Breaking News

Yearly Archives: 2024

ಮುದ್ದುಲಕ್ಷ್ಮಿ‌’ ನಟ ಚರಿತ್ ಬಾಳಪ್ಪ ಬಂಧನ

ಕಿರುತೆರೆ ನಟ ಚರಿತ್ ಬಾಳಪ್ಪ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಹಾಗಾಗಿ ಆರ್​ಆರ್ ನಗರ ಠಾಣೆಯ ಪೊಲೀಸರು ಅವರನ್ನು ಅರೆಸ್ಟ್​ ಮಾಡಿದ್ದಾರೆ. ಕನ್ನಡದ ‘ಮುದ್ದುಲಕ್ಷ್ಮಿ‌’ ಸೇರಿದಂತೆ ಹಲವು ಸೀರಿಯಲ್​ನಲ್ಲಿ ಚರಿತ್ ನಟಿಸಿದ್ದಾರೆ. ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ತನಗೆ ಪರಿಚಯವಿದ್ದ ಗೆಳತಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಆರೋಪ ಈಗ ಚರಿತ್ ಬಾಳಪ್ಪ ಮೇಲೆ ಎದುರಾಗಿದೆ. ಪ್ರೀತಿಸುತ್ತೇನೆ ಅಂತ ಹೇಳಿ ದೈಹಿಕ ಸಂಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಯುವತಿಯೊಬ್ಬರು …

Read More »

ರೈಲಿನಲ್ಲಿ 1 ಕೋಟಿ ರೂ. ಮೌಲ್ಯದ ಗಾಂಜಾ ಸರಬರಾಜು: ಆರೋಪಿಗಳು ಅರೆಸ್ಟ್​

ಬೆಂಗಳೂರು,: ರೈಲಿನಲ್ಲಿ (Train) ಕೆಜಿಗಟ್ಟಲೇ ಗಾಂಜಾ (Ganja) ಸರಬರಾಜು ಮಾಡುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಬೆಂಗಳೂರು ರೈಲ್ವೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರೆ. ಆರೋಪಿಗಳ ಬಳಿ ಇದ್ದ, ಬರೊಬ್ಬರಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅಲರ್ಟ್​ ಆಗಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಚೆಕ್​​ಪೋಸ್ಟ್​ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.ಹೀಗಾಗಿ, ಪೆಡ್ಲರ್​ಗಳು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಪೊಲೀಸ್ ಶ್ವಾನಕ್ಕೂ ವಾಸನೆ ಬಾರದ …

Read More »

ಟೀ ಕುಡಿಯಲು ಮನೆಗೆ ಆಹ್ವಾನಿಸಿ ಸುಲಿಗೆ ಮಾಡಿದ ಸುಂದರಿ ಅಂಡ್​​ ಟೀಂ:

ಬೆಂಗಳೂರು: ಪರಿಚಿತ ಮಹಿಳೆ ಕರೆದಳೆಂದು ಮನೆಗೆ ಹೋದ ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 57 ವರ್ಷದ ಸಿವಿಲ್ ಕಾಂಟ್ರಾಕ್ಟರ್ ಒಬ್ಬರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತೋಷ್, ಅಜಯ್ ಹಾಗೂ ಜಯರಾಜ್ ಎಂಬಾತನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ನಯನಾ ಎಂಬಾಕೆಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ದೂರುದಾರ ವ್ಯಕ್ತಿಗೆ 5 – 6 ತಿಂಗಳುಗಳ ಹಿಂದಷ್ಟೆ ಪರಿಚಯವಾಗಿದ್ದ ನಯನಾ ಆಗಾಗ ತನ್ನ ಮಗುವಿಗೆ …

Read More »

ಮನಮೋಹನ ಸಿಂಗ್​​​ ಅವರ ಬದುಕು ಒಂದು ರೀತಿ ಪವಾಡ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: “ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​ ಅವರ ನಿನ್ನೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಒಂದು ರೀತಿ ಅವರದ್ದು ಪವಾಡದ ಬದುಕಾಗಿತ್ತು. ದೇಶವನ್ನು ಆರ್ಥಿಕ ಮುಗ್ಗಟ್ಟಿನಿಂದ ಪಾರು ಮಾಡಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಪ್ರಧಾನಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಇವತ್ತಿನ‌ ಪಾಕಿಸ್ತಾನ ದೇಶದ ಕುಗ್ರಾಮವೊಂದರಲ್ಲಿ ಜನಿಸಿದ್ದರು. ಅಲ್ಲಿಂದ ದೇಶ ಅಷ್ಟೇ ಅಲ್ಲದೇ ಜಗತ್ತಿನ ಓರ್ವ ಪ್ರಸಿದ್ದ …

Read More »

ಹುಬ್ಬಳ್ಳಿ ಗ್ಯಾಸ್​ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡ‌ರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ …

Read More »

