ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ದತೆ ನಡೆಸುತ್ತಿವೆ. ಈ ನಿಮಿತ್ತ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿರುವ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಜೊತೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು. …
Read More »Yearly Archives: 2024
ಭ್ರೂಣಲಿಂಗ ಪತ್ತೆ ಹಾಗೂ ನಕಲಿ ವೈದ್ಯರ ಜಾಲ ಪತ್ತೆಗೆ ಸಂತ್ರಸ್ತರ ರೂಪದಲ್ಲಿ ಡಿಕಾಯ್ ಆಪರೇಶನ್ -ಆರೋಗ್ಯ ಇಲಾಖೆ ಪ್ಲಾನ್
ಬೆಂಗಳೂರು, : ಕೊವಿಡ್ (Coronavirus) ಬಳಿಕ ಕೆಲಸವಿಲ್ಲದೆ ಜೀವನ ನಡೆಸಲು ಕಷ್ಟ ಅಂತಾ ಕೆಲವರು ಅಡ್ಡ ಹಾದಿ ಹಿಡಿದಿದ್ರೆ ಇನ್ನೂ ಹಲವರು ಅನಾರೋಗ್ಯವನ್ನೆ ದಾಳ ಮಾಡಿಕೊಂಡು ಎಂಬಿಬಿಎಸ್ (MBBS) ಪದವಿ ಪಡೆಯದೆ ತರಬೇತಿ ಇಲ್ಲದೆ ಕ್ಲಿನಿಕ್ ಹಾಗೂ ಮೆಡಿಕಲ್ ಕ್ಲಿನಿಕ್ ಓಪನ್ ಮಾಡಿ ಜನರ ಜೀವದ ಜೊತೆ ಚೆಲ್ಲಾಟಕ್ಕೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕೊವಿಡ್ ಬಳಿಕ ನಕಲಿ ವೈದ್ಯರ ಹಾಗೂ ಭ್ರೂಣಲಿಂಗ ಪತ್ತೆ ಜಾಲಗಳ ಹಾವಳಿ ಹೆಚ್ಚಾಗಿದ್ದು ಆರೋಗ್ಯ ಇಲಾಖೆ (Health Department) …
Read More »ರಾಮನ ಬಂಟ ಹನುಮಂತನ ಜನ್ಮಸ್ಥಳ ಗಂಗಾವತಿಯ ಅಂಜನಾದ್ರಿಯಲ್ಲಿ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ವಿವರ ಇಲ್ಲಿದೆ
ಅಯೋಧ್ಯೆಗೂ ಅಂಜನಾದ್ರಿಗೂ ಹತ್ತಿರದ ನಂಟಿದೆ. ಅಯೋಧ್ಯೆಯಲ್ಲಿ ರಾಮ ಜನಿಸಿದ್ರೆ ಕಿಷ್ಕಿಂದೆಯ ಅಂಜನಾದ್ರಿ ಹನುಮನ ಜನ್ಮಸ್ಥಳವಾಗಿದೆ. ಹೀಗಾಗಿ ರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ಹನುಮನ ಜನ್ಮಸ್ಥಳದಲ್ಲಿ ಕೂಡಾ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಗೌರವ ಸೂಚಿಸುವ ಕೆಲಸಕ್ಕೆ ಟ್ರಸ್ಟ್ ಸಿದ್ದತೆ ಮಾಡಿಕೊಂಡಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಾಗಿ ರಾಮ ಭಕ್ತರಲ್ಲಿ ಸಂಭ್ರಮ ಹೆಚ್ಚಾಗುತ್ತಿದೆ. ಇನ್ನು ರಾಮ ಮಂದಿರ ಉದ್ಘಾಟನೆ, ರಾಮನ ಬಂಟ ಹನುಮಂತನ ಜನ್ಮಸ್ಥಳದಲ್ಲಿ …
Read More »ಅರಬ್ಬಿ ಸಮುದ್ರದಲ್ಲಿ ಮುಳಗುವ ಹಂತದಲ್ಲಿದ್ದ ಯಾಂತ್ರಿಕ ದೋಣಿ ರಕ್ಷಣೆ: 7 ಮೀನುಗಾರರು ಸುರಕ್ಷಿತ
