Breaking News

Daily Archives: ಫೆಬ್ರವರಿ 21, 2025

ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಟಾಪಟಿ ಪ್ರಕರಣ ವಿಚಾರವನ್ನು ಪರಿಷತ್ ವಿಷಯ ನೀತಿ ನಿರೂಪಣಾ ಸಮಿತಿಗೆ

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಅವಾಚ್ಯ ಶಬ್ದ ಬಳಕೆ ಆರೋಪ ಪ್ರಕರಣದ ಕುರಿತಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದರು. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಟಾಪಟಿ ಪ್ರಕರಣ ವಿಚಾರವನ್ನು ಪರಿಷತ್ ವಿಷಯ ನೀತಿ ನಿರೂಪಣಾ ಸಮಿತಿಗೆ ಕಳಿಸಲಾಗಿದೆ. ಇನ್ನೂ ಅಲ್ಲಿಂದ ಯಾವುದೇ ವರದಿಯ ಮಾಹಿತಿ ಬಂದಿಲ್ಲ. ಆದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇನೆ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ …

Read More »

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ

ಬೆಳಗಾವಿ ಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿ ಆಚರಣೆ ಬೆಳಗಾವಿಯಲ್ಲಿ ತ್ರಿಪದಿ ಕವಿ ಸರ್ವಜ್ಞ ಜಯಂತಿ ಆಚರಣೆ ಜಿಲ್ಲಾಡಳಿತ, ಜಿ.ಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಾಲಿಕೆಯಿಂದ ಕಾರ್ಯಕ್ರಮ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಗಣ್ಯರು ಸರ್ವಜ್ಞರ ತ್ರಿಪದಿಗಳು ತ್ರಿಕಾಲ ಸತ್ಯ-ಡಾ.ಗುರುದೇವಿ ಹುಲೆಪ್ಪನವರ ಮಠ ಗುರುವಾರ ಬೆಳಗಾವಿಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಆಚರಿಸಲಾಯಿತು …

Read More »

ಹುಬ್ಬಳ್ಳಿ-ಗೋವಾ ರೈಲು ಸಂಪರ್ಕ ಕಡಿತ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್

ಹುಬ್ಬಳ್ಳಿ: ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹಾಗೂ ಗೋವಾ ನಡುವೆ ರೈಲು ಸಂಪರ್ಕ ಭಾಗಶಃ ಕಡಿತಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್​​​ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್.ರಾಮನಗೌಡರ ತಿಳಿಸಿದ್ದಾರೆ. ರೈಲ್ವೆ ಹಳಿ ಕಾಮಗಾರಿ ಕಾರಣದಿಂದಾಗಿ ಹುಬ್ಬಳ್ಳಿ ಹಾಗೂ ವಾಸ್ಕೋಡಗಾಮಾ ನಡುವೆ ಸಂಚರಿಸುವ ಕೆಲವು ರೈಲುಗಳ ಸಂಚಾರವನ್ನು ಏಪ್ರಿಲ್ ಮಧ್ಯಭಾಗದವರೆಗೆ ಭಾಗಶಃ ರದ್ದುಗೊಳಿಸಲಾಗಿದೆ. ಅವುಗಳ ಪೈಕಿ ಶಾಲಿಮಾರ್​​​ನಿಂದ ವಾಸ್ಕೋಡಿಗಾಮಾಕ್ಕೆ ಹೋಗಬೇಕಾದ ಅಮರಾವತಿ …

Read More »

ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ

ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …

Read More »