ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ವೇತಾ ಪೂಜಾರಿ ಮೇ 8ರಂದು ತಮ್ಮ ಫೇಸ್ಬುಕ್ ಪೇಜ್ನಲ್ಲಿ ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮಂಗಳೂರು ಉತ್ತರ ವಿಧಾನಸಭಾ …
Read More »Monthly Archives: ಮೇ 2025
ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರೈಲ್ವೆಯ ನಾಲ್ವರು ಅಧಿಕಾರಿಗಳ ವಿರುದ್ಧ ಪ್ರಕರಣ
ಮೈಸೂರು: ನಗರದ ಕೇಂದ್ರೀಯ ರೈಲ್ವೆ ವರ್ಕ್ಶಾಪ್ನಲ್ಲಿನ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ವರ್ಕ್ಶಾಪ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆ ನೀಡಿದ ದೂರಿನ ಮೇರೆಗೆ ಮೂವರು ಸೀನಿಯರ್ ಸೆಕ್ಷನ್ ಇಂಜಿನಿಯರ್ಗಳು ಹಾಗೂ ಓರ್ವ ಮಹಿಳಾ ಅಧಿಕಾರಿಯ ವಿರುದ್ದ ಅಶೋಕಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ ವಿವರ: ಕೆಲಸದ ವೇಳೆ ಇಂಜಿನಿಯರ್ವೊಬ್ಬರು ಲೈಂಗಿಕ ಪದ ಬಳಸಿ ಮಾತನಾಡುವುದು, ಲೈಂಗಿಕ …
Read More »ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ಯುವಕನ ಬರ್ಬರ ಕೊಲೆ,
ರಾಯಚೂರು: ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ನಡುರಸ್ತೆಯಲ್ಲೇ ನೆತ್ತರು ಹರಿದಿದೆ. ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ನಗರದ ಡಾ.ಜಾಕೀರ್ ಹುಸೇನ್ ವೃತ್ತದಲ್ಲಿ ಯುವಕನ ಕೊಲೆ ನಡೆದಿದೆ. ಜಹೀರಾಬಾದ್ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ. ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕರೀಂ ಬಂಧಿತ ಆರೋಪಿ. ಬೆಳಗ್ಗೆ ನಾಲ್ಕು ಗಂಟೆಗೆ ಇಡ್ಲಿ ತಿನ್ನಲು ಸಾದಿಕ್ ಮನೆಯಿಂದ ಹೊರಗೆ ಬಂದಿದ್ದ. ಈ …
Read More »ಭೀಮಗಡ ದಟ್ಟಾರಣ್ಯದ 27 ಕುಟುಂಬಗಳಿಗೆ ಪುನರ್ವಸತಿ, ತಳೆವಾಡಿ ಫಲಾನುಭವಿಗಳಿಗೆ ತಲಾ 10 ಲಕ್ಷ ರೂ. ಚೆಕ್
ಬೆಳಗಾವಿ: “ಭೀಮಗಡ ಸೇರಿ ರಾಜ್ಯದ ವಿವಿಧೆಡೆ ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನರಿಗೆ ಶಾಶ್ವತ ನೆಲೆ ಕಟ್ಟಿಕೊಡಲು ಒಂದು ಸಾವಿರ ಕೋಟಿ ಅನುದಾನದ ಅವಶ್ಯಕತೆ ಇದೆ. ಅನುದಾನ ನೀಡುವ ಸಂಬಂಧ ಕೇಂದ್ರದ ಪರಿಸರ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಕಳಿಸಿದ್ದೇವೆ” ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. “ಹಿಂದಿನ ತಲೆಮಾರಿನ ಅರಣ್ಯವಾಸಿಗಳಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಚೆನ್ನಾಗಿ ತಿಳಿದಿತ್ತು, ಆದರೆ ಇಂದಿನ ಪೀಳಿಗೆಯ ಅರಣ್ಯವಾಸಿಗಳಿಗೆ ಅಷ್ಟು ಪರಿಣತಿ ಇಲ್ಲ. ಹೀಗಾಗಿ ನಾಗರಿಕ ಸಮಾಜದಲ್ಲಿ …
Read More »ಹು-ಧಾ ಅವಳಿನಗರದಲ್ಲಿ ಅಪರಿಚಿತ ವ್ಯಕ್ತಿಗಳ ಓಡಾಟ: ಪೊಲೀಸ್ ಆಯುಕ್ತರಿಗೆ ಪತ್ರ ಬರೆದ ಶಾಸಕ ಬೆಲ್ಲದ
ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿನಗರಕ್ಕೆ ಪಾಕಿಸ್ತಾನ ಸೇರಿದಂತೆ ಬೇರೆ ದೇಶದ ಅನುಮಾನಾಸ್ಪದ ವ್ಯಕ್ತಿಗಳು ಕಾಲಿಟ್ಟಿದ್ದಾರಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಅಂತಹ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರಿಗೆ ಶಾಸಕ ಅರವಿಂದ ಬೆಲ್ಲದ ಪತ್ರ ಬರೆದಿದ್ದಾರೆ. ನಿನ್ನೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಶಾಸಕ ಅರವಿಂದ ಬೆಲ್ಲದ ಅವರು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕೆಲ ಪ್ರಾರ್ಥನಾ ಮಂದಿರಗಳಲ್ಲಿ ಅಪರಿಚಿತರ ಓಡಾಟ ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಅವರು ಸ್ಥಳೀಯರು …
Read More »ಸೈನಿಕರ ಒಳಿತಿಗಾಗಿ ಪ್ರಾರ್ಥಿಸಿದ ಗಣಪತಿ ಸಚ್ಚಿದಾನಂದ ಸ್ವಾಮೀ
ಮೈಸೂರು: ಮೈಸೂರಿನ ಅವಧೂತ ದತ್ತ ಪೀಠದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಭಗವದ್ಗೀತಾ ಪಾರಾಯಣ ಮಾಡಿ, ನಮ್ಮ ದೇಶದ ಸೈನಿಕರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದಾರೆ. ಆಶ್ರಮದ ನಾದ ಮಂಟಪದಲ್ಲಿ ಇಂಟರ್ನ್ಯಾಷನಲ್ ಗೀತಾ ಫೌಂಡೇಶನ್ ವತಿಯಿಂದ ನಡೆದ ಭಗವದ್ಗೀತೆ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದವರಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಶ್ರೀಗಳು ಪದಕ ಮತ್ತು ಪ್ರಮಾಣ ಪತ್ರ ವಿತರಿಸುವ ಮೊದಲು ಗೀತಾ ಪಾರಾಯಣ ಮಾಡಿದರು. ನಮ್ಮ …
Read More »ಆರ್ಸಿಬಿ-ಕೆಕೆಆರ್ ಪಂದ್ಯ ಮಳೆಯಿಂದ ರದ್ದು: ಟಿಕೆಟ್ ಖರೀದಿಸಿದವರಿಗೆ ಹಣ ಮರುಪಾವತಿ ಘೋಷಿಸಿದ ಫ್ರಾಂಚೈಸಿ
