ಕಸ ಗೂಡಿಸಿದ ಖಾನಾಪುರ ಎಂಎಲ್ಎ ಹಾಗೂ ಪ.ಪಂ ಅಧ್ಯಕ್ಷೆ ಖಾನಾಪೂರ ಮಲಪ್ರಭಾ ನದಿ ದಂಡೆಯಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಪಟ್ಟಣ ಪಂಚಾಯಿತಿ ಪ್ರತಿನಿಧಿಗಳೊಂದಿಗೆ ಸೇರಿ ಕಸ ಗೂಡಿಸಿ ಸ್ವಚ್ಛಗೊಳಿಸಿದರು. ಮಲಪ್ರಭಾ ನದಿ ದಂಡೆಯಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಮಾಡಿದ ತ್ಯಾಜ್ಯ ಹಾಗೂ ಪ್ರವಾಸಿಗರು ಬಿಸಾಡಿದ ನೀರಿನ ಬಾಟಲ್ ಸಹಿತ ರಾಶಿಯಾಗಿ ಬಿದ್ದಿದ್ದ ಕಸವನ್ನು ಶಾಸಕ ವಿಠ್ಠಲ ಹಲಗೆಕರ್ ಅವರು ತಮ್ಮ ಕೈಯಿಂದಲೇ ಬುಟ್ಟಿಗೆ ತುಂಬಿದರು. ಅದರಂತೆಯೇ ಪಟ್ಟಣ ಪಂಚಾಯಿತಿಯ …
Read More »Daily Archives: ಫೆಬ್ರವರಿ 23, 2025
ಕನ್ನಡಿಗರ ವಿರುದ್ಧ ಪಿತೂರಿ ಮಾಡುವರರನ್ನು ಹತ್ತಿಕ್ಕಬೇಕಿದೆ…
ಗೃಹ ಸಚಿವರ ಹೇಳಿಕೆ ಅವಿವೇಕತನದ ಪರಿಮಾವಧಿ; ಬಿ.ವೈ ವಿಜಯೇಂದ್ರ ಬೆಳಗಾವಿಯಲ್ಲಿ ನಡೆದ ಘಟನೆಯನ್ನು ಯಾರೂ ಕೂಡ ಕ್ಷಮಿಸಲು ಸಾಧ್ಯವಿಲ್ಲ. ಕನ್ನಡಿಗರ ತೇಜೋವಧೆ ಸರಿಯಲ್ಲ. ಪಿತೂರಿಗಳನ್ನು ನಡೆಸುವವರನ್ನು ಹತ್ತಿಕ್ಕುವ ಕೆಲಸವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ನೆಲದ ನೀರು, ಗಾಳಿ ಮತ್ತು ಅನ್ನವನ್ನು ಸೇವಿಸಿ ರಾಜ್ಯದ ವಿರುದ್ಧ ಪಿತೂರಿ ನಡೆಸುತ್ತಿರುವುದನ್ನ ಯಾರೂ ಕೂಡ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯಲ್ಲಿ ನಡೆದ ಘಟನೆಯನ್ನು ಯಾರೂ …
Read More »ಮಾಜಿ ಶಾಸಕ ದಿವಂಗತ ವಿ.ವೈ. ಚವಾಣ್ ಅವರ ಪತ್ನಿ ಅನ್ನಪೂರ್ಣ ಚವಾಣ್ ನಿಧನರಾದರು.
