Breaking News

Monthly Archives: ಮೇ 2025

ಇಂಗ್ಲೆಂಡ್ ಯುವತಿಯನ್ನು ಪ್ರೀತಿಸಿ ಮದುವೆಯಾದ ಗಂಗಾವತಿ ಹುಡುಗ

ಗಂಗಾವತಿ (ಕೊಪ್ಪಳ) : India weds London ಸ್ನೇಹ – ಪ್ರೀತಿಗೆ ಯಾವುದೇ ಭಾಷೆ, ಗಡಿ ಅಡ್ಡಿಯಾಗುವುದಿಲ್ಲ ಎನ್ನುವುದಕ್ಕೆ ಇಲ್ಲೊಂದು ಉದಾಹರಣೆ ಇದೆ. ಆಕಸ್ಮಿಕ ಪರಿಚಯ ಸ್ನೇಹಕ್ಕೆ ತಿರುಗಿ, ಅದು ಪ್ರೀತಿಯಲ್ಲಿ ಮಿಂದೆದ್ದು ವಿವಾಹ ಎಂಬ ಬಾಳ ಬಂಧನದಲ್ಲಿ ಬೆಸುಗೆಯಾದ ಕತೆಯಿದು. ಈ ಪ್ರಣಯದ ಹಕ್ಕಿಗಳು, ಭಾಷೆ – ದೇಶ, ಧರ್ಮ – ಜಾತಿಯಂತಹ ಗಡಿಗಳನ್ನು ದಾಟಿ ಶುಕ್ರವಾರ ಕಂಕಣ ಕಟ್ಟಿಕೊಂಡಿವೆ. ಹುಡುಗಿಯದ್ದು ದೂರದ ಇಂಗ್ಲೆಂಡ್, ಹುಡುಗನದ್ದು ಗಂಗಾವತಿಯ ಅಂಜನಾದ್ರಿ ಸಮೀಪದ ಸಣಾಪುರ …

Read More »

ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದಂತೆ ಶಕ್ತಿನಗರದಲ್ಲಿ ಮಾಕ್ ಡ್ರಿಲ್

ರಾಯಚೂರು: ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಯಚೂರಿನ ಶಕ್ತಿನಗರದಲ್ಲಿ‌ ಶುಕ್ರವಾರ ಸಂಜೆ 4.34 ರಿಂದ 4.39ರವರೆಗೆ ತುರ್ತು ಪರಿಸ್ಥಿತಿ ಎಚ್ಚರಿಕೆಯ ಸೈರನ್ ಮೊಳಗಿಸಲಾಯಿತು. ಶಕ್ತಿನಗರದ ವಿದ್ಯುತ್ ಶಾಖೋತ್ಪನ್ನ ಕೇಂದ್ರದ ಹೆಲಿಪ್ಯಾಡ್ ಕೇಂದ್ರ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಕೆ.ಪಿ.ಟಿ.ಸಿ.ಎಲ್, ಸಿ.ಐ.ಎಸ್.ಎಫ್ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಗರಿಕ ರಕ್ಷಣಾ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮೂರು ವಿಧದ ಸೈರನ್‌ಗಳು ಕೇಳಿಸಿದವು. ತುರ್ತು ಪರಿಸ್ಥಿತಿಯಲ್ಲಿ ಮೊದಲ ಸೈರನ್​​, …

Read More »

ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಸೌಲಭ್ಯ ಪಡೆಯುವುದು ಶಿಕ್ಷಾರ್ಹ: ಹೈಕೋರ್ಟ್

ಬೆಂಗಳೂರು: ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಸೌಲಭ್ಯ ಪಡೆಯುವ ಯತ್ನ ಶಿಕ್ಷಾರ್ಹವಾಗಿದೆ ಎಂದು ತಿಳಿಸಿರುವ ಹೈಕೋರ್ಟ್​, ಪರಿಶಿಷ್ಟ ಜಾತಿಗೆ ಸೇರಿದ ಆದಿ ದ್ರಾವಿಡ ಎಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಮುಕ್ತಿಗೊಳಿಸಲು ಕೋರಿ ಕ್ರಿಶ್ಚಿಯನ್‌ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಬೆಂಗಳೂರಿನ ನಾಗೇನಹಳ್ಳಿಯ ಸಿ ಸುಮಲತಾ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್‌ ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆ ನಡೆಸಿ ನ್ಯಾಯಮೂರ್ತಿ ಜೆ ಎಂ ಖಾಜಿ ಅವರ …

