ಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಫಲಿತಾಂಶ ಕಡಿಮೆ ಇರುವ ಜಿಲ್ಲೆಗಳಲ್ಲಿ ಡಿಡಿಪಿಐ ಗಳನ್ನೇ ನೇರ ಹೊಣೆ ಮಾಡುವಂತೆ ಸೂಚಿಸಿದರು. SSLC ಯಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …
Read More »Monthly Archives: ಮೇ 2025
ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು ಸಿಗರೇಟ್ ಸೇದುವವರೇ ಹುಷಾರ್
ಇನ್ಮುಂದೆ ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರೇ ಹುಷಾರ್. ರಾಜ್ಯದಲ್ಲಿ ಕಟ್ಟುನಿಟ್ಟಿನ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ ದಂಡ ತೆರಬೇಕಾಗುತ್ತದೆ. ಸರವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವುದು, ಗುಟ್ಕಾ, ತಂಬಾಕುಗಳನ್ನು ಹಾಕಿ ಉಗುಳಿದರೆ ಇನ್ಮುಂದೆ 1000 ರೂಪಾಯಿ ದಂಡ ಪಾವತಿಸಬೇಕಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕ್ಋತ ಅಧಿಸೂಚನೆ ಹೊರಡಿಸಿದ್ದು, ಕಾಯ್ದೆ ಜಾರಿಗೆ ತಂದಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಗುಟ್ಕಾ, ತಂಬಾಕು ಉತ್ಪನ್ನ, …
Read More »ನಿವೃತ್ತಿ ಕಾರ್ಯಕ್ರಮದ ಮೂಡನಲ್ಲಿದ್ದ ಧಾರವಾಡ ಪಿಡಬ್ಲುಡಿ ಮುಖ್ಯ ಇಂಜಿನಿಯರಗೆ ಲೋಕಾ ಶಾಕ್
ನಿವೃತ್ತಿ ಕಾರ್ಯಕ್ರಮದ ಮೂಡನಲ್ಲಿದ್ದ ಧಾರವಾಡ ಪಿಡಬ್ಲುಡಿ ಮುಖ್ಯ ಇಂಜಿನಿಯರಗೆ ಲೋಕಾ ಶಾಕ್…ನಿವೃತ್ತಿ ಕಾರ್ಯಕ್ರಮದ ಅಂತಿಮ ಸಿದ್ಧತೆಯಲ್ಲಿದ್ದ ಮುಖ್ಯ ಇಂಜಿನಿಯರ ಮನೆಯ ಮೇಲೆ ದಾಳಿ.. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ ಇಂದು ಧಾರವಾಡ ಪಿಡಬ್ಲುಡಿಯ ಮುಖ್ಯ ಇಂಜಿನಿಯರ್ ಎಚ್ ಸುರೇಶರವರು ತಮ್ಮ ನಿವೃತ್ತಿ ಕಾರ್ಯಕ್ರಮದ ಸಂಭ್ರಮದಲ್ಲಿ ಬ್ಯೂಸಿಯಾಗಬೇಕಿತ್ತು. ಆದರೆ ಆ ಸಂಭ್ರಮಕ್ಕೆ ಲೋಕಾಯುಕ್ತರು ದಾಳಿ ನಡೆಸುವ ಮೂಲಕ ಶಾಕ್ ನೀಡಿ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದಾರೆ. ಹೌದು ಧಾರವಾಡ ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ …
Read More »ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು
ಬೆಳಂಬೆಳಗ್ಗೆ ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು ಬೆಳಗಾವಿಯ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದಾಳಿ ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಮೇಲೆ ದಾಳಿ ಬೆಳಗಾವಿಯ ವಿದ್ಯಾನಗರದಲ್ಲಿರುವ ಸಿದ್ಧಲಿಂಗಪ್ಪ ಬಾನಸಿ ಮನೆ ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ — ಧಾರವಾಡದ PWD ಮುಖ್ಯ ಇಂಜಿನಿಯರ್ ಎಚ್ಸಿ ಸುರೇಶ ಮನೆ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ …
Read More »ಕಾರುಗಳು ‘ಆಪರೇಷನ್ ಸಿಂಧೂರ’ಮಯ
