Breaking News

Daily Archives: ಫೆಬ್ರವರಿ 3, 2025

ಕರ್ನಾಟಕದಲ್ಲಿಂದು ಒಂದೇ ದಿನ 7 ಆತ್ಮಹತ್ಯೆ

ಬೆಂಗಳೂರು, (ಫೆಬ್ರವರಿ 03): ಕರ್ನಾಟಕದಲ್ಲಿಂದು (ಫೆಬ್ರವರಿ 03) ಒಂದೇ ದಿನ ಬರೋಬ್ಬರಿ ಏಳು ಆತ್ಮಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪೈಕಿ ಐದು ಜನರು ಸಾಲಬಾಧೆಯಿಂದ ಸಾವಿನ ಹಾದಿ ತುಳಿದಿದ್ದರೆ,. ಸಾಲಬಾಧೆಯಿಂದ ಚಿಕ್ಕಬಳ್ಳಾಪುರದಲ್ಲಿ ಇಬ್ಬರು, ಹಾಸನ-1 , ಬೀದರ್-1, ದಾವಣಗೆರೆ ಜಿಲ್ಲೆಯಲ್ಲಿ ಓರ್ವ ರೈತ ಸಾವಿನ ಹಾದಿ ತುಳಿದಿದ್ದಾರೆ. ಇನ್ನು ತುಮಕೂರಿನ ವ್ಯಕ್ತಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಇನ್ನು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಗೆಳೆಯ ಮೋಸ ಮಾಡಿದ್ದಾನೆಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ …

Read More »

ದೆಹಲಿಯಲ್ಲಿ ಯತ್ನಾಳ್ ಬಣದಿಂದ ಅಂತಿಮ ಹಂತದ ಕದನ

ನವದೆಹಲಿ, (ಫೆಬ್ರವರಿ 03): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕಿತ್ತಾಟದಿಂದ ಆರಂಭವಾದ ಬಿಜೆಪಿ ಬಣ ಬಡಿದಾಟ ಜಿಲ್ಲಾಧ್ಯಕ್ಷರ ನೇಮಕದವರೆಗೂ ಬಂದು ನಿಂತಿದೆ. ವಿಜಯೇಂದ್ರ ವಿರುದ್ಧ ಸಮರ ಸಾರಿರೋ ಯತ್ನಾಳ್ ಬಣ ದಿನಕ್ಕೊಂದು ಬಾಣ ಪ್ರಯೋಗಿಸ್ತಿದೆ. ಇಷ್ಟು ದಿನ ರಾಜ್ಯದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದ ಯತ್ನಾಳ್ ಆ್ಯಂಡ್ ಟೀಂ ದೆಹಲಿಗೆ ಶಿಫ್ಟ್ ಆಗಿದ್ದು, ವಿಜಯೇಂದ್ರ ವಿರುದ್ಧ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಹಂತದ ಪ್ರಹಾರಕ್ಕೆ ಮುಂದಾಗಿದೆ. ಈಗಾಗಲೇ ಯತ್ನಾಳ್ …

Read More »

