Breaking News

Daily Archives: ಏಪ್ರಿಲ್ 8, 2025

ವಿಶ್ವ ಆರೋಗ್ಯದ ದಿನದ ಹಿನ್ನೆಲೆ… ಬಿಮ್ಸ್ ವಿದ್ಯಾರ್ಥಿಗಳಿಂದ ಬೀದಿ ನಾಟಕದ ಮೂಲಕ ಆರೋಗ್ಯ ಜಾಗೃತಿ

ವಿಶ್ವ ಆರೋಗ್ಯದ ದಿನದ ಹಿನ್ನೆಲೆ… ಬಿಮ್ಸ್ ವಿದ್ಯಾರ್ಥಿಗಳಿಂದ ಬೀದಿ ನಾಟಕದ ಮೂಲಕ ಆರೋಗ್ಯ ಜಾಗೃತಿ ವಿಶ್ವ ಆರೋಗ್ಯ ದಿನದ ಹಿನ್ನೆಲೆ ಬೆಳಗಾವಿ ಬಿಮ್ಸ್ ಮಹಾವಿದ್ಯಾಲಯದ ಆರೋಗ್ಯ ಜಾಗೃತಿಯನ್ನು ಮೂಡಿಸಲಾಯಿತು. ಇಂದು ವಿಶ್ವ ಆರೋಗ್ಯ ದಿನದ ಹಿನ್ನೆಲೆ ಬೆಳಗಾವಿಯ ಬಿಮ್ಸ್ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಬೀದಿ ನಾಟಕದ ಮೂಲಕ ಬಿಮ್ಸ್ ಆವರಣದಲ್ಲಿನ ರೋಗಿಗಳು ಮತ್ತು ಅವರ ಸಂಬಂಧಿಗಳಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸಲಾಯಿತು. ಪ್ರಸವಪೂರ್ವ ಮತ್ತು ಪ್ರಸವಪೂರ್ವ ಆರೈಕೆ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿ ಅಭಿಯಾನದಲ್ಲಿ …

Read More »

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ

ದ್ವಿತೀಯ ಪಿಯುಸಿಯಲ್ಲಿ ಪ್ರೇರಣಾ ಕಾಲೇಜಿನ ಖುಷಿ ಹುಗ್ಗಿ ಸಾಧನೆ ಬೆಳಗಾವಿ ಪ್ರೇರಣಾ ಪಿ.ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಹುಗ್ಗಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರಿ ಸಾಧನೆಯನ್ನು ಮಾಡಿದ್ದಾರೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಬೆಳಗಾವಿಯ ಪ್ರೇರಣಾ ಪಿ. ಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಗಿರೀಶ ಹುಗ್ಗಿ ಒಟ್ಟು 600 ಅಂಕಗಳ ಪೈಕಿ 581 ಅಂಕಗಳನ್ನು ಪಡೆದಿದ್ದಾರೆ. ಮಹಾವಿದ್ಯಾಲಯದಲ್ಲಿ ಮತ್ತು ಪೋಷಕರಲ್ಲಿ ಸಂತಸ …

Read More »

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ತನ್ವಿ ಪಾಟೀಲ್’ಗೆ ತೃತೀಯ ಸ್ಥಾನ…

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ತನ್ವಿ ಪಾಟೀಲ್’ಗೆ ತೃತೀಯ ಸ್ಥಾನ… ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಬೆಳಗಾವಿಯ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದಿದ್ದಾಳೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಬೆಳಗಾವಿಯ ವಿದ್ಯಾರ್ಥಿನಿ ತನ್ವಿ ಹೇಮಂತ ಪಾಟೀಲ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದಿದ್ದಾಳೆ. ಬೆಳಗಾವಿ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದ ತನ್ವಿ ಹೇಮಾ ಪಾಟೀಲ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ …

Read More »

ಯತ್ನಾಳ್​ ಈಗಲೂ ನಮ್ಮ ತಂಡದಲ್ಲೇ ಇದ್ದಾರೆ : ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಯತ್ನಾಳ್ ತಾಂತ್ರಿಕವಾಗಿ ಪಕ್ಷದಿಂದ ಉಚ್ಛಾಟನೆ ಆಗಿರಬಹುದು. ಆದರೆ, ಈಗಲೂ ಅವರು ನಮ್ಮ ತಂಡದಲ್ಲೇ ಇದ್ದಾರೆ. ಮಾತಿನ ಬರದಲ್ಲಿ ಏನೇನೋ ಮಾತನಾಡುತ್ತಾರೆ ಅಷ್ಟೇ. ಯಾರಿಗೂ ಕೆಟ್ಟದ್ದು ಬಯಸುವ ಉದ್ದೇಶ ಅವರಿಗಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಕುರಿತು ರಾಜ್ಯದ ಜನರಿಗೆ ಮಾಹಿತಿ ಸಿಗಲಿ ಅಂತಾ ಮಾತನಾಡುತ್ತಿದ್ದೇನೆ. ಯತ್ನಾಳ್​ಗೆ ಪದೇ ಪದೇ ಮನವಿ ಮಾಡಿಕೊಳ್ಳುತ್ತಿದ್ದೇನೆ. ಯಾರನ್ನೂ ಬಯ್ಯಬೇಡಿ, ಪಕ್ಷಕ್ಕೆ ಮುಜುಗರ …

