ಬೆಂಗಳೂರು : ನಗರದಲ್ಲಿ ಆಸ್ತಿ ತೆರಿಗೆ(Property Tax) ವಿಚಾರ ಹಾಗೂ ದುಬಾರಿ ದಂಡದ(Fine) ವಿಷಯವಾಗಿ ಸಾಕಷ್ಟು ದೂರುಗಳು ಬಂದಿದ್ದು 30″ x 40″ ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ(DCM) ತಿಳಿಸಿದ್ದಾರೆ. ಗಾಂಧಿನಗರದ ಶಿರೂರ್ ಉದ್ಯಾನವನದಲ್ಲಿ ಇಂದು (ಜ.16) ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ …
Read More »Yearly Archives: 2024
ಟೆಂಟ್ನಲ್ಲಿ 2 ಗೊಂಬೆ ಇಟ್ಟು ರಾಮ, ರಾಮ ಎನ್ನುತ್ತಿದ್ದರು: ಅಯೋಧ್ಯೆ ಬಗ್ಗೆ ಸಚಿವ ರಾಜಣ್ಣ ವಿವಾದಿತ ಹೇಳಿಕೆ
ತುಮಕೂರು, ಜನವರಿ 16: ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಅಯೋಧ್ಯೆ (Ayodhya)ರಾಮಲಲ್ಲಾ (Ram Lalla) ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಗ್ರಾಸವಾಗಿದೆ. ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. …
Read More »ಸಿಎಂ ಸ್ಥಾನದ ಬಗ್ಗೆ ಬಾಂಬ್ ಸಿಡಿಸಿದ ಯತೀಂದ್ರ: ಪಕ್ಷದಲ್ಲಿ ಹೆಚ್ಚಾಗಲಿದೆಯಾ ಗದ್ದುಗೆ ಗುದ್ದಾಟ?
ಹಾಸನ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಕಾಂಗ್ರೆಸ್ (Congress) ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ (CM Siddaramaiah) ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಅವರ ಪುತ್ರ ಯತೀಂದ್ರ (Yathindra) ಹೇಳಿದ್ದು ದೊಡ್ಡ ಬಾಂಬ್ ಸಿಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತಿದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರಲಿದ್ದಾರೆ. …
Read More »ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ?
ಬೆಂಗಳೂರು: ಎರಡು ದಶಕಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಡಾ ಚೋಳೇನಹಳ್ಳಿ ನಂಜಪ್ಪ ಮಂಜುನಾಥ್ (66) ಅವರು ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜನವರಿ 31ಕ್ಕೆ ಅವರ ಅಧಿಕಾರವಧಿ ಅಂತ್ಯವಾಗಲಿದೆ. ಮಂಜುನಾಥ್ ಅವರ ನಿರ್ದೇಶಕ ಸ್ಥಾನದ ಅವಧಿಯನ್ನು ಹಿಂದಿನ ಬಿಜೆಪಿ ಸರ್ಕಾರ …
Read More »ಸೈಬರ್ ವಂಚಕರ ಬಲೆಗೆ ಬಿದ್ದು 1.79 ಕೋಟಿ ರೂ. ಕಳೆದುಕೊಂಡ ವೈದ್ಯ
ಹುಬ್ಬಳ್ಳಿ: ಧಾರವಾಡದ 45 ವರ್ಷದ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದು, ಬರೋಬ್ಬರಿ 1.79 ಕೋಟಿ ರೂ. ಕಳೆದುಕೊಂಡಿದ್ದಾರೆ. ಎರಡು ತಿಂಗಳ ಹಿಂದೆ ವೈದ್ಯರಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ವಂಚನೆ ನಡೆದಿರುವ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಂಚಕ, ಹಣಕಾಸು ಸಲಹೆಗಾರನಂತೆ ನಟಿಸಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮೇಲೆ ಲಾಭ ನೀಡುವ ಭರವಸೆ ನೀಡುವ ಮೂಲಕ ವೈದ್ಯರನ್ನು ವಂಚಿಸಿದ್ದಾನೆ. ಗಣನೀಯ ಲಾಭ ಪಡೆಯಲು ಪ್ಲಾನೆಟ್ ಇಮೇಜ್ …
