯ್ದಿದ್ದ. ನಂತರ ತುಮಕೂರಿಗೆ ಕರೆದೊಯ್ದು ಲಾಡ್ಜ್​​ವೊಂದರಲ್ಲಿ ಬಾಲಕಿ ಮೇಲೆ …

Read More »

ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನಹಿಂದುಗಳ ರಕ್ಷಣೆಗೆ ಮೋದಿ ಸರ್ಕಾರ ಮುಂದಾಗಲಿ ; ದೇಶ ವ್ಯಾಪಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ

ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನ ಹಿಂದುಗಳ ರಕ್ಷಣೆಗೆ ಮೋದಿ ಸರ್ಕಾರ ಮುಂದಾಗಲಿ ; ದೇಶ ವ್ಯಾಪಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನ ಮುನಿಗಳ ಉಪಸ್ಥಿತಿಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಅವರು ಹಸ್ತಕ್ಷೇಪ ವಹಿಸಲಿ ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಯಾಗಲಿ ಬಾಂಗ್ಲಾ ಸರ್ಕಾರದಿಂದ ಶ್ರೀ ಚಿನ್ಮಯ್ ಕೃಷ್ಣದಾಸ್ ಪ್ರಭುಗಳ ಬಂಧನವನ್ನು ಖಂಡಿಸಿ ಇಂದು …

Read More »

ಗಡಿಯಲ್ಲಿ ಕನ್ನಡ ಕಟ್ಟುವ ಕೆಲಸವಾಗಲಿ: ಗುರುಸಿದ್ದ ಮಹಾಸ್ವಾಮಿಜೀ ಲಿಂಗಾಯತ ಮಹಿಳಾ ಸಮಾಜದಿಂದ ಕನ್ನಡ ರಾಜ್ಯೋತ್ಸವ ಆಚರಣೆ

  ಶ್ರೀಮಂತ, ಸರ್ವಶ್ರೇಷ್ಠ ಭಾಷೆಯಾಗಿರುವ ಕನ್ನಡವನ್ನು ಉದ್ಯೋಗ, ವಿಚಾರಧಾರೆಗಳ ಕೂಡ ವ್ಯವಹಾರ ನಡೆಸಯಬೇಕು. ಕನ್ನಡದ ನೆಲ, ಜಲ, ಭಾಷೆ ರಕ್ಷಣೆಗೆ ಎಲ್ಲರೂ ಪಕ್ಷಭೇದ, ಜಾತಿ ಭೇದ ಮರೆತು ಒಂದಾದರೆ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ ಎಂದು ಶ್ರೀ ಗುರುಸಿದ್ದ ಮಹಾಸ್ವಾಮಿಗಳು ಹೇಳಿದರು. ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಲಿಂಗಾಯತ ಮಹಿಳಾ ಸಮಾಜ ವತಿಯಿಂದ ಆಯೋಜಿಸಲಾದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ವಿಜೃಭಂಣೆಯಿಂದ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಶ್ರೀಗಳು ಮಾತನಾಡಿದರು.ಎಲ್ಲಾ ಭಾಷೆಯನ್ನು …

Read More »

ವಿಜಯಪುರ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಚರಣೆ

ವಿಜಯಪುರ ನಗರದಲ್ಲಿ ಅತಿಕ್ರಮಣ ತೆರವು ಕಾರ್ಯಚರಣೆ ನಿನ್ನಯ ದಿನ ವಿಜಯಪುರ ನಗರದ ಹ್ರದಯ ಭಾಗವಾದ ನೆಹರು ಮಾರುಕಟ್ಟೆಯಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ . ಇಂದು ಜುಮ್ಮಾ ಮಸೀದಿಯಿಂದ ಶೆಡಜಿ ಮಲ್ಲೆ ತೋಟದ ವರೆಗೆ ಕುಂಬಾರ ಗಲ್ಲಿಯ ಮೂಲಕ ದಿವಟಗೇರಿ ಕ್ರಾಸ್ ವರೆಗೆ ಇದ್ದ ಅತಿಕ್ರಮಣ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು.. ವಿಜಯಪುರ ನಗರದ ನೆಹರೂ ಮಾರುಕಟ್ಟೆಯಲ್ಲಿ ನಡೆದ ತೆರವು ಕಾರ್ಯಾಚರಣೆ ನಂತರ ಈಗ ಮಹಾನಗರ ಪಾಲಿಕೆಯ ಬುಲ್ಡೋಜರ್ ಜುಮ್ಮಾ ಮಸೀದಿ ರೋಡ್ ನಿಂದ …

Read More »

ಜಾತಿ ಮತ ಬೇಧ ವಿಲ್ಲದ ದೇವರು ಅಯ್ಯಪ್ಪ ಸ್ವಾಮಿಗಳು – ರಮೇಶ ಗುರುಸ್ವಾಮಿಗಳು.

