Breaking News

Monthly Archives: ಜನವರಿ 2025

ಬೆಳಗಾವಿಯಲ್ಲಿ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದ ಖರ್ಗೆ: ಬಿಜೆಪಿ ವಿರುದ್ಧ ಗುಡುಗಿದ ಸಿಎಂ

ಬೆಳಗಾವಿ: ಸುವರ್ಣ ವಿಧಾನಸೌಧ ಉತ್ತರಪ್ರವೇಶ ದ್ವಾರದಲ್ಲಿ 25 ಅಡಿ ಎತ್ತರದ ಮಹಾತ್ಮ ಗಾಂಧೀಜಿ ಕಂಚಿನ ಪ್ರತಿಮೆಯನ್ನು ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಸೌಧದ ಮುಂಭಾಗದಲ್ಲಿ ಬಣ್ಣ ಬಣ್ಣದ ಸಿಡಿಮದ್ದುಗಳನ್ನು ಸಿಡಿಸಿ ಸಂಭ್ರಮಿಸಲಾಯಿತು. ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ‌ ಖರ್ಗೆ, “ಗಾಂಧೀಜಿಯವರ ಪ್ರತಿಮೆ ಸ್ಥಾಪನೆಯಿಂದ ಈ ಭಾಗಕ್ಕೆ ಮಾತ್ರವಲ್ಲ, ಇಡೀ‌ ಕರ್ನಾಟಕಕ್ಕೆ‌ ಗೌರವ ತಂದಿದೆ. ಸಂವಿಧಾನ ಹಾಗೂ ಪ್ರಜಾತಂತ್ರ ಇಲ್ಲದಿದ್ದರೆ‌ ದೇಶದಲ್ಲಿ ಅರಾಜಕತೆ …

Read More »

ಅಂಜನಾದ್ರಿ ದೇಗುಲದ ಕಾಣಿಕೆಯ ಪೆಟ್ಟಿಗೆಯಲ್ಲಿ ರೂ. 61.64 ಲಕ್ಷ ಮೊತ್ತದ ನಗದು ಸಂಗ್ರಹವಾಗಿದೆ.

ಗಂಗಾವತಿ (ಕೊಪ್ಪಳ): ತಾಲೂಕಿನ ಪ್ರಮುಖ ಧಾರ್ಮಿಕ ತಾಣವಾಗಿರುವ ಅಂಜನಾದ್ರಿ ದೇಗುಲದ ಕಾಣಿಕೆಯ ಪೆಟ್ಟಿಗೆಯಲ್ಲಿನ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆದಿದ್ದು, ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿದೆ. ಕಳೆದ ನವಂಬರ್​ನಲ್ಲಿ ನಡೆದ ಹುಂಡಿ ಎಣಿಕೆಯ ಸಂದರ್ಭದಲ್ಲಿ ಸಂಗ್ರಹವಾಗಿದ್ದ 36 ಲಕ್ಷ ರೂಪಾಯಿ ಇದುವರೆಗಿನ ದಾಖಲೆಯಾಗಿತ್ತು. ಆದರೆ ಈ ಬಾರಿ ಎಲ್ಲಾ ದಾಖಲೆ ಮುರಿದು ಬರೋಬ್ಬರಿ ಅರ್ಧ ಕೋಟಿ ಅಂದರೆ ರೂ. 61.64 ಲಕ್ಷ ಮೊತ್ತದ ನಗದು ಸಂಗ್ರಹವಾಗಿದೆ. ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಹೆಚ್ …

Read More »

ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಅವರಿಗೆ ಸ್ವಾಗತ

ಬೆಳಗಾವಿ: ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನದ ಉದ್ಘಾಟನೆಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ವಿಶೇಷ ವಿಮಾನದಲ್ಲಿ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ಸೇರಿ ಮತ್ತಿತರ ನಾಯಕರು ಸ್ವಾಗತಿಸಿದರು. ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲ್ಲ …

Read More »

