Breaking News

Daily Archives: ಏಪ್ರಿಲ್ 26, 2025

ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ..

ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ.. ಜಾನುವಾರುಗಳ ಉದರ ಸಂಬಂಧಿ ಕಾಯಿಲೆ ಪತ್ತೆ ಮತ್ತು ಚಿಕಿತ್ಸೆ ಕುರಿತು ತಾಂತ್ರಿಕ ಸಮ್ಮೇಳನ.. ಕರ್ನಾಟಕ ಸರ್ಕಾರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳಗಾವಿ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘ ಜಿಲ್ಲಾ ಘಟಕ ಬೆಳಗಾವಿ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಪಶು ವೈದ್ಯಕೀಯ ದಿನಾಚರಣೆ ಅಂಗವಾಗಿ ಜಾನುವಾರಗಳಲ್ಲಿ ಉದರ ಸಂಬಂಧಿ, ಕಾಯಿಲೆಗಳ ಪತ್ತೆ ಮತ್ತು ಚಿಕಿತ್ಸೆ ಕುರಿತು …

Read More »

ಯಳ್ಳೂರು ಐತಿಹಾಸಿಕ ಗ್ರಾಮ…ಸ್ವಾತಂತ್ರ್ಯಪೂರ್ವದಿಂದಲೂ ಇಲ್ಲಿ ನಡೆದಿದೆ ಶಿಕ್ಷಣ ಕ್ರಾಂತಿ; ಮಹಾ ಮಾಜಿ ಸಿಎಂ ಶರದ್’ಚಂದ್ರ ಪವಾರ್

ಯಳ್ಳೂರು ಐತಿಹಾಸಿಕ ಗ್ರಾಮ…ಸ್ವಾತಂತ್ರ್ಯಪೂರ್ವದಿಂದಲೂ ಇಲ್ಲಿ ನಡೆದಿದೆ ಶಿಕ್ಷಣ ಕ್ರಾಂತಿ; ಮಹಾ ಮಾಜಿ ಸಿಎಂ ಶರದ್’ಚಂದ್ರ ಪವಾರ್ ಯಳ್ಳೂರ ಗ್ರಾಮದ ಸರ್ಕಾರಿ ಮರಾಠಿ ಮಾದರಿ ಶಾಲೆಯ 150ನೇ ವಾರ್ಷಿಕೋತ್ಸವ ಯಳ್ಳೂರ ಗ್ರಾಮವು ಇತಿಹಾಸವನ್ನು ನಿರ್ಮಿಸುವ ಗ್ರಾಮವಾಗಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣಕ್ಕಾಗಿ ಒತ್ತು ನೀಡಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಶರದ್’ಚಂದ್ರಜೀ ಪವಾರ್ ಹೇಳಿದರು. ಇಂದು ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸರ್ಕಾರಿ ಮರಾಠಿ ಮಾದರಿ ಶಾಲೆಯ 150ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ವೇದಿಕೆ …

Read More »

ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ “ಫೂಡ್ ಫೆಸ್ಟಿವಲ್”

ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ “ಫೂಡ್ ಫೆಸ್ಟಿವಲ್” ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ ಫೂಡ್ ಫೆಸ್ಟಿವಲ್’ನ್ನು ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ, ಕಾಲೇಜು ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಯ ಮತ್ತು ಸ್ಥಳೀಯ ಖಾದ್ಯಗಳನ್ನೊಳಗೊಂಡ ಮಳಿಗೆಗಳನ್ನು ನಿರ್ಮಿಸಿ ಸಾಂಪ್ರದಾಯಿಕ ಮತ್ತು ಪಾಶ್ಚಿಮಾತ್ಯ ಆಹಾರವನ್ನು ಮಾರಾಟ ಮಾಡಿದರು. ಅಲ್ಲದೇ ಆ ಆಹಾರದ ಬಗ್ಗೆಯೂ ಅವರು ಮಾಹಿತಿ ನೀಡಿದರು. ಅದರಲ್ಲಿ ಮಜ್ಜಿಗೆ, ಸೊಲಕಡಿ, ಘಾವನ್, ಆಲೂ ವಡಿ, ಝೂಣಕಾ ಭಾಕರ್, ದಹಿ ಭಾತ್ , …

