ಬೆಳಗಾವಿ: ಜಿಲ್ಲೆಯ ಕಾಕತಿ ಸಮೀಪದ ದಾಬಾ ಬಳಿ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಬಾವಿಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದಿದ್ದ ಸರೋಜಾ, ಸಬ್ಸಿಡಿ ಯೋಜನೆಯ ಅಸರೆಗಾಗಿ ಸಾಲದ ಅರ್ಧ ಹಣವನ್ನು ಯಮನಾಪುರದ ಹೊಳೆಪ್ಪ ದಡ್ಡಿ ಎಂಬ ವ್ಯಕ್ತಿಗೆ ನೀಡಿದ್ದರು. ಎಲ್ಲ ಕಂತು ತಾನೇ ಪಾವತಿಸುವ ಭರವಸೆ ನೀಡಿದ್ದ ಹೊಳೆಪ್ಪ ಮೋಸಮಾಡಿದ …
Read More »Monthly Archives: ಜನವರಿ 2025
ರಾಜ್ಯ ಒಂದು ಮಹಿಳೆಯರಿಗೆ ಕೊಟ್ಟು ಇನ್ನೊಂದು ಕಡೆ ಕಸಿದುಕೊಳ್ಳತಾ ಇದೆ- ಬಸವರಾಜ ಬೊಮ್ಮಾಯ.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದರು ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಸರ್ಕಾರ ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಸಾಕಷ್ಟು ಜನರು ಕಿರುಕುಳದಿಂದ ಆತ್ಮಹತ್ಯ ಮಾಡಿಕೊಳ್ತಾ ಇದ್ದಾರೆ ಮಹಿಳೆಯರು ಮಾಂಗಲ್ಯ ಮಾರುತ್ತಾ ಇದ್ದಾರೆ ಎಂದ ಅವರುಒಂದು ಕಡೆ ಮಹಿಳೆಯರ ಬಗ್ಗೆ …
Read More »ಬಿಜೆಪಿ ಭಿನ್ನಮತ ಆದಷ್ಟು ಬೇಗ ಸರಿಪಡಿಸಲು ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಒತ್ತಾಯ.
ವಿಜಯಪುರ: ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು ಅನ್ನೋ ಪರಿಸ್ಥಿತಿ ನಿರ್ಮಾಣವಾಗಿದೆ. ಅತ್ತ ವಿಜಯೇಂದ್ರ ಹಾಗೂ ಶಾಸಕ ಯತ್ನಾಳ ನಡುವಿನ ಭಿನ್ನಮತ ಗೊಂದಲ ಸೃಷ್ಟಿಸಿದೆ. ಇನ್ನೂ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವಿನ ಭಿನ್ನಮತ ರಾಜ್ಯ ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ವಿಜಯೇಂದ್ರ ನಡುವಿನ ಭಿನ್ನಮತದ ಕುರಿತು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆದಷ್ಟು ಬೇಗನೆ ಗೊಂದಲ ಪರಿಹರಿಸಿ …
Read More »ವಿವಿಧ ಪ್ರಕರಣಗಳನ್ನು ಭೇದಿಸಿದ ಪೊಲೀಸರು: ಭರ್ಜರಿ ಕಾರ್ಯಾಚರಣೆ.
ವಿಜಯಪುರ: ಭರ್ಜರಿ ಕಾರ್ಯಾಚರಣೆ ನಡೆಸಿರುವ ವಿಜಯಪುರ ಸಿಇಎನ್ ಪೊಲೀಸರು ಆನಲೈನ್ ಮೂಲಕ ವಂಚಿಸಲಾಗಿದ್ದ ನಾಲ್ಕು ಪ್ರಕರಣಗಳನ್ನು ಭೇದಿಸಿದ್ದು, ರೂ. 1 ಕೋ. 47 ಲಕ್ಷ 76 ಸಾವಿರದ 53 ನಗದನ್ನು ವಂಚನೆಗೆ ಒಳಗಾದ ಜನರಿಗೆ ಮರಳಿಸಿದ್ದಾರೆ. ಅಲ್ಲದೇ, ಈ ಪ್ರಕರಣ ಸಂಬಂಧ ಗುಜರಾತ ರಾಜ್ಯದ ಸೂರತ ಮೂಲದ ಮೂವರು ಮತ್ತು ತೆಲಂಗಾಣ ಮೂಲದ ಓರ್ವ ಸೇರಿದಂತೆ ಒಟ್ಟು ನಾಲ್ಕು ಜನ ಆರೋಪಿಗಳಿಗೆ ನೊಟೀಸ್ ಜಾರಿ ಮಾಡಿದ್ದಾರೆ. ಈ ಕುರಿತು ಇಲ್ಲಿದೆ …
Read More »ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಿ – ರಮೇಶ ಕತ್ತಿ.