ಜಿಮ್ಸ್ ನಿರ್ದೇಶಕ, ಅಧೀಕ್ಷಕಿ ನಡುವೆ ಅಧಿಕಾರಕ್ಕಾಗಿ ಪೈಟ್

ಗದಗ, ಜನವರಿ 21: ಜಿಮ್ಸ್ ಆಸ್ಪತ್ರೆ ಗದಗ ಜಿಲ್ಲೆ ಅಷ್ಟೇ ಅಲ್ಲ ಹಾವೇರಿ, ಕೊಪ್ಪಳ, ಬಾಗಲಕೋಟೆಯ ಗಡಿ ಭಾಗದ ಸಾವಿರಾರು ರೋಗಿಗಳ ಚಿಕಿತ್ಸಾ ತಾಣ. ಆದರೆ, ಇತ್ತೀಚಿಗೆ ಈ ಆಸ್ಪತ್ರೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಆರೋಪ ಕೇಳಿಬಂದಿದೆ. ಯಾಕಂದರೆ, ಮುಖ್ಯ ವೈದ್ಯಾಧಿಕಾರಿಗಳ ಕಿತ್ತಾಟದಿಂದ ಇಡೀ ಆಸ್ಪತ್ರೆಯ ಆಡಳಿತ ವ್ಯವಸ್ಥೆ ಹಳಿ ತಪ್ಪಿದ ರೈಲು ಬಂಡಿಯಂತಾಗಿದೆ. ಜಿಮ್ಸ್ ನಿರ್ದೇಶಕ ಬಸವರಾಜ್ ಬೊಮ್ಮನಹಳ್ಳಿ ಹಾಗೂ ಜಿಮ್ಸ್ ಅಧೀಕ್ಷಕಿ ರೇಖಾ ಸೋನಾವನೆ ನಡುವೆ ಕಳೆದ ಎರಡು …

Read More »

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯರನ್ನು ಯಾಕೆ ಟಾರ್ಗೆಟ್ ? ಶಿವಲಿಂಗೇಗೌಡ

ಬೆಂಗಳೂರು: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಅರಸೀಕೆರೆ ಶಾಸಕ ಕೆಎಂ ಶಿವಲಿಂಗೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ತನಗೆ ಮಾಹಿತಿಯಿಲ್ಲ ಎಂದು ಹೇಳಿದರು. ಮುಡಾ ಹಗರಣದ ಬಗ್ಗೆ ಮಾತಾಡಿದ ಅವರು ಮಾಧ್ಯಮಗಳಲ್ಲಿ ಸಿದ್ದರಾಮಯ್ಯನವರ ಆಸ್ತಿ ಈಡಿ ಜಪ್ತು ಮಾಡಿದೆ ಅಂತ ಬರುತ್ತಿದೆ? ಅವರ ಆಸ್ತಿ ಜಪ್ತಿ ಆಗಿದೆಯಾ? ಅವರ 3.14 ಎಕರೆ ಜಮೀನು ಬದಲಿಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ 50:50 ಅನುಪಾತದಲ್ಲಿ 14 ಸೈಟುಗಳನ್ನು ನೀಡಿದ್ದು …

Read More »

ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ

ಬೆಂಗಳೂರು, (ಜನವರಿ 20): ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ. ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ …

Read More »

ಅಪ್ಪನ ಸಾವಿನ ಸದ್ದಿ ಮುಚ್ಚಿಟ್ಟು ಮಗಳ ಮದ್ವೆ

ಚಿಕ್ಕಮಗಳೂರು, (ಜನವರಿ 20): ಆಸ್ಪತ್ರೆಯ ಚಿತಾಗಾರದಲ್ಲಿ ಅಪ್ಪನ ಶವ. ಮದುವೆ ಮಂಟಪದಲ್ಲಿ ಮಗಳ ವಿವಾಹೋತ್ಸವ ನಡೆದಿದೆ. ಹೌದು…ಮದುವೆ ನಿಲ್ಲಬಾರದು ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸಾವಿನ ಸುದ್ದಿ ಮುಚ್ಚಿಟ್ಟಿದ್ದು, ಅತ್ತ ಅಪ್ಪ ಸಾವನ್ನಪ್ಪಿದ ವಿಷಯ ತಿಳಿಯದೆ ಈ ಮಗಳು ಖುಷಿ ಖಷಿಯಿಂದಲೇ ಸಪ್ತಪದಿ ತುಳಿದಿದ್ದಾಳೆ. ಈ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ನಡೆದಿದ್ದು, ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದಿದೆ. ಚಂದ್ರು ಎನ್ನುವರೇ ಮಗಳ ಮದುವೆಯನ್ನು ಕಣ್ತುಂಬಿಕೊಳ್ಳದೇ ರಸ್ತೆ …