Read More »ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಯಾಗುತ್ತಿದ್ದು, ಮಂಗಳವಾರ 63 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 751ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ …
Read More »ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ, ವೈದ್ಯಕೀಯ ವೆಚ್ಚ 1,500 ರೂ.ಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ
ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು ಮತ್ತು ವೈದ್ಯಕೀಯ ವೆಚ್ಚವನ್ನು 1 ಸಾವಿರದಿಂದ 1,500 ರೂ.ಗೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ …
Read More »ಅಯೋಧ್ಯೆ ರಾಮಮಂದಿರವನ್ನು ರಾಜಕೀಯ ಜೂಜಾಟಕ್ಕೆ ಬಳಸಬಾರದು: ದೇವನೂರು ಮಹಾದೇವ
ಮೈಸೂರು: ದೇಶದ ಹಳ್ಳಿ ಹಳ್ಳಿಯಲ್ಲಿರುವ ರಾಮ ಮಂದಿರಗಳು ಸಾಮಾನ್ಯವಾಗಿ ಜೂಜಾಟದ ಕೇಂದ್ರಗಳಾದಿಜ್ಜು. ಅಯೋಧ್ಯೆಯಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ರಾಮಮಂದಿರವೂ ಜೂಜಾಟದ ಕೇಂದ್ರವಾಗಬಾರದು ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಹೇಳಿದರು. ಶ್ರಮಣ ಸಂಸ್ಕೃತಿ ಟ್ರಸ್ಟ್ ಮತ್ತು ಬಯಲು ಬಳಗ ಸಹಯೋಗದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ನಡೆದ 90ರ ನಂತರದ ಕರ್ನಾಟಕ ರಾಜ್ಯ ಮಟ್ಟದ ವಿಚಾರ ಕಮ್ಮಟ 2ನೇ ದಿನದ ಗೋಷ್ಠಿಯಲ್ಲಿ ಮಾತನಾಡಿದ …
Read More »ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ
ರಾಜ್ಯದ ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ನವದೆಹಲಿ: ರಾಜ್ಯದ ಪರಿಷತ್ ನ ಒಂದು ಸ್ಥಾನಕ್ಕೆ ಫೆ.16 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಗೆ ಮುನ್ನ ಪುಟ್ಟಣ್ಣ ಅವರು ವಿಧಾನಪರಿಷತ್ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಪುಟ್ಟಣ್ಣ ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ …
Read More »ಒಂದು ಕೆನ್ನೆಗೆ ಹೊಡೆದ್ರೆ ತಲೆಯನ್ನೇ ತೆಗೆಯುವ ಸಂತಾನದವರು ನಾವು:ಹೆಗಡೆ
ಕಾರವಾರ, : ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಾತನಾಡಿದ ಅವರು, ಒಂದು ಕೆನ್ನೆಗೆ ಹೊಡೆದ್ರೆ ಮತ್ತೊಂದು ಕೆನ್ನೆ ತೋರಿಸುವ ಸಂತಾನ ನಮ್ಮದಲ್ಲ. ಒಂದು ಕೆನ್ನೆಗೆ ಹೊಡೆದರೆ ನಿಮ್ಮ ತಲೆಯನ್ನೇ ತೆಗೆಯುವ ಸಂತಾನದವರು ನಾವು. ನಮ್ಮದು ವೀರ ಸಂತಾನ, ಹೇಡಿಗಳ ಸಂತಾನ ಅಲ್ಲ ಎಂದು ಗುಡುಗಿದರು. ನಮ್ಮಮ್ಮ ತನ್ನ ಎದೆಹಾಲು ಕುಡಿಸಿ ಬೆಳೆಸಿದ್ದಾರೆ, ಬೇವರ್ಸಿ ಹಾಲನ್ನು …
Read More »