Breaking News

Daily Archives: ಜನವರಿ 29, 2025

ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ

ಮಂಗಳೂರು: 15 ವರ್ಷದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 55 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್.ಟಿ.ಎಸ್.ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನ 43 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. ಆರೋಪಿ 15 ವರ್ಷದ ಅಪ್ರಾಪ್ತ ಬಾಲಕಿಯ ಮನೆಗೆ ಹೆಚ್ಚಾಗಿ ಬಂದು ಹೋಗಿ ಮನೆಯವರೊಂದಿಗೆ ಆತ್ಮೀಯನಾಗಿದ್ದನು. ಬಾಲಕಿ ಮನೆಯವರು ಇಲ್ಲದ ವೇಳೆ ಮನೆಗೆ …

Read More »

ವಿಜಯೇಂದ್ರ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ: ಸಂಸದ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ವಿಜಯೇಂದ್ರ ವಿರುದ್ಧ ಮತ್ತೊಬ್ಬ ಮಾಜಿ ಸಚಿವ ಹಾಗೂ ಹಾಲಿ ಸಂಸದ ಡಾ. ಕೆ. ಸುಧಾಕರ್ ಬಹಿರಂಗವಾಗಿಯೇ ಗುಡುಗಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್, …

Read More »

ಮಹಾಕುಂಭ ಮೇಳ – ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ 30 ಜನರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

ಪ್ರಯಾಗ್​ರಾಜ್(ಉತ್ತರ ಪ್ರದೇಶ)/ಬೆಳಗಾವಿ: ಪವಿತ್ರ ಮಹಾಕುಂಭ ಮೇಳ ನಡೆಯುತ್ತಿರುವ ಇಲ್ಲಿನ ತ್ರಿವೇಣಿ ಸಂಗಮದ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 30 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ ಹಾಗೂ 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಡಿಐಜಿ ವೈಭವ್ ಕೃಷ್ಣ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. 90 ಜನರನ್ನು ಆಸ್ಪತ್ರೆಗೆ ಕರೆತರಲಾಗಿದೆ. 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 25 ಮೃತರನ್ನು ಗುರುತಿಸಲಾಗಿದೆ. ಭಾರೀ ಜನಸಂದಣಿಯಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇನ್ನೂ …

Read More »

ಸಂಸದ ಜಗದೀಶ್​ ಶೆಟ್ಟರ್​, ಸಚಿವ ಕೃಷ್ಣ ಬೈರೇಗೌಡ ಹಾಗೂ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರ್ಕಾರ ಪ್ರಯಾಗ್​ರಾಜ್ ಕುಂಭಮೇಳ ದುರುಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ, ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಕಾಸಸೌಧದ ಕಚೇರಿಯಲ್ಲಿ ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಪ್ರಯಾಗ್​ರಾಜ್​ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ …

Read More »

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು: ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಮೈಸೂರು ಅರಣ್ಯ ಭವನದಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಕಾಡಿನಂಚಿನಲ್ಲಿ ಬಿದಿರು ಬೆಳೆಸುವುದು ಮತ್ತು ಅರಣ್ಯದೊಳಗಿನ ನೀರು ಗುಂಡಿಗಳು …

Read More »

23 ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಬಿಜೆಪಿ

ಬೆಂಗಳೂರು : ಕರ್ನಾಟಕ ರಾಜ್ಯ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಿ, ಇಂದು ಜಿಲ್ಲಾ ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಈ ಕೆಳಕಂಡ ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. 1. ಮೈಸೂರು ನಗರ – ಎಲ್. ನಾಗೇಂದ್ರ 2. ಚಾಮರಾಜನಗರ – ಸಿ.ಎಸ್. …

Read More »

ಮಹಾಕುಂಭ ಮೇಳದಲ್ಲಿ ತೊಂದರೆಯಲ್ಲಿ‌ ಸಿಲುಕಿದವರು ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು. ಅದಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ ಎಂದು ಬೆಳಗಾವಿ ಡಿಸಿ ತಿಳಿಸಿದ್ದಾರೆ.

