ಮೈಸೂರು, ಜ.18: ಕೆಲಸ ಮಾಡವ ಜಾಗದಲ್ಲಿ ಅನ್ಯಾಯವಾಗ್ತಿದೆ ಎಂದು ವ್ಯಕ್ತಿಯೋರ್ವ ಟವರ್ ಏರಿದ ಘಟನೆ ಮೈಸೂರು ಜಿಲ್ಲೆಯ ವರುಣದಲ್ಲಿ ನಡೆದಿದೆ. ಹಾಸನದ ಚಾಮುಂಡೇಶ್ವರಿ ಶುಗರ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಸಿದ್ದೇಗೌಡ(45) ಕೆಲಸ ಮಾಡವ ಜಾಗದಲ್ಲಿ ತನಗೆ ಅನ್ಯಾಯವಾಗ್ತಿದೆ ಎಂದು ಆರೋಪಿಸಿ ಮೊಬೈಟ್ ಟವರ್ ಏರಿದ್ದಾನೆ. ನನಗೆ ನ್ಯಾಯ ಕೊಡಿಸಿ ಅಲ್ಲಿಯ ವರೆಗೆ ಮೊಬೈಲ್ ಟವರ್ನಿಂದ ಇಳಿಯಲ್ಲ ಎಂದು ಪಟ್ಟುಹಿಡಿದಿದ್ದಾನೆ. ಸಧ್ಯ ಸ್ಥಳಕ್ಕೆ ಪೊಲೀಸರು ಆಗಮಿಸಿ ಸಿದ್ದೇಗೌಡನನ್ನು ಕೆಳಗಿಳಿಸಲು ಹರಸಾಹಸಪಡುತ್ತಿದ್ದಾರೆ. ವಿದ್ಯುತ್ ತಂತಿ ತಗುಲಿ …
Read More »Yearly Archives: 2024
ಧಾರವಾಡ ಯುವಕನ ಕೈಯಲ್ಲಿ ಅರಳಿದ ರಾಮಲಲ್ಲಾ ವಿಗ್ರಹ
ಧಾರವಾಡದ ಯುವ ಕಲಾವಿದ ರೋಹಿತ್ ಹಿರೇಮಠ ತನ್ನದೇ ಕಲ್ಪನೆಯಲ್ಲಿ 15 ಇಂಚು ಎತ್ತರದ ರಾಮಲಲ್ಲಾ ವಿಗ್ರಹವನ್ನು ನಿರ್ಮಿಸಿದ್ದಾರೆ. ನನಗೆ ಮೊದಲಿನಿಂದಲೂ ರಾಮ ಮಂದಿರದ ಬಗ್ಗೆ ಸಾಕಷ್ಟು ಕುತೂಹಲವಿತ್ತು. ಇದೇ ಕಾರಣಕ್ಕೆ ನನ್ನ ಮನಸ್ಸಿನಲ್ಲಿಯೂ ಐದು ವರ್ಷದ ರಾಮಲಲ್ಲಾನ ಚಿತ್ರಣ ಮೂಡಿತು. ಇದೇ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ವೇಳೆ …
Read More »ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಇಂದಿನಿಂದ ಜೆಎಸ್ಎಸ್ ಆಸ್ಪತ್ರೆಯಲ್ಲಿ ಜ.22ರವರೆಗೆ ಉಚಿತ ಹೆರಿಗೆ
ವಿಜಯಪುರ, ಜ.18: ಅಯೋಧ್ಯೆಯಲ್ಲಿ ಶ್ರೀರಾಮೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ (Ayodhya Ram Mandir). ನಿನ್ನೆ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ವಿಗ್ರಹಣದ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು ಇಂದು ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಿದೆ. ಮತ್ತೊಂದೆಡೆ ವಿಜಯಪುರದ ಜ್ಞಾನಯೋಗಿ ಸಿದ್ದೇಶ್ವರಶ್ರೀ ಆಸ್ಪತ್ರೆಯಲ್ಲಿ (JSS Hospital) ಇಂದಿನಿಂದ ನಾಲ್ಕು ದಿನಗಳ ಕಾಲ ಉಚಿತ ಹೆರಿಗೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಜನವರಿ 22ರವರೆಗೆ ಜನಿಸಿದ ನವಜಾತ ಶಿಶುಗಳನ್ನು ರಾಮ ಹಾಗೂ ಸೀತೆ ಪ್ರತಿರೂಪ ಎಂದು ಪರಿಗಣಿಸಿ ಉಚಿತ ಹೆರಿಗೆ …
Read More »ಟಿಕೆಟ್ ಕೊಟ್ರೆ ಸೋಲು ಗ್ಯಾರಂಟಿ: ಮುದ್ದಹನುಮೇಗೌಡರರಿಗೆ ಪರೋಕ್ಷ ಎಚ್ಚರಿಕೆ ಕೊಟ್ಟ ಹಾಲಪ್ಪ
