ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು ರಾಜ್ಯದ ಕಾನೂನು ಸುವ್ಯವಸ್ಥೆಗಿಂತ ಯಾವುದೂ ದೊಡ್ಡದಲ್ಲ: ರಾಜ್ಯದ ಜನರ ರಕ್ಷಣೆಗೆ ಮೊದಲ ಆಧ್ಯತೆ ನೀಡಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ವರದಿ ನೀಡಿ : ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದ ಸಿಎಂ ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು: ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: …
Read More »Monthly Archives: ಮೇ 2025
ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ
ಬೆಳಗಾವಿಗೆ ರಜೆಗೆ ಬಂದಿದ್ದ ಐಶ್ವರ್ಯಾ ಆತ್ಮಹತ್ಯೆ… ರಾಹುಲ್ ಕರೆ ತಪಾಸಿಸಿ ಎಂದ ಐಶ್ವರ್ಯಾ ತಂದೆ ನಿಪ್ಪಾಣಿ ತಾಲೂಕಿನ ರಾಹುಲ್ ಐಶ್ವರ್ಯಗೆ ಫೋನ್ ಕರೆ ಮಾಡಿದ್ದಕ್ಕೆ ಐಶ್ವರ್ಯ ಎಂಬ ಯುವತಿ ಬೆಳಗಾವಿ ನಗರದ ಹೊರ ವಲಯದಲ್ಲಿರುವ ಹೊನಗಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಐಶ್ವರ್ಯ ತಂದೆ ಶಿವಾಜಿ ಆರೋಪಿಸಿದ್ದಾರೆ. ಶನಿವಾರ ಖಾಸಗಿ ಆಸ್ಪತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಶಾಲೆ ರಜೆ ಇದ್ದ ಕಾರಣ ನನ್ನ ಸಹೋದರಿಯ ಮನವಿಗೆ ಐಶ್ವರ್ಯಳನ್ನು ಕಳುಹಿಸಿದ್ದೆ. ಆದರೆ ಐಶ್ವರ್ಯ ಗೆ ನಿಪ್ಪಾಣಿಯ …
Read More »ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣಗೊಳಿಸಲಿ…
ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣಗೊಳಿಸಲಿ… ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲಿ; ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋತ್ ಸ್ವಸಹಾಯ ಸಂಘಗಳು ಮಹಿಳಾ ಸಶಕ್ತಿಕರಣದೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆಯನ್ನು ನೀಡಬೇಕೆಂದು ರಾಜ್ಯಪಾಲರಾದ ಥಾವರ್’ಚಂದ್ ಗೆಹ್ಲೋತ್ ಹೇಳಿದರು. ಮಂಗಳೂರಿನ ಬಂಗ್ರ ಕೂಳೂರು ಗೋಲ್ಡನ್ ಫಿಂಚ್ ಸಿಟಿಯಲ್ಲಿ ಇಂದು ನವೋದಯ ಸ್ವ-ಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಮತ್ತು ಉಪ ಮುಖ್ಯ ಮಂತ್ರಿ ಡಿಕೆ. ಶಿವ ಕುಮಾರ್ ಹಾಗೂ ಸ್ಪೀಕರ್ …
Read More »ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು*
ಸಂತೋಷ ಮತ್ತು ದು:ಖ ಒಂದೇ ನಾಣ್ಯದ ಎರಡು ಮುಖಗಳು ಬೆಳಗಾವಿ: ಕೆ.ಎಲ್.ಎಸ್ ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಕನ್ನಡ ಬಳಗ ವಿಭಾಗವು ‘ಕನ್ನಡ ನುಡಿ ವೈಭವ’ ಕನ್ನಡೋತ್ಸವವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟ ಅನಂತ ಕೃಷ್ಣ ದೇಶಪಾಂಡೆ ಪಾಲ್ಗೊಂಡಿದ್ದರು. ದೇಶಪಾಂಡೆ ಅವರು ವಿದ್ಯಾರ್ಥಿಗಳಿಗೆ ದ.ರಾ. ಬೇಂದ್ರೆಯ ಕೃತಿಗಳು ಹಾಗೂ ಸಾಧನೆಗಳ ಬಗ್ಗೆ ವಿವರಿಸಿದರು. ಅವರು, “ಸಂತೋಷ ಮತ್ತು ದು:ಖಗಳು ಒಂದೇ ನಾಣ್ಯದ ಎರಡು ಮುಖಗಳಂತೆ,” ಎಂದು …