ಬೆಳಗಾವಿ: ಪ್ರಯಾಗ್‌ರಾಜ್ ಮಹಾಕುಂಭ ಮೇಳದಲ್ಲಿ ಜರುಗಿದ ಕಾಲ್ತುಳಿತ ಪ್ರಕರಣದ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ ಸ್ಪಷ್ಟನೆ ನೀಡಿದ್ದು, ”ಗಾಯಾಳುಗಳ ಕುರಿತು ಮಾಹಿತಿ ಸಿಕ್ಕಿಲ್ಲ. ಆದರೆ, ತೊಂದರೆಯಲ್ಲಿ ಸಿಲುಕಿದವರ ರಕ್ಷಣೆಗೆ ನಾವು ಸಿದ್ಧರಿದ್ದೇವೆ” ಎಂದರು. ಮಹಾಕುಂಭ ಮೇಳದಲ್ಲಿ ತಮ್ಮವರು ತಪ್ಪಿಸಿಕೊಂಡಿರುವ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ್ದ ಬೆಳಗಾವಿಯ ಮಹಿಳೆ ಸರೋಜಿನಿ ಅವರು, “ನಾವು ಎರಡು ಬಸ್​ಗಳಲ್ಲಿ 60 ಜನ ಮಹಾಕುಂಭ ಮೇಳಕ್ಕೆ ಬಂದಿದ್ದೇವೆ. ಇದ್ದಕ್ಕಿದ್ದಂತೆ ಕಾಲ್ತುಳಿತ ಉಂಟಾಯಿತು. ನಮ್ಮ ಜೊತೆ ಬಂದರಲ್ಲಿ …

Read More »

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ

ಬೆಂಗಳೂರು : ಭೂ ದಾಖಲೆಗಳ ರಕ್ಷಣೆಗೆ ಹಾಗೂ ವಂಚಕರಿಂದ ದುರುಪಯೋಗ ಆಗದಂತೆ, ದಾಖಲೆ ತಿದ್ದಲು ಅವಕಾಶ ಆಗದಂತೆ “ಭೂ ಸುರಕ್ಷಾ” ಪರಿಣಾಮಕಾರಿಯಾಗಿ ಜಾರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಈಗಾಗಲೇ 8 ಕೋಟಿ ಮೂಲ ದಾಖಲೆಗಳ ಕಂಪ್ಯೂಟರೀಕರಣವಾಗಿದ್ದು, ಖದೀಮರು ತಿದ್ದಲು ಅವಕಾಶ ಆಗದಂತೆ ದಾಖಲೆಗಳಿಗೆ ಡಿಜಿಟಲ್ ಭದ್ರತೆ ಒದಗಿಸಲಾಗಿದೆ …

Read More »

ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ

ಬೆಂಗಳೂರು : ದ್ವಿಚಕ್ರ ವಾಹನ ಕಾರಿಗೆ ಟಚ್ ಆಗಿದ್ದಕ್ಕೆ ಯುವಕನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜನವರಿ 9ರಂದು ಸುಬ್ರಹ್ಮಣ್ಯ ನಗರ ಠಾಣೆ ವ್ಯಾಪ್ತಿಯ ಮಿಲ್ಕ್ ಕಾಲೋನಿ ರಸ್ತೆಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಚಾಲಕ ಸೇರಿದಂತೆ ಮೂವರಿಂದ ಹಲ್ಲೆಗೊಳಗಾದ ಭರತ್ (25) ಎಂಬ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತಾನು ರಿಕವರಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದು, ಜನವರಿ 9ರಂದು ರಾತ್ರಿ ಕೆಲಸ …

Read More »

ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ

ಬೆಂಗಳೂರು: “ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ, ತೊಂದರೆ ನೀಡುತ್ತಿರುವ ಕುರಿತು ಪೊಲೀಸರಿಗೆ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್​ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೂರು ಬಂದ ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಸುಮೋಟೊ ದಾಖಲಿಸುವಂತೆಯೂ ತಿಳಿಸಲಾಗಿದೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ತಡೆಯಲು ಕಾನೂನು ರೂಪಿಸಲಾಗುತ್ತಿದೆ. ಕಾನೂನು ಸಚಿವರು ಹಾಗೂ ಕಂದಾಯ …

Read More »