Breaking News

Monthly Archives: ಜನವರಿ 2025

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ

ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಗೌರವವಂದನೆ ಸ್ವೀಕರಿಸಿ ಮಾತನಾಡಿದೆ. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮ ಅಧಿಕಾರವನ್ನು ಕಲ್ಪಿಸಿದ ದಿನ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ಭವ್ಯ ಭಾರತಕ್ಕೆ ದಾರಿದೀಪವಾಗಿದೆ. ಜಗತ್ತಿನ ಪ್ರಬಲ ರಾಷ್ಟ್ರವಾಗಿ ಭಾರತ ಹೊರಹೊಮ್ಮಲು ಅದು ಬುನಾದಿಯಾಗಿದೆ. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗಾಗಿ ವರ್ಷವಿಡೀ ಕಾರ್ಯಕ್ರಮಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ಪ್ರಕಟಿಸಿದೆ. …

Read More »

ಗಣರಾಜ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಸಂದೇಶ

ಬೆಂಗಳೂರು: “ಸಂವಿಧಾನ ಜಾರಿಗೊಳಿಸಿ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಘೋಷಣೆ ಮಾಡಿಕೊಂಡ 75 ವರ್ಷಗಳ ನಂತರವೂ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಹೋರಾಟ ನಡೆಸಬೇಕಾದ ವಿಷಾದನೀಯ ಸ್ಥಿತಿಯಲ್ಲಿ ನಾವು ಗಣರಾಜ್ಯೋತ್ಸವ ಆಚರಿಸುತ್ತಿದ್ದೇವೆ” ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಗಣರಾಜ್ಯೋತ್ಸವ ಸಂದೇಶದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. “ಇದು ಗತವೈಭವದಲ್ಲಿ ಮೈಮರೆಯದೆ ವರ್ತಮಾನದ ವಾಸ್ತವಗಳಿಗೆ ಮುಖಾಮುಖಿಯಾಗುವ ಕಾಲ. ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗಗಳೆಂಬ ಸಂವಿಧಾನದ ಮೂರು ಮುಖ್ಯ ಆಧಾರ ಸ್ಥಂಭಗಳು ಭದ್ರವಾಗಿದ್ದು, ಆರೋಗ್ಯಕರವಾಗಿ ಕಾರ್ಯನಿರ್ವಹಿಸಿದರೆ ಮಾತ್ರ …

Read More »

ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯೊಂದು ಮನೆ ಜಪ್ತಿ ಮಾಡಿ, ಏಳು ತಿಂಗಳ ಗರ್ಭಿಣಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿರುವ ಆರೋಪ ಕೇಳಿಬಂದಿದೆ.

ಧಾರವಾಡ: ಮೈಕ್ರೋ ಫೈನಾನ್ಸ್​ಗಳ ವಿರುದ್ಧ ಕಿರುಕುಳ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ, ಕಾನೂನು ಮೀರಿ ಸಾಲ ವಸೂಲಾತಿಗೆ ಇಳಿದ ಸಂಸ್ಥೆಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ನಡುವೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗಿ ಗ್ರಾಮದಲ್ಲಿ 7 ತಿಂಗಳ ಗರ್ಭಿಣಿ ಡೀನಾ ಫೀಲಿಪ್ ಅವ ರನ್ನು ಮನೆಯಿಂದ ಹೊರಹಾಕಿರುವ ಆರೋಪ ಆರೋಪ ಕೇಳಿಬಂದಿದೆ. ”ಫೈನಾನ್ಸ್​ ಕಂಪನಿಯೊಂದರಲ್ಲಿ ಸಾಲ ಪಡೆದುಕೊಂಡಿದ್ದೆವು. ಪ್ರತಿ ತಿಂಗಳಿಗೊಮ್ಮೆ ಹಣ …

Read More »

ಪಂಚ ಗ್ಯಾರಂಟಿ ಯೋಜನೆಗಳ ಮಧ್ಯೆ ಆರ್ಥಿಕ ಪ್ರಗತಿಯಲ್ಲಿ ರಾಜ್ಯ ಮುಂದು: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಕರ್ನಾಟಕ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿ ಬಳಿಕ ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು. ನಂತರ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. …

Read More »

