Breaking News

Daily Archives: ಏಪ್ರಿಲ್ 5, 2025

ಇನ್ನು ಏಳೆಂಟು ನೂರು ಕೋಟಿ ಕಬ್ಬಿನ ಬಿಲ್ ಬಾಕಿ ಇದೆ ; ಸಕ್ಕರೆ ಸಚಿವ ಶಿವಾನಂದ ಪಾಟೀಲ್ *ರಾಜ್ಯದಲ್ಲಿ ಕಬ್ಬಿನ ಬಾಕಿ ಬಿಲ್ ವಿಚಾರ.*

ಇನ್ನು ಏಳೆಂಟು ನೂರು ಕೋಟಿ ಕಬ್ಬಿನ ಬಿಲ್ ಬಾಕಿ ಇದೆ ; ಸಕ್ಕರೆ ಸಚಿವ ಶಿವಾನಂದ ಪಾಟೀಲ್ *ರಾಜ್ಯದಲ್ಲಿ ಕಬ್ಬಿನ ಬಾಕಿ ಬಿಲ್ ವಿಚಾರ.* ಇನ್ನು ಏಳಂಟು ನೂರು ಕೋಟಿ ಬಾಕಿ ಇರಬಹುದು ಹದಿನೆಂಟು ಸಾವಿರ ಕೋಟಿ ಕೊಡಬೇಕಿತ್ತು ಕೊಟ್ಟಂತಾಗಿದೆ. *ರೈತರು ಕಟ್ಟಿರುವ ಸಹಕಾರಿ ಸಕ್ಕರೆ ಕಾರ್ಖಾನೆ ನಷ್ಟದಲ್ಲಿ ಖಾಸಗಿ ಸಕ್ಕರೆ ಕಾರ್ಖಾನೆ ಲಾಭದಾಯಕ ವಿಚಾರ.* ಆಡಳಿತ ಮಂಡಳಿ ಅವರು ಒಳ್ಳೆಯ ರೀತಿಯಿಂದ ನಿರ್ವಹಣೆ ಮಾಡಿದರೆ ಒಳ್ಳೆ ರೀತಿಯಿಂದ ನಡೆಯುತ್ತೆ. …

Read More »

13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿತನಿಗೆ 20 ವರ್ಷ ಶಿಕ್ಷೆ

13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿತನಿಗೆ 20 ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ನೊಂದ ಬಾಲಕಿಗೆ 4 ಲಕ್ಷ ಸರ್ಕಾರ ಪರಿಹಾರ ನೀಡುವಂತೆ ಆದೇಶ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯವನ್ನೆಸಗಿದ ಖಾನಾಪೂರದ ಆರೋಪಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂಪಾಯಿ ದಂಡ ಮತ್ತು ನೊಂದ ಬಾಲಕಿಗೆ 4 ಲಕ್ಷ ನೀಡುವಂತೆ ಆದೇಶಿಸಿ ತೀರ್ಪನ್ನು ನೀಡಿದೆ. …

Read More »

ಚಿಕ್ಕೋಡಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ 8.30 ಕೋಟಿ ರೂ ಅನುದಾನ ಮಂಜೂರು:ಪ್ರಕಾಶ ಹುಕ್ಕೇರಿ

ಚಿಕ್ಕೋಡಿ ಪಟ್ಟಣದ ರಸ್ತೆ-ಚರಂಡಿ ನಿರ್ಮಾಣಕ್ಕೆ 8.30 ಕೋಟಿ ರೂ ಅನುದಾನ ಮಂಜೂರು:ಪ್ರಕಾಶ ಹುಕ್ಕೇರಿ ಚಿಕ್ಕೋಡಿ: ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ೮.೩೦ ಕೋಟಿ ರೂ ಅನುದಾನ ಮಂಜೂರಾಗಿದೆ. ಬರುವ ಎರಡು ತಿಂಗಳ ಒಳಗಾಗಿ ಅಭಿವೃದ್ಧಿ ಕಾಮಗಾರಿಗಳ ಕೆಲಸ ಮುಕ್ತಾಯ ಮಾಡಬೇಕೆಂದು ಕರ್ನಾಟಕ ದೆಹಲಿ ಪ್ರತಿನಿಧಿ-೨ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ಪಟ್ಟಣದ ಅಲ್ಪಸಂಖ್ಯಾತ ಕಾಲೋನಿ ವ್ಯಾಪ್ತಿಯಲ್ಲಿ ಮಂಜೂರಾದ …

Read More »