ಮನಮೋಹನ್ ಸಿಂಗ್ ಇನ್ನಿಲ್ಲ: ಬೆಳಗಾವಿಯಿಂದ ದೆಹಲಿಗೆ ಹೊರಟ ಕಾಂಗ್ರೆಸ್​ ನಾಯಕರು

ಬೆಳಗಾವಿ: ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್ (92) ಅವರು ನಿಧನರಾದ ಹಿನ್ನೆಲೆಯಲ್ಲಿ ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕಾಂಗ್ರೆಸ್​ನ ರಾಷ್ಟ್ರ ಹಾಗೂ ರಾಜ್ಯದ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ. ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಅಗಲಿದ ಆರ್ಥಿಕ ತಜ್ಞರಿಗೆ ಸಂತಾಸ ಸೂಚಿಸಿದರು. ಸಿಂಗ್ ಹೃದಯ, ಮನಸ್ಸು ಬಹಳ ವಿಶಾಲವಾದದ್ದು: ಸಂಸದ ಡಾ. ಶಶಿತರೂರ್​ ಮಾತನಾಡಿ, ”ಇದು ಅತ್ಯಂತ ದುಃಖದ ವಿಚಾರ. ಮನಮೋಹನ್​ ಸಿಂಗ್ ಅವರು ಹಲವು ವರ್ಷಗಳಿಂದ ನನಗೆ ಗೊತ್ತು. …

Read More »

ಹಾವೇರಿ: ಅನೈತಿಕ ಸಂಬಂಧ ಆರೋಪ: ವಿದ್ಯುತ್​ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ- ವ್ಯಕ್ತಿ ಸಾವು

ಹಾವೇರಿ: ಅನೈತಿಕ ಸಂಬಂಧ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಲವರು ಲೈಟ್ ಕಂಬಕ್ಕೆ ಕಟ್ಟಿಹಾಕಿ ಮನಬಂದಂತೆ ಥಳಿಸಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿರುವ ಪ್ರಕರಣ ಜಿಲ್ಲೆಯ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತನನ್ನು ಪ್ರಕಾಶ್ ಓಲೇಕಾರ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಕಾಶನನ್ನು ಲೈಟ್ ಕಂಬಕ್ಕೆ ಕಟ್ಟಿ ಮನ ಬಂದಂತೆ ಥಳಿಸಿದ್ದಾರೆ. ಅಲ್ಲದೇ, ಪ್ರಕಾಶ ಕೊರಳಿಗೆ ಚಪ್ಪಲಿ ಹಾರ ಹಾಕಿ, ಕಾಲಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಲಾಗಿದೆ. ಎಫ್​ಐಆರ್​ ವಿವರ: ”ಗುರುವಾರ …

Read More »

ಅನ್ಯ ರಾಜ್ಯಗಳಿಂದ ಸಾಗಿಸುತ್ತಿದ್ದ ₹86 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಜನರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ …

Read More »

ಜಪಾನ್ ಪ್ರಜೆಗೆ ಡಿಜಿಟಲ್ ಅರೆಸ್ಟ್: ₹35 ಲಕ್ಷ ಲೂಟಿ, ಬೆಂಗಳೂರಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ನಗರದಲ್ಲಿ ವಾಸವಾಗಿರುವ ಜಪಾನ್ ಮೂಲದ ಪ್ರಜೆಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆದರಿಸಿ 35.49 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಜಪಾನ್ ಮೂಲದ 59 ವರ್ಷದ ವ್ಯಕ್ತಿ ನೀಡಿರುವ ದೂರಿನ ಅನ್ವಯ ಆಗ್ನೇಯ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರುದಾರರಿಗೆ ಡಿಸೆಂಬರ್ 12ರಂದು ಟೆಲಿಫೋನ್ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾದ ಪ್ರತಿನಿಧಿಗಳ ಹೆಸರಿನಲ್ಲಿ ಕರೆ ಮಾಡಿದ್ದ ವಂಚಕರು, ‘ನಂಬರ್ ಬ್ಲಾಕ್ ಮಾಡುತ್ತಿರುವುದಾಗಿ’ ತಿಳಿಸಿದ್ದರು. ನಂತರ …

Read More »

ಒಂದೇ ದಿನದ ಅಂತರದಲ್ಲಿ ಮೂವರು ರೈಲಿಗೆ ಬಲಿ

ಬೆಂಗಳೂರು: ಒಂದೇ ದಿನ ಅಂತರದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವತಿ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಂಬಂಧ ಪ್ರತ್ಯೇಕ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ನಗರ ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಿನ್ನಿಪೇಟೆ ಗೇಟ್ ಬಳಿ ಹಳಿ ದಾಟುತ್ತಿದ್ದ ಇಬ್ಬರು ಯುವಕರು ಚಲಿಸುತ್ತಿದ್ದ ರೈಲಿಗೆ ಬಲಿಯಾದರೆ, ಮತ್ತೊಂದು ಘಟನೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಭರದಲ್ಲಿ ಕಾಲು ಜಾರಿ ಯುವತಿ ಸಾವನ್ನಪ್ಪಿದ್ದಾಳೆ. ಬುಧವಾರ ರಾತ್ರಿ …

Read More »