ಮಾಜಿ ಶಾಸಕ ದಿವಂಗತ ವಿ.ವೈ. ಚವಾಣ್ ಅವರ ಪತ್ನಿ ಅನ್ನಪೂರ್ಣ ಚವಾಣ್ ನಿಧನರಾದರು. ಖಾನಾಪೂರದ ಸ್ಟೇಷನ್ ರಸ್ತೆಯ ನಿವಾಸಿ ಮತ್ತು ಮಾಜಿ ಶಾಸಕ ದಿವಂಗತ. ವಿ.ವೈ. ಚವಾಣ್ ಅವರ ಪತ್ನಿ ಅನ್ನಪೂರ್ಣ ವಿಠ್ಠಲರಾವ್ ಚವಾಣ್ (87 ವರ್ಷ), ಭಾನುವಾರ ಬೆಳಿಗ್ಗೆ 6.30 ಕ್ಕೆ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರು ನಾಲ್ಕು ಮಕ್ಕಳು, ಇಬ್ಬರು ವಿವಾಹಿತ ಹೆಣ್ಣುಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳನ್ನು ಒಳಗೊಂಡ ದೊಡ್ಡ ಕುಟುಂಬವನ್ನು ಅಗಲಿದ್ದಾರೆ. ಮಹಾರಾಷ್ಟ್ರ ಏಕೀಕರಣ …
Read More »ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುವ ಬಸ್ಗಳ ಸಂಖ್ಯೆ ಕಡಿಮೆ
ಬೆಳಗಾವಿ : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಹಾಗೂ ಚಾಲಕರ ಮೇಲೆ ನಡೆದ ಹಲ್ಲೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ (ಬೆಳಗಾವಿ) ಬರುವ ಬಸ್ಗಳ ಸಂಖ್ಯೆ ಶನಿವಾರ ಕಡಿಮೆಯಾಗಿತ್ತು. ಸದ್ಯಕ್ಕೆ ಗಡಿವರೆಗೆ ಮಾತ್ರ ಬಸ್ಗಳು ಓಡಾಡುತ್ತಿವೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ ಮಾಹಿತಿ ನೀಡಿದ್ದಾರೆ. ಕೊಲ್ಹಾಪುರ ಮಾರ್ಗವಾಗಿ ಪ್ರತಿದಿನವೂ ಮಹಾರಾಷ್ಟ್ರ ಸಾರಿಗೆ ಸಂಸ್ಥೆಯಿಂದ 30 ಬಸ್ ಬರುತ್ತಿದ್ದವು. ಆದರೆ, ಶನಿವಾರ 20 ಬಸ್ …
Read More »ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲ
ಧಾರವಾಡ : ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದವ್ವ ಹನುಮಂತಪ್ಪ ದಾನಪ್ಪನವರ ಎಂಬುವರ ಮನೆ ಅಗ್ನಿಗಾಹುತಿಯಾಗಿದೆ. ಮಧ್ಯಾಹ್ನ ಅಡುಗೆ ಮಾಡುವಾಗ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಹೊರಗೆ ಬರುತ್ತಿದ್ದಂತೆಯೇ ಇಡೀ ಮನೆಗೆ ಬೆಂಕಿ ಆವರಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಇದರಿಂದ ಮನೆಯೊಳಗಿನ ಸಾಮಗ್ರಿಗಳೆಲ್ಲ …
Read More »ಪತ್ನಿ ಜೊತೆ ಅಕ್ರಮ ಸಂಬಂಧಪತ್ನಿಯೊಂದಿಗೆ ಸರಸವಾಡಿದ ಸ್ನೇಹಿತನ ಕೊಂದ ಪತಿ
ಬೆಂಗಳೂರು: ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಿಂದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಹಾಕಿದ ಘಟನೆ ವರ್ತೂರು ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಶಿರಾದ ಕಿಶೋರ್ ಕುಮಾರ್ (34) ಕೊಲೆಯಾದವ. ಕೃತ್ಯ ಎಸಗಿದ ಆರೋಪಿ ಸತೀಶ್ ರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ತನ್ನ ಪತ್ನಿಯೊಂದಿಗೆ ಕಿಶೋರ್ ಕುಮಾರ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಗೊಂಡಿದ್ದ ಸತೀಶ್ ರೆಡ್ಡಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂಪೂರ್ಣ ವಿವರ: “ಕೆಜಿಎಫ್ನ ಸತೀಶ್ ರೆಡ್ಡಿ …
Read More »