Breaking News

Monthly Archives: ಮೇ 2025

ಬಾಗಲಕೋಟೆ: ಲಾರಿ – ಬೈಕ್ ನಡುವೆ ಅಪಘಾತ ; ಮೂವರ ದಾರುಣ ಸಾವು

ಬಾಗಲಕೋಟೆ : ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದಾಗಿ ಮೂವರು ಮೃತಪಟ್ಟಿದ್ದಾರೆ. ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಮೃತ ದುರ್ದೈವಿಗಳು. ಮೃತರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು. ಮೂವರು ಬೈಕ್ ಮೇಲೆ ತೆರಳುವಾಗ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಮೃತರೆಲ್ಲರೂ ಮರನಾಳ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ.ಅಪಘಾತದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ …

Read More »

ವೈದ್ಯ ವಿದ್ಯಾರ್ಥಿನಿ ಫೋಟೊ ಇಟ್ಟುಕೊಂಡು ಬ್ಲ್ಯಾಕ್​ಮೇಲ್​: ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಹುಬ್ಬಳ್ಳಿ: ನಗರದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಆನ್​ಲೈನ್‌ನಲ್ಲಿ ಪರಿಚಿತನಾದ ಯುವಕನೊಂದಿಗೆ ವಿವಸ್ತ್ರಳಾಗಿ ವಾಟ್ಸ್‌ಆ್ಯಪ್ ಚಾಟ್, ವಿಡಿಯೋ ಕಾಲ್ ಮಾಡಿದ್ದನ್ನೇ ದುರುಪಯೋಗ ಪಡಿಸಿಕೊಂಡ ವ್ಯಕ್ತಿ, ನಕಲಿ ಖಾತೆ ಸೃಷ್ಟಿಸಿ ಮಾನ ಹರಾಜು ಹಾಕಿರುವ ಬಗ್ಗೆ ಹುಬ್ಬಳ್ಳಿ ಸಿಇಎನ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನಲ್ಲಿ ಏನಿದೆ?: ಇಲ್ಲಿನ ಮೆಡಿಕಲ್​​​​ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಉತ್ತರಪ್ರದೇಶದ ರಜತ್​ ಶರ್ಮಾ ಎಂಬಾತ ಆನ್‌ಲೈನ್‌ನಲ್ಲಿ ಪರಿಚಯವಾಗಿದ್ದಾನೆ. ನಂತರ ವಿಡಿಯೋ ಕಾಲ್, ವಾಟ್ಸ್‌ಆ್ಯಪ್ ಚಾಟ್, ಟೆಲಿಗ್ರಾಮ್ ವಿಡಿಯೋ, ಸ್ನಾಪ್‌ಚಾಟ್, ಇನ್‌ಸ್ಟಾಗ್ರಾಂ, …

Read More »

ಹುಬ್ಬಳ್ಳಿಯಲ್ಲಿ 1,700 ರೌಡಿ ಶೀಟರ್​ಗಳ ಪರೇಡ್​

ಹುಬ್ಬಳ್ಳಿ : ಸಾರ್ವಜನಿಕ ಶಾಂತಿ, ನೆಮ್ಮದಿ ಭಂಗ ಆಗದಂತೆ ಸುರಕ್ಷಿತ ವಾತಾವರಣ ನಿರ್ಮಾಣ ಮಾಡಲಾಗುತ್ತೆ. ವೈಲೆಂಟ್ ಆರೋಪಿಗಳ ಮೇಲೆ ರೌಡಿ ಶೀಟರ್ ಹಾಕಲಾಗುವುದು. ಗಡಿಪಾರು, ಗುಂಡಾ ಆಕ್ಟ್ ಮಾಡುವ ಕೆಲಸ ಮಾಡ್ತಾ ಬಂದಿದ್ದೇವೆ. ರಾಜ್ಯದಲ್ಲಿ ರೌಡಿ ಶೀಟರ್​ಗಳು ಸಾರ್ವಜನಿಕರ ಮೇಲೆ ಹಲ್ಲೆ, ಕೊಲೆ ಮಾಡಿರುವ ಹಿನ್ನೆಲೆ ನಮ್ಮ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿ ಪರೇಡ್ ಮಾಡಲಾಗುತ್ತಿದೆ ಎಂದು ಹು -ಧಾ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ‌ತಿಳಿಸಿದ್ದಾರೆ. ನಗರದಲ್ಲಿ ಇಂದು ರೌಡಿಪರೇಡ್ ನಡೆಸಿ …