Read More »

2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು…

2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು… 2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು 1 ಬೆಳ್ಳಿ ಮತ್ತು 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ 2 ನೇ ಓಪನ್ ನ್ಯಾಷನಲ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ 2025 ಅನ್ನು ಆಯೋಜಿಸಲಾಗಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್‌ಗಳು ಭಾಗವಹಿಸಿದ್ದರು. ಈ …

Read More »

ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್‌ ಚೋರರು ಅಂದರ್‌, 5 ದ್ವಿಚಕ್ರ ವಾಹನ ವಶಕ್ಕೆ

ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್‌ ಚೋರರು ಅಂದರ್‌, 5 ದ್ವಿಚಕ್ರ ವಾಹನ ವಶಕ್ಕೆ ಬೈಕ್‌ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಪಡಿಸಿಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಜೋರಾಗಿಯೇ ನಡೆದಿತ್ತು. ಈ ಕಳ್ಳರ ಮೇಲೆ ನಿಗಾ ವಹಿಸಿದ್ದ ಪೊಲೀಸರು ಕಳ್ಳರ …

Read More »

ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ವಿಜಯಪುರ, ಏಪ್ರಿಲ್ 25: ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್​ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್​ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …

Read More »

ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು, ಏಪ್ರಿಲ್​ 26: ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಲಕ್ಷ ಸಸಿ ನೆಡುವ ಯೋಜನೆ ವಿಫಲ: ನಿರ್ವಹಣೆ ಇಲ್ಲದೇ ಒಣಗಿ ಹೋದ ಸಾವಿರಾರು ಗಿಡಗಳು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಳೆದ ವರ್ಷ ಉದ್ದೇಶಿಸಿದ್ದ ಒಂದು ಲಕ್ಷ ಗಿಡ ನೆಡುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಪಾಲಿಕೆ ಲಕ್ಷ ಸಸಿ ನೆಡುವ ಗುರಿ ಇಟ್ಟುಕೊಂಡಿತ್ತು. ಆದರೆ ಏಳೇ ಸಾವಿರ ಗಿಡಗಳನ್ನು ನೆಟ್ಟಿದ್ದು, ಅವುಗಳು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಒಣಗಿ ಹೋಗಿವೆ. ಎಲೆಲ್ಲಿ ಸಸಿ ನೆಡಲು ಉದ್ದೇಶಿಸಲಾಗಿತ್ತು?: ಕಳೆದ ವರ್ಷ ಮಳೆಗಾಲದ ಅವಧಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 575 ಉದ್ಯಾನಗಳ ಖಾಲಿ ಜಾಗ, ಪಾಲಿಕೆ ಒಡೆತನದ ಖಾಲಿ ಜಾಗ, ರಸ್ತೆ …

Read More »

ಬೆಳಗಾವಿಯಲ್ಲಿ ಅದ್ಧೂರಿ‌ ಬಸವ ಜಯಂತಿ

ಬೆಳಗಾವಿ: ಎಪ್ರೀಲ್ 30ರಂದು ನಾಡಿನಾಧ್ಯಂತ ಕರ್ನಾಟಕದ ಸಾಂಸ್ಕೃತಿಕ‌ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿ ಎಲ್ಲ ಬಸವಪರ ಸಂಘಟನೆಗಳು ಒಟ್ಟಾಗಿ ಜಯಂತಿ ಆಚರಿಸಲು ನಿರ್ಧರಿಸಿವೆ. ಏ.27ರಂದು ವಿಶ್ವಶಾಂತಿ, ಲೋಕಕಲ್ಯಾಣದ ಸಂಕಲ್ಪ ತೊಟ್ಟು ಬೈಕ್ ರ್ಯಾಲಿ, ಮೇ 4ರಂದು ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಮಹಾನಗರದಲ್ಲಿರುವ ಸುಮಾರು 15 …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಶ್ರೀ ಪೇಠಾ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …

Read More »