ಧಾರವಾಡ ನವೆಂಬರ 25: 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ ಮಟ್ಟಕ್ಕೆ ಮತ್ತು ಹೋಬಳಿ ಮಟ್ಟಕ್ಕೆ ಅಧಿಸೂಚಿತವಾಗಿರುವ ಬೆಳೆಗಳ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸಿಸಿಇ ಸಂರಕ್ಷಣೆ ವೆಬ್ ಪೋರ್ಟಲ್ ದಲ್ಲಿ ತಯಾರಿಸಿದ ಬೆಳೆ ಕಟಾವು ಪ್ರಯೋಗಗಳ ಕಾರ್ಯ ಯೋಜನಾ ಪಟ್ಟಿಯನ್ನು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು (ನ.25) ಬೆಳಿಗ್ಗೆ ಇಲಾಖಾ ಅಧಿಕಾರಿಗಳ …
Read More »Yearly Archives: 2024
ಸರಕಾರದ ಗಮನಸೆಳೆದ ಮಾದರಿ ಯೋಜನೆ ಸಿಇಟಿ ಸಕ್ಷಮ್”ಕ್ಕೆ 10 ಲಕ್ಷ ರೂಪಾಯಿ ಅನುದಾನ
ಬೆಳಗಾವಿ, ನ.25(ಕರ್ನಾಟಕ ವಾರ್ತೆ): ಸರ್ಕಾರಿ ಪದವಿ ಪೂರ್ವ ವಿದ್ಯಾಲಯಗಳಲ್ಲಿ ವಿಜ್ಞಾನ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಗ್ರಾಮೀಣ ಪ್ರದೇಶದ ಮತ್ತು ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ “ಸಿ.ಇ.ಟಿ.-ಸಕ್ಷಮ್” ಎಂಬ ವಿನೂತನ ಮತ್ತು ಸೃಜನಾತ್ಮಕ ಕಾರ್ಯಕ್ರಮಕ್ಕೆ ರಾಜ್ಯ ಸರಕಾರದ ಮೆಚ್ಚುಗೆ ಜತೆಗೆ ಚಾಲೆಂಜ್ ಫಂಡ್ ಯೋಜನೆಯಡಿ ಹತ್ತು ಲಕ್ಷ ರೂಪಾಯಿ ಅನುದಾನ ಕೂಡ ಲಭಿಸಿದೆ. ಜಿಲ್ಲೆಯ ಎಲ್ಲ ಸರಕಾರಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಬಡ …
Read More »ಅಮರಸಿದ್ಧೇಶ್ವರರು ಕೊಹಿನೂರ್ ವಜ್ರವಿದ್ದಂತೆ: ಸಚಿವ ಸತೀಶ ಜಾರಕಿಹೊಳಿ ಅಭಿಮತ.
ಅಮರಸಿದ್ಧೇಶ್ವರರು ಕೊಹಿನೂರ್ ವಜ್ರವಿದ್ದಂತೆ ಡಾಕ್ಟರೇಟ್ ಪಡೆದ ಅಮರಸಿದ್ಧೇಶ್ವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಲೋಕಪಯೋಗಿ ಸಚಿವ ಸತೀಶ ಜಾರಕಿಹೊಳಿ ಅಭಿಮತ. ಅಂಕಲಗಿ. ೨೫- ಅಮರಸಿದ್ಧೇಶ್ವರರು ತಮ್ಮಲ್ಲಿಯ ಸಂಸ್ಕ್ರತ ಭಾಷಾ ವಿಷಯವಾದ ದಶೋಪನಿಷತ ಮತ್ತು ದಶ ಶರಣರದ್ರಷ್ಟಿಯಲ್ಲಿ ಈಶ್ವರ ಸ್ವರೂಪ ವಿಷಯದ ಮೇಲೆ ಮಂಡಿಸಿದ ಮಹಾಪ್ರಭಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಸಂಪಾದಿಸಿದ್ದು ನಮ್ಮ ನಾಡಿನ ಹೆಮ್ಮೆ ಇದಾಗಿದೆ. ಅವರು ಕೋಹಿನೂರ ವಜ್ರವಿದ್ದಂತೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಲೋಕೋಪಯೋಗಿ ಸಚಿವ ಸತೀಶ …
Read More »ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲಎಂದ ಡಿಸಿಎಂ ಡಿ.ಕೆ.ಶಿ
ಡಿ.ಕೆ.ಸುರೇಶ್ ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಕಾಸಸೌಧದಲ್ಲಿಂದು ಮಾತನಾಡಿದ ಅವರು, ಗೆದ್ದ ಕೂಡಲೇ ಒಕ್ಕಲಿಗ ನಾಯಕನಾಗಲ್ಲ ಎಂಬ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅಶೋಕಣ್ಣ ನನಗಿಂತ ದೊಡ್ಡವನ ಚಿಕ್ಕವನ ಗೊತ್ತಿಲ್ಲ. ಹೌದು, ನನ್ನ ತಮ್ಮ ಸೋತಿದ್ದಾನೆ. ಸೋಲಿಸಿದ ಕೊಂಡಿಗಳು ಒಂದೊಂದೇ ಕಳಚಿಕೊಂಡವಲ್ಲ. ರಾಜರಾಜೇಶ್ವರಿ ನಗರದಲ್ಲಿ ಏನಾಯ್ತು.?. ಚನ್ನಪಟ್ಟಣದಲ್ಲಿ ಏನಾಯ್ತು? ಕನಕಪುರಕ್ಕೆ ಬಂದು ನಿಂತ್ಯಲ್ಲ ಏನಾಯ್ತು? ನನಗೆ ಡಿಚ್ಚಿ ಹೊಡೀತೀನಿ ಅಂತ ಬಂದ್ಯಲ್ಲ ಡೆಪಾಸಿಟ್ ಬಂತಾ? …
Read More »ಮಹಾರಾಷ್ಟ್ರದ ಮೀರಜನಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ, ಟೆಸ್ಟ್ ಟ್ಯೂಬ್ ಬೇಬಿ ಉಚಿತ ತಪಾಸಣೆ