ಸದಲಗಾ ಪಟ್ಟಣದಲ್ಲಿ ಅದ್ದೂರಿಯಾಗಿ ಜರುಗಿದ ಶ್ರೀರಾಮ,ಹನುಮಾನ ದೇವರ ಮೂರ್ತಿಗಳ ಮೇರವಣಿಗೆ

ಚಿಕ್ಕೋಡಿ: ರಾಮನವಮಿ ಹಾಗೂ ಹನುಮಾನ ಜಯಂತಿಯ ಅಂಗವಾಗಿ ವಿಶ್ವ ಹಿಂದೂ ಪರಿಷದ ಹಾಗೂ ಬಜರಂಗದಳದ ವತಿಯಿಂದ ಸದಲಗಾ ಪಟ್ಟಣದಲ್ಲಿ ಪ್ರಭು ಶ್ರೀರಾಮ ಹಾಗೂ ಹನುಮಾನ ದೇವರ ಪುತ್ಥಳಿಯ ಅದ್ದೂರಿಯಾಗಿ ಮೆರವಣಿಗೆ ನಡೆಯಿತು. ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜ ವೃತ್ತದಲ್ಲಿ ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕಿ ಶಶಿಕಲಾ ಜೊಲ್ಲೆ, ಶ್ರದ್ಧಾನಂದ ಸ್ವಾಮೀಜಿ ಅವರು ಶ್ರೀರಾಮ ಹಾಗೂ ಹನುಮಾನ ಪುತ್ಥಳಿಗೆ ಪೂಜೆ ಸಲ್ಲಿಸಿ ಹಾಗೂ ಮೆರವಣಿಗೆಗೆ ಚಾಲನೆ ನೀಡಿದರು. ಅದೇ …

Read More »

ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ; ಜಂಟಿ ವಿಚಾರ ಸಂಕಿರಣ ಎಥನಾಲ್ ಉತ್ಪಾದನೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ

ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆ; ಜಂಟಿ ವಿಚಾರ ಸಂಕಿರಣ ಎಥನಾಲ್ ಉತ್ಪಾದನೆಗೆ ಉತ್ತೇಜನ: ಸಚಿವ ಶಿವಾನಂದ ಪಾಟೀಲ ಬೆಳಗಾವಿ: ಎಥನಾಲ್ ಪರಿಸರ ಸ್ನೇಹಿ ಇಂಧನವಾಗಿದ್ದು, ಕಾರ್ಬನ್ ಡೈಆಕ್ಸೈಡ್ ಉತ್ಪತ್ತಿ ಕಡಿಮೆಯಾಗುವ ಕಾರಣ ರಾಜ್ಯ ಸರ್ಕಾರವು ಹಸಿರು ಇಂಧನವನ್ನು ಉತ್ತೇಜಿಸಲು ಯೋಜನೆಗಳನ್ನು ರೂಪಿಸುತ್ತಿದೆ. ಕೇಂದ್ರ ಸರ್ಕಾರ ಹಸಿರು ಇಂಧನ ಬಳಕೆಯನ್ನು ಕಡ್ಡಾಯಗೊಳಿಸುವ ಗುರಿ ಹೊಂದಿದ್ದು, ರಾಜ್ಯದಲ್ಲಿ ಸಹ ಹಂತ ಹಂತವಾಗಿ ಉತ್ಪಾದನೆ ಪ್ರಾರಂಭವಾಗಿದೆ ಎಂದು ಕೃಷಿ ಮಾರುಕಟ್ಟೆ ಮತ್ತು ಎಸ್ .ನಿಜಲಿಂಗಪ್ಪ …

Read More »

ಕುಮಾರಸ್ವಾಮಿಗೆ ಹೆದರುವ ಮಗನಲ್ಲ ಎಂದ:ಡಿ ಕೆ ಶಿ

ಬೆಂಗಳೂರು: ನಾನು ಹೆಚ್​ ಡಿ ಕುಮಾರಸ್ವಾಮಿಗೆ ಹೆದರುವ ಮಗನಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸವಾಲು ಹಾಕಿದ್ದಲ್ಲದೆ, ಅವರ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಇನ್ನು ಸುಮ್ಮನಿರಲ್ಲ, ಸರ್ಕಾರದ ಮೇಲೆ ಸಮರಸಾರಿದ್ದೇನೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ‘ನೋಡಪ್ಪ, ಕುಮಾರಸ್ವಾಮಿಗೆ ನಾನು ಹೇಳುತ್ತೇನೆ. ಎಷ್ಟು ವ್ಯವಹಾರ ಇದೆ. ಅದನ್ನು ಬಿಡುಗಡೆ ಮಾಡಲಿ. ನನಗೂ …

Read More »

ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಹೆಬ್ಬಾಳ್ಕರ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಲ್ಲಿ ನೇಮಕಾತಿ ವಿಚಾರವಾಗಿ ಕೆಲವರು ಹಣ ವಸೂಲು ಮಾಡುತ್ತಿರುವ ಕುರಿತು ದೂರುಗಳು ಕೇಳಿ ಬಂದಿದ್ದು, ಯಾರೂ ಮೋಸ ಹೋಗಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ. ಮೋಸ ಹೋಗಬೇಡಿ ಎಂದು ಪ್ರಕಟಣೆ: ಈ ಕುರಿತು ಪ್ರಕಟಣೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ನೇಮಕಾತಿ ವಿಚಾರವಾಗಿ ಮೋಸ ಹೋಗುವ ಪ್ರಕರಣಗಳು ಹೆಚ್ಚುತ್ತಿದೆ …

Read More »

197 ಡ್ರಗ್ಸ್ ಬಳಕೆದಾರರ ವಿರುದ್ಧ 46 ಪ್ರಕರಣ ದಾಖಲ

ಹುಬ್ಬಳ್ಳಿ: ಈ ವರ್ಷ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ. ಮಾದಕ ವಸ್ತು ಮಾರಾಟ ಪ್ರಕರಣಗಳನ್ನು ಪರಿಶೀಲಿಶಿ ಯಾರಿಗೆ ಮಾರಾಟ ಮಾಡಿದ್ದಾರೆಂಬ ಮಾಹಿತಿ ಕಲೆಹಾಕಿ 505 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ 197 ಮಂದಿ ಡ್ರಗ್ಸ್​ ಸೇವಿಸುತ್ತಿರುವುದು ಪತ್ತೆಯಾಗಿದೆ. ಇವರ ವಿರುದ್ಧ 46 ಪ್ರಕರಣ ದಾಖಲಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ. ಮಾದಕ ವ್ಯಸನಿಗಳಿಗೆ ಶಿಬಿರ: ಇಲ್ಲಿನ ಆರ್.ಎನ್. ಶೆಟ್ಟಿ …

Read More »

ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆಯ ಯೋಜನೆಗಳ ಅನುಕೂಲಗಳೇನು?

ಬೆಂಗಳೂರು : ರೈತರು ಕೃಷಿ ವ್ಯವಸಾಯದೊಂದಿಗೆ ಹೈನುಗಾರಿಕೆ ಮತ್ತು ಪಶುಸಂಗೋಪನೆ ಸಹ ಮಾಡುತ್ತಿದ್ದು, ಸರ್ಕಾರ ಹೈನುಗಾರಿಕೆ ಹಾಗೂ ಪಶುಸಂಗೋಪನೆ ಮೂಲಕ ಆರ್ಥಿಕ ಬಲವರ್ಧನೆ ಮಾಡಿಕೊಳ್ಳಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಕೆಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಮುಖ್ಯವಾಗಿ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುತ್ತಿದ್ದು, ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಸರಬರಾಜು ಮಾಡುವ ಸದಸ್ಯರಿಗೆ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ರೂ. 5 ರೂ. ರಂತೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ. …

Read More »

ಪಕ್ಷಿಗಳಿಗೆ ನೀರು, ಆಹಾರ ನೀಡುತ್ತಿರುವ ಪಕ್ಷಿಪ್ರೇಮಿಗಳು

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿಯೂ ಈ ಭಾರಿ ತಾಪಮಾನ 40 ಡಿಗ್ರಿ ತಲುಪಿದೆ. ಜನರಷ್ಟೆ ಅಲ್ಲದೆ, ಪಕ್ಷಿಗಳೂ ಸಹ ಬಿಸಿಲಿನ ಧಗೆ ತಾಳಲಾಗದೆ ಪರದಾಡುತ್ತಿವೆ. ಇದನ್ನು ಮನಗಂಡ ಶಿವಮೊಗ್ಗದ ಪಕ್ಷಿ ಪ್ರೇಮಿಗಳು ಪಕ್ಷಿಗಳಿಗೆ ನೀರು ಹಾಗೂ ಆಹಾರ (ಕಾಳು) ಇಡುವ ಮೂಲಕ ತಮ್ಮ ಪರಿಸರಪ್ರೇಮ ಮೆರೆದಿದ್ದಾರೆ. ಶಿವಮೊಗ್ಗದ ಡಿ.ಕೆ. ಶಿವಕುಮಾರ್​​​ ಬ್ರಿಗೇಡ್​​ ವಿವಿಧ ಸಂಘಟನೆಗಳ ಜೊತೆ ಸೇರಿ ಪಕ್ಷಿಗಳಿಗೆ ನೀರು ಆಹಾರ ಇಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ನೀರಿನ ಮೂಲಗಳು ಬತ್ತುತ್ತವೆ. …

Read More »