ಕಲಬುರಗಿ, ಮೇ 28: ಕಲಬುರಗಿಯ (Kalaburagi) ನಂದೂರು ಇಂಡಸ್ಟ್ರಿಯಲ್ ಏರಿಯಾದಲ್ಲಿನ ದಿನೇಶ್ ದಾಲ್ ಇಂಡಸ್ಟ್ರೀಸ್ ಮಾಲೀಕ ಗೋವಿಂದ ವಾಗ್ಮೋರೆ ಎಂಬುವರು ಎಪಿಎಂಸಿಯ (APMC) ಸುಮಾರು 40ಕ್ಕೂ ಹೆಚ್ಚು ವರ್ತಕರಿಗೆ 15 ಕೋಟಿ ರೂಪಾಯಿ ವಂಚಿಸಿದ್ದಾನೆ. ಕಳೆದ ಹಲವಾರು ದಿನಗಳಿಂದ ಪೋನ್ ಮಾಡಿದರೂ ಸ್ವಿಚ್ಚ್ ಆಫ್ ಮಾಡಿಕೊಂಡು ಓಡಾಡುತ್ತಿದ್ದಾನೆ. ಸೋಮವಾರ (ಮೇ.26) ರಾತ್ರಿ ಏಕಾಏಕಿ ದಾಲ್ ಮಿಲ್ನಲ್ಲಿದ್ದ ನೂರಾರು ಮೂಟೆ ತೊಗರಿ ಬೇಳೆಯನ್ನು ಯಾರಿಗೂ ಗೊತ್ತಾಗದಂತೆ ಲಾರಿಯಲ್ಲಿ ಸಾಗಿಸಲಾಗುತ್ತಿತ್ತು. ಈ ವಿಚಾರ ತಿಳಿದ …
Read More »Daily Archives: ಮೇ 28, 2025
ಡಂಬಲ್ಸ್ ನಿಂದ ಹೊಡೆದು ಪತ್ನಿ ಕೊಂದ ಪತಿರಾಯ
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ರೂಮ್ ನಲ್ಲಿ ಮಲಗಿದ್ದ ಹೆಂಡತಿಯನ್ನು ಡಂಬಲ್ಸ್ ನಿಂದ ಹೊಡೆದು ಕೊಲೆಗೈದ ಬಳಿಕ ಮತ್ತೊಂದು ರೂಮ್ ಗೆ ತೆರಳಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ತಾಲೂಕಿನಲ್ಲಿ ನಡೆದಿದೆ. ಗಂಡ – ಹೆಂಡತಿಯ ಜಗಳದಲ್ಲಿ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದ ಮಾರುತಿ ನಗರದಲ್ಲಿ ಮಂಗಳವಾರ (ಮೇ 27) ಘಟನೆ ನಡೆದಿದ್ದು, ಹೆಂಡತಿ ಸುಮಾಳನ್ನು ಕೊಲೆ ಮಾಡಿದ ಗಂಡ ಬಸವಚಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ವಿಜಯಪುರ ಪೊಲೀಸರು …
Read More »ಆಯತಪ್ಪಿ ಹಳ್ಳಕ್ಕೆ ಬಿದ್ದ ಎತ್ತಿನಗಾಡಿ: ಅಣ್ಣ-ತಮ್ಮ ಸೇರಿ ಒಂದು ಎತ್ತು ನೀರುಪಾಲು
ಚಿಕ್ಕೋಡಿ (ಬೆಳಗಾವಿ): ಎತ್ತಿನ ಗಾಡಿ ಆಯತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಮಂಗಳವಾರ (ಮೇ 27) ನಡೆದಿದೆ. ಗಣೇಶ್ ಸಂಜು ಕಾಂಬಳೆ (9), ದೀಪಕ್ ಸಂಜು ಕಾಂಬಳೆ (11) ಮೃತ ಅಣ್ಣ- ತಮ್ಮ. ಎತ್ತಿನಗಾಡಿಯಲ್ಲಿ ಸಂಬರಗಿಯಿಂದ ನಾಗನೂರ ಪಿಎ ಗ್ರಾಮಕ್ಕೆ ಹೋಗುತ್ತಿದ್ದಾಗ ದಾರಿಮಧ್ಯದಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು ನಾಲ್ಕು ಜನ …
Read More »ಸನ್ನಡತೆ ಮೇರೆಗೆ 74 ಅಪರಾಧಿಗಳಿಗೆ ರೌಡಿಶೀಟರ್ಗಳ ಪಟ್ಟಿಯಿಂದ ಬಿಡುಗಡೆ