ಸುತ್ತೂರು ಶ್ರೀಗಳಿಂದ ಸುತ್ತೂರು ಶ್ರೀ ಕ್ಷೇತ್ರದ ಮಹಾ ದಾಸೋಹಕ್ಕೆ ಚಾಲನೆ

ಮೈಸೂರು: ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳು ಶನಿವಾರ ಚಾಲನೆ ನೀಡಿದರು. ಬೃಹತ್​ ಅಡುಗೆ ಮನೆಯಲ್ಲಿ ಅಡುಗೆ ಒಲೆಗಳಿಗೆ ಪೂಜೆ ಸಲ್ಲಿಸಿ, ದೊಡ್ಡ ದೊಡ್ಡ ಪಾತ್ರೆಗಳಿಗೆ ಅಡುಗೆ ಪದಾರ್ಥ ಹಾಕುವ ಮೂಲಕ ಚಾಲನೆ ನೀಡಲಾಯಿತು. ವಿಶೇಷವೆಂದ್ರೆ ದೊಡ್ಡ ದೊಡ್ಡ ಅಡುಗೆ ಒಲೆಗಳಿಗೆ ಹಚ್ಚುವ ಬೆಂಕಿ ಒಂದು ವಾರಗಳ ಕಾಲ ಆರದೇ ಇರುವುದು ತ್ರಿಕಾಲ ಮಹಾ ದಾಸೋಹದ ವಿಶೇಷ. ಸುತ್ತೂರು ಜಾತ್ರೆ ಮಹಾ ದಾಸೋಹಕ್ಕೆ 1 ಸಾವಿರ …

Read More »

ಇನ್​ಸ್ಟಾಗ್ರಾಮ್​ನಲ್ಲಿ ಯುವತಿಯ ಫೋಟೋಗೆ ಲೈಕ್, ಪ್ರೇಯಸಿಯಿಂದ ತರಾಟೆ: ಪ್ರಿಯಕರ ಆತ್ಮಹತ್ಯೆಗೆ ಶರಣು

ಮಂಗಳೂರು, ಜನವರಿ 25: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದ ಫೋಸ್ಟ್​ ಮಾಡುವ ಫೋಟೋಗಳಿಗೆ ಹೆಚ್ಚಿನ ಲೈಕ್​ ಮತ್ತು ಕಾಮೆಂಟ್​​ ಬರಲಿ ಎಂಬ ಉದ್ವಿಗ್ನತೆಯಲ್ಲಿರುತ್ತಾರೆ. ಆದರೆ, ಇದೇ ಉದ್ವಿಗ್ನತೆ ಎಷ್ಟೋ ಜನರ ಪ್ರಾಣ ಕಸಿದುಕೊಂಡಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ‌ (Bantwal) ತಾಲೂಕಿನ ಪೂಂಜಾಲಕಟ್ಟೆ ಕುಕ್ಕಿಪ್ಪಾಡಿಯ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ.ಮೃತ ಚೇತನ್​ಗೆ ಕುಂದಾಪುರದ ಚೈತನ್ಯ …

Read More »

ತೊಗಲುಗೊಂಬೆಯಾಟದ ಹಿರಿಯ ಕಲಾವಿದೆ 96 ವರ್ಷದ ಭೀಮವ್ವ ಶಿಳ್ಳೇಕ್ಯಾತಗೆ ಒಲಿದ ಪದ್ಮಶ್ರೀ

ಕೊಪ್ಪಳ, : ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಗೆ (Padma Shri) ತೊಗಲುಗೊಂಬೆ ಆಟದ ಹಿರಿಯ ಕಲಾವಿದೆಯಾಗಿರುವ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಳ್ಳಪ್ಪ ಶಿಳ್ಳೇಕ್ಯಾತ ಅವರಿಗೆ ಒಲಿದು ಬಂದಿದೆ. ಭೀಮವ್ವ ಅನಕ್ಷರಸ್ಥೆಯಾಗಿದ್ದರು ಬಾಲ್ಯದಿಂದಲೇ  ತೊಗಲುಗೊಂಬೆಯಾಟ‌ ಕಲೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ. ಇಂದಿನ‌ ಆಧುನಿಕ ಯುಗದಲ್ಲಿ ಅನೇಕ‌ ಗ್ರಾಮೀಣ ಕ್ರೀಡೆಗಳು‌ ಮಾಯವಾಗುತ್ತಿವೆ. ಆಧುನಿಕ ಗಾಜೆಟ್​ಗಳಲ್ಲಿ ಬ್ಯೂಸಿಯಾಗಿರುವ ಇಂದಿನ‌ ಯುಗದ ಯುವಜನತೆಗೆ ಗ್ರಾಮೀಣ ಕ್ರೀಡೆಗಳ ಮಹತ್ವದ ಅರಿವು ಕಡಿಮೆ. ಆದರೆ ಕೊಪ್ಪಳ ತಾಲೂಕಿನ ಮೋರನಾಳ …

