ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …
Read More »Daily Archives: ಏಪ್ರಿಲ್ 19, 2025
ಧರೋಜಿ ಧಾಮದಲ್ಲಿ ಕರಡಿಗಳ ತುಂಟಾಟ; ವರ್ಷಧಾರೆಯ ಸಿಂಚನಕ್ಕೆ ನರ್ತನ ಮಾಡಿದ ನವಿಲು
ವಿಜಯನಗರ: ಏಷ್ಯಾದ ಅತಿದೊಡ್ಡ ಕರಡಿ ಧಾಮವೆಂದು ಖ್ಯಾತಿ ಪಡೆದಿರುವ ದರೋಜಿ ಕರಡಿ ಧಾಮದ ಕಾನನದಲ್ಲಿ ಕರಡಿಗಳು ತುಂಟಾಟವಾಡಿ ನಲಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ತಿಂಗಳಿಂದ ಏರುತ್ತಿರುವ ಬಿಸಿಲಿನ ತಾಪದ ಬೇಗೆಯಿಂದ ಬೆಂದಿದ್ದ ವನ್ಯಮೃಗಗಳು ಮಳೆ ಬಂದ ಹಿನ್ನೆಲೆ ಹಾಗೂ ವಾತಾವರಣ ತಂಪಾದ ಕಾರಣ ಈ ರೀತಿ ಚಿನ್ನಾಟವಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿವೆ. ಕಡುಬಿಸಿಲಿನಿಂದ ಕಾದು ಹೆಂಚಾಗಿದ್ದ ಧರೆ, ಮಳೆಯಿಂದ ಕೂಲ್ ಕೂಲ್ ಆಗಿದ್ದು, ಕರಡಿ ಧಾಮದಲ್ಲಿನ ಕರಡಿಗಳು …
Read More »ಬಪ್ಪನಾಡು ವಾರ್ಷಿಕ ಜಾತ್ರೆ ವೇಳೆ ಮುರಿದು ಬಿದ್ದ ರಥ
ಮಂಗಳೂರು: ಕರಾವಳಿಯ ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ವರ್ಷಾವಧಿ ಜಾತ್ರೆಯ ವೇಳೆ ಬ್ರಹ್ಮರಥೋತ್ಸವ ನಡೆಯುತ್ತಿರುವಾಗ ರಥದ ಮೇಲ್ಬಾಗ ಮುರಿದು ಬಿದ್ದಿದೆ. ರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಘಟನೆ ಸಂಭವಿಸಿದೆ. ಈ ವೇಳೆ, ಕ್ಷೇತ್ರದಲ್ಲಿ ಸಾಕಷ್ಟು ಭಕ್ತರು ಹಾಗೂ ಅರ್ಚಕರು ರಥದಲ್ಲೇ ಇದ್ದರು. ಆದರೆ, ಯಾರಿಗೂ ಯಾವುದೇ ಹಾನಿ ಸಂಭವಿಸಿಲ್ಲ. ಬಳಿಕ …
Read More »ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿತು
ಮೈಸೂರು : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಹಾಕಿದ್ದ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಜಿಲ್ಲಾ ಬ್ರಾಹ್ಮಣ ವೇದಿಕೆ ಪ್ರತಿಭಟನೆ ನಡೆಸಿ ಕೃಷ್ಣರಾಜ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ನಗರದ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆ ಮುಂದೆ ಘಂಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದ ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, …
Read More »ಪರಿಸರ ರಕ್ಷಣೆಗೆ ಪಣ: ತುಮಕೂರು ಪರಿಸರ ಪ್ರೇಮಿಯ ಸೈಕಲ್ ಯಾತ್ರೆ –
ಬೆಳಗಾವಿ: ಪರಿಸರ ರಕ್ಷಣೆ, ಪ್ರಕೃತಿಯನ್ನು ಉಳಿಸಲು ಇಲ್ಲೊಬ್ಬ ಯುವ ಪರಿಸರ ಪ್ರೇಮಿ ಪಣ ತೊಟ್ಟಿದ್ದಾರೆ. ರಾಜ್ಯಾದ್ಯಂತ ಸೈಕಲ್ ಏರಿ ಪರಿಸರ ಯಾತ್ರೆ ಮಾಡುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹೌದು, ತಾವಾಯ್ತು, ತಮ್ಮ ಕುಟುಂಬ ಆಯ್ತು ಅಂತಾ ಇರುವ ಜನರ ಮಧ್ಯ ಇಲ್ಲೊಬ್ಬ ಯುವಕ ಪರಿಸರಕ್ಕಾಗಿ ರಾಜ್ಯ ಸುತ್ತುತ್ತಿದ್ದಾರೆ. ಹೀಗೆ ಸೈಕಲ್ ಸವಾರಿ ಮಾಡುತ್ತಿರುವ ಯುವಕನೇ ಪರಿಸರ ಪ್ರೇಮಿ ಮಹಾಲಿಂಗ. ಮೂಲತಃ ತುಮಕೂರಿನವರು. ರಾಜ್ಯದ ಎಲ್ಲಾ ಹಳ್ಳಿಗಳಲ್ಲಿ ಅರಣ್ಯ …