ದಳಪತಿ ವಿಜಯ್ ಕೊನೆ ಸಿನಿಮಾ ‘ಜನನಾಯಗನ್’ ಓವರ್ ಸೀಸ್ ಹಕ್ಕಿಗೆ PHF film ಸಾರಥ್ಯ

ದಾಖಲೆ‌ ಅಂದರೆ ದಳಪತಿ.. ದಳಪತಿ ಅಂದರೆ ದಾಖಲೆ ಅನ್ನೋದು ಪ್ರತಿ ಸಿನಿಮಾದಲ್ಲಿಯೂ ಸಾಬೀತು ಆಗುತ್ತಲೆ‌ ಇದೆ. ಅದರಲೂ ರಾಜಕೀಯ ಅಖಾಡಕ್ಕೆ ಇಳಿದಿರುವ ವಿಜಯ್ ವೃತ್ತಿಜೀವನದ ಕೊನೆ ಸಿನಿಮಾ ಜನನಾಯಗನ್ ಪ್ರಭೆ ಎಲ್ಲೆಡೆ ಹಬ್ಬಿದೆ. ಬಿಡುಗಡೆಗೂ‌‌ ಮೊದಲೇ ಈ ಚಿತ್ರ ಹಲವು ರೆಕಾರ್ಡ್ ಬರೆಯುತ್ತಿದೆ. ವಿಜಯ್ರ ಕೊನೆಯ ಚಿತ್ರ ಇದಾಗಿರುವ ಕಾರಣ ಭಾರಿ ದೊಡ್ಡ ಮಟ್ಟದಲ್ಲಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಅತಿ ದೊಡ್ಡ ಬಜೆಟ್ ನಲ್ಲಿ ಜನನಾಯಗನ್ ಸಿನಿಮಾವನ್ನು ಕರ್ನಾಟಕದ ಹೆಮ್ಮೆಯ …

Read More »

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಖಂಡ್ರೆ ಸೂಚನೆ.

ಬೆಂಗಳೂರು : ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ …

Read More »

ಬೆಳಗಾವಿ ಕೆ.ಎಲ್.ಇ ಆಸ್ಪತ್ರೆ ಎದುರಿನ ಬೈಕ್ ಕದಿಯುತ್ತಿದ್ದ ಕಳ್ಳ ಅಂದರ್; ಒಟ್ಟು 4 ಬೈಕ್ ವಶ.

ಬೆಳಗಾವಿ:  ಎಪಿಎಂಸಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿನ ಕೆಎಲ್ಇ ಆಸ್ಪತ್ರೆಯ ಮುಂದುಗಡೆ ನಿಲಿಸಲಾಗಿರುವ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನ ಪತ್ತೆ ಹಚ್ಚಿ ಆತನಿಂದ ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎಪಿಎಮ್ ಸಿಯ ಪೋಲಿಸ್ ಇನ್ಸ್ಪೆಕ್ಟರ್ ಯು.ಎಸ್.ಅವಟಿ ಅವರು ತನ್ನ ತಂಡದೊಂದಿಗೆ ಕಾಕತಿಯ ಅಂಬೇಡ್ಕರಗಲ್ಲಿಯ ಮೋಹಮ್ಮದ ಶಾಯಿದ ಅಬ್ದುಲ್ ಹಮೀದ್ ಮುಲ್ಲಾ ಈತನನ್ನು ಪತ್ತೆ ಹಂಚಿ ತನಿಖೆ ನಡೆಸಿ ಕಳ್ಳತನ ಮಾಡಿದ ಎರಡು ಹಿರೋ ಹೊಂಡಾ ಸ್ಪೆಂಡರ್, ಒಂದು ಹೋಂಡಾ ಆಕ್ಟಿವಾ, ಒಂದು …

Read More »

ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ನಗರದಲ್ಲಿ ಟ್ರಾಫಿಕ್ ಪೊಲೀಸರು ಜಾಗೃತಿ ಮೂಡಿಸಿದರು.

ಬೆಳಗಾವಿ: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ‌ಧರಿಸಿಕೊಂಡು ವಾಹನ ಚಲಾಯಿಸಬೇಕೆಂದು ನಗರದ ಚನ್ನಮ್ಮ ವೃತ್ತದಲ್ಲಿ ನಗರ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿದರು. ನಗರದಲ್ಲಿ ರಸ್ತೆ ಅಪಘಾತದಲ್ಲಿ ವಾಹನ ಸವಾರರು ಹೆಲ್ಮೆಟ್ ಧರಸಿದೆ ಮೃತಪಟ್ಟ ಘಟನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಮೊದಲು ಹೆಲ್ಮೆಟ್ ‌ಧರಿಸದ ಪೊಲೀಸ್ ಸಿಬ್ಬಂದಿಗಳಿಗೆ ದಂಡ ವಿಧಿಸಿದ್ದ ಸಂಚಾರ ಪೊಲೀಸರು ಈಗ ಸಾರ್ವಜನಿಕರು ಹೆಲ್ಮೆಟ್ ಧರಿಸದವರ ವಿರುದ್ಧ ವಿಶೇಷ ಅಭಿಯಾನ …

Read More »

ಸಮುದಾಯ ಭವನ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ.

