ಯಶ್ ಅವರು ‘ಕೆಜಿಎಫ್ ಚಾಪ್ಟರ್ 2’ ಬಳಿಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಅವರು ಸದ್ಯ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಮುಂಬೈನಲ್ಲಿದ್ದಾರೆ. ಹೌದು, ‘ಟಾಕ್ಸಿಕ್’ ಸಿನಿಮಾದ ಶೂಟಿಂಗ್ ಮುಂಬೈನ ಸ್ಟುಡಿಯೋಗಳಲ್ಲಿ ನಡೆಯುತ್ತಿದೆ. ಇದಕ್ಕಾಗಿ ಯಶ್ ಮುಂಬೈನಲ್ಲಿ ಉಳಿದುಕೊಂಡಿದ್ದಾರೆ. ರಾಧಿಕಾ ಜೊತೆ ಅವರು ಸುತ್ತಾಟ ನಡೆಸುತ್ತಿದ್ದಾರೆ. ಯಶ್ ಅವರು ಮುಂಬೈನಲ್ಲಿ ರಾಧಿಕಾ ಪಂಡಿತ್ ಹಾಗೂ …
Read More »Yearly Archives: 2024
ಬೆಂಡೆಬೆಂಬಳಿ ಗ್ರಾಮದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನಕ್ಕಾಗಿ ಸ್ಪರ್ಧೆ ಆಯೋಜನೆ
ಯಾದಗಿರಿಯ ಗ್ರಾಮೀಣ ಕ್ರೀಡೆ: ಎತ್ತುಗಳು ಕಲ್ಲು ಎಳೆಯುವ ಸ್ಪರ್ಧೆ; ಫೋಟೋಸ್ ನೋಡಿ ಆಧುನಿಕ ಜಗತ್ತಿನಲ್ಲಿ ಹಳೇ ಸಂಪ್ರದಾಯಗಳು ಮರೆಮಾಚಿ ಹೋಗುತ್ತಿವೆ. ಹಳೇ ಕ್ರೀಡೆಗಳು ಮಾಯವಾಗಿ ಹೊಸ ಜಮಾನ ಶುರುವಾಗಿದೆ. ಆದರೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದಲ್ಲಿ ಎತ್ತುಗಳ ಶಕ್ತಿ ಪ್ರದರ್ಶನಕ್ಕಾಗಿ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದೆ.ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಜಮಾಲೋದ್ದೀನ್ ದರ್ಗಾದ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮೀಣ ಸೊಗಡಿನ ಕಲ್ಲು ಎಳೆಯುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. …
Read More »ಖಾದ್ರಿಗೆ ಬಂಪರ್ ಗಿಫ್ಟ್ ಶಿಗ್ಗಾಂವಿ ಫಲಿತಾಂಶ ಪ್ರಕಟ 2 ದಿನದಲ್ಲಿ ಸಿದ್ದರಾಮಯ್ಯ ಕೊಟ್ಟದ್ದ ಭರವಸೆಯನ್ನು ಈಡೇರಿಸಿದ್ದಾರೆ.
ಬೆಂಗಳೂರು, (ನವೆಂಬರ್ 25): ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಬಂಪ್ ಗಿಫ್ಟ್ ನೀಡಲಾಗಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ ಅಧ್ಯಕ್ಷರನ್ನಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಶಿಗ್ಗಾಂವಿ ಉಪಚುನಾವಣೆ ವೇಳೆ ತಮ್ಮ ಮಾತಿಗೆ ಬೆಲೆ ಕೊಟ್ಟು ನಾಮಪತ್ರ ವಾಪಸ್ ಪಡೆದುಕೊಂಡಿದ್ದಕ್ಕೆ …
Read More »ನಂದಿನಿ ಬ್ರ್ಯಾಂಡ್ ಹೆಸರಿನಲ್ಲೇ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಿಡುಗಡೆ
ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾದ ಕರ್ನಾಟದ ಹೆಮ್ಮೆ ಕೆಎಂಎಫ್ ‘ನಂದಿನಿ’ ಬ್ರ್ಯಾಂಡ್ನಡಿ 156ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳು ಮಾರುಕಟ್ಟೆಯಲ್ಲಿದ್ದು ಇದೀಗ ನಂದಿನಿ ಬ್ರ್ಯಾಂಡ್ ಹೆಸರಿನಲ್ಲೇ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಹಾಲಿನ ಉಪ ಉತ್ಪನ್ನ ‘ವೇ ಪೌಡರ್’ ಮತ್ತು ಗೋಧಿ ಬೆರೆಸಿ ತಯಾರಿಸಲಾಗುವ ನಂದಿನಿ ಬ್ರ್ಯಾಂಡ್ನ ದೋಸೆ ಹಿಟ್ಟಿನಲ್ಲಿ ಪ್ರೋಟೀನ್ ಪ್ರಮಾಣ ಹೆಚ್ಚಿರುತ್ತದೆ. ನಂದಿನಿ ಬ್ರ್ಯಾಂಡ್ನ ದೋಸೆ ಹಿಟ್ಟು ಖಾಸಗಿ ಬ್ರ್ಯಾಂಡ್ಗಳ ದೋಸೆ ಹಿಟ್ಟಿಗಿಂತ ಹೆಚ್ಚು …
Read More »ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..
