Breaking News

Yearly Archives: 2024

ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋಗೆ ನಿರ್ಧಾರ

ಹೊಸಪೇಟೆ (ವಿಜಯನಗರ): ಕಬ್ಬು ಬೆಳೆಗಾರರಿಗೆ ಶೇ 9.50 ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು, ತೂಕದಲ್ಲಿ ಆಗುತ್ತಿರುವ ಮೋಸ ತಡೆಗಟ್ಟಬೇಕು ಮೊದಲಾದ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿ.12ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಚಲೋ ನಡೆಸಲು ಕರ್ನಾಟಕ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿದೆ.   ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್‌.ಎನ್.ಭರತ್‌ರಾಜ್‌ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಪ್ರತಿ ಟನ್‌ಗೆ ₹500 ಎಸ್‌ಎಪಿ ನಿಗದಿಪಡಿಸಬೇಕು, …

Read More »

ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ

ಬೆಳಗಾವಿ: ‘ಪ್ರಭಾಕರ ಕೋರೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ನಾಲ್ಕು ದಶಕಗಳಾಗಿವೆ. ಅವರ ನಿಷ್ಕಲ್ಮಶ ಸೇವೆ ದಕ್ಷಿಣ ಕರ್ನಾಟಕ ಭಾಗಕ್ಕೂ ಗೊತ್ತಾಗಬೇಕು. ಎಲ್ಲ ಶಾಸಕರು, ಜನಪ್ರತಿನಿಧಿಗಳ ನೇತೃತ್ವದಲ್ಲಿ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ಬೃಹತ್‌ ಸಮಾರಂಭ ಮಾಡಲಾಗುವುದು’ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.   ನಗರದಲ್ಲಿ ಗುರುವಾರ ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪಣಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಬಡವರಿಗಾಗಿ ಸರ್ಕಾರಗಳು ಎಷ್ಟು ಕಾಳಜಿ ತೋರುತ್ತವೆಯೋ, ಅಷ್ಟೇ ಕಾಳಜಿ ಕೆಎಲ್‌ಇ …

Read More »

ಎಸ್‌ಡಿಎ ಆತ್ಮಹತ್ಯೆ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಬೆಳಗಾವಿ: ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ಎಸ್‌ಡಿಎ ರುದ್ರಣ್ಣ ಯಡವನ್ಣವರ ಆತ್ಮಹತ್ಯೆ ಪ್ರಕರಣದಲ್ಲಿ, ತಹಶೀಲ್ದಾರ್‌ ಸೇರಿದಂತೆ ಮೂವರೂ ಆರೋಪಿಗಳಿಗೆ ಗುರುವಾರ ನಿರೀಕ್ಷಣಾ ಜಾಮೀನು ಸಿಕ್ಕಿದೆ. ತಹಶೀಲ್ದಾರ್‌ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ರುದ್ರಣ್ಣ ನವೆಂಬರ್‌ 5ರಂದು ತಹಶೀಲ್ದಾರ್‌ ಕೋಠಡಿಯಲ್ಲೇ ನೇಣಿಗೆ ಶರಣಾಗಿದ್ದರು. ತಮ್ಮ …

Read More »

ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ‌ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ.

ಬೆಂಗಳೂರು: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ‌ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಲೋಕಾಯುಕ್ತ ಎಸ್‌ಐಟಿ ತಂಡದಿಂದ ತನಿಖೆ ನಡೆಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಸಚಿವ ಹೆಚ್.ಕೆ ಪಾಟೀಲ್ ಅವರು, 10 ಗಣಿ ಕಂಪನಿಗಳ‌ವಿರುದ್ಧ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಎಸ್ ಐಟಿ ತನಿಖೆಗೆ ವಹಿಸಲು ನಿರ್ಧಾರ …

Read More »

ಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠಕ್ಕೆ ಕುಸಿದ ರೂಪಾಯಿ ಮೌಲ್ಯ

ಮುಂಬೈ, ನ.14- ಇಂದು ಬೆಳಿಗ್ಗೆ ಆರಂಭಿಕ ವಹಿವಾಟಿನಲ್ಲಿ ಅಮೆರಿಕ ಡಾಲರ್‌ ಎದುರು ರೂಪಾಯಿ 1 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 84.40 ಕ್ಕೆ ತಲುಪಿತು. ನಿರಂತರವಾಗಿ ವಿದೇಶಿ ನಿಧಿಯ ಹೊರ ಹರಿವು ಮತ್ತು ಹೂಡಿಕೆದಾರರಿಂದ ಬಲವಾದ ಡಾಲರ್‌ ಬೇಡಿಕೆಯಿಂದ ರೂಪಾಯಿ ತೂಗಿದೆ ಎಂದು ವಿಶ್ಲೇಷಿಸಲಾಗಿದೆ.   ಇಂಟರ್‌ಬ್ಯಾಂಕ್‌ ವಿದೇಶಿ ವಿನಿಮಯದಲ್ಲಿ, ರೂಪಾಯಿಯು ಗ್ರೀನ್‌ಬ್ಯಾಕ್‌ ವಿರುದ್ಧ 84.40 ಕ್ಕೆ ಪ್ರಾರಂಭವಾಯಿತು, ಅದರ ಹಿಂದಿನ ಮುಕ್ತಾಯಕ್ಕಿಂತ 1 ಪೈಸೆಯ ಕುಸಿತವನ್ನು ದಾಖಲಿಸಿದೆ. ಬುಧವಾರ, …

Read More »