Read More »ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಕಾಪು ಮಾರಿಯಮ್ಮನವರ ದೇವಸ್ಥಾನಕ್ಕೆ ಸಚಿವರ ಭೇಟಿ* *ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಯಕ್ಕುಂಡಿ ಗ್ರಾಮದ ದರ್ಗಾದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” …
Read More »ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಏರಿಕೆ
ಬೆಂಗಳೂರು, ಮೇ 09: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ (HK Patil) ಹೇಳಿದರು. ಶುಕ್ರವಾರ (ಮೇ.09) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, 1,500 ಕೋಟಿ ವೆಚ್ಚದ ಸರಗೂರಿನಿಂದ ಹೊಸಪುರಕ್ಕೆ ಬ್ರಿಡ್ಜ್ ನಿರ್ಮಾಣ …
Read More »‘ಹೈಕಮಾಂಡ್ಗೆ ಪತ್ರವನೂ ಬರೆದಿಲ್ಲ, ಕ್ಷಮಾಪಣೆನೂ ಕೇಳಿಲ್ಲ’ –
ಬೆಂಗಳೂರು: ನಾನು ಹೈಕಮಾಂಡ್ ಬಳಿ ಯಾವುದೇ ಕ್ಷಮಾಪಣೆ ಕೇಳಿಲ್ಲ, ಪತ್ರವನೂ ಬರೆದಿಲ್ಲ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಯತ್ನಾಳ ಕ್ಷಮಾಪಣೆ ಕೇಳಿ ಹೈ ಕಮಾಂಡ್ಗೆ ಪತ್ರ ಬರೆದಿದ್ದಾರೆ, ನಾನು ಪಕ್ಷದ ಶಿಸ್ತು ಉಲ್ಲಂಘಿಸುವುದಿಲ್ಲ. ಪಕ್ಷದ ಇತಿ ಮಿತಿಯೊಳಗೆ ಕೆಲಸ ಮಾಡುತ್ತೇನೆ ಎಂದು ಪತ್ರ ಬರೆದಿದ್ದೇನೆ ಎಂದು ಸುದ್ದಿಯಾಗುತ್ತಿದೆ. ಎಲ್ಲಿ ಇದೆ ದಾಖಲೆ?. ನಾನು ಯಾರ ಬಳಿಯೂ ಹೋಗಿಲ್ಲ. ಕ್ಷಮಾಪಣೆಯನ್ನೂ ಕೇಳಿಲ್ಲ. ನಾನು …
Read More »ಭಾರತದಲ್ಲಿ ಅಗತ್ಯಕ್ಕಿಂತ ದುಪ್ಪಟ್ಟು ಆಹಾರ ಧಾನ್ಯ ಸಂಗ್ರಹವಿದೆ, ವದಂತಿಗೆ ಕಿವಿಗೊಡಬೇಡಿ- ಸಚಿವ ಜೋಶಿ
ನವದೆಹಲಿ/ಹುಬ್ಬಳ್ಳಿ: “ದೇಶದಲ್ಲಿ ಆಹಾರ ಮತ್ತು ಅಗತ್ಯ ವಸ್ತುಗಳ ಕೊರತೆ ಉಂಟಾಗಿದೆ ಎಂಬುದು ಶುದ್ಧ ಸುಳ್ಳು. ಯಾರೊಬ್ಬರೂ ಈ ಹುಸಿ ವದಂತಿಗೆ ಕಿವಿಗೊಡಬಾರದು” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಮಾಹಿತಿ ನೀಡಿರುವ ಅವರು, “ದೇಶದ ವಿವಿಧೆಡೆ ಆಹಾರ ಪದಾರ್ಥ ಮತ್ತು ಅಗತ್ಯ ವಸ್ತುಗಳ ಕೊರತೆಯಿದೆ ಎಂದು ಕೆಲವರು ಸುಳ್ಳು ವದಂತಿ ಹರಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಸ್ತುತ ಸನ್ನಿವೇಶದಲ್ಲಿ ಜನರನ್ನು ದಿಕ್ಕು ತಪ್ಪಿಸುವ …
Read More »ವಿಮಾನ ಪ್ರಯಾಣಿಕರಿಗೆ ಸೂಚನೆ: ಬೋರ್ಡಿಂಗ್ಗೆ ಕನಿಷ್ಠ 3 ಗಂಟೆ ಮುಂಚೆ ಏರ್ಪೋರ್ಟ್ನಲ್ಲಿರಿ
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರು ಇನ್ಮುಂದೆ ವಿಮಾನ ಹೊರಡುವ ಕನಿಷ್ಠ ಮೂರು ಗಂಟೆ ಮುಂಚೆ ನಿಲ್ದಾಣದಲ್ಲಿ ಹಾಜರಾಗಬೇಕು ಎಂದು ಕೆಇಎ ಮನವಿ ಮಾಡಿದೆ. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆವಹಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಈ ಹೊಸ ನಿರ್ದೇಶನವನ್ನು ಹೊರಡಿಸಲಾಗಿದೆ. ದೇಶದೆಲ್ಲೆಡೆ ಭದ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಹೆಚ್ಚಿಸಲಾಗಿದೆ. ಪ್ರಯಾಣಕ್ಕೂ ಮುನ್ನ ಸುಗಮ ಚೆಕ್ ಇನ್, ಭದ್ರತೆ ಮತ್ತು …
Read More »