ತುಮಕೂರು: ಸನ್ನಡತೆ ಆಧಾರದ ಮೇಲೆ 74 ರೌಡಿಶೀಟರ್ಗಳನ್ನು ರೌಡಿಶೀಟರ್ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಮಂಗಳವಾರ ತುಮಕೂರು ಎಸ್ಪಿ ಕಚೇರಿ ಬಳಿಯಿರುವ ಡಿಆರ್ ಗ್ರೌಂಡ್ನಲ್ಲಿ ರೌಡಿಶೀಟರ್ಗಳ ಸಭೆ ಕರೆಯಲಾಗಿತ್ತು. ಈ ವೇಳೆ, ಎಸ್ಪಿ ಅಶೋಕ್ ಕೆ.ವಿ. ರೌಡಿಶೀಟರ್ಗಳಿಗೆ ಗುಡ್ನ್ಯೂಸ್ ನೀಡಿದ್ದಾರೆ. ಈ ಆಧಾರದ ಮೇಲೆ ರೌಡಿಶೀಟರ್ ಪಟ್ಟಿಯಿಂದ ಕೈ ಬಿಡಲಾಗುತ್ತಿದೆ; ತುಮಕೂರು ಜಿಲ್ಲೆಯಲ್ಲಿ ಒಟ್ಟು 901 ಜನ ರೌಡಿಶೀಟರ್ಗಳಿದ್ದಾರೆ. ಅವರನ್ನು ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್ಗಳು ಕಳೆದ 10 ವರ್ಷಗಳಿಂದ ಯಾವುದೇ ಕೇಸ್ಗಳಲ್ಲಿ ಭಾಗಿಯಾಗಿರಲಿಲ್ಲ. …
Read More »ಮುಂಗಾರು ಮಳೆಗೆ ಬಾಯ್ತೆರೆದ ಗುಂಡಿಗಳು
ಬೆಳಗಾವಿ: ಮುಂಗಾರು ಮಳೆಗೆ ಕುಂದಾನಗರಿಯ ಮುಖ್ಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿ ವರ್ಷವೂ ನಮಗೆ ಈ ಗೋಳು ತಪ್ಪಿದ್ದಲ್ಲ. ನಮ್ಮ ಪ್ರಾಬ್ಲಂ ಕೇಳುವವರೇ ಇಲ್ಲ ಎಂದು ಆಡಳಿತಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿ ನಗರ ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಾಂಧಿ ನಗರ ಸೇತುವೆ ಬಳಿಯ ಸರ್ವೀಸ್ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯ ಸೃಷ್ಟಿಯಾಗಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದಾರೆ. ಜನರು ಇಷ್ಟೆಲ್ಲಾ …
Read More »ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ
ಹುಕ್ಕೇರಿ : ಒಳಚರಂಡಿ ಕಳಪೆ ಕಾಮಗಾರಿಗೆ ಬೇಸತ್ತ ಜನ ಕಳಪೆ ಮಟ್ಟದ ಒಳಚರಂಡಿ ಕಾಮಗಾರಿ ಅಧಿಕಾರಿಗಳ ವಿರುದ್ಧ ಜನರ ಹಿಡಿಶಾಪ ಹುಕ್ಕೇರಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ಪುರಸಭೆ ಅಧಿಕಾರಿಗಳು ಗುಣಮಟ್ಟ ಪರಿಶೀಲಿಸುವಂತೆ ಆಗ್ರಹ
Read More »ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು,ಕಾಂಗ್ರೆಸ್ ಕಾರ್ಯಕರ್ತರು…
ಬೆಂಗಳೂರಿನ ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮಕ್ಕೆ ತೆರಳಿದ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು… ಜೈ ಜವಾನ್ – ಜೈ ಹಿಂದ್ ಕಾರ್ಯಕ್ರಮ ಬೆಂಗಳೂರಿನಲ್ಲಿ ಕಾರ್ಯಕ್ರಮದ ಆಯೋಜನೆ ಬೆಳಗಾವಿಯ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ರವಾನೆ ಬೆಂಗಳೂರಿನಲ್ಲಿ ನಡೆಯಲಿರುವ ಜೈ ಜವಾನ್ ಜೈ ಹಿಂದ್ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಮಾಜಿ ಸೈನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ …
Read More »