Breaking News

Yearly Archives: 2024

ಅರ್ಧರಾತ್ರಿಯಲ್ಲಿ ಸಂಪೂರ್ಣ ಕಾಶಿ ಸುತ್ತಿದ ಪ್ರಧಾನಿ.

ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ತಮ್ಮ ಸ್ವಂತ ಕ್ಷೇತ್ರವಾದ ವಾರಣಾಸಿಗೆ ಗುರುವಾರ ಅರ್ಧರಾತ್ರಿ ದಿಢೀರನೆ ಭೇಟಿ ನೀಡಿ ಸ್ಥಳೀಯವಾಗಿ ನಡೆದ ಇತ್ತೀಚಿನ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.   ಪ್ರಧಾನಿ ಮೋದಿ ಅವರು ನೂತನವಾಗಿ ನಿರ್ಮಿಸಿರುವ ಶಿವಪುರ-ಫುಲ್ವಾರಿಯಾ-ಲಾ-ತಾರಾ ಮಾರ್ಗವನ್ನು ಪರಿಶೀಲಿಸಲಾಯಿತು. ಅವರೊಂದಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಉಪಸ್ಥಿತರಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ಪ್ರಧಾನಿ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ   360 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಈ …

Read More »

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು: ‘ಕಾಂಗ್ರೆಸ್ ನಾಯಕ’ರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್ ಜಾರಿಗೊಳಿಸಿದೆ. ಬಿಜೆಪಿ ವಿರುದ್ಧವಾಗಿ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಡಬ್ಬಲ್ ಎಂಜಿನ್ ಸರ್ಕಾರ ಹಾಗೂ 40% ಸರ್ಕಾರ ಎಂದು ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕಾನೂನು ಘಟಕದ ವಕೀಲ ವಿನೋದ್‌ ಕುಮಾರ್ ಸಲ್ಲಿಸಿದ್ದ ಖಾಸಗಿ ದೂರು ನೀಡಿದ್ದರು. ಇಂದು ಜನಪ್ರತಿನಿಧಿಗಳ …

Read More »

ಕಾಂಗ್ರೆಸ್ ಸಂಸದ ‘ಡಿ.ಕೆ.ಸುರೇಶ್’ ವಿರುದ್ಧ ‘ಡಾ.ಮಂಜುನಾಥ್’ ಕಣಕ್ಕಿಳಿಯಲು ‘NDA’ ಚಿಂತನೆ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಕಣಕ್ಕಿಳಿಸಲು ಎನ್ಡಿಎ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಗುರುವಾರ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಸಭೆಯಲ್ಲಿ ಮಂಜುನಾಥ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.   ಪದ್ಮಶ್ರೀ ಪುರಸ್ಕೃತ ಡಾ.ಮಂಜುನಾಥ್ ಅವರು ಹೃದ್ರೋಗ ತಜ್ಞರಾಗಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ …

Read More »

ಮದುವೆ ಮುರಿದ ಪ್ರಿಯಕರ; ಧರಣಿ ಕುಳಿತ ಯುವತಿ

(ಬೆಳಗಾವಿ ಜಿಲ್ಲೆ): ಪ್ರೀತಿಸುತ್ತಿದ್ದ ಯುವತಿಯನ್ನು ಪತಿ ಮನೆಯಿಂದ ಮರಳಿ ಕರೆದುಕೊಂಡು ಬಂದ ಯುವಕ; ತಾನೂ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾನೆ. ಇದರಿಂದ ಬೇಸತ್ತ ಯುವತಿ ಪ್ರೀತಿಸಿದ ಯುವಕನ ಮನೆ ಮುಂದೆ ಏಕಾಂಗಿ ಆಗಿ ಧರಣಿ ನಡೆಸಿದ ಪ್ರಕರಣ ಪಟ್ಟಣದಲ್ಲಿ ಗುರುವಾರ ನಡೆದಿದೆ.   ಇದರಿಂದ ಎರಡೂ ಕುಟುಂಬದವರ ಮಧ್ಯೆ ಮಾತಿನ ಜಟಾಪಟಿ ನಡೆಯಿತು. ಯುವಕನ ಮನೆಯವರು ಬಾಗಿಲನ್ನು ಹಾಕಿಕೊಂಡರೆ, ಯುವಕ ಮಾತ್ರ ಎಲ್ಲೋ ಹೋಗಿದ್ದಾನೆ ಎಂದು ಕುಟುಂಬದವರು ತಿಳಿಸಿದರು. ಇಲ್ಲಿಯ ಸೋಮವಾರ ಪೇಟೆಯ …

Read More »

ಅಥಣಿ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಸಂತಸದ ಸಂಗತಿ: ಡಾ ಮಹಾಂತೇಶ ಉಕ್ಕಲಿ

ಅಥಣಿ: ‘ತಾಲ್ಲೂಕಿನ‌ ಪ್ರತಿಯೊಂದು ಶಾಲೆಗಳಿಗೆ ತೆರಳಿ ಚುಟುಕುಗೋಷ್ಠಿ ಆಯೋಜಿಸುವ ಮೂಲಕ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಸಾಹಿತಿ ಡಾ ಮಹಾಂತೇಶ ಉಕ್ಕಲಿ ಹೇಳಿದರು. ತಾಲ್ಲೂಕಿನ‌ ಕಿರಣಗಿ ಗ್ರಾಮದಲ್ಲಿ ಚುಟುಕು ಸಾಹಿತ್ಯ ಪರಿಷತ್ ಹಾಗೂ ಅಥಣಿ ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಜರುಗಿದ ‘ಶಾಲೆಗೊಂದು ಚುಟುಕುಗೋಷ್ಠಿ’ ಕಾರ್ಯಕ್ರಮದಲ್ಲಿ ಮಾತನಾಡಿ, ನೂತನ ಕವಿಗಳನ್ನು ಹುಟ್ಟುಹಾಕುವ ಪ್ರಯತ್ನ ಮಾಡಿ ಚುಟುಕು‌ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಆಯೋಜಕರ ಪ್ರಯತ್ನ ಅಭಿನಂದನಾರ್ಹ ಎಂದರು.   ಯೋಗ …