Read More »

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಮದ್ಯಾಹ್ನ ಪ್ರಕಟವಾಗಲಿದೆ. ರಾಜ್ಯದಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಂಗಳವಾರ ಮದ್ಯಾಹ್ನ 1.30 ಕ್ಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಏಪ್ರಿಲ್​ 8ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ.ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ …

Read More »

ಲಂಚಕ್ಕಾಗಿ ಕೈದಿ ಮೇಲೆ ಹಲ್ಲೆ:

ಬೆಂಗಳೂರು, (ಏಪ್ರಿಲ್ 07): ಪರಪ್ಪನ ಅಗ್ರಹಾರ ಜೈಲು (parappana agrahara central jail)  ಯಾವಾಗಲೂ ಒಂದಲ್ಲಾ ಒಂದು ರೀತಿ ಸುದ್ದಿಯಲ್ಲಿರುತ್ತೆ. ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗನಿಗೆ ರಾಜಾತಿಥ್ಯ ಕೊಟ್ಟ ಆರೋಪ ಹೊತಿದ್ದ ಈ ಜೈಲಿನ ವಿರುದ್ಧ ಈಗ ಹೊಸದೊಂದು ಆರೋಪ ಕೇಳಿ ಬಂದಿದೆ. ವಿಚಾರಣಾಧೀನ ಕೈದಿ ಬಳಿ ಲಂಚಕ್ಕೆ ಬೇಡಿಕೆ ಇಡುವುದರ ಜೊತೆಗೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೌದು, 2024ರಲ್ಲಿ ಸೊಲದೇವನಹಳ್ಳಿಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟ ಹಮೀದ್ ಎಂಬಾತ ಅಕ್ಟೋಬರ್ 4ರಿಂದ …

Read More »

ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ

ಬೆಳಗಾವಿಯಲ್ಲಿ ಮತ್ತೆ ಅನ್ಯಕೋಮಿನ ಯುವಕನಿಂದ ಹಿಂದೂ ದೇವಸ್ಥಾನಕ್ಕೆ ಕಲ್ಲೇಸೆತ ಬೆಳಗಾವಿ ನಗರದ ಪಾಂಗುಳ ಗಲ್ಲಿಯಲ್ಲಿರುವ ಮಂದಿರಕ್ಕೆ ಕಲ್ಲುಎಸೆತ ಬೆಳಗಾವಿ ಉಜ್ವಲ ನಗರದ ನಿವಾಸಿ ಯಾಸೀರ್ ನರಸದಿ(19) ಎಂಬಾತನ ಕೃತ್ಯ ಕಲ್ಲು ಎಸೆದ ಅನ್ಯಕೋಮಿನ ಯುವಕನ ಯಾಸೀರ್ ಗೆ ಧರ್ಮದೇಟು ಕೊಟ್ಟು ಸ್ಥಳೀಯರು ಬಳಿಕ ಅನ್ಯಕೋಮಿನ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ ಕಲ್ಲು ಎಸೆದ ಯುವಕ ಯಾಸೀರ್ ಮಾನಸಿಕ ಅಸ್ವಸ್ಥತನಾಗಿದ್ದಾನೆಂದು ಪೊಲೀಸರ ಮಾಹಿತಿ ಆರೋಪಿಯನ್ನ ಈಗಾಗಲೇ ವಶಕ್ಕೆ ಪಡೆದಿರೋ ಮಾರ್ಕೆಟ್ …

Read More »

ಪಂಬನ್ ಸೇತುವೆ- ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ

ಹುಬ್ಬಳ್ಳಿ: ತಮಿಳುನಾಡಿನ ರಾಮೇಶ್ವರಂನಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಪಂಬನ್ ಸಮುದ್ರ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ, ಹುಬ್ಬಳ್ಳಿ ಹಾಗೂ ರಾಮೇಶ್ವರಂ ನಡುವೆ ರೈಲು ಸಂಚಾರ ಆರಂಭಗೊಳ್ಳಲಿದೆ. ಸೇತುವೆಯು ಭೂಮಿ ಮತ್ತು ರಾಮೇಶ್ವರಂ ದ್ವೀಪದ ನಡುವೆ ರೈಲು ಸಂಪರ್ಕ ಒದಗಿಸುತ್ತದೆ. ರಾಮನವಮಿಯ ಶುಭ ಸಂದರ್ಭದಲ್ಲಿ ಸೇತುವೆ ಉದ್ಘಾಟನೆಯಾಗಿದ್ದು, ಇದು ಭಾರತದ ಮೊದಲ ಲಂಬ ಲಿಫ್ಟ್ ರೈಲ್ವೆ ಸಮುದ್ರ ಸೇತುವೆಯಾಗಿದೆ. ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ …

Read More »

ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮೈಸೂರು: ಲಂಚ ಸ್ವೀಕರಿಸುತ್ತಿದ್ದ ನಂಜನಗೂಡು ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ …

Read More »