Read More »

ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ ವಂಚನೆ

ನೆಲಮಂಗಲ, ಜನವರಿ 20: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ನೆರೆ ಮನೆಯ ವ್ಯಕ್ತಿಯಿಂದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವಂತಹ (fraud) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೇರೋಹಳ್ಳಿಯ ಸೌಭಾಗ್ಯ ಎಂಬುವವರಿಗೆ ವಂಚಿಸಿದ್ದ ಬಿಬಿಎಂಪಿ ಕಸದ ಗುತ್ತಿಗೆದಾರ ಹರೀಶ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಹರೀಶ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಿಮ್ಮ ಬಳಿ ಇರುವ ಚಿನ್ನಾಭರಣ ಒತ್ತೆ ಇಟ್ಟು ಹಣ ತಂದು ಕೊಡಿ …

Read More »

1924ರ ಕಾಂಗ್ರೆಸ್​ಗೂ ಇಂದಿನ ಕಾಂಗ್ರೆಸ್ ಪಕ್ಷಕ್ಕೂ ಎಲ್ಲಿಯ ಸಂಬಂಧ: ಪ್ರಲ್ಹಾದ್ ಜೋಶಿ

ಬೆಂಗಳೂರು, ಜನವರಿ 20: ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ನೆನಪಿಗಾಗಿ ನಾಳೆ ಕಾಂಗ್ರೆಸ್​ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದೆ. ಈ ಕುರಿತಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಅಸಮಾಧಾನ ವ್ಯಕ್ತಪಡಿಸಿದ್ದಾರೆ. 1924ರ ಕಾಂಗ್ರೆಸ್​ಗೂ ಇಂದಿನ ಕಾಂಗ್ರೆಸ್ ಪಕ್ಷಕ್ಕೂ ಎಲ್ಲಿಯ ಸಂಬಂಧ ಎಂದು ವಾಗ್ದಾಳಿ ಮಾಡಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಲ್ಹಾದ್​ ಜೋಶಿ, ನಾಳೆ ಕಾಂಗ್ರೆಸ್ (ಐ) ಪಕ್ಷವು …

Read More »

ವಿಜಯೇಂದ್ರ ಹೇಳಿಕೆಗಳಿಗೆ ಬಸವಣ್ಣನ ವಚನಗಳ ರೂಪದಲ್ಲಿ ಪ್ರತಿಕ್ರಿಯೆ ನೀಡಿದ ಬಸನಗೌಡ ಯತ್ನಾಳ್

ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ತಾನು ಅಡುವ ಮಾತಗಳನ್ನು ಬಸವಣ್ಣನ ವಚನಗಳ ಹಾಗೆ ಹೇಳಲಾರಂಭಿಸಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಯತ್ನಾಳ್ ಇಟ್ಟ ಹೆಜ್ಜೆಯನ್ನು ಹಿಂತೆಗೆಯಲ್ಲ ಎಂದು ವಿಜಯೇಂದ್ರ ಹೇಳಿರುವುದಕ್ಕೆ, ನಿಮ್ಮ ತಂದೆ ಸಿಎಂ ಆಗಿದ್ದಾಗ ಖೊಟ್ಟಿ ಸಹಿ ಮಾಡಿದ್ದು ನಿನಲ್ಲವೇ ವಿಜಯೇಂದ್ರ? ನೀನು ಮಾಡಿರುವ ಎಲ್ಲ ಹಲ್ಕಾ ಕೆಲಸಗಳಿಗೆ ಇಟ್ಟ ಹೆಜ್ಜೆ ಮುಂದಿಡದೆ ಮನೆಗೆ ಹೋಗು, ಕೂಡಲಸಂಗಮದೇವಾ ಎಂದು ಹೇಳುತ್ತಾರೆ. …

Read More »