ಬೆಂಗಳೂರಿನ ಉದ್ಯೋಗ ಮಾಡುತ್ತಿದ್ದ ಯುವಕನೋರ್ವ ಪ್ರೀತಿಸಿದ ಹುಡುಗಿ ನೋಡಲು ಬಂದಾಗ ಹುಡುಗಿಯ ಮನೆಯ ರೂಮ್ ನಲ್ಲಿ ಮಾಜಿ ಲವರ್ ಜೊತೆಗೆ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಮಾಜಿ ಲವರ್ ನಿಂದ ಮನಸೋ ಇಚ್ಚೆ ಚಾಕುವಿನಿಂದ ಇರಿದು ಹಲ್ಲೆ ಯತ್ನಿಸಿದ ಘಟನೆ ನಡೆದಿದ್ದು, ಬೆಳಗಾವಿಯ ಆಸ್ಪತ್ರೆಯ ಒಂದರಲ್ಲಿ ಹಲ್ಲೆಗೊಳಗಾದ ಪ್ರೇಮಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಆನಂದ ಕಳೆದ ಹದಿನೈದು ದಿನದಿಂದ ಶೋಭಾ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ಶೋಭಾಗೂ …
Read More »Yearly Archives: 2024
ಸ್ನೇಹಿತನನ್ನೇ ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ದೃಶ್ಯಂ ಸಿನಿಮಾ ರೀತಿ ಕಥೆ ಕಟ್ಟಿದ ರಾಜ್ ಕುಮಾರ್ ಮತ್ತು ಅನಿಲ್
ಡಿಸೆಂಬರ್ 28: ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ. ಅಲ್ಲಿನ ಬಡಾವಣೆಯ ಮಣ್ಣಿನಲ್ಲಿ ಪೊಲೀಸರು ಇಂಚಿಂಚೂ ಶೋಧ ನಡೆಸುತ್ತಿದ್ದರೆ, ಇತ್ತ ಕೆರೆ ನೀರು ಏರಿ ಮೇಲೆ ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿ ಎಲ್ಲಾ ಕಡೆ ಹುಡುಕಾಡಿದ ಪೊಲೀಸರಿಗೆ ಚೀಲದ ಮೂಟೆಯೊಂದು ಸಿಕ್ಕಿದೆ. ಮೂಟೆಯಲ್ಲಿ ಏನಿದೆ ಅಂತ ಕುತೂಹಲದಿಂದ ನೋಡಿದವರಿಗೆ ಕಾಣಿಸಿದ್ದು ಎರಡು ತಿಂಗಳ ಹಿಂದದೆ ಕೊಳೆತು ಅರೆ ಬರೆ ಬೆಂದಿರುವ ಮೃತದೇಹದ ಅಂಗಾಂಗಗಳು! ಈ …
Read More »ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬಿಜೆಪಿ ನಾಯಕರು, ಪೊಲೀಸ್ ಮಧ್ಯೆ ಹೈಡ್ರಾಮಾ
ಕಲಬುರಗಿ, ಡಿಸೆಂಬರ್ 28: ಬೀದರ್ ಮೂಲದ ಕಾಂಟ್ರಾಕ್ಟರ್ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಡೆತ್ನೋಟ್ನಲ್ಲಿ ಸುಪಾರಿ ಬಗ್ಗೆ ಉಲ್ಲೇಖವಾಗಿರುವುದು ಕಾಂಗ್ರೆಸ್-ಬಿಜೆಪಿ ರಾಜಕೀಯ ಜಿದ್ದಾಜಿದ್ದಿಗೆ ನಾಂದಿ ಹಾಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಕಾರ್ಪೋರೆಟರ್ ರಾಜು ಕಪನೂರ್ ಹಾಗೂ ಗ್ಯಾಂಗ್ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್, ಆಂದೋಲಾ ಸ್ವಾಮೀಜಿ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಂದು ಪಾಟೀಲ್, ಮಣಿಕಂಠ ಸೇರಿ ನಾಲ್ಕು ಜನರ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂಬ ಉಲ್ಲೇಖದ ಡೆತ್ನೋಟ್ ಕಲಬುರಗಿಯ …
Read More »ಗೋಕರ್ಣ, ಮುರುಡೇಶ್ವರದ ಪ್ರವಾಸಿ ತಾಣಗಳು ಈಗಾಗಲೇ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ.