ಬೆಳಗಾವಿ: ದೇಶಾದ್ಯಂತ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಹಲವೆಡೆ ತಮ್ಮ ಮಕ್ಕಳಿಗೆ ಸಿಂಧೂರ ಅಥವಾ ಸಿಂಧೂರಿ ಅಂತಾ ಹೆಸರಿಟ್ಟು ಸಂಭ್ರಮಿಸುತ್ತಿದ್ದರೆ, ಮತ್ತೊಂದಿಷ್ಟು ಕಡೆ ಭಾರತೀಯ ಸೈನಿಕರ ಪರಾಕ್ರಮ ಮೆಚ್ಚಿ ತಿರಂಗಾ ರ್ಯಾಲಿ ಸೇರಿ ದೇಶಾಭಿಮಾನ ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ಇಬ್ಬರು ದೇಶಾಭಿಮಾನಿಗಳು ತಮ್ಮ ಕಾರುಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬಿಂಬಿಸುವ ಚಿತ್ರಗಳನ್ನು ಅಂಟಿಸಿದ್ದಾರೆ. ಬೆಳಗಾವಿಯ ಹೈಟೆಕ್ ಮೋಟರ್ಸ್ ಆ್ಯಂಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ನ ಮ್ಯಾನೇಜಿಂಗ್ …
Read More »ಲೋಕಾಯುಕ್ತ ಇನ್ಸ್ಪೆಕ್ಟರ್ಗೆ ಲಂಚ ನೀಡಲು ಬಂದ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿ ಅರೆಸ್ಟ್
ಮಂಗಳೂರು: ದಾಳಿ ಮಾಡದಂತೆ ಲೋಕಾಯುಕ್ತ ಇನ್ಸ್ಪೆಕ್ಟರ್ಗೆ ಲಂಚ ನೀಡಲು ಹೋದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇಂದು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು. ಪೊಲೀಸ್ …
Read More »21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ, ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ
ಬೆಂಗಳೂರು: 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2024ಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆ ಫೆಬ್ರವರಿ 2024ರಂದು ಉಭಯ ಸದನಗಳಲ್ಲಿ ಅಂಗೀಕಾರವಾಗಿತ್ತು. 2003ರ ಕೇಂದ್ರ ಕಾಯ್ದೆಯನ್ನು …
Read More »ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಆದೇಶ
ಬೆಳಗಾವಿ: ಸರ್ಕಾರಿ ಶಾಲೆಗೆ ತರಗತಿ ಕೊಠಡಿಗಳ ಮಂಜೂರಾತಿಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ಶಿಕ್ಷಕನನ್ನು ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಅಮಾನತುಗೊಳಿಸಿರುವ ಘಟನೆ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅಮಾನತುಗೊಂಡವರು. ನಿಡಗುಂದಿ ಗ್ರಾಮದ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 146 ವಿದ್ಯಾರ್ಥಿಗಳಿದ್ದರೂ ಅಗತ್ಯ ಕೊಠಡಿಗಳಿಲ್ಲ. ಹಾಗಾಗಿ, ಮಕ್ಕಳ ಸಂಖ್ಯೆ ಅನುಸಾರ ಕೊಠಡಿಗಳ ಮಂಜೂರಾತಿ ಮಾಡುವಂತೆ ಮಂಗಳವಾರ ಶಾಲೆಯ …
Read More »ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD
ಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಹೊಸ ಇತಿಹಾಸ ನಿರ್ಮಿಸಿದೆ. ಮೇ 30ರಂದು ಅಂತಿಮ ಸೆಮಿಸ್ಟರ್ನ 50,321 ವಿದ್ಯಾರ್ಥಿಗಳ ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ. ಎಸ್. ವಿದ್ಯಾಶಂಕರ ತಿಳಿಸಿದ್ದಾರೆ. ಕಳೆದ ವರ್ಷ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟ: ಕಳೆದ ಬಾರಿ ಮೂರು …
Read More »