ಕಬ್ಬಿನ ಬೆಳೆಗೆ ಬೆಂಕಿ..! ಸುಮಾರು 200 ಎಕರೆ ಬೆಳೆದ ಕಬ್ಬು ಅಗ್ನಿಗಾಹುತಿ..! ಕೋಟ್ಯಾಂತರ ರೂಪಾಯಿ ಹಾನಿ..!! ಕಾಗವಾಡ ಪಟ್ಟಣದ ಶಿರಗುಪ್ಪಿ ರಸ್ತೆಗೆ ಹೊಂದಿಕೊAಡಿರುವ ಬ್ರಹ್ಮನಾಥ ನೀರಾವರಿ ಸಂಘದ ಹತ್ತಿರವಿರುವ ಅನೇಕ ರೈತರ ಸುಮಾರು 150 ರಿಂದ 200 ಎಕರೆ ಕಬ್ಬಿನ ಬೆಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಬೆಳೆದು ನಿಂತ ಕಬ್ಬು ಅಗ್ನಿಗಾಹುತಿಯಾಗಿ, ಕೊಟ್ಯಾಂತರ ರೂಪಾಯಿ ಹಾನಿಯಾಗಿರುವ ಘಟನೆ ಸಂಭವಿಸಿದೆ.
Read More »ಇಂದಿರಾ ಕ್ಯಾಂಟೀನದ್ದು ಎಂದು ಸಚಿವರಿಗೆ ಹೋಟೆಲ್ ಊಟ ತಿನ್ನಿಸಿ ಯಾಮಾರಿಸಿದ ಅಧಿಕಾರಿಗಳು
ಶಿವಮೊಗ್ಗ, (ನವೆಂಬರ್ 25): ಸಚಿವ ರಹೀಂ ಖಾನ್ ಅವರು ಇಂದು (ನವೆಂಬರ್ 25) ಶಿವಮೊಗ್ಗದ ಬಿ.ಹೆಚ್.ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳು, ಇಂದೀರಾ ಕ್ಯಾಂಟೀನ್ ಊಟ ಎಂದು ಹೇಳಿ ಸಚಿವರಿಗೆ ಹೋಟೆಲ್ ಊಟ ತಿನ್ನಿಸಿ ಯಾಮಾರಿಸಿದ್ದಾರೆ. ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಅವರು ಇಂದು ಮಧ್ಯಾಹ್ನ ಇಂದಿರಾ ಕ್ಯಾಂಟಿನ್ ಗೆ ಭೇಟಿ ನೀಡಿದ್ದರು. ಈ ವೇಳೆ ಅಧಿಕಾರಿಗಳು, ಇಂದಿರಾ ಕ್ಯಾಂಟಿನ್ ಊಟ ಎಂದು ಹೇಳಿ …
Read More »ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಧ್ವನಿ ಎಂದು FSL ವರದಿಯಲ್ಲಿ ಧೃಡ
ಬೆಂಗಳೂರು, (ನವೆಂಬರ್ 25): ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಫೋನ್ನಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಮುನಿರತ್ನ ವಿರುದ್ಧ ಗುತ್ತಿಗೆದಾರ ವೇಲು ನಾಯ್ಕರ್ ದೂರು ದಾಖಲಿಸಿದ್ದು, ಜೊತೆಗೆ ಅವರು ಪೊಲೀಸರಿಗೆ ನೀಡಿದ್ದ ಆಡಿಯೋ ಕ್ಲಿಪ್ಅನ್ನು ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಆಡಿಯೋದಲ್ಲಿರುವುದು …
Read More »ಬಹು ಎತ್ತರದ ಶಿವಾಜಿ ಮಹಾರಾಜರ ಮೂರ್ತಿಯನ್ನು ಜಾತ್ರೆಯ ಮುನ್ನ ಪ್ರತಿಷ್ಠಾಪನೆ