Read More »

ಇದು ಈ ಬಾರಿಯ ಗೂಗಲ್​-ಡೂಡಲ್

ಇಡೀ ದೇಶ ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಗೂಗಲ್ ಕೂಡ ಈ ವಿಶೇಷ ದಿನವನ್ನು ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಆಚರಿಸುತ್ತಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಗೂಗಲ್ ವಿಶೇಷ ಡೂಡಲ್ ಮಾಡಿದೆ. ಈ ಡೂಡಲ್ ಭಾರತೀಯ ವನ್ಯಜೀವಿ ಥೀಮ್ ಅನ್ನು ಆಧರಿಸಿದೆ. ಭಾರತದ ಶ್ರೀಮಂತ ಜೀವವೈವಿಧ್ಯವನ್ನು ಡೂಡಲ್‌ನಲ್ಲಿ ತೋರಿಸಲಾಗಿದೆ. ಭಾರತದ ವೈವಿಧ್ಯಮಯ ವನ್ಯಜೀವಿಗಳಿಂದ ಸ್ಫೂರ್ತಿ ಪಡೆದ ಇಂದಿನ ಗೂಗಲ್ ಡೂಡಲ್ ದೇಶದ ವಿವಿಧ ಪ್ರದೇಶಗಳನ್ನು ಪ್ರತಿನಿಧಿಸುವ ಪ್ರಾಣಿಗಳನ್ನು ಪ್ರದರ್ಶಿಸುತ್ತದೆ. ಇದು ಉತ್ತರದಲ್ಲಿ …

Read More »

ವೃದ್ಧರು ಮತ್ತು ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸಿದ್ರೇ… ಮೈಕ್ರೋ ಫೈನಾನ್ಸಗಳ ವಿರುದ್ಧ ಕ್ರಮ; ಸಿಎಂ ಸಿದ್ಧರಾಮಯ್ಯ

  ಮೈಕ್ರೋ ಫೈನಾನ್ಸ ಮತ್ತು ಆರ್.ಬಿ.ಐ ಅಧಿಕಾರಿಗಳೊಂದಿಗೆ ಸಭೆ ವೃದ್ಧರು ಮತ್ತು ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸಿದ್ರೇ… ಮೈಕ್ರೋ ಫೈನಾನ್ಸಗಳ ವಿರುದ್ಧ ಕ್ರಮ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ತಮ್ಮ ವ್ಯವಹಾರವನ್ನು ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಪರವಾನಿಗೆ ಪಡೆದ ಮೈಕ್ರೋ ಫೈನಾನ್ಸಗಳಿಂದಲೇ, ಸಾಲಗಾರ ವೃದ್ಧರು ಮತ್ತು ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸಿದರೇ, ಜನರ ರಕ್ಷಣೆಗಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿ.ಎಂ. ಸಿದ್ಧರಾಮಯ್ಯ …

Read More »

ಮುಡಾ ನಿವೇಶನ ಹಂಚಿಕೆ ಹಗರಣದ ಮಧ್ಯಂತರ ತನಿಖಾ ವರದಿ ಸೋಮವಾರ ಲೋಕಾಯುಕ್ತ ಅಧಿಕಾರಿಗಳು ಧಾರವಾಡ ಹೈಕೋರ್ಟ್ ಪೀಠಕ್ಕೆ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಸೋಮವಾರ ಸಲ್ಲಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಪ್ರಭಾವದಿಂದ ಪತ್ನಿ ಪಾರ್ವತಿ ಮುಡಾದಲ್ಲಿ 14 ಬದಲಿ ನಿವೇಶನ ಪಡೆದುಕೊಂಡಿರುವ ಆರೋಪ ಸಂಬಂಧ ತನಿಖೆ ನಡಸುತ್ತಿರುವ ಮೈಸೂರು ಲೋಕಾಯುಕ್ತ ಎಸ್ಪಿ ಹಾಗೂ ತನಿಖಾಧಿಕಾರಿ ಟಿ.ಜೆ.ಉದೇಶ್ ಅವರು ಸೋಮವಾರ ಧಾರವಾಡ ಹೈಕೋರ್ಟ್​​​ಗೆ ವರದಿ ಸಲ್ಲಿಸಲಿದ್ದಾರೆ. …

Read More »