Read More »

ಮೇ 10ರವರೆಗೆ ಭಾರತದ 10 ನಗರಗಳಲ್ಲಿ ಇಂಡಿಗೋ ವಿಮಾನ ಹಾರಾಟ ರದ್ದು

ನವದೆಹಲಿ, ಮೇ 9: ಭಾರತ- ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮೇ 10ರವರೆಗೆ ಬಹು ನಗರಗಳಿಗೆ ವಿಮಾನಗಳ ಹಾರಾಟವನ್ನು ಇಂಡಿಗೋ (IndiGo) ರದ್ದುಗೊಳಿಸಿದೆ. ಮೇ 10ರಂದು ರಾತ್ರಿ 11.59ರವರೆಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಡಿಗೋ ತಿಳಿಸಿದೆ. ಇಂಡಿಗೋ ಸಂಸ್ಥೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂಬಂಧಿತ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಇಂಡಿಗೋ ಏರ್‌ಲೈನ್ಸ್, “ನಿಮ್ಮ ಸುರಕ್ಷತೆ ಅತ್ಯಂತ ಮುಖ್ಯ. …

Read More »

ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ*

ಅನಿಲ ಪ್ರಾಧಿಕಾರದ ಜತೆ ರಾಜ್ಯದ ಒಡಂಬಡಿಕೆ* *5 ಸಾವಿರ ಕೋಟಿ ರೂ. ಹೂಡಿಕೆಯ 1 ಸಾವಿರ ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ ಯೋಜನೆ* ಬೆಂಗಳೂರು: ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಶುಕ್ರವಾರ ಅಂಕಿತ …

Read More »

ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು.

ಗೋಕಾಕ – ಗೋಕಾವಿ ನಾಡಿನ ಶಕ್ತಿ ದೇವತೆಯಾದ ಶ್ರೀ ಮಹಾಲಕ್ಷ್ಮೀ ದೇವಿಯ ಮಹಾ ರಥೋತ್ಸವವು ಸಹಸ್ರಾರು ಭಕ್ತರ ಮಧ್ಯ ಸಡಗರ ಸಂಭ್ರಮದಿಂದ ಬುಧವಾರ ರಾತ್ರಿ ಜರುಗಿತು. ಏಪ್ರಿಲ್ ೩೦ ರಿಂದ ಆರಂಭಗೊಂಡಿರುವ ಅಷ್ಠ ಬಂಧ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಮಹಾ ರಥೋತ್ಸವ ಕಾರ್ಯಕ್ರಮಕ್ಕೆ ಅಪಾರ ಭಕ್ತರು ಆಗಮಿಸಿ ದೇವಿಯರ ದರ್ಶನ ಪಡೆದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುಂದಾಳತ್ವದಲ್ಲಿ ಕಳೆದ ೮ ದಿನಗಳಿಂದ ಅತಿ ವಿಜೃಂಭಣೆಯಿಂದ ದೇವರುಗಳ ಮೂರ್ತಿ …

Read More »

ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್

ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲ್ ಖಾನಾಪೂರ ತಾಲೂಕಿನ ಖೈರವಾಡ ಗ್ರಾಮದಲ್ಲಿನ ಶ್ರೀ ನಾಗನಾಥದೇವ ಮಂದಿರ ಉದ್ಘಾಟಿಸಿ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ನೇರವೇರಿಸಿ ಲೋಕಾರ್ಪಣೆ ಮಾಡಿದ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ್ ಪಾಟೀಲರು ಧಾರ್ಮಿಕತೆ ಯಿಂದ ಏಕತೆ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ಕಾರ್ಯವಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ …

Read More »