ಬೆಳಗಾವಿ : ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿರುವ ಐತಿಹಾಸಿಕ ಧಾರ್ಮಿಕ ಕೇಂದ್ರ ಸುಳೆಬಾವಿಯಲ್ಲಿ ಬಹು ಎತ್ತರದ ಶಿವಾಜಿ ಮಹಾರಾಜರ ಮೂರ್ತಿಯನ್ನು ಜಾತ್ರೆಯ ಮುನ್ನ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸೋಮವಾರ ಸಂಜೆ ಸುಳೆಬಾವಿಯಲ್ಲಿ ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಎಲ್ಲರ ಸಹಕಾರ, ಆಶೀರ್ವಾದದಿಂದ ಇಂತಹ ಒಳ್ಳೆಯ ಕೆಲಸಗಳು ಆಗುತ್ತಿವೆ. ಎಲ್ಲ ಗುರುಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು …
Read More »ಕೆ-ಸೆಟ್ ಪರೀಕ್ಷೆ : ಮಹಿಳಾ ಅಭ್ಯರ್ಥಿಗಳ ಜೊತೆಗೆ ಅಮಾನವೀಯ ವರ್ತನೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ರಾಜ್ಯದ್ಯಾಂತ ನಡೆಸಿದ ಕೆ-ಸೆಟ್ (ಅರ್ಹತಾ/ಸ್ಪರ್ಧಾತ್ಮಕ ಪರೀಕ್ಷೆ) ಪರೀಕ್ಷೆ ಕೇಂದ್ರದಲ್ಲಿ ನೀತಿ ನಿಯಮಗಳ ಹೆಸರಿನಲ್ಲಿ ಇಂದು ಪರೀಕ್ಷಾ ಕೇಂದ್ರದ ಅಧೀಕ್ಷರು ಹಲವು ಅವಾಂತರಗಳು ನಡೆಸಿದಕ್ಕೆ ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ ಘಟನೆ ಹುಬ್ಬಳ್ಳಿಯ ಎಸ್ ಎಸ್ ಕೆ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಈ ಬಗ್ಗೆ ಹಲವು ಮಹಿಳಾ ಅಭ್ಯರ್ಥಿಗಳು ತಮ್ಮ ನೋವು ಪ್ರಜಾಕಿರಣ.ಕಾಮ್ ಜೊತೆಗೆ ಹಂಚಿಕೊಂಡಿದ್ದಾರೆ. ಕೆ ಸೆಟ್ ಪರೀಕ್ಷಾ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥೀಗಳ ಕಾಲುಂಗರ, ಕಾಲ್ ಚೈನ್, ಮೂಗಬಟ್ಟು ಹೆಣ್ಣು ಮಕ್ಕಳ ಮೈ ಮೇಲಿನ ವೇಲ್ ಕೂಡ ತೆಗೆಸಿ ಪರೀಕ್ಷಾ ಕೇಂದ್ರದ …
Read More »ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಕಣಬರಗಿ ಕೆರೆಯ ಸ್ವಚ್ಛತಾ ಅಭಿಯಾನ
ಬೆಳಗಾವಿ : ಸುರೇಶ್ ಯಾದವ ಫೌಂಡೇಶನ್ ವತಿಯಿಂದ ಕಣಬರಗಿ ಕೆರೆಯ ಸ್ವಚ್ಛತಾ ಅಭಿಯಾನ ನಡೆಸಲಾಯಿತು ಪ್ರತಿ ರವಿವಾರ ದಂದು ಸ್ವಚ್ಚತಾ ಅಭಿಯಾನ ನಡೆಸಲಾಗುತ್ತದೆ ಆದರೆ ಸ್ಥಳೀಯ ಜನತೆ ಇದಕ್ಕೆ ಸಹಕರಿಸಬೇಕಾಗಿದೆ ಕಾರಣ ಎಷ್ಟೇ ಸ್ವಚ್ಚತೆ ಗೊಳಿಸಿದರು. ಮತ್ತೆ ಆ ಸ್ಥಳದಲ್ಲಿಯೇ ಮನೆಯಲ್ಲಿ ಪೂಜೆ ಮಾಡಿದ ಪೂಜಾ ಸಾಮಗ್ರಿಗಳನ್ನು ಹಾಗೂ ಕೊಲ್ಡ್ರಿಂಕ್ಸ್ ಬಾಟಲ್ಸ್ ಇನ್ನಿತರ ವೇಸ್ಟೆಡ್ ಸಾಮಗ್ರಿಗಳನ್ನು ಕೆರೆಯಲ್ಲಿ ಎಸೆದು ಕೆರೆಯ ವಾತಾವರಣ ಸ್ವಚ್ಚತೆ ಹಾಳು ಮಾಡುತ್ತಿರುವುದು ಖಂಡನೀಯ ದಯವಿಟ್ಟು ಪ್ರತಿ …
Read More »
Laxmi News 24×7