ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸುವ ಸಭೆ *ಬೆಳಗಾವಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಬೆಳಗಾವಿ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ/ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ, ವಾಟರಮನ್, ಸ್ವಚ್ಛತಾಗಾರ ಹಾಗೂ ಅಟೆಂಡರಗಳ ಕುಂದು ಕೊರತೆಗಳನ್ನು ಆಲಿಸಲು ಜಿಲ್ಲೆಯ ಎಲ್ಲ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು(ಪಂ.ರಾಜ್), ಗ್ರಾಮ ಪಂಚಾಯತ ಸಿಬ್ಬಂದಿಗಳ ಜಿಲ್ಲಾ ಮಟ್ಟದ …
Read More »Daily Archives: ಮಾರ್ಚ್ 28, 2025
ಪತ್ನಿ ಕೊಂದು ಸೂಟ್ಕೇಸ್ನಲ್ಲಿ ತುಂಬಿಟ್ಟ ಪತಿ
ಬೆಂಗಳೂರು: ಉತ್ತರಪ್ರದೇಶದ ಮೀರತ್ನಲ್ಲಿ ನಡೆದಿದ್ದ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ತುಂಡರಿಸಿ ಸೂಟ್ಕೇಸ್ನಲ್ಲಿ ತುಂಬಿಟ್ಟಿರುವ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಪೋಷಕರಿಗೆ ಕರೆ ಮಾಡಿದ ಆರೋಪಿ: ಹುಳಿಮಾವು ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ತುಂಡು ತುಂಡು …
Read More »ಲಂಚ ಪಡೆಯುತ್ತಿದ್ದ ಆರ್ಟಿಐ ಆಯುಕ್ತ ಲೋಕಾಯುಕ್ತ ಬಲೆಗೆ –
ಕಲಬುರಗಿ: ಆರ್ಟಿಐ ಕಾರ್ಯಕರ್ತನ ಹೆಸರನ್ನು ಬ್ಲ್ಯಾಕ್ಲಿಸ್ಟ್ನಿಂದ ತೆಗೆಯಲು ಎರಡು ಲಕ್ಷ ರೂ. ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರೊಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕದಲ್ಲಿ ಆರ್ಟಿಐ ಆಯುಕ್ತರೊಬ್ಬರು ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವ ಮೊದಲ ಪ್ರಕರಣ ಇದಾಗಿದೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಕಲಬುರಗಿ ಪೀಠದ ಆರ್ಟಿಐ ಆಯುಕ್ತ ರವೀಂದ್ರ ಗುರುನಾಥ್ ಡಕಪ್ಪ ಅವರು ಆರ್ಟಿಐ ಕಾರ್ಯಕರ್ತ ಸಾಯಿಬಣ್ಣ ಸಸಿ ಬೆನಕನಹಳ್ಳಿ ಅವರ ಹೆಸರನ್ನು ಕಪ್ಪುಪಟ್ಟಿಯಿಂದ ತೆಗೆಯಲು 3 …
Read More »100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ
ಬೆಂಗಳೂರು: ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ ‘ಕಾವೇರಿ ಸಂಕಲ್ಪ’ ಪ್ರಾರಂಭಿಸುವುದಾಗಿ ಗುರುವಾರ ಪ್ರಕಟಿಸಿದೆ. ಕಾವೇರಿ ಹಾಸ್ಪಿಟಲ್ಸ್ನ ಬೆಂಗಳೂರು ವಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ವಿಜಯಭಾಸ್ಕರನ್ ಹಾಗೂ ಹಾಸ್ಪಿಟಲ್ಸ್ ಎಲೆಕ್ಟ್ರಾನಿಕ್ ಸಿಟಿ ಮತ್ತು ಮಾರತ್ತಹಳ್ಳಿ ಘಟಕಗಳ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉಪಕ್ರಮಕ್ಕೆ ಔಪಚಾರಿಕ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, “ಖಾಸಗಿ …
Read More »