ಮುತ್ನಾಳ ಗ್ರಾಮದ ಶ್ರೀ 1008 ಚಂದ್ರಪ್ರಭು ತೀರ್ಥಂಕರ ಜಿನ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಮುದಾಯ ಭವನ ಹಾಗೂ ಜೀರ್ಣೋದ್ಧಾರ ಕಾರ್ಯಕ್ರಮಗಳನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಬೆಳಗ್ಗೆ ಉದ್ಘಾಟಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸಮುದಾಯ ಭವನ ನಿರ್ಮಾಣಗೊಂಡಿದೆ. ಕ್ಷೇತ್ರದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕೆಲಸ-ಕಾರ್ಯಗಳಿಗೆ ಸಹೋದರಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೊದಲ ಪ್ರಾಶಸ್ತ್ಯ ನೀಡುತ್ತಿದ್ದು, ಸರ್ವ …

Read More »

ಭವಿಷ್ಯ ಹೇಳುತ್ತಿರುವ ಆರ್. ಅಶೋಕ ಬಳಿ ನಾನು ಕೂಡ ಭವಿಷ್ಯ ಕೇಳಲು ಹೋಗಿ ಬರ್ತೇನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ನನಗೂ ಜ್ಯೋತಿಷ್ಯ ಶಾಸ್ತ್ರದ ಚಟವಿದೆ. ಆರ್. ಅಶೋಕ ಬೋರ್ಡ ಹಾಕಿಕೊಂಡಿದ್ದಾರೆ. ಸ್ವಲ್ಪ ಸಮಯ ತೆಗೆದುಕೊಂಡು ತಾವೂ ಕೂಡ ಅವರ ಬಳಿ ಜ್ಯೋತಿಷ್ಯ ಕೇಳಿ ಬರುತ್ತೇನೆಂದು ಸಿಎಂ ಬದಲಾವಣೆ ಭವಿಷ್ಯ ನುಡಿದಿರುವ ವಿಪಕ್ಷ ನಾಯಕ ಆರ್. ಅಶೋಕ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದರು. ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ನೀಡಿರುವ ಹೇಳಿಕೆ ಟಾಂಗ್ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನಗೂ ಜ್ಯೋತಿಷ್ಯ ಶಾಸ್ತ್ರದ …

Read More »

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

ಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಅವರು ಸಮರ್ಥಿಸಿಕೊಂಡ ಗೃಹ ಸಚಿವ ಜಿ. ಪರಮೇಶ್ವರ ಅವರು ನಮ್ಮ ಕೆಲಸ ಕಾರ್ಯಗಳನ್ನು ಪರಿಶೀಲಿಸಲು ವಾಚಡಾಗ್ ಸ್ಥಾನವನ್ನು ನೀಡಿದ್ದೇವೆ. ನಮ್ಮ ತಪ್ಪುಗಳಿಗೆ ಸಕಾರಾತ್ಮಕ ಸಲಹೆಗಳನ್ನು ನೀಡಿದರೇ ಅವುಗಳನ್ನು ಸ್ವೀಕರಿಸುತ್ತೇವೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂದ ಕೆಪಿಸಿಸಿ …

Read More »

ದೇವಸ್ಥಾನ ಬಂದ ಬಗ್ಗೆ ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ ಶೇರ್ ಮಾಡಬೇಡಿ

ಉಗರಗೋಳ: ‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಯಲ್ಲಮ್ಮ ದೇವಸ್ಥಾನವನ್ನು ಎರಡ್ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆ. ದೇವಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಅದು ಶುದ್ಧಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ. ಯಲ್ಲಮ್ಮ ದೇವಸ್ಥಾನದಲ್ಲಿ ಎಂದಿನಂತೆ, ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. …

Read More »