ಸಂತಾನಹೀನ ದಂಪತಿಗಳು ಮತ್ತು ಮಹಿಳೆಯರಿಗಾಗಿ ಮಹಾರಾಷ್ಟ್ರದ ಮೀರಜನಲ್ಲಿರುವ ಸಚಿನ್ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಸ್ತ್ರೀರೋಗ ಮತ್ತು ಬಂಜೆತನ ಮಾರ್ಗದರ್ಶಿ ಕೇಂದ್ರ ಟೆಸ್ಟ್ ಟ್ಯೂಬ್ ಬೇಬಿ ಉಚಿತ ತಪಾಸಣೆ ಮತ್ತು ಮಾರ್ಗದರ್ಶನ ಶಿಬಿರವನ್ನು ನವೆಂಬರ್ 17 ರಂದು ಆಯೋಜಿಸಲಾಗಿತ್ತು. , ಮಕ್ಕಳಿಲ್ಲದ ದಂಪತಿಗಳಿಗೆ ಸಿಹಿ ಸುದ್ದಿ ಸಂತಾನಹೀನ ದಂಪತಿಗಳು ಮತ್ತು ಮಹಿಳೆಯರಿಗಾಗಿ ಮಹಾರಾಷ್ಟ್ರದ ಮೀರಜ್ನಲ್ಲಿರುವ ಸಚಿನ್ ಆಸ್ಪತ್ರೆಯಲ್ಲಿ ಪ್ರಸಿದ್ಧ ಅಂತರರಾಷ್ಟ್ರೀಯ ಗುಣಮಟ್ಟದ ಸ್ತ್ರೀರೋಗ ಶಾಸ್ತ್ರ ಮತ್ತು ಬಂಜೆತನ ಮಾರ್ಗದರ್ಶಿ ಕೇಂದ್ರ (ಟೆಸ್ಟ್ …
Read More »ಸಮುದ್ರಕ್ಕೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ಸೋಮೇಶ್ವರದ ಸಮುದ್ರ ತೀರದಲ್ಲಿ ರುದ್ರಬಂಡೆಯ ಮೇಲಿಂದ ಯುವತಿಯೊಬ್ಬಳು ಇಂದು ಬೆಳಿಗ್ಗೆ ಸಮುದ್ರಕ್ಕೆ ಜಿಗಿದಿದ್ದಾಳೆ. ಕಡ ಅಲೆಗಳ ನ್ಡುವೆಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಮೀನುಗಾರರು ಕಂಡು ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಸದ್ಯ ಮೀನುಗಾರರು ಯುವತಿಯನ್ನು ರಕ್ಷಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿ ಮಂಗಳೂರಿನ ಕಾಲೇಜಿನ ಪದವಿ ವಿದ್ಯಾರ್ಥಿನಿ ಎಂದು ತಿಳಿದುಬಂದಿಲ್ಲ. …
Read More »ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ.
ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ ತಪ್ಪಿ ಪಕ್ಕದ …
Read More »ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲಗೆ ಬಿದ್ದ 3 ಅಧಿಕಾರಿಗಳು
ಲಂಚ ಪಡೆಯುತ್ತಿದ್ದ ವೇಳೆ ಮೈಸೂರಿನ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲಗೆ ಬಿದ್ದಿದ್ದು, ಮೂವರ ವಿರುದ್ಧ ದೂರು ದಾಖಲಾಗಿದೆ. ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿ ರೆವೆನ್ಯೂ ಇನ್ಸ್ ಪೆಕ್ಟರ್ ಗೋವಿಂದರಾಜು, ಎನ್.ಬೆಳ್ತೂರು ಗ್ರಾಮ ಲೆಕ್ಕಿಗ ನಾಗರಾಜು ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಬಿ.ವಿ.ಮಮತಾ ಕುಮಾರಿ ಎಂಬುವವರಿಗೆ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಭೂಮಿ ವಿಚಾರವಾಗಿ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘಿಸಿ ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಹಿಂದಿನಂತೆ ದಾಖಲೆ …
Read More »ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದ ಪ್ರತಿಭಟನಾಕಾರರು!
ಮಂಡ್ಯ, ನವೆಂಬರ್ 25: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಕಾಡಅಂಕನಹಳ್ಳಿ ಗ್ರಾಮದಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಾಲು ಉತ್ಪಾದಕರು ಹತ್ತಾರು ಲೀಟರ್ ಹಾಲನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಟ್ಟೆ ಸೇರಬೇಕಿದ್ದ ನೂರಾರು ಲೀಟರ್ ಹಾಲು ಮಣ್ಣು ಪಾಲಾಗಿದೆ. ಗ್ರಾಮದ ಹಾಲು ಉತ್ಪಾದಕರ ಸಂಘವನ್ನು ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಕೊಟ್ಟಿರುವ ಸೂಚನೆಯಂತೆ ಸೂಪರ್ ಸೀಡ್ ಮಾಡಲಾಗಿದೆ ಎಂದು ಹಾಲು ಉತ್ಪಾದಕರು ಆರೋಪಿಸಿದ್ದಾರೆ. ಸಚಿವರು ದ್ವೇಷದಿಂದ ಹಾಲು ಖರೀದಿಸದಂತೆ ಮನ್ಮುಲ್ಗೆ …
Read More »ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು
ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ …
Read More »