Read More »ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಪ್ರಕರಣ ಕುರಿತಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು
ಶಿವಮೊಗ್ಗ: ನಗರದ ಆದಿಚುಂಚನಗಿರಿ ಶಾಲೆಯಲ್ಲಿ ನಡೆದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜನಿವಾರ ತೆಗೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ದೂರು ನೀಡಿತ್ತು. ಏಪ್ರಿಲ್ 16ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿದೆ ಎಂದು ಆರೋಪಿಸಲಾಗಿದೆ. ಪರೀಕ್ಷಾ ವಿಚಾರದಲ್ಲಿ …
Read More »ರಿಕ್ಕಿ ರೈ ಮೇಲೆ ಗುಂಡಿನ ದಾಳಿ
ರಾಮನಗರ: ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಅವರ ಮೇಲೆ ದುಷ್ಕರ್ಮಿ ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ಬಿಡದಿ ಬಳಿ ನಡೆದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕಾರು ಚಾಲಕ ಬಸವರಾಜು ನೀಡಿರುವ ದೂರಿನ ಮೇರೆಗೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಾಲಕ ನೀಡಿದ ದೂರಿನಲ್ಲಿ …
Read More »ಮೊಬೈಲ್ ಶೌಚಾಲಯಕ್ಕ ಮಹನೀಯರ ಭಾವಚಿತ್ರ ಪರದೆ ಅಳವಡಿಸಿ ಅಪಮಾನ!
ಮೊಬೈಲ್ ಶೌಚಾಲಯಕ್ಕ ಮಹನೀಯರ ಭಾವಚಿತ್ರ ಪರದೆ ಅಳವಡಿಸಿ ಅಪಮಾನ!* ಬೆಳಗಾವಿ ತಾಲೂಕಿನ ಆನಗೋಳದ ಅಂಬೇಡ್ಕರ್ ಗಲ್ಲಿಯ ಎಸ್ ಕೆಇ ಸೊಸೈಟಿ ಗ್ರೌಂಡ್ ನಲ್ಲಿ ಘಟನೆ ಅಂಬೇಡ್ಕರ್ ನಗರದ ಹೊರವಲಯದಲ್ಲಿ ಸಂತ ಪಾರಾಯಣ ಕಾರ್ಯಕ್ರಮ ಆಯೋಜನೆ ಕಾರ್ಯಕ್ರಮಕ್ಕೆ ಬರೋ ಜನರಿಗೆ ಅಂಬೇಡ್ಕರ್ ಗಲ್ಲಿಯ ಸ್ಮಶಾನದಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಾಣ ತಾತ್ಕಾಲಿಕವಾಗಿ ನಿರ್ಮಾಣಗೊಂಡ ಮೊಬೈಲ್ ಶೌಚಾಲಯಕ್ಕೆ ಸುತ್ತಲಿನ ಪರದೆಗೆ ಮಹನೀಯರ ಭಾವಚಿತ್ರ ಅಳವಡಿಸಿ ಅಪಮಾನ *ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವದ ಬ್ಯಾನರ್ ಗಳನ್ನೇ ಮೊಬೈಲ್ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ತುರನೂರ ಗ್ರಾಮದ ಶ್ರೀ ಮಾರುತೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …
Read More »ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು
ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು ಬೆಂಗಳೂರು : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ಪ್ರಯತ್ನ ಮಾಡಲಾಗಿದ್ದು, ಕಳೆದ ಎರಡು ಆರ್ಥಿಕ ವರ್ಷದಲ್ಲಿ 1566 ಕಾಮಗಾರಿಗಳಿಗೆ ಸಂಪೂರ್ಣ ಬಾಕಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿ/ಗುತ್ತಿಗೆದಾರರಿಗೂ …
Read More »