ಕಾರವಾರ, ಜನವರಿ 17: ಗೋವಾದ ಕಾಣಕೋಣ ಸಮೀಪದಲ್ಲಿ ಮೀನುಗಾರಿಕಾ ಬೋಟ್ ಅವಘಡ ಸಂಭವಿಸಿದ್ದು, ಮುಳಗುವ ಹಂತದಲ್ಲಿದ್ದ ಯಾಂತ್ರಿಕ ದೋಣಿ(boat)ಯನ್ನು ಮೀನುಗಾರರು ರಕ್ಷಣೆ ಮಾಡಿದ್ದಾರೆ. 25 ನಾಟಿಕಲ್ ಮೈಲು ದೂರದ ಅರಬ್ಬಿ ಸಮುದ್ರದಲ್ಲಿ ಘಟನೆ ನಡೆದಿದೆ. ಮಂಗಳೂರು ಮೂಲದ ರಾಯಲ್ ಬ್ಲೂ ಹೆಸರಿನ ಬೋಟ್ ಮುಳುಗುವ ಹಂತದಲ್ಲಿದ್ದು, ಬೋಟ್ನಲ್ಲಿದ್ದ ಎಲ್ಲ 7 ಮೀನುಗಾರರು ಸುರಕ್ಷಿತರಾಗಿದ್ದಾರೆ. ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಸಹಾಯ ಮೂಲಕ 6 ಬೋಟ್ಗಳ ಸಹಾಯದಿಂದ ಸುರಕ್ಷಿತವಾಗಿ ಮೀನುಗಾರರು ಕಾರವಾರ …
Read More »ವಿಮೆ ಕಂಪನಿಗಳು ಎಸ್ಕೇಪ್, ಏಜೆಂಟ್ಗಳು ಕಂಗಾಲು: ನೂರಾರು ಕೋಟಿ ವಿಮೆ ಮಾಡಿಸಿದ ಬಡ ಜನರು ಕಣ್ಣೀರು
ಗದಗ ಜಿಲ್ಲೆಯಲ್ಲಿಯೇ 150 ಕೋಟಿಗೂ ಹೆಚ್ಚು ವಿಮೆ ಮಾಡಲಾಗಿದೆಯಂತೆ. ಬಡ ಜನ್ರು, ರೈತರು, ವ್ಯಾಪಾರಸ್ಥರು ಪಾಲಿಸಿ ಮಾಡಿಸಿದ್ದಾರೆ. ಅತ್ತ ಪಿಎಸಿಎಲ್, ಸಹನಾ, ಗರಿಮಾ, ಅಗ್ರೀಗೊಲ್ಡ್, ಸಾಯಿ ಪ್ರಸಾದ್ ಗ್ರೂಪ್ ಸಾಯಿ, ಸಮೃದ್ಧ ಜೀವನ, ಕಲ್ಪತರು, ಸಂಜೀವಿನಿ, ನವಜೀವನ, ಸೇರಿದಂತೆ 30 ಕ್ಕೂ ಹೆಚ್ಚು ಕಂಪನಿಗಳು ಬಾಗಿಲು ಹಾಕಿಕೊಂಡು ನಾಪತ್ತೆಯಾಗಿವೆ. ಅವರೆಲ್ಲರೂ ವಿಮೆ ಮಾಡಿಸಿದ ಏಜೆಂಟ್ಗಳು. ಹಣದಾಸೆಗೆ ಅಮಾಯಕ ಜನ್ರಿಗೆ ಸ್ವರ್ಗಕ್ಕೆ ಏಣಿ ತೋರಿಸಿ ಕೋಟ್ಯಾಂತರ ರೂಪಾಯಿ ವಿಮೆ ಮಾಡಿಸಿಬಿಟ್ಟಿದ್ದಾರೆ. ಆದರೆ …
Read More »Karnataka SSLC Exam Time Table 2024: ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಎಸ್ಎಸ್ಎಲ್ಸಿ (10ನೇ ತರಗತಿ) ಪರೀಕ್ಷೆಯ ಅಂತಿಮ ವೇಳಾಪಟ್ಟಿ(Karnataka SSLC Exam Time Table) ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಎಸ್ಎಸ್ಎಲ್ಸಿ ಟೈಮ್ ಟೇಬಲ್ ಸಹ ಬಿಡುಗಡೆ ಮಾಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿವೆ. ಇನ್ನು ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಪರೀಕ್ಷಾ ವೇಳಾಪಟ್ಟಿ ಹೀಗಿದೆ 25-03-2024: ಪ್ರಥಮ …
Read More »ಅಯೋಧ್ಯೆ ರಾಮಮಂದಿರಕ್ಕೆ ಧರ್ಮಸ್ಥಳದಿಂದ ಪೂಜಾ ಪರಿಕರಗಳು ರವಾನೆ
ಮಂಗಳೂರು,: ಜನವರಿ 22ರಂದು ಅಯೋಧ್ಯೆ(Ayodhya)ಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿದ್ದ ಬೆಳ್ಳಿ ಪೂಜಾ ಪರಿಕರಗಳನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ (Veerendra Heggade) ಅವರು ಪೇಜಾವರ ಶ್ರೀಗಳಿಗೆ ತಲುಪಿಸಲು ನೀಡಿದ್ದಾರೆ. ಜ. 22 ರ ಉದ್ಘಾಟನಾ ಸಮಾರಂಭಕ್ಕೆ ವಿವಿಐಪಿ ಅತಿಥಿಯಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನ ನೀಡಲಾಗಿದೆ. ಅಯೋಧ್ಯೆಗೆ ಏನಾದರೂ ಸಮರ್ಪಿಸಬೇಕು ಎನ್ನುವ ಆಸೆಯಿತ್ತು: ಡಾ.ಡಿ.ವೀರೇಂದ್ರ ಹೆಗ್ಗಡೆ ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಧರ್ಮಾಧಿಕಾರಿ …