ಹುಕ್ಕೇರಿ : ಜಾತಿ ಮತ ಬೇಧ ವಿಲ್ಲದ ದೇವರು ಅಯ್ಯಪ್ಪ ಸ್ವಾಮಿಗಳು – ರಮೇಶ ಗುರುಸ್ವಾಮಿಗಳು. ಜಾತಿ ಮತ ಬೇಧ ವಿಲ್ಲದೆ ಸರ್ವರು ಆರಾಧಿಸುವ ದೇವರು ಅಯ್ಯಪ್ಪ ಸ್ವಾಮಿಗಳು ಎಂದು ಧಾರವಾಡದ ರಮೇಶ ಪಾತ್ರೋಟ ಗುರು ಸ್ವಾಮಿಗಳು ಅಭಿಪ್ರಾಯ ಪಟ್ಟರು. ಅವರು ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದಲ್ಲಿ ಅಯ್ಯಪ್ಪ ಸ್ವಾಮಿ ಸನ್ನಿಧಾನವನ್ನು ಉದ್ಘಾಟಿಸಿ ಮಾತನಾಡಿದರು. ಹುಕ್ಕೇರಿ ಪಟ್ಟಣದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ನೂತನವಾಗಿ …

Read More »

ಸರ್ಕಾರಿ ಕೆಲಸ ಸಿಕ್ಕ ಖುಷಿಯಲ್ಲಿದ್ದ ನಂದಿನಿ ಸಾವು, ನಿರ್ಲಕ್ಷ್ಯಕ್ಕೆ ಬಲಿಯಾಯ್ತು ಅಮಾಯಕ ಜೀವ

ಬಳ್ಳಾರಿ, ನವೆಂಬರ್​ 30: ಬಳ್ಳಾರಿ ಜಿಲ್ಲಾ ಸರ್ಕಾರಿ ಆಸ್ಪತ್ರೆ (BIMS)ಯಲ್ಲಿ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ನಾಲ್ವರಲ್ಲಿ ಬಳ್ಳಾರಿ ತಾಲೂಕಿನ ಬಾಣಾಪುರ ಗ್ರಾಮದ ನಂದಿನಿ ಎಂಬುವರು ನವೆಂಬರ್​ 09 ರಂದು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನವೆಂಬರ್​ 12 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅಂದು ಮಧ್ಯರಾತ್ರಿ ಮೃತಪಟ್ಟಿದ್ದು, ದುರ್ದೈವದ ಸಂಗತಿಯಾಗಿದೆ. ಇನ್ನು, ಮೃತ ಬಾಣಂತಿ ನಂದಿನಿ ಹಿಂದೆ ಕರುಳು ಹಿಂಡುವ ಕಥೆ ಇದೆ. ನಂದಿನಿ ಛಲಗಾರ್ತಿ ಅಂದುಕೊಂಡಿದ್ದನ್ನು ಸಾಧಿಸಿ ತೀರುವ …

Read More »

ಯತ್ನಾಳ್​ ಉಚ್ಚಾಟನೆ ಮಾಡಿ ಬಿಸಾಕಿ

ಮೈಸೂರು, ನವೆಂಬರ್ 30: ಪಕ್ಷದ ವಿರುದ್ಧ ಸದಾ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣದ ಆಕ್ರೋಶ ತೀವ್ರಗೊಂಡಿದೆ. ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಸಾಕಿ, ಅವರದ್ದು ಮುಖವಾಡದ ಹಿಂದುತ್ವ ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕರ್ತರು, ವಿಜಯೇಂದ್ರ ಬಣದ ನಾಯಕರು ಆಗ್ರಹಿಸಿದ್ದಾರೆ. ಬಿಜೆಪಿಯಲ್ಲಿ ಪ್ರತ್ಯೇಕ ಸಮರ ಸಾರಿರುವ ಯತ್ನಾಳ್​ ನಡೆಗೆ ವಿಜಯೇಂದ್ರ ಬಣದ ಕಾರ್ಯಕರ್ತರು ಮೈಸೂರಿನಲ್ಲಿ ನಡೆದ ಸಭೆಯಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು …

Read More »