ಹುಕ್ಕೇರಿ : ಜನೇವರಿ 25 ರಂದು ಹುಕ್ಕೇರಿ ನಗರದಲ್ಲಿ ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳ ಬೇಕು ಎಂದು ಮಾಜಿ ಸಂಸದ ರಮೇಶ ಕತ್ತಿ ಹೇಳಿದರು. ಅವರು ಕಾರ್ಯಕ್ರಮ ಜರಗಲಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶಿಲಿಸಿ ನಡೆಸಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡುತ್ತಾ ಬಹುದಿನಗಳ ಬೇಡಿಕೆ ಯಾದ ಅಂಬೇಡ್ಕರ್ ರವರ ಪ್ರತಿಮೆ ಅನಾವರಣ ಜನೇವರಿ 25 ರಂದು ಜರುಗಲಿದ್ದು ಕಾರಣ ತಾಲೂಕಿನ ಜನತೆ …
Read More »ಮಶೀನ್ ಟೂಲ್ ತಯಾರಿಕೆಯಲ್ಲಿ ರಾಜ್ಯದ ಸಾಧನೆ ದೊಡ್ಡದು: ಎಂ ಬಿ ಪಾಟೀಲ.
ಬೆಂಗಳೂರು: ದೇಶದ ಮಶೀನ್ ಟೂಲ್ ಉತ್ಪಾದನೆಯಲ್ಲಿ ರಾಜ್ಯವು ಶೇಕಡ 52ರಷ್ಟು ಪಾಲು ಹೊಂದಿದ್ದು, ತಯಾರಿಕೆ ವಲಯದಲ್ಲಿ ಕರ್ನಾಟಕವು ನಾವೀನ್ಯತೆ ಮತ್ತು ಉತ್ಕೃಷ್ಟತೆಗಳಿಗೆ ಇನ್ನೊಂದು ಹೆಸರಾಗಿದೆ. ಹೀಗಾಗಿ, ಸರಕಾರವು ಇವುಗಳ ಬಲವರ್ಧನೆಗೆ ನಿರ್ದಿಷ್ಟ ವಿಷನ್ ಗ್ರೂಪ್ ರಚಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಏರ್ಪಾಡಾಗಿರುವ ಮಶೀನ್ ಟೂಲ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಾಣಿಜ್ಯ ಪ್ರದರ್ಶನದ ಮೇಳ ಇಮ್ಟೆಕ್ಸ್-2025ರ …
Read More »ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು.
ಮೈಸೂರು ; ಅಪಘಾತದಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದು ಉದಾರಿಯಾಗಿದ್ದಾರೆ. ಮೈಸೂರಿನ ಬಂಡಿಪಾಳ್ಯ ನಿವಾಸಿ ಸುರೇಶ್ ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಕಣ್ಣು, ಹೃದಯ, ಕಿಡ್ನಿ ದಾನ ಮಾಡುವ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಿದ್ದಾರೆ. ಮೈಸೂರಿನ ರಿಂಗ್ ರಸ್ತೆಯಲ್ಲಿ ಐದು ದಿನಗಳ ಹಿಂದೆ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಾಯಗೊಂಡಿದ್ದ ಸುರೇಶ್, ಖಾಸಗಿ …
Read More »ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಎಪಿಎಂಸಿ ಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ; ಸಿಎಂ ಭರವಸೆ
ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ …
Read More »ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ.
ಬೆಂಗಳೂರು : ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯುವ ಮತ್ತು ಸಿರಿಧಾನ್ಯ -2025 ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಡಿಸಿಎಂ ಡಿ. ಕೆ. ಶಿವಕುಮಾರ್, ಜಾರ್ಖಂಡ್ ರಾಜ್ಯದ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕೆ, ಸಚಿವರಾದ ಚೆಲುವರಾಯಸ್ವಾಮಿ, ಕೃಷ್ಣ ಭೈರೇಗೌಡ, ಭೈರತಿ ಸುರೇಶ್ ಉಪಸ್ಥಿತರಿದ್ದರು. ನಂತರ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.
Read More »ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ
ಬೆಂಗಳೂರು: ರಾಜ್ಯದಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೂಡಿಕೆ ಮಾಡಿರುವ ಜಾಗತಿಕ ಶ್ರೇಣಿಯ ಸ್ಯಾಫ್ರಾನ್ ಸಮೂಹದ ಅಧ್ಯಕ್ಷ ರಾಸ್ ಮ್ಯಾಕಲ್ನೆಸ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದರು. ಈ ಸೌಜನ್ಯದ ಭೇಟಿ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕೂಡ ಉಪಸ್ಥಿತರಿದ್ದರು. ಭೇಟಿಯ ವೇಳೆಯಲ್ಲಿ ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ …
Read More »