Read More »

ವಿಪಕ್ಷ ನಾಯಕನ ಸ್ಥಾನಕ್ಕೆ ಆರ್.ಅಶೋಕ್ ಅಯೋಗ್ಯ; ತಮ್ಮ ಬಣ್ಣ ತಾವೇ ಬಯಲು ಮಾಡಿಕೊಂಡಿದ್ದಾರೆ; ಪ್ರಮೋದ್ ಮುತಾಲಿಕ್ ವಾಗ್ದಾಳಿ

ಉಡುಪಿ: ಮಂಗಳೂರು ಪಬ್ ದಾಳಿಕೋರರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ಪಬ್ ನಲ್ಲಿ ದಾಳಿ ನಡೆಸಿದ್ದ ಬಜರಂಗದಳ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿ ಕ್ರಮ ಕೈಗೊಂಡಿದ್ದೆ ಎಂದು ಆರ್.ಅಶೋಕ್ ವಿಧಾನಸಭೆಯಲ್ಲಿ ಹೇಳಿದ್ದರು. ಇದೇ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಆರ್.ಅಶೋಕ್ ವಿಪಕ್ಷ ನಾಯಕ ಸ್ಥಾನಕ್ಕೆ ಅಯೋಗ್ಯ ಎಂದು ಆಕ್ರೋಶ …

Read More »

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಫೆ. 29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಸಲ್ಲಿಸುವುದು ಎಂದು ಪ್ರಕಟಣೆ ತಿಳಿಸಿದೆ. 2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುವುದಿಲ್ಲ. ಸಾಮಾನ್ಯ ವರ್ಗದ …

Read More »

‘ಅಯ್ಯೋ ತಗಡೇ’ ಎಂದ ‘ನಟ ದರ್ಶನ್’ ವಿರುದ್ಧ ‘ಮತ್ತೆರಡು ದೂರು’ ದಾಖಲು

ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ. ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು …

Read More »

ಹೊತ್ತಿ ಉರಿದ ಪ್ಲಾಸ್ಟಿಕ್ ಗೋದಾಮು: ವಾಹನಗಳು ಬೆಂಕಿಗಾಹುತಿ

ಬೆಂಗಳೂರು, ಫೆ.23- ಪ್ಲಾಸ್ಟಿಕ್ ಗೋದಾಮಿನಲ್ಲಿ ಇಂದು ಮುಂಜಾನೆ ಹೊತ್ತಿಕೊಂಡ ಬೆಂಕಿ ಪಕ್ಕದಲ್ಲೇ ಇದ್ದ ಪಾರ್ಕಿಂಗ್ ಸ್ಥಳಕ್ಕೆ ವ್ಯಾಪಿಸಿದ್ದರಿಂದ ಅಲ್ಲಿ ನಿಲ್ಲಿಸಲಾಗಿದ್ದ ಸುಮಾರು 30ರಿಂದ 35 ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಗಂಗೊಂಡನಹಳ್ಳಿಯ ಗೋದಾಮುವೊಂದರಲ್ಲಿ ಹಳೇ ಪ್ಲಾಸ್ಟಿಕ್ ಸಾಮಗ್ರಿಗಳನ್ನು ಸಂಗ್ರಹಿಸಿಡಲಾಗಿತ್ತು. ಗೋದಾಮಿಗೆ ಹೊಂದಿಕೊಂಡಂತೆ ಇದರ ಪಕ್ಕದಲ್ಲಿಯೇ ವಾಹನಗಳನ್ನು ರಾತ್ರಿ ವೇಳೆ ಪೇ- ಪಾರ್ಕಿಂಗ್ ಮಾಡಲಾಗುತ್ತಿತ್ತು. ಚಾಲಕರು ತಮ್ಮ ಮನೆಯ ಬಳಿ ವಾಹನಗಳನ್ನು ನಿಲ್ಲಿಸಲು …

Read More »

ಹುಬ್ಬಳ್ಳಿ: ನಾಲ್ಕು ವರ್ಷಗಳಿಂದ ‘ಶುಚಿ’ ಸ್ಥಗಿತ

ಹುಬ್ಬಳ್ಳಿ: ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಬಾಲಕಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ ನೀಡುವ ‘ಶುಚಿ ಯೋಜನೆ’ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದೆ. ಹಣ ನೀಡಿ ಸ್ಯಾನಿಟರಿ ನ್ಯಾಪಕಿನ್ ಖರೀದಿಸಲು ಆಗದ ಬಾಲಕಿಯರು ಮುಟ್ಟಿನ ದಿನಗಳಲ್ಲಿ ಶುಚಿತ್ವಕ್ಕೆ ಬಟ್ಟೆ ಬಳಸುತ್ತಾರೆ. ಇದರಿಂದ ಚರ್ಮರೋಗ, ಮೂತ್ರರೋಗ ಉಂಟಾಗಬಹುದು ಎಂಬ ಆತಂಕ ಅವರಲ್ಲಿ ಕಾಡುತ್ತಿದೆ. ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಲು ಮತ್ತು ಸ್ಯಾನಿಟರಿ ನ್ಯಾಪಕಿನ್ ಬಳಕೆ ಪ್ರೋತ್ಸಾಹಿಸಲು 2013- 14ನೇ ಸಾಲಿನಲ್ಲಿ ಆರಂಭವಾದ ಶುಚಿ ಯೋಜನೆ …

Read More »