ಬೆಂಗಳೂರು: ವಾರದ ಬಳಿಕ ಪುನರಾರಂಭವಾಗಿದ್ದ ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟರ್ ರೈಡರ್ಸ್ ನಡುವಿನ ಪಂದ್ಯದ ಟಿಕೆಟ್ ಖರೀದಿಸಿದ್ದ ಅಭಿಮಾನಿಗಳಿಗೆ ಆರ್ಸಿಬಿ ಫ್ರಾಂಚೈಸಿ ಗುಡ್ ನ್ಯೂಸ್ ನೀಡಿದೆ. ವರುಣನ ಅವಕೃಪೆಯಿಂದ ಟಾಸ್ ಪ್ರಕ್ರಿಯೆ ನಡೆಸಲು ಸಹ ಸಾಧ್ಯವಾಗದೆ ರದ್ದಾಗಿದ್ದ ಆರ್ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯದ ಟಿಕೆಟ್ ಹಣವನ್ನು ವಾಪಸ್ ಪಾವತಿಸುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾಹಿತಿ ನೀಡಿದೆ. ಮಳೆಯಿಂದ ಪಂದ್ಯ ರದ್ದಾದ ಬಳಿಕ ನಿರಾಸೆಗೊಂಡಿದ್ದ ಅಭಿಮಾನಿಗಳು …
Read More »ವಿಧಾನಸೌಧ ಮುಂದೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ಗೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಿರುವ ಸಿಎಂ
ಬೆಂಗಳೂರು: ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ. ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ …
Read More »ಅಗ್ನಿ ಅವಘಡದಿಂದ 3 ಮನೆಗಳು ಭಸ್ಮ
ಮೈಸೂರು: ತಾಲೂಕಿನ ಬೋರೆ ಆನಂದೂರು ಗ್ರಾಮದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದವು. ಶಾಸಕ ಜಿ.ಟಿ.ದೇವೇಗೌಡ ಅವರು ಈ ಮನೆಗಳ ಮಾಲೀಕರಾದ ಶನಿವಾರೇಗೌಡ, ವೆಂಕಟೇಶ್ ಗೌಡ, ಶ್ರೀನಿವಾಸ್ ಗೌಡ ಅವರಿಗೆ ವೈಯಕ್ತಿಕವಾಗಿ ತಲಾ 1 ಲಕ್ಷ ರೂಪಾಯಿ ಪರಿಹಾರ ವಿತರಿಸಿದರು. ಗ್ರಾಮಕ್ಕೆ ಇಂದು ಭೇಟಿ ನೀಡಿದ ಅವರು, ಮನೆ ಕಳೆದುಕೊಂಡ ಮೂರು ಕುಟುಂಬದವರ ಜೊತೆ ಮಾತನಾಡಿ, ಧೈರ್ಯ ತುಂಬಿದರು. ಆಕಸ್ಮಿಕವಾಗಿ ನಡೆದಿರುವ ಘಟನೆಯಿಂದಾಗಿ ಮನೆಯಲ್ಲಿದ್ದ ಎಲ್ಲ …
Read More »ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ.
ಬೆಳಗಾವಿ :ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ. ಶಿವಾಜಿ ಮಹಾರಾಜರು ಬರೀ ಮರಾಠಿಗರಿಗೆ ಸೀಮಿತವಾದ ವ್ಯಕ್ತಿ ಅಲ್ಲಾ. ಅಂಬೇಡ್ಕರ್ ಅವರನ್ನ ಬರೀ ದಲಿತರು ಗೌರವಿಸುವುದು ಸರಿಯಲ್ಲ. ಎಲ್ಲರೂ ಗೌರವಿಸುವ ಕೆಲಸ ಆಗಬೇಕೆಂದ ಸತೀಶ್ ಜಾರಕಿಹೊಳಿ. ಶಿವಾಜಿ ಮಹಾರಾಜರ ಬಗ್ಗೆ ಪರವಾದ ವಿರೋಧವಾದ ಲೇಖನ ಇವೆ. ಈ ದೇಶದಲ್ಲಿ ಒಬ್ರೂ ಲೆಫ್ಟ್ ಹೋಗ್ತಾರೆ ಮತ್ತೊಬ್ಬರು ರೈಟ್ ಹೋಗ್ತಾರೆ. ಲೆಫ್ಟ್ ಇದ್ದವರು ರೈಟ್ ಬರಲ್ಲಾ, ರೈಟ್ ಇದ್ದವರು ಲೆಫ್ಟ್ ಬರಲ್ಲಾ. ಇದರಿಂದ ದೇಶ …
Read More »