Read More »

ಆಪರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಉತ್ತರ…

ಆಪರೇಷನ್ ಸಿಂಧೂರ್ ಮೂಲಕ ಪಾಕ್’ಗೆ ತಕ್ಕ ಉತ್ತರ… ಬೆಳಗಾವಿಯಲ್ಲಿ ಬಿಜೆಪಿ ವಿಶೇಷ ಪೂಜೆ; ಸಿಹಿ ಹಂಚಿ ಸಂಭ್ರಮಾಚರಣೆ ಸಿಂಧೂರ್’ವನ್ನು ಅಳಿಸಿದವರಿಗೆ ಸಿಂಧೂರ್’ನ ಶಕ್ತಿಯನ್ನು ತೋರಿದ ಭಾರತೀಯ ಸೇನೆ ಪೆಹಲ್’ಗಾಮ್’ನಲ್ಲಿ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರಿಗೆ ಭಾರತೀಯ ಸೇನೆಯೂ ತಕ್ಕ ಪಾಠ ಕಲಿಸಿದ ಹಿನ್ನೆಲೆ ಬೆಳಗಾವಿ ಬಿಜೆಪಿಯ ವತಿಯಿಂದ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಪೆಹಲ್’ಗಾಮ್’ನಲ್ಲಿ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರಿಗೆ …

Read More »

ಸಿಎಂ ವಿರುದ್ಧ ಮುಡಾ ಕೇಸ್: ಕಾಲಾವಕಾಶ ಕೋರಿದ ಲೋಕಾಯುಕ್ತ ಪೊಲೀಸ್

ಬೆಂಗಳೂರು, ಮೇ 07: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿಯವರು ಕಾನೂನುಬಾಹಿರವಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) 14 ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು. ಕೋರ್ಟ್ ಸೂಚನೆಯಂತೆ ಬುಧವಾರ (ಮೇ.07) ಅಂತಿಮ ತನಿಖಾ ವರದಿ ಸಲ್ಲಿಸಬೇಕಿದ್ದ ಲೋಕಾಯುಕ್ತ ಪೊಲೀಸರು ಕಾಲಾವಕಾಶ ಕೋರಿ ಮನವಿ ಸಲ್ಲಿಸಿದರು. ಕೋರ್ಟ್​ಗೆ ಹಾಜರಾಗಿದ್ದ …

Read More »

ಉಗ್ರ ಮಸೂದ್ ಅಜರ್​ಗೆ ಮನೆಯವರೇ ಸತ್ತರೂ ಕಣ್ಣೀರಿಲ್ಲ, ಹತಾಶೆಯಿಲ್ಲ: ಭಯೋತ್ಪಾದನೆಯೇ ಕನಸು!

ನವದೆಹಲಿ, ಮೇ 8: ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ್​​​ನಲ್ಲಿ (Operation Sindoor) ಕುಟುಂಬದವರು ಹಾಗೂ ಸಂಬಂಧಿಕರು ಮೃತಪಟ್ಟಿರುವುದಾಗಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ (Jaish-e-Mohammad) ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ (Masood Azhar) ಹೇಳಿಕೊಂಡಿದ್ದಾನೆ. ಕುಟುಂಬದ 10 ಮಂದಿ ಸದಸ್ಯರು ಮತ್ತು ನಾಲ್ವರು ಅತ್ಯಾಪ್ತರು ಸಾವಿಗೀಡಾಗಿದ್ದಾರೆ ಎಂದು ಆತ ತಿಳಿಸಿರುವುದಾಗಿ ವರದಿಯಾಗಿದೆ. ಆದಾಗ್ಯೂ ಆತನಲ್ಲಿ ಕಣ್ಣೀರು ಕಂಡುಬಂದಿಲ್ಲ. ಅಷ್ಟೇ ಯಾಕೆ, ವಿಷಾದವಾಗಲೀ ಹತಾಶೆಯಾಗಲೀ ಇಲ್ಲ. ಇದನ್ನು ಸ್ವತಃ ಆತನೇ ಹೇಳಿಕೊಂಡಿದ್ದಾನೆ. ಇಷ್ಟೆಲ್ಲ ಆದ ಮೇಲೂ ಆತನಿಗಿರುವುದು ಭಯೋತ್ಪಾದನೆಯ ಕನಸು …

Read More »

