Breaking News

Daily Archives: ಏಪ್ರಿಲ್ 7, 2025

ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್‌

ಬೆಂಗಳೂರು: ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ಸಂಬಂಧ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಜಾಮೀನು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌ ಯೆರೂರ್‌, ಏಪ್ರಿಲ್‌ 15ರ ಒಳಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು. ವಕೀಲರ ವಾದ: ವಿಚಾರಣೆ ವೇಳೆ ಅರ್ಜಿದಾರರ …

Read More »

ಇನ್ಮುಂದೆ ಹಾವೇರಿ ನಿಲ್ದಾಣದಲ್ಲೂ ವಂದೇ ಭಾರತ್ ಎಕ್ಸ್​​ಪ್ರೆಸ್ ನಿಲುಗಡೆ

ಹುಬ್ಬಳ್ಳಿ: ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಇನ್ಮುಂದೆ ಹಾವೇರಿ ನಿಲ್ದಾಣದಲ್ಲಿಯೂ ನಿಲುಗಡೆಯಾಗಲಿದೆ. ರೈಲು ಸಂಖ್ಯೆ 20661/20662 ಕೆಎಸ್ಆರ್ ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲನ್ನು ಹಾವೇರಿಯ ಶ್ರೀ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ಎರಡು ನಿಮಿಷಗಳ ನಿಲುಗಡೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 11ರಿಂದ ಧಾರವಾಡದಿಂದ ಬೆಂಗಳೂರಿಗೆ ತೆರಳುವ ರೈಲು ಸಂಖ್ಯೆ 20662 ಹಾಗೂ ಏಪ್ರಿಲ್ 12ರಿಂದ ಬೆಂಗಳೂರಿನಿಂದ ಧಾರವಾಡಕ್ಕೆ ಆಗಮಿಸುವ ರೈಲು …

Read More »

ಯತ್ನಾಳ್ ಉಚ್ಚಾಟನೆಗೆ ಉತ್ತರ ಕರ್ನಾಟಕದ ಜನರು ಸಂದರ್ಭಾನುಸಾರವಾಗಿ ಉತ್ತರ ಕೊಡುತ್ತಾರೆ ಎಂದ ಸವದಿ

ಚಿಕ್ಕೋಡಿ (ಬೆಳಗಾವಿ) : ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಚಿಂತನೆ ಪ್ರಾರಂಭವಾಗಿದೆ. ಸಂದರ್ಭಾನುಸಾರವಾಗಿ ಬಿಜೆಪಿಗೆ ಏನು ಉತ್ತರ ಕೊಡಬೇಕು ಅದನ್ನು ಮುಂದೆ ಈ ಭಾಗದ ಜನ ಕೊಡುತ್ತಾರೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಅಥಣಿ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದರು. ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಚಾಕ್​ವೆಲ್ ಕಮ್ ಪಂಪ್ ಹೌಸ್ ನಿರ್ಮಾಣ ಹಂತಕ್ಕೆ ಪೂಜೆ ನೆರವೇರಿಸಿದ ಬಳಿಕ, ಮಾಧ್ಯಮದವರೊಂದಿಗೆ …

Read More »

ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಬೆಲ್ಲದ

ಲಾಡ್ ಅವರಿಗೆ ತಮ್ಮ ಕ್ಷೇತ್ರವೇ ಕಾಣೋದಿಲ್ಲ: ಶಾಸಕ ಬೆಲ್ಲದ ತಿರುಗೇಟು. ….ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂದಿದ್ದ ಸಚಿವ ಲಾಡ್‌ಗೆ ಬೆಲ್ಲದ ಟಾಂಗ್… ಬಿಜೆಪಿ ಮೋದಿ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡುತ್ತಿದೆ ಎಂಬ ಸಚಿವ ಸಂತೋಷ ಲಾಡ್ ಹೇಳಿಕೆಗೆ ಪ್ರತಿಕ್ರಿಯೆಪ್ರತಿಕ್ರಿಯೆಯಾಗಿ ನಿಒಡ ಲಾಡ್ ಹೇಳಿಕೆಗೆ, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಸಚಿವ ಲಾಡ್ ಅವರಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸಂತೋಷ …

Read More »