ವಿವಿಡ ಮಾಂಟೆಸ್ಸರಿ ಮತ್ತು ಪ್ರಾಥಮಿಕ ಶಾಲೆಯ ಯಶಸ್ವಿ ಪಯಣ… ಬೆಳಗಾವಿಯ ಬಾಳೇಕುಂದ್ರಿ ಕೆ.ಎಚ್.ನಲ್ಲಿ ಹೊಸ ಶಾಖೆ ಆರಂಭ

ವಿವಿಡ ಮಾಂಟೆಸ್ಸರಿ ಮತ್ತು ಪ್ರಾಥಮಿಕ ಶಾಲೆಯ ಯಶಸ್ವಿ ಪಯಣ… ಬೆಳಗಾವಿಯ ಬಾಳೇಕುಂದ್ರಿ ಕೆ.ಎಚ್.ನಲ್ಲಿ ಹೊಸ ಶಾಖೆ ಆರಂಭ ಬೆಳಗಾವಿಯ ಚಿಣ್ಣರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಿ ಜನ ಮೆಚ್ಚುಗೆಗೆ ಪಾತ್ರವಾಗಿರುವ ವಿವಿಡ ಮಾಂಟೆಸ್ಸರಿ ಮತ್ತು ಪ್ರಾಥಮಿಕ ಶಾಲೆಯೂ ಯಶಸ್ವಿಯಾಗಿ ದಾಪುಗಲನ್ನು ಇರಿಸುತ್ತ ಇಂದು ತನ್ನ ಎರಡನೇ ಶಾಖೆಯನ್ನು ಆರಂಭಿಸಿದೆ. ಹೌದು, ಬೆಳಗಾವಿಯ ಚಿಣ್ಣರಿಗೆ ಆಂಗ್ಲ ಭಾಷೆಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳಲ್ಲಿರುವ ವಿವಿಧ ಕಲಾ ಪ್ರತಿಭೆಗಳನ್ನು ಅನಾವರಣಗೊಳಿಸುತ್ತ ಶಿಕ್ಷಣ …

Read More »

ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಬೆಳಗಾವಿ : ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಬೆಳಗಾವಿ ಖಾಸಬಾಗ ರಾಘವೇಂದ್ರ ಕಾಲೋನಿಯ ಶ್ರೀ ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಶ್ರೀ ಸಾಯಿ ರಾಮ ಮಂದಿರ ಸೇವಾ ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ …

Read More »

ವೈಶಿಷ್ಟ್ಯಪೂರ್ಣವಾಗಿ ಜರುಗಿದ ಹುಕ್ಕೇರಿ ಹಿರೇಮಠದ ಗುರು ಶಾಂತೇಶ್ವರ ರಥೋತ್ಸವ

ಹುಕ್ಕೇರಿ – ವೈಶಿಷ್ಟ್ಯಪೂರ್ಣವಾಗಿ ಜರುಗಿದ ಹುಕ್ಕೇರಿ ಹಿರೇಮಠದ ಗುರು ಶಾಂತೇಶ್ವರ ರಥೋತ್ಸವ ಬೆಳಗಾವಿ ಜಿಲ್ಲೆಯ ಹುಕ್ಕೇರಿ ನಗರದ ಶ್ರೀ ಗುರು ಶಾಂತೇಶ್ವರ ಮಹಾಸ್ವಾಮಿಗಳ ರಥೋತ್ಸವವು ಇಂದು ವೈಶಿಷ್ಟ್ಯ ಪೂರ್ಣವಾಗಿ ಜರುಗಿತು . ಹಿರೇಮಠದಲ್ಲಿ ಬೆಳಗಿನ ಜಾವ ವಿಶೇಷ ರುದ್ರಾಭಿಷೇಕ , ವಟುಗಳಿಗೆ ಅಯ್ಯಾಚಾರ , ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ತೋಟ್ಟಿಲೊತ್ಸವ ಜರುಗಿತು, ಸಾಯಂಕಾಲ ಹಿರೇಮಠದಿಂದ ಶ್ರೀ ಗುರು ಶಾಂತೇಶ್ವರ ರಥೋತ್ಸವ ಆರಂಭವಾಯಿತು. ರಥೋತ್ಸವಕ್ಕೆ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು ಹಾಗೂ ಯರನಾಳ …

Read More »