ಶಾಸಕರಿಗೆ 50 ಕೋಟಿ ಆಫರ್ : ಸಿಎಂ ಹೇಳಿಕೆ ಸಮರ್ಥಿಸಿಕೊಂಡ ಪರಮೇಶ್ವರ್

ಬೆಂಗಳೂರು,ನ.14- ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಪ್ರತಿಯೊಬ್ಬ ಶಾಸಕರಿಗೂ 50 ಕೋಟಿ ರೂ.ಗಳ ಆಮಿಷ ಒಡ್ಡುತ್ತಿರುವುದಾಗಿ ಮುಖ್ಯಮಂತ್ರಿಯವರು ಹೇಳಿರುವುದರಲ್ಲಿ ಅರ್ಥ ಇದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸಮರ್ಥಿಸಿ ಕೊಂಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌‍ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸಲು ಎಲ್ಲಾ ಪ್ರಯತ್ನಗಳನ್ನೂ ಸತತವಾಗಿ ನಡೆಸುತ್ತಿವೆ. ಮುಡಾ ಪ್ರಕರಣದ ಆರೋಪ ಸೇರಿದಂತೆ ಎಲ್ಲಾ ಯತ್ನಗಳೂ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿಯೇ ನಡೆಯುತ್ತಿವೆ ಎಂದರು. ಈಗ ಶಾಸಕರಿಗೆ ಆಮಿಷವೊಡ್ಡಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿದ್ದಾರೆ. …

Read More »

ಇಂದು ಚಿನ್ನ, ಬೆಳ್ಳಿ ಬೆಲೆ ಭಾರೀ ಇಳಿಕೆ: ಬಂಗಾರ ಖರೀದಿ ಮಾಡುವವರಿಗೆ ಇವತ್ತೇ ಒಳ್ಳೇ ಟೈಮ್

ಬೆಂಗಳೂರು, ನವೆಂಬರ್ 14: ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಕಡಿಮೆಯಾಗಿದ್ದು, ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್ ಸಿಕ್ಕಿದೆ. ಬಂಗಾರದ ದರ ಇಂದು ಭಾರೀ ಇಳಿಕೆ ಕಂಡಿದ್ದು, ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಬಂಗಾರದ ದರ ರೂಪಾಯಿ 69,350 ಆಗಿದ್ದು, ರೂ.1,100 ಇಳಿಕೆಯಾಗಿದೆ.   ಚಿನ್ನದ ಬೆಲೆ ಇಂದು (ಗುರುವಾರ) ಗ್ರಾಮ್​ಗೆ 110 ರೂನಷ್ಟು ಕುಸಿತ ಕಂಡಿದೆ. ಅಪರಂಜಿ ಚಿನ್ನದ ಬೆಲೆ 120 ರೂನಷ್ಟು …

Read More »

ಆಕಸ್ಮಿಕ ಗುಂಡಿನ ದಾಳಿಯಿಂದ ಯುವಕನ ಸಾವು: ಎಸ್‌ಪಿ

ಬೆಳಗಾವಿ: ‘ಖಾನಾಪುರ ತಾಲ್ಲೂಕಿನ ಹಲಸಿ ಬಳಿ ವ್ಯಕ್ತಿಯೊಬ್ಬರು ಆಕಸ್ಮಿಕ ಗುಂಡಿನ ದಾಳಿಯಿಂದ ಮೃತಪಟ್ಟಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಈ ಪ್ರಕರಣದಲ್ಲಿ ಈವರೆಗೆ ಐವರನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದರು.   ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಕಸ್ಮಿಕ ಗುಂಡಿನ ದಾಳಿಗೆ ಕಾರಣವಾದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಹೊಂದಿರುವ ಪ್ರಕರಣವೂ ಕೊಲೆಗೆ ಸಮಾನವಾಗಿದೆ. ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದಕ್ಕಾಗಿ ಮತ್ತು ಆರೋಪಿಗಳು ನವಿಲುಗಳ ಬೇಟೆಯಾಡಿದ ಕಾರಣ ವನ್ಯಜೀವಿ ಸಂರಕ್ಷಣಾ …

Read More »

ರಿಯಲ್ ಎಸ್ಟೇಟ್ ಉದ್ಯಮಿ ದಂಪತಿ ಆತ್ಮಹತ್ಯೆ: 12 ಜನರ ವಿರುದ್ಧ FIR ದಾಖಲು

ಮಡಿಕೇರಿ: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ …

Read More »

ಕೋವಿಡ್​ ಹಗರಣದ ತನಿಖೆಗೆ SIT ರಚನೆ; ಯಡಿಯೂರಪ್ಪ, ಶ್ರೀರಾಮುಲುಗೆ ಈಗ ಎಸ್‌ ಐ ಟಿ ಸಂಕಷ್ಟ

ಬೆಂಗಳೂರು, ನವೆಂಬರ್‌ 14: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದ್ದ ಹಗರಣದ ತನಿಖೆಯನ್ನು ಈಗಿನ ಕಾಂಗ್ರೆಸ್ ಸರ್ಕಾರ ನಿವೃತ್ತ ನ್ಯಾಯಮೂರ್ತಿಯ ಮೂಲಕ ನಡೆಸಲು ತೀರ್ಮಾನಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋವಿಡ್ ಹಗರಣದ ತನಿಖೆಯನ್ನು ಎಸ್​ಐಟಿಗೆ ವಹಿಸಲು ಸಂಪುಟ ಅಸ್ತು ಎಂದಿದ್ದು, ಯಡಿಯೂರಪ್ಪ ಹಾಗೂ ಶ್ರೀರಾಮುಲುಗೆ ಎಸ್‌ ಐ ಟಿ ಸಂಕಷ್ಟ ಎದುರಾಗಿದೆ. ಸಚಿವ ಸಂಪುಟದ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಜೊತೆಗೆ ಕಾನೂನು ಸಚಿವ ಎಚ್.ಕೆ ಪಾಟೀಲ …

Read More »