ಬಂಡೀಪುರ ರಸ್ತೆ ಗದ್ದಲ: ಪ್ರಿಯಾಂಕಾ, ರಾಹುಲ್​ ಲಾಬಿಗೆ ಮಣಿಯಬೇಡಿ: ಲಹರ್‌ ಸಿಂಗ್‌ ಆಗ್ರಹ

ಬೆಂಗಳೂರು, ಏಪ್ರಿಲ್‌ 7: ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi), ಮಾಜಿ ವಯನಾಡ್ ಸಂಸದ ರಾಹುಲ್‌ ಗಾಂಧಿ (Rahul Gandhi) ಹಾಗೂ ಕೇರಳ ಸರ್ಕಾರದ (Kerala Government) ಲಾಬಿಗೆ ಮಣಿದು ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ (Bandipura Forest Night Travaling) ಅವಕಾಶ ನೀಡಬಾರದು ಎಂದು ಬಿಜೆಪಿ ಸಂಸದ ಲಹರ್‌ ಸಿಂಗ್‌ ಸಿರೋಯಾ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿರುವ …

Read More »

ಯತ್ನಾಳ್​ಗೆ ಯಲ್ಲಮ್ಮನ ದರ್ಶನ

ಬೆಳಗಾವಿ, (ಏಪ್ರಿಲ್ 07): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕಮಾಂಡ್ ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ. ಆದರೂ ಯತ್ನಾಳ್‌ ಅವರ ಮಾತಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬೆಂಕಿ ಉಗುಳುತ್ತಲೇ ಇದ್ದಾರೆ. ಉಚ್ಛಾಟನೆ ಬೆನ್ನಲ್ಲೇ ಮತ್ತಷ್ಟು ಆ್ಯಕ್ಟೀವ್ ಆಗಿರುವ ಯತ್ನಾಳ್​ ಎಲ್ಲೆಡೆ ಪ್ರವಾಸ ಕೈಗೊಂಡಿದ್ದಾರೆ. ಅದರಂತೆ ಇಂದು (ಏಪ್ರಿಲ್ 07) ಉತ್ತರ ಕರ್ನಾಟಕದ ಶಕ್ತಿದೇವಿ ಬೆಳಗಾವಿಯ ಶ್ರೀ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ …

Read More »

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ

ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ. ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, …

Read More »

ನಾಳೆ ದ್ವಿತೀಯ ಪಿಯು ಫಲಿತಾಂಶ:

ಬೆಂಗಳೂರು, (ಏಪ್ರಿಲ್ 07): ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾತರಿಂದ ಕಾಯುತ್ತಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ( 2nd PUC  Students) ಗುಡ್​ನ್ಯೂಸ್ ಸಿಕ್ಕಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Karnataka 2nd PUC Exam 2025 Result ) ನಾಳೆ ಅಂದರೆ ಏಪ್ರಿಲ್ 08ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. …

Read More »

ಕಾಫಿ, ಟೀ ಬೆಲೆ 3 ರಿಂದ 10 ರೂ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ಕೆಲವು ದಿನಗಳ ಹಿಂದೆ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್​ಗೆ 4 ರೂಪಾಯಿ ಹೆಚ್ಚಿಸಿತ್ತು. ಏಪ್ರಿಲ್ 1ರಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ. ಇದರ ಪರಿಣಾಮ, ಅನೇಕ ಹೋಟೆಲ್​​ಗಳು ಕಾಫಿ ಮತ್ತು ಚಹಾ ದರ ಏರಿಸಿವೆ. ಬೆಲೆ ಏರಿಕೆ ಬಿಸಿ ಇದೀಗ ಗ್ರಾಹಕರಿಗೆ ತಟ್ಟಿದೆ. ಬೆಂಗಳೂರಿನ ಬಹುತೇಕ ಹೋಟೆಲ್‌ಗಳು, ಕೆಫೆಗಳು ಮತ್ತು ಟೀ ಸ್ಟಾಲ್‌ಗಳಲ್ಲಿ ಒಂದು ಕಪ್ ಚಹಾ ಮತ್ತು ಕಾಫಿಯ ಬೆಲೆಯನ್ನು 3 ರೂ.ನಿಂದ 10 …

Read More »

ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ದುಷ್ಕೃತ್ಯ ಸೆರೆ

ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರನ್ನು ಹಿಂಬಾಲಿಸಿದ ಕಾಮುಕನೊಬ್ಬ ಯುವತಿಯೋರ್ವಳ ಮೇಲೆರಗಿ ಆಕೆಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಘಟನೆ ನಡೆದಿದೆ. ದುಷ್ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್‌ ಗೌಡ ಎಂಬುವವರು ನೀಡಿದ ದೂರಿನನ್ವಯ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. …

Read More »