ತುಮಕೂರು: ಜನ ಸಾಮಾನ್ಯರ ಜೊತೆ ಒಡನಾಟ ಇರೋದು ಗೊತ್ತು. ತುಮಕೂರಿನಲ್ಲಿ ಸಭೆ ಮಾಡಿ ಜನರ ಕಷ್ಟ ಆಲಿಸೋದು ಗೊತ್ತು. ದೆಹಲಿಗೆ ಹೋಗೋದು, ಬಾಂಬೆಗೆ ಹೋಗೋದು, ಸೋಫಾ ಮೇಲೆ ಕುಳಿತು ಫೋಟೋ ಕ್ಲಿಕ್ ಮಾಡೋದು ನನಗೆ ಗೊತ್ತಿಲ್ಲ ಎಂದು ಲೋಕಸಭೆ ಟಿಕೆಟ್ ಆಕಾಂಕ್ಷಿ ಮುರುಳೀಧರ್ ಹಾಲಪ್ಪ ಅವರು ಕಾಂಗ್ರೆಸ್ ಸೇರಲು ತುದಿಗಾಲಿನಲ್ಲಿ ನಿಂತಿರುವ ಮುದ್ದಹನುಮೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಸೇರಿ ಲೋಕಸಭೆ ಚುನಾವಣೆ ಕಣಕ್ಕಿಳಿಯಲು ಪ್ರಯತ್ನಿಸುತ್ತಿರುವ ಮುದ್ದಹನುಮೇಗೌಡರ ವಿರುದ್ಧ …
Read More »ನಿಗಮ, ಮಂಡಳಿಗಳಿಗೆ 36 ಶಾಸಕರು, 39 ಕಾರ್ಯಕರ್ತರ ನೇಮಕ: ಡಿ.ಕೆ. ಶಿ.
ಬೆಂಗಳೂರು : ನಿಗಮ ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ’ ಎಂದು ಡಿಸಿಎಂ ಡಿ.ಕೆ. (Dkshivakumar) ಶಿವಕುಮಾರ್ ಅವರು ತಿಳಿಸಿದರು. ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದರು. ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ (Congress) ಚುನಾವಣಾ ಸಮಿತಿ ಸಭೆಯನ್ನು ನಾಳೆ …
Read More »ಅನಂತ್ ಕುಮಾರ್ ಹೇಳಿಕೆಗೆ ಬಿಜೆಪಿಗರಲ್ಲೇ ಬೇಸರ
ಬೆಂಗಳೂರು : ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant kumar hegde) ಅವರು ಸಿಎಂ ಸಿದ್ದರಾಮಯ್ಯ (Siddaramiah) ವಿರುದ್ದ ಏಕವಚನ ಬಳಕೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಗ್ಗೆ ಬಿಜೆಪಿಗರೇ (BJP) ಬೇಸರ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾತನಾಡಿರುವ ಸಚಿವ ಶಿವರಾಜ್ ತಂಗಡಗಿ, (Shivaraj Tangadagi) ಅನಂತ್ ಕುಮಾರ್ ಹೆಗಡೆ ಹುಚ್ಚ ಎಂದು ಬಿಜೆಪಿಯವರೇ ತಿಳಿದುಕೊಂಡಿದ್ದಾರೆ ಎಂದು ಈಗ ಸಾಬೀತಾಯಿತು ಎಂದರು. ಹೆಗಡೆ ಅವರ ಮಾತಿಗೆ ಬೆಲೆ ಕೊಡಲ್ಲವೆಂದು …
Read More »ರಾಮ ಮಂದಿರ ಉದ್ಘಾಟನೆ ಬಳಿಕ ಕುಟುಂಬ ಸಮೇತ ಭೇಟಿ: ಕೇಜ್ರಿವಾಲ್
ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರ ಜನವರಿ 22 ರಂದು ಉದ್ಘಾಟನೆಗೊಳ್ಳಲಿದೆ. ಈ ಸಮಾರಂಭದ ಬಳಿಕ ತಾವು ಕುಟುಂಬ ಸಮೇತರಾಗಿ ರಾಮಮಂದಿರಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ನಾನು ನನ್ನ ಹೆಂಡತಿ, ಮಕ್ಕಳು ಮತ್ತು ಪೋಷಕರೊಂದಿಗೆ ರಾಮಮಂದಿರಕ್ಕೆ ಹೋಗಲು ಬಯಸುತ್ತೇನೆ. ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಹೋಗುತ್ತೇವೆ ಎಂದು ಹೇಳಿದರು. ಆಹ್ವಾನದ ಬಗ್ಗೆ ಕೇಳಿದಾಗ, ನನಗೆ ಸರ್ಕಾರದಿಂದ …
Read More »ಅಯೋಧ್ಯೆಗೆ ಹೆಲಿಕಾಪ್ಟರ್ ಸೇವೆಗಳನ್ನು ಪ್ರಾರಂಭಿಸಲಿದೆ ಯುಪಿ ಸರ್ಕಾರ
ಲಕ್ನೋ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವು ಕೆಲವೇ ದಿನಗಳಲ್ಲಿ ನಡೆಯಲಿದ್ದು ಉತ್ತರ ಪ್ರದೇಶ ಸರ್ಕಾರ ಲಕ್ನೋ, ಗೋರಖ್ಪುರ, ಪ್ರಯಾಗರಾಜ್, ವಾರಣಾಸಿ, ಆಗ್ರಾ ಮತ್ತು ಮಥುರಾದಿಂದ ಅಯೋಧ್ಯೆಗೆ ಹೆಲಿಕಾಪ್ಟರ್ ಸೇವೆಗಳನ್ನು ನೀಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಜನವರಿ 19 ರಂದು ಲಕ್ನೋದಿಂದ ಹೆಲಿಕಾಪ್ಟರ್ ಸೇವೆಯನ್ನು ಉದ್ಘಾಟಿಸಲಿದ್ದಾರೆ. ಹೆಲಿಕಾಪ್ಟರ್ ಸೇವೆಗಳ ದರವನ್ನೂ ಸರ್ಕಾರ ನಿಗದಿಪಡಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆ ಜಾರಿಯಲ್ಲಿದೆ. ಇದರ ಜೊತೆಗೆ …
Read More »ಜ. 23ರಂದು ಪಿಎಸ್ಐ ಮರುಪರೀಕ್ಷೆ
ಬೆಂಗಳೂರು: ರಾಜ್ಯದಲ್ಲಿ ಜನವರಿ 23ರಂದು ಪಿಎಸ್ಐ ಹುದ್ದೆಗಳ ನೇಮಕಾತಿ ಮರುಪರೀಕ್ಷೆ ನಡೆಯಲಿದೆ. ಒಟ್ಟು 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಮರುಪರೀಕ್ಷೆ ನಡೆಯುತ್ತಿದ್ದು, ಇದೀಗ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರವೇಶ ಪತ್ರವನ್ನು ಪಡೆಯಲು ಅಭ್ಯರ್ಥಿಗಳು https://kea.kar.nic.inಗೆ ಭೇಟಿ ನೀಡಿ ಸೂಚಿಸಿದ ಮಾಹಿತಿಯನ್ನು ಭರ್ತಿ ಮಾಡಿ ಡೌನ್ಲೋಡ್ ಮಾಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಲಾಗಿದ್ದು, ಮಾಂಗಲ್ಯ ಸರ …
Read More »ಶಿವರಾಮ ಕಾರಂತ ಬಡಾವಣೆ ನಿವೇಶನಗಳಿಗೆ ಅರ್ಜಿ ಆಹ್ವಾನ: ಡಿಕೆಶಿ
ಬೆಂಗಳೂರು: ಇದೇ ತಿಂಗಳು 25 ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು. ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಬಿಡಿಎ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಶಿವರಾಮ ಕಾರಂತ ಬಡಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇವೆ. ಶಿವರಾಮ್ ಕಾರಂತ ಬಡಾವಣೆ ನಿವೇಶನಕ್ಕೆ ಆನ್ ಲೈನ್ ಮೂಲಕ …
Read More »