Read More »ವಿದ್ಯಾ ಚೌಡೇಶ್ವರಿ ದೇವಿಗೆ ವಜ್ರ ಖಚಿತ ಕಿರೀಟ ಅರ್ಪಿಸಿದ ದೇವೇಗೌಡ, ಕಿರೀಟದ ಮೌಲ್ಯವೆಷ್ಟು ಗೊತ್ತಾ?
ತುಮಕೂರು,: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ (HD Devegowda) ಅವರು ವಿದ್ಯಾ ಚೌಡೇಶ್ವರಿ ದೇವಿಗೆ ವಜ್ರ ಖಚಿತ ಕಿರೀಟ ಅರ್ಪಿಸಿದ್ದಾರೆ. ವಿದ್ಯಾ ಚೌಡೇಶ್ವರಿ ದೇವಿ ದೇವಸ್ಥಾನ ತುಮಕೂರು (Tumakuru) ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ಹಂಗರಹಳ್ಳಿಯಲ್ಲಿದ್ದು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ ವಜ್ರ ಕೀರಿಟ ಅರ್ಪಿಸಿ ಭಕ್ತಿ ಮೆರೆದಿದ್ದಾರೆ. ಬಳಿಕ ಹೋಮದಲ್ಲಿ ಭಾಗಿಯಾದರು. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ, ಶ್ರೀ ಬಾಲ ಮಂಜುನಾಥ …
Read More »ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ವಿಚಾರ: ಅನುಮತಿ ಪಡೆದು ಕಟೌಟ್ ಹಾಕಿದ್ದರೂ FIR ದಾಖಲು
ಬೆಂಗಳೂರು, : ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಅನುಮತಿ ಪಡೆದು ಕಟೌಟ್ ಹಾಕಿದ್ದರೂ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್(FIR)ದಾಖಲು ಮಾಡಲಾಗಿದೆ. ಶಿವನಗರ ಯುವಕರ ಸಂಘದಿಂದ ಬೆಸ್ಕಾಂಗೆ ಹಣ ಪಾವತಿಸಿ, ಅನುಮತಿ ಪಡೆದು ಕಾರ್ಡ್ ರಸ್ತೆಯ ವಾರಿಯರ್ ಬೇಕರಿ ಬಳಿ ಬೃಹತ್ ಕಟೌಟ್ ಅಳವಡಿಸಲಾಗಿದೆ. ರಾಜಾಜಿನಗರ ಪೊಲೀಸರ ನಡೆಗೆ ಶಿವನಗರ ಯುವಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ರಾಮಜಪ ನಡೆಯುತ್ತಿದೆ. ಇದರ ನಡುವೆ ಕೋಲಾರದಲ್ಲಿ ಕಿಡಿಗೇಡಿಗಳು ಶ್ರೀರಾಮನ ಫ್ಲೆಕ್ಸ್ ಹರಿದು …
Read More »ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿದ ಮಹಿಳೆ!
ಬೆಳಗಾವಿ, (): ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ತಾಯಿ ಸರಸ್ವತಿ ಕಿರವೆ(27), ದೀಪಿಕಾ(7), ರೀತಿಕಾ(4) ಮೃತರು.ತಾಯಿ ಸರಸ್ವತಿ ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2016ರಲ್ಲಿ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಮದುವೆ ಆಗಿತ್ತು. ಆದ್ರೆ, ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿದ್ದಳು. …
Read More »