ಕಾರವಾರ, ಡಿಸೆಂಬರ್ 28: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕ್ರಿಸ್ಮಸ್ ರಜೆ, ವಾರಾಂತ್ಯ, ಐಟಿ ಬಿಟಿ ಕಂಪನಿಗಳ ವರ್ಷಾಂತ್ಯದ ರಜೆಗಳು ಹೊಸ ವರ್ಷಾಚರಣೆಯ ಕಾರಣ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಗೋಕರ್ಣ, ಮುರುಡೇಶ್ವರದ ಪ್ರವಾಸಿ ತಾಣಗಳು ಈಗಾಗಲೇ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ. ಏತನ್ಮಧ್ಯೆ, ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಬೆಳಗ್ಗೆ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನಗಳು ಸುಮಾರು 1 ಕಿಲೋಮೀಟರ್ವರೆಗೆ ಸಾಲುಗಟ್ಟಿ …
Read More »ಬಾಣಂತಿಯರಿಗೆ ನೀಡಲಾಗಿದ್ದ ಐವಿ ದ್ರಾವಣ ಬಳಕೆಗೆ ಯೋಗ್ಯವಲ್ಲ, ವರದಿ
ರಾಯಚೂರು, ಡಿಸೆಂಬರ್ 28: ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ (Sindhanur Hospital) ನಾಲ್ವರು ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾಗಿರುವ IV ರಿಂಗರ್ ಲ್ಯಾಕ್ಟೇಟ್ ದ್ರಾವಣವನ್ನು ಪರೀಕ್ಷೆಗೆ ಒಳಪಡಿಸಿದ್ದು, ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣದಲ್ಲಿನ ಎಂಡೋ ಟಾಕ್ಸಿನ್ ಎಂಬ ಅಂಶ ಬಳಕೆಗೆ ಯೋಗ್ಯವಲ್ಲ (ನೆಗೆಟಿವ್) ಅಂತ ಬೆಂಗಳೂರು ಮತ್ತು ಹೈದರಾಬಾದ್ನ ಲ್ಯಾಬ್ಗಳ ವರದಿಯಲ್ಲಿ ಬಹಿರಂಗಗೊಂಡಿದೆ. ರಾಯಚೂರು ಜಿಲ್ಲಾಡಳಿತ ಒಟ್ಟು ಮೂರು ಲ್ಯಾಬ್ಗಳಿಗೆ ತಲಾ 6 IV ರಿಂಗರ್ ಲ್ಯಾಕ್ಟೇಟ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಗೊಣಗನೂರ ಗ್ರಾಮದ ಶ್ರೀ ಹನುಮಾನ ಮಂದಿರದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »ಹೊಟ್ಟೆನೋವೆಂದು ಆಸ್ಪತ್ರೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ
ಹಾವೇರಿ, ಡಿಸೆಂಬರ್ 27: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ (death) ಘಟನೆ ನಗರದ ವೀರಾಪುರ ಆಸ್ಪತ್ರೆಯಲ್ಲಿ ನಡೆದಿದೆ. ಬ್ಯಾಡಗಿ ಪಟ್ಟಣದ ಶಮಿನಾ ಬಾನು ಅರಳಿಕಟ್ಟಿ(23) ಮೃತ ಮಹಿಳೆ. ಮೆಡಿಸಿನ್ ಓವರ್ಡೋಸ್ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ವಿರುದ್ಧ ಮಹಿಳಾ ಪೋಷಕರಿಂದ ಪ್ರತಿಭಟನೆ ಮಾಡಲಾಗಿದೆ. ಬ್ಯಾಡಗಿಯ 23 ವರ್ಷದ ಮಹಿಳೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಾಗ ಹಾವೇರಿಯ ವೀರಾಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಆಸ್ಪತ್ರೆ …
Read More »ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಸಿ.ಎಸ್.ಷಡಕ್ಷರಿ ಮರು ಆಯ್ಕೆಯಾಗಿದ್ದಾರೆ. ರಾಜ್ಯ ಖಜಾಂಚಿಯಾಗಿ ಶಿವರುದ್ರಯ್ಯ ಗೆದ್ದರು. 2024-29ನೇ ಅವಧಿಯ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನಕ್ಕೆ ಇಂದು ಕಬ್ಬನ್ ಪಾರ್ಕ್ನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ಮತದಾನ ನಡೆಯಿತು. ಬಳಿಕ ನಡೆದ ಮತ ಎಣಿಕೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಕ್ಷರಿ 507 ಮತ ಪಡೆಯುವ ಮೂಲಕ ತಮ್ಮ …
Read More »ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ: ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ. ನ.16ರಂದು ಶಾಂತಕುಮಾರಿ ಎಂಬವರು ತಾವು ಬೆಂಗಳೂರಿಗೆ ಹೋಗಲು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡೆಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಡಿ.6ರಂದು ರತ್ನಮ್ಮ ಎಂಬವರು ತಾವು ಬೆಂಗಳೂರಿಗೆ ಹೋಗಲು ಬಸ್ ಹತ್ತುವಾಗ ಬ್ಯಾಗ್ನಲ್ಲಿದ್ದ …
Read More »ಬೈಕ್ ವ್ಹೀಲಿಂಗ್ ವೇಳೆ ಅಪಘಾತವಾಗಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ದೇವನಹಳ್ಳಿ: ಬೈಕ್ ವ್ಹೀಲಿಂಗ್ ಮಾಡುವ ವೇಳೆ ಎದುರಗಡೆಯಿಂದ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದು ಯುವಕರಿಬ್ಬರು ಮೃತಪಟ್ಟ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ಮನೋಜ್ (19) ಮತ್ತು ಹರ್ಭಾಜ್ (19) ಮೃತರು. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಗ್ಗೆ ಮಳೆಯ ನಡುವೆ ಇಬ್ಬರು ದ್ವಿಚಕ್ರ ವಾಹನದಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಈ ವೇಳೆ ಎದುರುಗಡೆ ಬರುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದು ತೀವ್ರ …
Read More »