ಬೆಂಗಳೂರಿನಿಂದ 5 ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳು ಕ್ಯಾನ್ಸಲ್

ಬೆಂಗಳೂರು, ಮೇ 07: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡುವ ಮೂಲಕ ಪಹಲ್ಗಾಮ್​ನ (Pahalgam) ಉಗ್ರರ ದಾಳಿ ಪ್ರತೀಕಾರವನ್ನು ತೀರಿಸಿಕೊಂಡಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ಸೂಚನೆ ಹಿನ್ನೆಲೆ ಭಾರತದ ವಿವಿಧೆಡೆ ವಿಮಾನ ಸಂಚಾರ ರದ್ದು (Flights Cancelled) ಮಾಡಲಾಗಿದೆ. ಅದೇ ರೀತಿಯಾಗಿ ಬೆಂಗಳೂರಿನಿಂದ ಬೇರೆ ರಾಜ್ಯಗಳಿಗೆ ತೆರಳಬೇಕಿದ್ದ ವಿಮಾನಗಳನ್ನು ರದ್ದು ಮಾಡಲಾಗಿದೆ.ಸದ್ಯ ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಿಂದ ಜಮ್ಮು-ಕಾಶ್ಮೀರ, ರಾಜಸ್ಥಾನದ ಜೋಧಪುರ್, ಯುಪಿಯ ಅಯೋಧ್ಯೆ, ಲಖನೌ …

Read More »

ಬೆಳಗಾವಿ-ರಾಯಚೂರು ರಾಷ್ಟ್ರೀಯ ಎಕ್ಸ ಪ್ರೆಸ್‌ವೇ ಮುಖಾಂತರ ಹುಬ್ಬಳಿ-ಧಾರವಾಡ, ಬಾಗಲಕೋಟ, ವಿಜಯಪುರ ಹಾಗೂ ರಾಯಚೂರದಿಂದ ಬರುವ ಜನರಿಗೆ ವಿಮಾನ ನಿಲ್ದಾಣಕ್ಕೆ ನೇರವಾಗಿ ಹೊಗಲು ಸುಮಾರು 4 ಕಿ.ಮೀ ಬೈಪಾಸ್

ಬೆಳಗಾವಿ: ಬೆಳಗಾವಿ-ರಾಯಚೂರು ರಾಷ್ಟ್ರೀಯ ಎಕ್ಸ ಪ್ರೆಸ್‌ವೇ ಮುಖಾಂತರ ಹುಬ್ಬಳಿ-ಧಾರವಾಡ, ಬಾಗಲಕೋಟ, ವಿಜಯಪುರ ಹಾಗೂ ರಾಯಚೂರದಿಂದ ಬರುವ ಜನರಿಗೆ ವಿಮಾನ ನಿಲ್ದಾಣಕ್ಕೆ ನೇರವಾಗಿ ಹೊಗಲು ಸುಮಾರು 4 ಕಿ.ಮೀ ಬೈಪಾಸ್ ರಸ್ತೆಯನ್ನು ನಿರ್ಮಿಸುವ ಸಲುವಾಗಿ ಯೋಜನೆಯಲ್ಲಿ ಬದಲಾವಣೆ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸೂಚಿಸಿದ್ದಾರೆ. ಬುಧವಾರ ನಗರದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು …

Read More »

ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ, ನಮ್ಮ ಸೇನೆ ನಮ್ಮ ಹೆಮ್ಮೆ: ಸಚಿವ ಜಮೀರ್

ಬೆಂಗಳೂರು: “ಪಹಲ್ಗಾಮ್ ದಾಳಿಯಲ್ಲಿ ಅಮಾಯಕರನ್ನು ಕೊಂದ ಪಾಕಿಸ್ತಾನದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ” ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, “ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ …

Read More »

ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ

ರಾಯಚೂರು: “ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ” ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ರಾಯಚೂರು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಕಲಬುರಗಿ ವಿಭಾಗ ಮಟ್ಟದ ಪ್ರತಿಭಟನಾ ಸಮಾವೇಶವನ್ನು ಕಾಂಗ್ರೆಸ್ ಆಯೋಜಿಸಿತ್ತು. ಆದರೆ ಪಹಲ್ಗಾಮ್‌ನಲ್ಲಿ ದಾಳಿಗೆ ಪ್ರತ್ಯುತ್ತರವಾಗಿ ನಮ್ಮ ಸೈನಿಕರು ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ನಾವು ಕೇಂದ್ರ …

Read More »